ದಿನದ ಸುದ್ದಿ

ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರಿಗೆ ‘ಜನಸೇವಾರತ್ನ’ ರಾಜ್ಯ ಪ್ರಶಸ್ತಿ

Published

on

ಸುದ್ದಿದಿನ,ದಾವಣಗೆರೆ : ಭಾರತರತ್ನ ಡಾ| ಬಾಬಾಸಾಹೇಬ ಅಂಬೇಡ್ಕರ ಹಾಗೂ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರತಿ ವರ್ಷದಂತೆ ಕೊಡಮಾಡುವ ಮಾನವ ಧರ್ಮ 4ನೇ ಕನ್ನಡ ಮಾಧ್ಯಮ ಸಮಾವೇಶ ಹಾಗೂ ಜನಸೇವಾರತ್ನ ರಾಜ್ಯ ಪ್ರಶಸ್ತಿಪ್ರಧಾನ ಸಮಾರಂಭದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪತ್ರವನ್ನು ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರಿಗೆ ನೀಡಿ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

ಸಮಾರಂಭದಲ್ಲಿ

ಮಾನವ ಇತಿಹಾಸದಲ್ಲಿ ಮನುಕುಲವನ್ನೆ ತತ್ತರಿಸುವಂತೆ ಮಾಡಿದ ಕೋವಿಡ್-19ಹೋರಾಟದಲ್ಲಿ ಜನಕಲ್ಯಾಣಕ್ಕಾಗಿ ಸಂಜೀವಿನಿ ಲಸಿಕೆ ತಯಾರಿಸಿದ ಭಾರತೀಯರು ತಮ್ಮ ತನು-ಮನ ಧನವನ್ನು ಸಮರ್ಪಿಸಿ ಜನಸೇವೆ ರಕ್ಷಣೆಗೆ ಕಂಕಣ ಬದ್ಧರಾಗಿ ನಿಂತು ಹೋರಾಟ ಮಾಡಿದ್ದರ ಫಲವಾಗಿ ಟ್ರಸ್ಟ್ ಹಾಗೂ ಪತ್ರಿಕಾಬಳಗದ ವತಿಯಿಂದ ನಾಡು-ನುಡಿ ನೆಲ-ಜಲ ಭಾಷೆಗಾಗಿ ಅಕ್ಷರ ಸೇವೆಗಾಗಿ ಮತ್ತು ಮಾನವ ಧರ್ಮ ಪರಿಪಾಲನೆಗಾಗಿ ಹಾಗೂ ಸಮಾಜಸೇವೆಗಾಗಿ ಶ್ರಮಿಸಿದ ಸಾಧಕರಾದ ಶ್ರೀಮತಿ ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರ ಅನುಪಮ ಸೇವೆಯನ್ನು ಸ್ಮರಿಸಿ ಇವರಿಗೆ ಅತ್ಯಂತ ಗೌರವಪೂರ್ವಕಾಗಿ ಸನ್ಮಾನಿಸಿ ಈ ರಾಜ್ಯ ಪ್ರಶಸ್ತಿಯನ್ನು
ಪ್ರಧಾನ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version