Connect with us

ದಿನದ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಡಿಸಿ ಗಂಗಾಧರಸ್ವಾಮಿ.ಜಿ.ಎಂ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು.

ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ ವ್ಯಕ್ತಿಗೆ ಸಾಲ ನೀಡುವಂತಿಲ್ಲ. ಒಂದೊಮ್ಮೆ ನೀಡದರೆ, ಅದು ಮೈಕ್ರೋ ಪೈನಾನ್ಸ್ ಕಂಪನಿ ಕಡೆಯಿಂದ ಆದ ಲೋಪ ಎಂದು ಹೇಳಲಾಗುವುದು. ಜನರಿಗೆ ಅವರ ಅಗತ್ಯಕ್ಕಿಂತ ಹೆಚ್ಚಾಗಿ ಸಾಲವನ್ನು ನೀಡುತ್ತಿದ್ದಾರೆ. ಸಾಲ ಮರುಪಾವತಿಲು ನಿಮ್ಮ ಚೌಕಟ್ಟುನ್ನು ಮೀರಿ ಅವರಿಗೆ ತೊಂದರೆ ನೀಡುತ್ತಿದ್ದಿರಿ. ಇದರ ಬಗ್ಗೆ ಪ್ರಕರಣ ದಾಖಲು ಮಾಡಲಾಗುವುದು. ಗ್ರಾಮೀಣ ಭಾಗದ ಜನರಿಗೆ ಸಾಲದ ಅವಶ್ಯಕತೆ ತುಂಬಾ ಇರುವುದರಿಂದ ಆರ್.ಬಿ.ಐ ನಿಯಮಾನುಸಾರ ಸಾಲ ನೀಡಿ, ಅವರ ಅಗತ್ಯಕ್ಕೆ ತಕ್ಕಂತೆ ಸಾಲ ನೀಡಬೇಕು ಎಂದರು.

ಸಾರ್ವಜನಿಕರಿಗೆ ನಿಮ್ಮ ಪೈನಾನ್ಸ್ ಕಂಪನಿಯ ಬಡ್ಡಿ ಎಷ್ಟು ಅಂತ ತಿಳಿಸಿ, ಮೈಕ್ರೋ ಫೈನಾನ್ಸ್ 2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂಧರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡದಲ್ಲಿರಬೇಕು. ಸಾಲ ಮತ್ತು ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದ ವ್ಯಕ್ತಿಯ ಕುಟುಂಬದ ಯಾವ ವ್ಯಕ್ತಿಗಳನ್ನು ಕೆವೈಸಿ ಕೇಳುವಂತಿಲ್ಲ. ಬಾಕಿ ಪಾವತಿ ಮಾಡಿ ಎಂದು ಒತ್ತಾಯಿಸುವಂತಿಲ್ಲ. ಅತ್ಯಂತ ಕಡಿಮೆ ಮೊತ್ತದ ಸಾಲವಾದರೂ ವಿಮೆ ಮಾಡಿಸಬೇಕು. ಸಾಲ ಪಡೆದ ವ್ಯಕ್ತಿಯು ಮೃತಪಟ್ಟಲ್ಲಿ ವಿಮೆಯ ಮೂಲಕ ಸಾಲದ ಮೊತ್ತವನ್ನು ಪಡೆಯಬೇಕು. ಬಡ್ಡಿ ದರ ಗರಿಷ್ಠ ಶೇ.18 ರಷ್ಟು ಮಾತ್ರ, ಇದಕ್ಕಿಂತ ಹೆಚ್ಚಿನ ಬಡ್ಡಿದರ ವಸೂಲಿ ಮಾಡುವಂತಿಲ್ಲ.

ವಸೂಲಿ ಸಿಬ್ಬಂದಿ ಬೆದರಿಕೆ ಹಾಕಬಾರದು, ಬೈಗುಳ-ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು. ಸಾಲ ಪಡೆದವರಿಗೆ ಪದೇ ಪದೇ ಕರೆ ಮಾಡಬಾರದು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ಒಳಗೆ ಮಾತ್ರ ಕರೆ ಮಾಡಬೇಕು. ಸಾಲ ಪಡೆದ ವ್ಯಕ್ತಿಯ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಮತ್ತು ಸಹದ್ಯೋಗಿಗಳಿಗೆ ಕರೆ ಮಾಡುವಂತಿಲ್ಲ. ಸಾಲ ಪಡೆದವರ ಹೆಸರು ಮತ್ತು ವಿವರಗಳನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಪ್ರದರ್ಶಿಸುವಂತಿಲ್ಲ. ಸಾಲ ಪಡೆದ ಕುಟುಂಬದವರ ಮೇಲೆ ಹಲ್ಲೆ ನಡೆಸುವಂತಿಲ್ಲ. ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಎಸಗುವಂತಿಲ್ಲ. ಸಾಲ ಪಡೆದವರ ಆಸ್ತಿ-ಸ್ವತ್ತುಗಳಿಗೆ ಹಾನಿ ಮಾಡುವಂತಿಲ್ಲ. ಬಾಕಿ ಪಾವತಿ ಮಾಡದೇ ಇದ್ದಾಗ ಎದುರಾಗಬಹುದಾದ ಪರಿಸ್ಥಿತಿಯ ಬಗ್ಗೆ ಸುಳ್ಳು ಮಾಹಿತಿ ನೀಡಬಾರದು. ತಡವಾಗಿ ಕಂತು ಪಾವತಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಬಡ್ಡಿ ಹಾಕುವಂತಿಲ್ಲ. ಸಾಲ ವಸೂಲಿಗೆ ರೌಡಿಗಳನ್ನು ಬಿಟ್ಟು ದಬ್ಬಾಳಿಕೆ ಮಾಡುವಂತಿಲ್ಲ. ಆರ್.ಬಿ.ಐ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಫೆನಾನ್ಸ್ ಕಂಪನಿಯವರು ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ತೆಗೆದುಕೊಳ್ಳಬಾರದು. ಪಾನ್ ಬ್ರೋಕರ‍್ಸ್ ತಮ್ಮ ಅಂಗಡಿಗಳ ಮುಂದೆ ಸಿಸಿಟಿವಿ ಹಾಕಿಸಿ ನಿಮ್ಮಿಂದಲೂ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಗಳೂರು, ಮಾಯಕೊಂಡ, ಹೊನ್ನಾಳಿಯಿಂದ ಸಾಕಷ್ಟು ದೂರುಗಳು ಬಂದಿರುತ್ತವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತಾನಾಡಿ, ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ. ಕಿರುಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಸಾಲ ವಿತರಣೆ ಮತ್ತು ಮರಪಾವತಿಯಲ್ಲಿ ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಗೌರವದಿಂದ ನೋಡಿಕೊಳ್ಳಬೇಕು ಎಂದರು.

ಕಂತು ಕಟ್ಟಲು ತಪ್ಪಿದ ಗ್ರಾಹಕರೊಂದಿಗೆ ವ್ಯವಹರಿಸಲು ಆರ್.ಬಿ.ಐ ನಿರ್ದೇಶಗಳನ್ನು ಪಾಲಿಸುವುದು, ಗ್ರಾಹಕ ಸ್ನೇಹಿ ಮತ್ತು ನ್ಯಾಯಸಮ್ಮತವಾಗಿರಬೇಕು. ನೀವು ಸೂಕ್ತವಲ್ಲದ ಸಮಯದಲ್ಲಿ ಗ್ರಾಹಕರನ್ನು ಸಂಪರ್ಕ ಮಾಡುವುದಾಗಲಿ ಅಥವಾ ಸಾಲ ವಸೂಲಾತಿ ಮಾಡಬಾರದು. ಅವರ ಮನೆಯಲ್ಲಿ ಮೃತ್ಯು ಸಂಭವಿಸಿದಾಗ, ಅನಾರೋಗ್ಯದ ಸಂದರ್ಭದಲ್ಲಿ ಸಾಲ ಮಸೂಲಾತಿ ಮಾಡಬಾರದು. ಪ್ರತಿಯೊಂದು ಕಿರುಹಣಕಾಸು ಸಂಸ್ಥೆಯೂ ಸಾಲಗಾರರೊಂದಿಗೆ ಸಂವಹನ ಮಾರ್ಗದರ್ಶನ ನೀಡಬೇಕೆಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಆಚಾರ್ಯ, ಡಿವೈಎಸ್‌ಪಿ ಬಸವರಾಜ, ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

Published

on

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.

ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.

ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ

ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.

ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ‌ ಪ್ರಶ್ನೆ.

ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.

ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.

ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?

ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.

“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.

ಎಸ್ಪಿ ಅವರ ಕ್ರಮ ಯಾವಾಗ ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ‌.

ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ

Published

on

ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ ಮತ್ತು ಖಗೋಳಶಾಸ್ತ್ರಜ್ಞ ಆರ್ಯಭಟ ಅವರ ಹೆಸರನ್ನು ಇಡಲಾಗಿತ್ತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ ಈ ಉಪಗ್ರಹವನ್ನು ರಷ್ಯಾ ಸಹಾಯದೊಂದಿಗೆ ಕಪುಸ್ಟಿನ್‌ಯಾರ್‌ನಿಂದ ಉಡಾವಣೆ ಮಾಡಲಾಯಿತು.

ಸೌರ ಭೌತಶಾಸ್ತ್ರ, ವಾಯುವಿಜ್ಞಾನ ಮತ್ತು ಎಕ್ಸ್-ರೇ ಖಗೋಳಶಾಸ್ತ್ರ ಸೇರಿದಂತೆ ಇತರೆ ಪ್ರದೇಶಗಳನ್ನು ಅನ್ವೇಷಿಸುವುದು ಈ ಉಪಗ್ರಹದ ಉದ್ದೇಶವಾಗಿತ್ತು. ಕಕ್ಷೆಯಲ್ಲಿ ಐದು ದಿನಗಳನ್ನು ಕಳೆದ ನಂತರ, ಆರ್ಯಭಟ ವಿದ್ಯುತ್ ವೈಫಲ್ಯವನ್ನು ಅನುಭವಿಸಿತು, ಇದರಿಂದಾಗಿ ಎಲ್ಲಾ ಪ್ರಯೋಗಗಳನ್ನು ನಿಲ್ಲಿಸಲಾಯಿತು. ಇದರ ಹೊರತಾಗಿಯೂ, ಅಮೂಲ್ಯವಾದ ದತ್ತಾಂಶವನ್ನು ಸಂಗ್ರಹಿಸಲಾಯಿತು ಮತ್ತು ವಿಜ್ಞಾನಿಗಳಿಗೆ ಉಪಗ್ರಹ ಅಭಿವೃದ್ಧಿಯಲ್ಲಿ ನಿರ್ಣಾಯಕ ಅನುಭವವನ್ನು ಇದು ನೀಡಿತು.

ವೈಫಲ್ಯದ ನಂತರ ಉಪಗ್ರಹವು ಇನ್ನೂ ಕೆಲವು ದಿನಗಳವರೆಗೆ ಮಾಹಿತಿಯನ್ನು ರವಾನಿಸುವುದನ್ನು ಮುಂದುವರೆಸಿತು. ಆರ್ಯಭಟವು ಭಾರತದ ಬಾಹ್ಯಾಕಾಶ ಪರಿಶೋಧನೆಗೆ ಅಡಿಪಾಯವಾಯಿತು ಮತ್ತು ದೇಶದ ಭವಿಷ್ಯದ ಬಾಹ್ಯಾಕಾಶ ಯಾನಗಳಿಗೆ ಪ್ರಮುಖ ಮೈಲಿಗಲ್ಲಾಯಿತು. ಅದರ ಯಶಸ್ವಿ ಉಡಾವಣೆಯೊಂದಿಗೆ, ಭಾರತವು ಕಕ್ಷೆಗೆ ಉಪಗ್ರಹವನ್ನು ಕಳುಹಿಸಿದ ವಿಶ್ವದ 11 ನೇ ರಾಷ್ಟ್ರವೆಂದು ಗುರುತಿಸಲ್ಪಟ್ಟಿತು.

ಇದನ್ನೂ ಓದಿ :

ಕಾರ್ಯಕ್ರಮ

ಬೆಂಗಳೂರಿನ ಜವಾಹರ ಲಾಲ್ ನೆಹರು ತಾರಾಲಯದಲ್ಲಿಂದು ಯು.ಆರ್. ರಾವ್ ಉಪಗ್ರಹ ಕೇಂದ್ರ ಮತ್ತು ಜವಾಹರ ಲಾಲ್ ನೆಹರು ತಾರಾಲಯ ಸಹಯೋಗದೊಂದಿಗೆ ಆರ್ಯಭಟ ಉಡಾವಣೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತೀಯ ಖಭೌತ ಸಂಸ್ಥೆ ನಿರ್ದೇಶಕರಾದ ಡಾ. ಅನ್ನಪೂರ್ಣಿ ಸುಬ್ರಮಣಿಯಂ, ಯು.ಆರ್. ರಾವ್ ಉಪಗ್ರಹ ಕೇಂದ್ರದ ನಿರ್ದೇಶಕರಾದ ಎಂ. ಶಂಕರನ್, ಅಂತರಿಕ್ಷ ಆಯೋಗದ ಸದಸ್ಯರು, ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್. ಕಿರಣ್ ಕುಮಾರ್, ತಾರಾಲಯದ ನಿರ್ದೇಶಕರಾದ ಡಾ. ವಿ.ಆರ್. ಗುರುಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾಜಿ ಇಸ್ರೋ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಭಾರತದ ಶ್ರೇಷ್ಠ ಭೌತಶಾಸ್ತ್ರಜ್ಞ ಮತ್ತು ಖಗೋಳಶಾಸ್ತ್ರಜ್ಞ ವಿಕ್ರಮ್ ಸಾರಾಭಾಯ್, ಭೌತಶಾಸ್ತ್ರಜ್ಞ ಹೋಮಿ. ಜೆ ಭಾಭಾ ರಂತಹ ಭಾರತ ಕಂಡ ದಾರ್ಶನಿಕ ಮಹಾತ್ಮರು ತಮ್ಮ ಅನನ್ಯ ದೃಷ್ಟಿಕೋನದೊಂದಿಗೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ರೂವಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಅವರಿಂದ ಸ್ಫೂರ್ತಿ ಪಡೆದು, ಇಂದಿನ ಯುವಜನರು ದೇಶ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ಚಿಂತಿಸಬೇಕು ಎಂದು ಹೇಳಿದರು.

ಉದ್ಘಾಟನಾ ಭಾಷಣದಲ್ಲಿ ಎಂ. ಶಂಕರನ್, ಭಾರತದ ಬಾಹ್ಯಾಕಾಶ ಪಯಣದಲ್ಲಿ ಆರ್ಯಭಟ ಉಪಗ್ರಹ ನಿರ್ವಹಿಸಿದ ಪಾತ್ರ ಕುರಿತು ಸಮಗ್ರ ಚಿತ್ರಣ ನೀಡಿದರು. ಇಲ್ಲಿಯವರೆಗೆ ಭಾರತ 130ಕ್ಕೂ ಅಧಿಕ ಉಪಗ್ರಹಗಳ ಉಡವಾಣೆ ಮಾಡಿದ್ದು, ಇದರಲ್ಲಿ ಶೇಕಡ 50ಕ್ಕಿಂತಲೂ ಹೆಚ್ಚು ಉಪಗ್ರಹಗಳು ಇನ್ನೂ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಇದೇ ವೇಳೆ ಮಾತನಾಡಿದ ಡಾ. ಅನ್ನಪೂರ್ಣಿ ಸುಬ್ರಮಣಿಯಮ್, ನಮ್ಮ ಪೂರ್ವಜರು, ವಿಜ್ಞಾನಿಗಳು ಬಿಟ್ಟು ಹೋಗಿರುವ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಾಧಿಸುವ ಛಲದೊಂದಿಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಯಾವುದೇ ಯೋಜನೆಯ ಯಶಸ್ಸಿಗೆ ಆಧಾರಸ್ತಂಭವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಆರ್ಯಭಟ ಉಪಗ್ರಹದ ಪಯಣದ ಕುರಿತ ಸಮಗ್ರ ಮಾಹಿತಿಯುಳ್ಳ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending