Connect with us

ರಾಜಕೀಯ

ಜೆ.ಡಿ.ಎಸ್ ನಿಂದ ಬಿ.ಜೆ.ಪಿಗೆ 30 ಸೀಟುಗಳು ಹೆಚ್ಚು ಬಂದಿವೆ : ಸಚಿವ ಎಚ್.ಡಿ.ರೇವಣ್ಣ ಟಾಂಗ್

Published

on

ಸುದ್ದಿದಿನ, ಬೆಂಗಳೂರು : ಬಿಜೆಪಿ ಹೆಚ್ಚು ಸೀಟು ಗೆಲ್ಲೋಕೆ ಜೆಡಿಎಸ್ ಬೆಂಬಲವಿತ್ತಂತೆ. ಜೆಡಿಎಸ್ ಹೆಸರೇಳಿಕೊಂಡೇ ಬಿಜೆಪಿ 30 ಸೀಟು ಗೆದ್ದಿದ್ದಂತೆ.ಇಲ್ಲವಾಗಿದ್ರೆ ಬಿಜೆಪಿಗೆ 104 ಸ್ಥಾನ ಸಿಗ್ತಿರಲಿಲ್ವಂತೆ, ಹೀಗಂತ ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಗೆ ಸಚಿವ ರೇವಣ್ಣ ಟಾಂಗ್ ಕೊಟ್ಟಿದ್ದಾರೆ.

ನಮ್ಮ 104 ಶಾಸಕರಿಗೂ ದೇವರ ಆಶೀರ್ವಾದವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಸಚಿವ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದು, ದೇವರ ಆಶೀರ್ವಾದ ಇದ್ದಿದ್ರೆ ಅವರೇ ಅಧಿಕಾರ ಹಿಡಿಯಬೇಕಿತ್ತು ಅಲ್ವಾ. ಯಾಕೆ ಸರ್ಕಾರ ರಚನೆ ಮಾಡೋಕೆ ಆಗಲಿಲ್ಲ ? ಇವರು ಜೆಡಿಎಸ್ ಹೆಸರು ಹೇಳಿಕೊಂಡು ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಿದ್ದಾರೆ. ಹಾಗಾಗಿ ನಮ್ಮಿಂದಲೇ 30 ಸೀಟುಗಳು ಬಿಜೆಪಿಗೆ ಹೆಚ್ಚಾಗಿ ಬಂದಿವೆ ಎಂದಯ ಸಚಿವ ಹೆಚ್.ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ

Published

on

  • ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ ಕೋರ್ಟ್ ಗೆ ಹಾಜರಾಗದ್ದಾಗ ಪ್ರಶ್ನೆ ಕೇಳಲು ಮುಂದಾದ ಪತ್ರಕರ್ತರಿಗೆ .ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ಕೊಲೆ ಬೆದರಿಕೆ ಹಾಕಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ವಿಡಿಯೋ ಮಾಡಿದಕ್ಕೆ ವಾರ್ತಾ ಭಾರತಿಯ ಪತ್ರಿಕೆಯ ಜಿಲ್ಲಾ ವರದಿಗಾರ ಮಹಮ್ಮದ್ ಗೌಸ್ ಮೇಲೆ ಕೆ.ಎಂ.ಎಫ್ ನ ಅಧ್ಯಕ್ಷ ಭೀಮಾ ನಾಯ್ಕ ಹಲ್ಲೆ ಮಾಡಿ, ಕೊಲೆ
ಬೆದರಿಕೆ ಹಾಕಿದ ದುರ್ಘಟನೆ ವಿಜಯನಗರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ಕರ್ನಾಟಕ ರಾಜ್ಯ ಸರ್ಕಾರದ ಕೆ.ಎಂ.ಎಫ್ ಹಾಲಿ ಅಧ್ಯಕ್ಷ ಭೀಮಾನಾಯ್ಕ್, ತನ್ನ ಕಾರಿಗೆ ಭೀಮಾನಾಯ್ಕ್ , ಹಗರಿಬೊಮ್ಮನಹಳ್ಳಿ ತಾಲೂಕಿನ ಎಂ.ಎಲ್.ಎ ಶಾಸಕರು ಎನ್ನುವ ಪಾಸು ಅಂಟಿಸಿಕೊಂಡು ಹಗರಿಬೊಮ್ಮನಹಳ್ಳಿಯಿಂದ ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರದ ತಹಶಿಲ್ದಾರರ ಕಂದಾಯ ಇಲಾಖೆಗೆ ಹಾಗೂ ಕೋರ್ಟ್ ಗೆ ಆಗಮಿಸಿದ್ದರು.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಹಶಿಲ್ದಾರರ ಕಚೇರಿಗೆ ರಿಜಿಸ್ಟರ್ ಹಾಗೂ ಆಸ್ತಿ ವಿಚಾರವಾಗಿ ಹೊಸಪೇಟೆ ಕೋರ್ಟ್ ಹಾಜರಾದಾಗ ಎರಡು ದಿನಗಳಿಂದ ಭೀಮಾನಾಯ್ಕ್ ಅವರು ಕಾರಿಗೆ ಕೆ.ಎ 41 ಎಂ.ಎಫ್ 4599 ಈ ವಾಹನಕ್ಕೆ ಪಾಸ್ ಸಂಖ್ಯೆ 89, ಕರ್ನಾಟಕ ವಿಧಾನಸಭಾ ಕ್ಷೇತ್ರ, ಭೀಮಮಾಯ್ಕ್ ಎಸ್,ಹಗರಿಬೊಮ್ಮನಹಳ್ಳಿ ಶಾಸಕರು, MLA ಎನ್ನುವ ಹಸಿರಿನ ಪಾಸು ಇಟ್ಟುಕೊಂಡು ಎರಡು ದಿನಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದೆವೆ ಎನ್ನುವ ಕಾರು ಚಾಲಕ, ಈ ರೀತಿ ಸಂಚಾರ ಮಾಡಿದ್ದು ದುರ್ಘಟನೆ ನಡೆದಿದೆ.

ಇನ್ನು ಈ ವಿಚಾರವಾಗಿ ಏಕೆ ? ತಹಶಿಲ್ದಾರರ ಕಚೇರಿ ಬಂದಿರಾ, ಪತ್ರಕರ್ತರ ವಿಡಿಯೋ ಮಾಡಿ, ಪ್ರಶ್ನೆ ಕೇಳಿದಕ್ಕೆ , ಏಕೆ ? ರೀ ವಿಡಿಯೋ ಮಾಡ್ತಿರಾ ಕಂದಾಯ ಇಲಾಖೆಗೆ ಬರಬಾರದ ಎಂದು ಏರು ಧ್ವನಿಯಲ್ಲಿ ಮಾತನಾಡಿದರು.

ಹೊಸಪೇಟೆ ಈಟಿವಿ ಭಾರತ್ ವರದಿಗಾರ ಗಿರೀಶ್ ಕುಮಾರ್ ಗೌಡ ಹಾಗೂ ವಾರ್ತಾ ಭಾರತೀ ಪತ್ರಿಕೆಯ ವರದಿಗಾರರಾದ ಮಹಮ್ಮದ್ ಗೌಸ್ ಅವರು ಭೀಮಾನಾಯ್ಕ್ ಅವರು ಹೊಸಪೇಟೆ ಬಂದ ವಿಚಾರ ಬಗ್ಗೆ ಹಾಗೂ ಇನ್ನಿತರ ಕಾಂಗ್ರೆಸ್ ಪಕ್ಷದ ಬೆಳವಣಿಗೆ ವಿಚಾರವಾಗಿ ಕೇಳಬೇಕೆಂದು ಇದ್ದರೆ ಭೀಮಾನಾಯ್ಕ್ “ನೋ ಕಾಮೆಂಟ್ಸ್’ ಎನ್ನುವ ಉತ್ತರ ನೀಡಿದ್ದರು. ನಂತರ ಕಾರು ಮುಂದಕ್ಕೆ ಹೋಗಿ ನಂತರ ವಾಪಾಸ್ಸು ಬಂದು, ಪತ್ರಕರ್ತರಾದ ವಿಜಯನಗರ ಜಿಲ್ಲೆ ವಾರ್ತಾ ಭಾರತಿ ಜಿಲ್ಲಾ ವರದಿಗಾರ ಮಹಮ್ಮದ್ ಗೌಸ್ ವಿಡಿಯೋ ಮಾಡಿದಕ್ಕೆ ಅವರಿಗೆ ಅವಾಚ್ಯ ಶಬ್ಧಗಳಿಂದ ಬೈದು, ಅವರ ಮೊಬೈಲ್ ಕಳಿಸಿಕೊಂಡು, ಕೈ ಮುರಿದು ಹಲ್ಲೆ ಮಾಡಿದ್ದಾರೆ‌. ಅವರ ಬೆಂಬಲಿಗರು ನಿಮ್ಮನ್ನ ನೋಡಿ ಕೊಳ್ಳುತ್ತೇವೆ, ಕೊಲೆ ಮಾಡುವ ಬೆದರಿಕೆ ಹಾಗೂ ದಬ್ಬಾಳಿಕೆ ಮಾಡಿದರು. ನಂತರ ಕೋರ್ಟ್ ನಲ್ಲಿ ಇದ್ದ ವಕೀಲರು ಇನ್ನಿತರರು ಆಗಮಿಸಿದ ನಂತರ ಅಲ್ಲಿಂದ ಕಾಲು ಕಿತ್ತಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಭೀಮಾನಾಯ್ಕ್ ರಿಂದ ನಾಚಿಕೆಗೇಡು

ಇನ್ನು ನಾಚಿಕೆಗೆಡಿನ ಸಂಗತಿಯಾಗಿ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಹಗರಿಬೊಮ್ಮನಹಳ್ಳಿ ಶಾಸಕ ಎಂದು ಪಾಸು ಇಟ್ಟುಕೊಂಡು ಊರೆಲ್ಲಾ ಸುತ್ತಿದ್ದು ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿ ಆಗಿದೆ.

ಇನ್ನು ಈ ವಿಚಾರವಾಗಿ ಕೋರ್ಟ್ ನಲ್ಲಿ ಇದ್ದ ಕಾರಿನ ಮೇಲೆ ಪಾಸು ಇರುವ ಬಗ್ಗೆ ವಿಡಿಯೋ ಮಾಡಿದ ನಂತರ ಕಾರು ಚಾಲಕ ಇಲ್ಲ ಸರ್, ಎರಡು ದಿನಗಳಿಂದ ಅದೇ ಪಾಸು ಇಟ್ಟುಕೊಂಡು ಓಡಾಡಿದ್ದೆವೆ. ಈಗ ತೆಗೆದಿದ್ದೆವೆ ವಿಡಿಯೋ ಡಿಲಿಟ್ ಮಾಡಿ ಎಂದರು. ಇನ್ನು ಭೀಮಾನಾಯ್ಕ್ ಗನ್ ಮ್ಯಾನ್‌ ಹಾಗೂ ಅವರ ಬೆಂಬಲಿಗರು ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ದೌರ್ಜನ್ಯ ಮಾಡಿ, ದಬ್ಬಾಳಿಕೆಯನ್ನು ಮಾಡಿದ್ದಾರೆ. ಅವರದ್ದೆ ತಪ್ಪು ಹಿಡಿದುಕೊಂಡು ಪತ್ರಕರ್ತರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಸಂಗತಿ ಇದು ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿಯಾಗಿದೆ.


ಭೀಮಾನಾಯ್ಕ್ ಕಾರಿನ, ಕಾರು ಚಾಲಕನ ಮುಂಭಾಗದ ಗ್ಲಾಸ್ ನಲ್ಲಿ ಪಾಸ್ ಸಂಖ್ಯೆ 89, ಕರ್ನಾಟಕ ವಿಧಾನಸಭಾ ಕ್ಷೇತ್ರ, ಭೀಮಮಾಯ್ಕ್ ಎಸ್,ಹಗರಿಬೊಮ್ಮನಹಳ್ಳಿ ಶಾಸಕರು, MLA ಎನ್ನುವ ಹಸಿರಿನ ಪಾಸು ಇಟ್ಟುಕೊಂಡು ಎರಡು ದಿನಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದರು. ಭೀಮಾನಾಯ್ಕ್ ಹಾಗೂ ಗನ್ ಮ್ಯಾನ್ ಹಾಗೂ ಬೆಂಬಲಿಗರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ.


ಮಾಧ್ಯಮದ ಮಿತ್ರರ ಮೇಲೆ ಹಲ್ಲೆ ಮಾಡೋ ಅಧಿಕಾರ ಇಲ್ಲ, ಮಾಧ್ಯಮದವರು ಪ್ರಶ್ನೆ ಕೇಳಿದರೆ ಉತ್ತರ ಕೊಡಬೇಕು ಇಲ್ಲದಿದ್ದರೆ ಆಮೇಲೆ ಮಾತನಾಡುವೆ ಎಂದು ಹೇಳಬೇಕು. ಅವರ ಮೇಲೆ ಹಲ್ಲೆ ಮಾಡೋದ್ ಒಳ್ಳೆಯದಲ್ಲ. ಭೀಮಾನಾಯ್ಕ್ ಎಸ್, ಶಾಸಕರು, ಎಂ.ಎಲ್.ಎ ಅಂತ ಇಟ್ಟುಕೊಂಡು ಓಡಾಡೋದ್ ಸರಿಯಲ್ಲ ಎಂದರು.

|ನೇಮರಾಜ್ ನಾಯ್ಕ್, ಹಾಲಿ ಶಾಸಕರು ಕ್ಷೇತ್ರ,ವಿಜಯನಗರ ಜಿಲ್ಲೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್‍ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.

ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ

ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್‍ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.

ಗ್ರಂಥಾಲಯಗಳಿಗೆ ಮಹತ್ವ

ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ. ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.

8 ನೇ ತರಗತಿವರೆಗೆ ವಿಸ್ತರಣೆ

ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.
ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್‍ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.

ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್‍ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9989346243

Continue Reading

ದಿನದ ಸುದ್ದಿ

ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.

ಬುಧವಾರ(ಫೆ.5) ರಂದು ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಉದ್ಘಾಟಿಸಿ ಮಾತಾನಾಡಿದರು. ಸವಿತಾ ಸಮಾಜದ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು, ಆಗ ಮಾತ್ರ ಶ್ರೀಮಂತ, ಬಡವ, ಮೇಲು ಕೀಳು ಎಂಬ ಮನೋಭಾವನೆ ಬರಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು ಸಮಾಜದಲ್ಲಿ ಇರುವಂತಹ ತೊಡಕುಗಳನ್ನು ತೊರೆದು ನಡೆದರೆ ಮಾತ್ರ ಅಭಿವೃದ್ದಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ. ವೃತ್ತಿ ಬದುಕಿಗೆ ಅನುಕೂಲವಾಗಲು ಪರಿಕರಗಳ ಕಿಟ್ ನೀಡಲು ಮತ್ತು ಪಾಲಿಕೆಯಲ್ಲಿರುವ ಮಳಿಗೆಗಳನ್ನು ಇವರಿಗೆ ಕಡಿಮೆ ಬಾಡಿಕೆ ನೀಡಬೇಕು ಎಂದರು. ಹೊಂಡದ ಸರ್ಕಲ್‌ನಲ್ಲಿರುವ ಸಮುದಾಯದ ಭವನದ ಕಟ್ಟಡವನ್ನು ಪೂರ್ಣಗೊಳಿಸಲು ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಮಾರ್ಗದರ್ಶಿಯಾಗಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ದೂಢಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕೆ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ತಹಶೀಲ್ದಾರ್ ಅಶ್ವಥ್, ಸಂಘದ ಜಿಲ್ಲಾಧ್ಯಕ್ಷರಾದ ಬಾಲರಾಜ್, ವಕೀಲರಾದ ರಂಗಸ್ವಾಮಿ ಹಾಗೂ ಸಮಾಜದ ಎಲ್ಲಾ ಮುಖಂಡರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading
Advertisement

Title

ದಿನದ ಸುದ್ದಿ5 hours ago

ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44...

ದಿನದ ಸುದ್ದಿ2 days ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ2 days ago

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ...

ದಿನದ ಸುದ್ದಿ3 days ago

ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ...

ದಿನದ ಸುದ್ದಿ5 days ago

ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು...

ದಿನದ ಸುದ್ದಿ1 week ago

ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಬುಧವಾರ(ಫೆ.5) ರಂದು...

ದಿನದ ಸುದ್ದಿ2 weeks ago

ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ...

ದಿನದ ಸುದ್ದಿ2 weeks ago

ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ:ಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ. ಇದಕ್ಕಾಗಿ ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು...

ದಿನದ ಸುದ್ದಿ2 weeks ago

ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿ

ವರದಿ : ಸಿ ಜಗದೀಶ್ ಕೂಲಂಬಿ ಸುದ್ದಿದಿನ,ದಾವಣಗೆರೆ:ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇದೆ ಫೆಬ್ರವರಿ 04 ರಿಂದ 12 ರವರೆಗೆ ನಡೆಯಲಿರುವ 76 ನೇ ತರಳಬಾಳು ಹುಣ್ಣಿಮೆ ಮಹೋತ್ಸವದ...

ದಿನದ ಸುದ್ದಿ2 weeks ago

ಮಾಯಕೊಂಡ ಕ್ಷೇತ್ರಕ್ಕೆ 750 ಮನೆ ಮಂಜೂರು ; ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲು ಗ್ರಾಪಂ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ಸುದ್ದಿದಿನ,ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿಗೆ 506, ಚನ್ನಗಿರಿ ತಾಲೂಕಿಗೆ 244 ಸೇರಿ ಕ್ಷೇತ್ರಕ್ಕೆ ಒಟ್ಟು 750 ಮನೆಗಳು ಮಂಜೂರಾಗಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ...

Trending