ರಾಜಕೀಯ
ಸಚಿವ ಸ್ಥಾನ |ಎಮ್.ವೈ.ಪಾಟೀಲ್,ಬಿ.ಸಿ.ಪಾಟೀಲ್ ಆಕ್ರೋಶ ; ಸಿದ್ದರಾಮಯ್ಯ ನನ್ನ ಕೈ ಬಿಟ್ಟರು : ಬಿ.ಸಿ.ಪಾಟೀಲ್ ಅಸಮಾಧಾನ
ಸುದ್ದಿದಿನ ಡೆಸ್ಕ್ : ಸಚಿವ ಸಂಪುಟ ಪುನರ್ ರಚನೆ ವಿಚಾರದಲ್ಲಿ ಕಲಬುರಗಿ ಜಿಲ್ಲೆಗೆ ಭಾರಿ ಹಿನ್ನಡೆಯಾಗಿದೆ ಎಂದು ಕಲಬುರಗಿಯಲ್ಲಿ ಸಮೀಶ್ರ ಸರ್ಕಾರದ ವಿರುದ್ಧ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ ಅಫಜಲಪುರ ಕಾಂಗ್ರೆಸ್ ಶಾಸಕ ಎಮ್ ವೈ ಪಾಟೀಲ್.
ಒತ್ತಡಕ್ಕೆ ಮಣಿದು, ಹಾಗೂ ಎಲ್ಲರನ್ನ ಸಮಾಧಾಪಡಿಸುವ ದೃಷ್ಟಿಯಿಂದ ಸಚಿವ ಸ್ಥಾನ ಕೈ ತಪ್ಪಿದೆ. ನಾನೇನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ, ವರಿಷ್ಟರ ಬಳಿ ಬೇಡಿಕೆ ಇಟ್ಟಿರಲಿಲ್ಲ. ಶಾಸಕರಾದ ಡಾ ಉಮೇಶ್ ಜಾಧವ್, ಡಾ ಅಜಯ್ಸಿಂಗ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು ಆದರೆ ಎಲ್ಲರನ್ನ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಅಂತಾ ನಿಗಮ ಮಂಡಳಿ ನೀಡಲಾಗಿದೆ.ಆದರೆ ಕಲಬುರಗಿ ಸಂಸತ್ ಕ್ಷೇತ್ರಕ್ಕೆ ಸಮೀಶ್ರ ಸರ್ಕಾರದಿಂದ ಹಿನ್ನಡೆಯಾಗಿದ್ದಂತು ಸತ್ಯ.ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಇರಿಸುಮುರಿಸುಂಟು ಮಾಡಿದ್ರಿಂದ ಅವ್ರನ್ನ ಕೈ ಬಿಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಬಿ.ಸಿ.ಪಾಟೀಲ್ ಅಸಮಾಧಾನ
ಶಾಸಕ ಬಿ.ಸಿ.ಪಾಟೀಲಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಪಾಟೀಲ ನಿವಾಸದ ಎದುರು ಬೆಂಬಲಿಗರ ಪ್ರತಿಭಟನೆ ನಡೆಸಿದ್ದಾರೆ.ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಡಣದಲ್ಲಿರೋ ನಿವಾಸ ಎದುರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶವ್ಯಕ್ತ ಪಡಿಸಿದ್ದು, ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡ್ತಿರೋ ಕಾಂಗ್ರೆಸ್ ನಿಂದ ಹೊರಬರುವಂತೆ ಒತ್ತಾಯ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಹಿರೇಕೆರೂರಿನಲ್ಲಿ ಶಾಸಕ ಬಿಸಿ ಪಾಟೀಲ್ ಅವರು’ಖಂಡಿತ ಬರವಸೆ ಇತ್ತು ಈ ಸಲ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುತ್ತದೆ ಅಂತಾ, ಆದರೆ ಹಾವೇರಿಯ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಬಗ್ಗೆ ಯಾರು ಕೇಳುವವರಿಲ್ಲ. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ನಾನು. ನಾನು ಬಂದಮೇಲೆ ಕಾಂಗ್ರೆಸ್ ಪಕ್ಷವನ್ನು ಬೆಳಸಿದ್ದೇನೆ. ಮೂರು ಜಿಲ್ಲೆಯಲ್ಲಿ ಲಿಂಗಾಯತ ಕಾಂಗ್ರೆಸ್ ಶಾಸಕ ಇಲ್ಲ.ಹೀಗಾಗಿ ಸಾದರ ಲಿಂಗಾಯತರನ್ನು ಬಿಟ್ಟು ಸಚಿವ ಸಂಪುಟ ರಚಿಸಲಾಗಿದೆ.ನಾವು ಹತ್ತು ಜಿಲ್ಲೆಯಲ್ಲಿ ಸಾದರ ಲಿಂಗಾಯತರಿದ್ದೇವೆ’ ಎಂದು ಅಸಮಾಧಾನ ಹೊತಹಾಕಿದರು.
ಹಿರೇಕೆರೂರ ತಾಲೂಕಿಗೆ 38 ವರ್ಷಗಳಿಂದ ಸಚಿವ ಸ್ಥಾನ ಸಿಕ್ಕಿಲ್ಲ. ತುಂಬಾ ಬೇಜಾರಾಗಿದೆ ತುಂಬಾ ನೋವಾಗಿದೆ.ನನ್ನ ಗಾಡ್ ಫಾದರ್ ಸಿದ್ದರಾಮಯ್ಯ. ನಾನು ಸಿದ್ದರಾಮಯ್ಯರನ್ನು ನಂಬಿಕೊಂಡಿದೆ.ಅವರು ಮುಖ್ಯಮಂತ್ರಿ ಮಾಡಲು ದ್ವನಿ ಎತ್ತಿದವರಲ್ಲಿ ನಾನು ಮೊದಲಿಗ. ಆದರೆ ಸಿದ್ದರಾಮಯ್ಯ ನನ್ನನ್ನು ಕೈ ಬಿಟ್ಟಿದ್ದಾರೆ. ಬಿಜಾಪುರ ಜಿಲ್ಲೆಗೆ ಮೂರು ಸಚಿವ ಸ್ಥಾನ ನೀಡಿದ್ದಾರೆ.ನನ್ನ ಜೊತೆ ಕಾಂಗ್ರೆಸ್ ಪಕ್ಷದ ಮುಖಂಡರು ಯಾರು ಮಾತನಾಡಿಲ್ಲ. ಮುಂದಿನ ನಡೆ ಕಾದು ನೋಡಿ. ಯಾವುದೇ ಕಾರಣಕ್ಕೂ ಬಿಜೆಪಿ ಸೇರೊಲ್ಲ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ

ಸುದ್ದಿದಿನಡೆಸ್ಕ್:ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ, 12 ಜನ ಅಧಿಕಾರಿಗಳನ್ನು ಒಳಗೊಂಡ, ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲಾಗಿದೆ ಎಂದು, ಪಂಚಾಯತ್ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ :
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿ ನಿಯಮ, 1993ರ ಪ್ರಕರಣ 199ಕ್ಕೆ ತರಲು ಉದ್ದೇಶಿಸಿರುವ, ತಿದ್ದುಪಡಿಗಳಿಗೆ ಅನುಗುಣವಾಗಿ, ಇ-ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆ ಹಾಗೂ ಇ-ಸ್ವತ್ತು ಸುಧಾರಣೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವ ಹೊಣೆ ಈ ಸಮಿತಿಗೆ ವಹಿಸಲಾಗಿದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಬೆಂಗಳೂರಿನ ಕೆಂಗೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಲಿದೇವ ಸಮುದಾಯ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಸಮುದಾಯಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ನೀಡುವ ಮೊತ್ತವನ್ನು ಒಂದೂವರೆಯಿಂದ ಎರಡು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಮಡಿವಾಳ ಸಮುದಾಯದ ಪ್ರಗತಿ ಸರ್ಕಾರ ಬದ್ಧವಾಗಿದ್ದು, ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ಪ್ರಯತ್ನ ಮಾಡಲಾಗುವುದು. 12ನೇ ಶತಮಾನದಲ್ಲಿ ಮಡಿವಾಳ ಮಾಚಿದೇವರು, ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಟ ಮಾಡಿದ್ದರು ಎಂದು ಹೇಳಿದರು.
ಈ ವೇಳೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಎಸ್.ಟಿ. ಸೋಮಶೇಖರ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ.3 ರೊಳಗಾಗಿ ವೆಬ್ಸೈಟ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ6 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ4 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ6 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ4 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ