Connect with us

ರಾಜಕೀಯ

ಯುದ್ಧೋನ್ಮಾದ ಹೆಮ್ಮೆಯ ಅಮಲಿನ ವಿಲಕ್ಷಣ ಅಲೆ

Published

on

ಸುದ್ದಿದಿನ ವಿಶೇಷ : ಇಬ್ಬರ ನಡುವೆ ಜಗಳವಾಗುತ್ತದೆ. ಕೈ ಕೈ ಮಿಲಾಯಿಸಿ ಒಬ್ಬರನ್ನೊಬ್ಬರು ಹೊಡೆದುಕೊಂಡು ರಕ್ತಸಿಕ್ತಗೊಂಡು ಘಾಸಿಗೊಳ್ಳುವ ಸಂದರ್ಭವದು.

ದೈಹಿಕ ಶಕ್ತಿಯ ಬಲದಲ್ಲಿ ಒಬ್ಬರು ಮತ್ತೊಬ್ಬರನ್ನು ಮಣಿಸಿಬಿಡುತ್ತಾರೆ. ಗೆದ್ದು ಬೀಗುತ್ತಾರೆ. ಆ ಗೆಲುವು ಗೆದ್ದವನೊಳಗೆ ಅಹಂಕಾರವನ್ನು ಶಾಶ್ವತವಾಗಿ ಬೇರೂರಿಸಿಬಿಡುತ್ತದೆ. ಅದರ ಜೊತೆಗೆ ಪ್ರತಿಯೊಂದು ಸಲವೂ ಆ ಗೆಲುವನ್ನು ನೆನಪಿಸುವಂಥ ರೀತಿಯ ನಡವಳಿಕೆಗಳೊಂದಿಗೆ ಉಳಿದವರೊಳಗೆ ಭಯಭೀತಿ ಉಂಟುಮಾಡುತ್ತಲೇ ತನ್ನ ಪ್ರಾಬಲ್ಯದ ಪ್ರದರ್ಶನದೊಂದಿಗೆ ವಿಜೃಂಭಿಸುತ್ತಾನೆ. ಅಂಥ ಕ್ಷಣಗಳನ್ನೇ ಸಂಭ್ರಮಿಸುತ್ತಾ ದೈಹಿಕವಾಗಿ ಪ್ರಬಲವಾಗಿರುವುದೇ ಎಲ್ಲರನ್ನು ಹದ್ದುಬಸ್ತಿನಲ್ಲಿಡುವ ಬಹುಮುಖ್ಯ ತಂತ್ರ ಎಂಬುದನ್ನು ಸಾರುತ್ತಲೇ ಇರುತ್ತಾನೆ. ತನ್ನನ್ನು ತೊಡವಿಕೊಂಡರೆ ಪರಿಣಾಮ ನೆಟ್ಟಗಿರದು ಎಂಬ ಭಯಾನಕ ಸಂದೇಶ ರವಾನಿಸುತ್ತಾನೆ.

ಅವನ ಬೆಂಬಲಿಗರ ಭಾವುಕ ಅಜ್ಞಾನವು ಅವರಲ್ಲಿ ಒಂದು ಬಗೆಯ ಹುಸಿ ಹೆಮ್ಮೆಯನ್ನು ಮೂಡಿಸಿಬಿಡುತ್ತದೆ. ಅದರ ಕತ್ತಲ ಬಂಧದೊಳಗೆ ಬೆಂಬಲಿಗ ಅಭಿಮಾನಿಗಳ ವಿವೇಕ ಉಸಿರುಗಟ್ಟುತ್ತಿರುತ್ತದೆ. ಅಂಥವರ ಸಂಖ್ಯೆಯೇ ಹೆಚ್ಚಾಗುತ್ತಾ ಒಂದು ಬಗೆಯ ಸ್ಥಗಿತತೆಯ ವಾತಾವರಣ ನೆಲೆಸಿಬಿಡುತ್ತದೆ.

 

ನಕಾರಾತ್ಮಕತೆಗೆ ಸಾಕ್ಷ್ಯ ಒದಗಿಸುವ ಯುದ್ಧ

ಕಾರ್ಗಿಲ್ ವಿಜಯೋತ್ಸವವು ದೇಶದಾದ್ಯಂತ ಇಂಥದ್ದೊಂದು ನಕಾರಾತ್ಮಕತೆಗೆ ಸಾಕ್ಷ್ಯ ಒದಗಿಸುತ್ತಿದೆ. ಯುದ್ಧ ಗೆದ್ದ ಸಂಭ್ರಮದಲ್ಲಿ ದೇಶದ ಕುರಿತಾದ ಹೆಮ್ಮೆ ಅಪವ್ಯಾಖ್ಯಾನಕ್ಕೀಡಾಗುತ್ತಿದೆ. ನಿಜದ ಹೆಮ್ಮೆಯ ಬದಲು ವಿಲಕ್ಷಣ ಅಭಿಮಾನದ ವಿಕೃತಿ ವ್ಯಾಪಕವಾಗುತ್ತಲೇ ಇದೆ.

ಒಂದು ದೇಶ ಮತ್ತೊಂದು ದೇಶದ ವಿರುದ್ಧ ಜಯ ಸಾಧಿಸಿದ ಘಳಿಗೆಯನ್ನು ನೆನಪಿಸಿಕೊಂಡು ಜಗತ್ತಿಗೆ ನಮ್ಮ ಶಕ್ತಿಯನ್ನು ತೋರ್ಪಡಿಸುವ ವಿಜಯೋತ್ಸವವು ಪ್ರಜೆಗಳ ಪ್ರಜ್ಞೆಯನ್ನು ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಹುನ್ನಾರದ ಭಾಗವಾಗಿಯೇ ಕಾಣಿಸುತ್ತಿದೆ. ನಮ್ಮವರೇ ಆಗಿದ್ದವರು ಹಿಂದೊಮ್ಮೆ ವಿಭಜನೆಯ ಸಾಂದರ್ಭಿಕ ಅನಿವಾರ್ಯತೆಯಲ್ಲಿ ಅಧಾರ್ಮಿಕ ತಿಳಿಗೇಡಿತನದ ಪರಮಾವಧಿಯ ಅತಿರೇಕದ ಕಾರಣಕ್ಕಾಗಿ ಬೇರೊಂದು ದೇಶದವರಾದರು. ನಂತರ ಒಬ್ಬರಿಗೊಬ್ಬರು ಜಗಳವಾಡಿಕೊಳ್ಳುವ ಧಾವಂತ ಒಬ್ಬರನ್ನೊಬ್ಬರು ಜಯಿಸುವ ಹಠವನ್ನು ಪ್ರತಿಷ್ಠಾಪಿಸಿಬಿಟ್ಟಿತು. ಈ ಹಠದೊಂದಿಗಿನ ದ್ವೇಷದ ಭಾವಗಳನ್ನು ರಾಜಕೀಯ ಸಂಕುಚಿತತೆ ಮತ್ತು ಅಧಿಕಾರ ದಾಹದ ಮನುಷ್ಯ ಸಹಜ ದೌರ್ಬಲ್ಯಗಳು ಮತ್ತಷ್ಟು ಪ್ರಬಲಗೊಳಿಸಿದವು.

ಅವು ಎಷ್ಟು ಪ್ರಖರವಾಗಿ ಮುಂದುವರೆದವು ಎಂದರೆ ಬಗೆಹರಿಸಿಕೊಳ್ಳಬಹುದಾಗಿದ್ದ ಭಿನ್ನಾಭಿಪ್ರಾಯಗಳನ್ನು ಕ್ರೌರ್ಯದ ಮೂಲಸರಕುಗಳನ್ನಾಗಿಸಿದವು. ಇಷ್ಟಿಷ್ಟಕ್ಕೆ ಗೆರೆಗೀಚಿ ಜಗಳಕ್ಕೆ ನಿಲ್ಲುವುದನ್ನೇ ಸ್ಥಾಯಿಯಾಗಿಸಿದವು. ಒಡೆದು ಆಳುವ ನೀತಿಯನ್ನೇ ಬಂಡವಾಳವಾಗಿಸಿಕೊಂಡವರನ್ನು ಮುಂಚೂಣಿಗೆ ತಂದುನಿಲ್ಲಿಸಿದವು. ಅವರ ಮೂಗಿನ ನೇರಕ್ಕೆ ರಾಷ್ಟ್ರವಾದವನ್ನು ಮುನ್ನೆಲೆಗೆ ತಂದವು. ಅಷ್ಟೇ ಅಲ್ಲದೇ ದೇಶವನ್ನು ಪ್ರೇಮಿಸುವ ಭ್ರಮಾತ್ಮಕ ಭಾವನೆ ಕೆರಳಿಸುವಂಥ ವಿಕೃತಿಗಳನ್ನು ಸೃಷ್ಟಿಸಿದವು. ಯುದ್ಧ, ಸಂಘರ್ಷಗಳ ಜೊತೆಗೆ ನಿಲ್ಲುವ ವಿಲಕ್ಷಣ ವಿತಂಡವಾದವನ್ನು ದಾಟಿಸಿದವು.

ಉದಾತ್ತ ಪದಗಳ ವರ್ತುಲದೊಳಗೆ ಬಂಧಿ

ದೇಶಾಭಿಮಾನವು ಅಧಿಕಾರವನ್ನು ದಕ್ಕಿಸಿಕೊಳ್ಳುವ ಹುನ್ನಾರಗಳೊಂದಿಗೆ ಗುರುತಿಸಿಕೊಂಡವರ ರಾಕ್ಷಸ ಹಸಿವನ್ನು ನೀಗಿಸುವ ಪಾತ್ರವನ್ನು ನಿಭಾಯಿಸಲಾರಂಭಿಸಿತು. ಸಾವು-ನೋವುಗಳು ತ್ಯಾಗ-ಬಲಿದಾನಗಳ ಉದಾತ್ತ ಪದಗಳ ವರ್ತುಲದೊಳಗೆ ಬಂಧಿಯಾಗಿ ತಮ್ಮ ನಿಜ ಅರ್ಥವನ್ನು ಕಳೆದುಕೊಂಡವು. ಈ ಹಂತದಲ್ಲಿಯೇ ಇತಿಹಾಸದಲ್ಲಿ ಆಗಿಹೋದ ಗಾಯಗಳನ್ನು ಜನಪ್ರಿಯ ಶೈಲಿಯಲ್ಲಿ ನೆನಪಿಸಿಕೊಂಡು ಅತ್ಯದ್ಭುತ ಎನ್ನಿಸುವ ಹಾಗೆ ಭಾಷಾಪಾಂಡಿತ್ಯ ಪ್ರದರ್ಶಿಸಿ ಇನ್ನೊಂದು ದೇಶದ ವಿರುದ್ಧ ಮಾತನಾಡುತ್ತಾ ಬೆಂಬಲ ಗಳಿಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಪ್ರಯತ್ನಗಳು ಯಶಸ್ಸು ಕಂಡವು. ಆ ಯಶಸ್ಸೇ ಇಂದು ಹಿಂಸೆಯ ಪರವಾದ ಸೋಂಕಿನೊಂದಿಗಿನ ವರ್ತನೆಗಳನ್ನೇ ವ್ಯಾಪಕವಾಗಿಸಿಬಿಟ್ಟಿದೆ.

ಇಂಥವುಗಳನ್ನು ಪ್ರಶ್ನಿಸಿ ಚಿಗುರಿಕೊಳ್ಳಬೇಕಾಗಿದ್ದ ಪರ್ಯಾಯ ಪ್ರತಿರೋಧದ ರಾಜಕಾರಣ ಪಕ್ಷಗಳ ಸಂಕುಚಿತ ಸಾರ್ವಭೌಮತ್ವದ ಅಲೆಯ ಹೊಡೆತಕ್ಕೆ ಸಿಲುಕಿಬಿಟ್ಟಿದೆ. ಆ ಅಲೆಯು ನಟನೆಯನ್ನೇ ನಿಜವಾದ ನಾಯಕತ್ವ ಎಂದು ಬಿಂಬಿಸುತ್ತಿದೆ. ಹಿಂದಿನವರಿಗಿಂತ ಈಗಿನ ಭಾವುಕ ಕೃತಕತೆಯೇ ಯೋಗ್ಯ ಎನ್ನುವಂಥ ನಂಬಿಕೆಯನ್ನು ಬಿತ್ತುತ್ತಿದೆ. ಚಿಂತನೆಯ ಸಾರ್ವಜನಿಕ ಸಾಮಥ್ರ್ಯವನ್ನೇ ಮುಳುಗಿಸಿ ಅದರ ಜಾಗದಲ್ಲಿ ಆರಾಧನೆಯ ಮನೋಭಾವವನ್ನು ನೆಲೆಗೊಳಿಸಿಬಿಟ್ಟಿದೆ.

ಮಾತಿನ ಮೋಡಿಯೊಳಗೆ ಸಿಲುಕಿದ ಯುವಜನ

ಯಾರನ್ನು ನೆಚ್ಚಿಕೊಂಡಿದ್ದೇವೆ, ಯಾರನ್ನು ನೆಚ್ಚಿಕೊಳ್ಳಬೇಕಿತ್ತು ಎಂಬ ವಿವೇಚನೆಯನ್ನೇ ಮರೆಸಿ ಒಂದು ಬಗೆಯ ಅಸಹಾಯಕತೆಯನ್ನು ಸೃಷ್ಟಿಸಿಬಿಟ್ಟಿದೆ.
ಕಾರ್ಗಿಲ್ ಯುದ್ಧದ ವೇಳೆ ಭಾರತದ ಆಗಿನ ಪ್ರಧಾನಿ ಕಾವ್ಯಾತ್ಮಕ ಧಾಟಿಯ ಯುದ್ಧಪ್ರಚೋದಕ ಭಾವುಕ ಪರಿಭಾಷೆಯನ್ನು ನೆಚ್ಚಿಕೊಂಡಿದ್ದರು. ಈಗಿನ ಪ್ರಧಾನಿ ಭಾಷೆಗೆ ಇರುವ ಉದಾತ್ತ ದೃಷ್ಟಿಕೋನಗಳ ಬಹುಮುಖೀ ಪ್ರಭಾವೀ ಶಕ್ತಿಯನ್ನೇ ಆಧರಿಸಿಕೊಂಡ ಮಾತಿನ ಮೋಡಿಯೊಳಗೆ ಜನರನ್ನು ಸಿಲುಕಿಸುತ್ತಿದ್ದಾರೆ. ಮಾತನಾಡಲೇಬೇಕಾದ ಸಂಗತಿಗಳ ಬಗ್ಗೆ ಮೌನವಹಿಸುತ್ತಿದ್ದಾರೆ.

ಇದೇನು ಇಂದು ನಿನ್ನೆಯ ರಾಜಕೀಯ ಪ್ರವೃತ್ತಿಯಲ್ಲ. ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು ಈಗ ಮಾತಿನ ಆಕರ್ಷಕ ಆಯಾಮ ಪಡೆದಿದೆ ಅಷ್ಟೇ. ಅವರ ಮೌನದ ಸ್ಪೇಸ್‍ನ್ನು ಅವರನ್ನು ಆರಾಧಿಸುವ ಬೆಂಬಲಿಗ ಪಡೆಯು ಸಂಘರ್ಷವನ್ನು, ಯದ್ಧೋನ್ಮಾದದ ಗುಂಗುಗಳನ್ನು ಶಾಶ್ವತವಾಗಿ ಬೇರೂರಿಬಿಡಿಸುವ ಪ್ರಯತ್ನಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಜನರೂ ರಾಜಕೀಯ ಮನರಂಜನೆಯ ಗ್ರಾಹಕರಾಗಿ ಮೂಕಪ್ರೇಕ್ಷಕರಾಗಿದ್ದಾರೆ. ಅವರ ಅಸಹಾಯಕತೆಯು ಯುದ್ಧೋನ್ಮಾದದ ಅಮಲನ್ನು ಹೆಮ್ಮೆ ಮತ್ತು ಅಭಿಮಾನ ಎಂಬ ಪದಗಳೊಂದಿಗೆ ಜೋಡಿಸಿ ಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸಲಾಗುತ್ತಿದೆ. ರಂಜನೆಯ ರೂಪದ ನುಡಿಗಳು ಮತ್ತು ಮಾತನಾಡಲೇಬೇಕಾದ ಸಂದರ್ಭದಲ್ಲಿ ಮೌನಕ್ಕೆ ಶರಣುಹೋಗುವ ತಂತ್ರಗಳ ಮೂಲಕ ಹಿಂಸೆಯೇ ಎಲ್ಲದಕ್ಕೂ ಪರಿಹಾರ ಎಂಬ ತಪ್ಪುಕಲ್ಪನೆಯನ್ನು ಬಿತ್ತಲಾಗುತ್ತಿದೆ. ತಪ್ಪು ತಿಳುವಳಿಕೆಗಳನ್ನು ನೆಲೆಗೊಳಿಸಿ ಅದರ ಆಧಾರದ ಮೇಲೆ ಅಧಿಕಾರದ ಮೇಲಿನ ಹಿಡಿತವನ್ನು ಪ್ರಬಲಗೊಳಿಸಿಕೊಳ್ಳುವ ಹೆಜ್ಜೆಗಳು ಹಿಂದೆಂದಿಗಿಂತಲೂ ದಟ್ಟವಾಗುತ್ತಿವೆ.

ಮನಮೋಹನ ಮೌನಕ್ಕಿಂತಲೂ ಈಗಿಮ ಮಾತಿನ ಅಬ್ಬರವೇ ಮೇಲು

ಹಿಂದಿನ ಮನಮೋಹನ ಮೌನಕ್ಕಿಂತಲೂ ಈಗಿನ ಮಾತಿನ ಅಬ್ಬರವೇ ಮೇಲು ಎಂದು ನಂಬಿಸಲಾಗುತ್ತಿದೆ. ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷವು ಪ್ರಬಲ ಪ್ರತಿರೋಧವನ್ನೊಡ್ಡುವ ಬದಲು ತನ್ನ ಮುಂಚೂಣಿ ಯುವ ನೇತಾರನ ತೊಳಲಾಟದ ಚಡಪಡಿಕೆಗೆ ಸಾಕ್ಷಿಯಾಗುತ್ತಿದೆ. ಇದೆಲ್ಲದರ ನಡುವೆ ಹಿಂಸೆಯು ಅಧಿಕಾರದ ಅಧಿಪತ್ಯದ ಇಂಧನವಾಗಿ ರಾಜಕೀಯ ಬೃಹದಾಕೃತಿಯನ್ನು ತಳೆದುಬಿಟ್ಟಿದೆ. ಅದೇ ಕಾರ್ಗಿಲ್ ಜಯಭೇರಿಯ ಕ್ಷಣಗಳಿಗೆ ಉತ್ಸವದ ಬಣ್ಣವನ್ನು ಲೇಪಿಸಿ ಜನರ ಮನೋಧರ್ಮವನ್ನು ಯುದ್ಧದ ಪರವಾಗಿ ತಿರುಗಿಸಿಬಿಟ್ಟಿದೆ.

ಯುದ್ಧವೆಂದರೆ ಎರಡು ದೇಶಗಳ ಸಂಘರ್ಷದ ಹಿಂಸಾತ್ಮಕ ಕ್ರಿಯೆ. ಕಳೆದುಕೊಳ್ಳುವ ನೋವುಗಳನ್ನು ಮನುಷ್ಯ ವಲಯದೊಳಗೆ ಸೇರ್ಪಡೆಗೊಳಿಸುವ ರಾಕ್ಷಸದಾಹದ ಅಖಾಡ. ಸೈನಿಕರ ಜೀವಗಳನ್ನು ಬಲಿ ಪಡೆದು ತಂದೆ, ತಾಯಿ, ಅಜ್ಜ, ಅಜ್ಜಿ, ಪತ್ನಿ, ಅಕ್ಕ, ತಂಗಿ ಸೇರಿದಂತೆ ಸಂಬಂಧಿಗಳೊಳಗೆ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಭಯಾನಕ ಸ್ವರೂಪಿ. ಜೀವ ಕಳೆದುಕೊಂಡ ಸೈನಿಕರ ತ್ಯಾಗ ನೆನಪಿಸಿಕೊಂಡು ದೇಶದ ಆಡಳಿತಾತ್ಮಕ ಪ್ರತಿನಿಧಿಗಳು ಅಧಿಕಾರಕ್ಕೆ ಮತ್ತಷ್ಟು ಹತ್ತಿರಾಗುವ ಪ್ರಯತ್ನಗಳಿಗೆ ಕುಮ್ಮಕ್ಕು ನೀಡುವ ಸಂದರ್ಭ. ಜೊತೆಗೆ ಯುದ್ಧ ನಡೆಯಲೇಬೇಕು, ಎದುರಾಳಿಗಳ ಸೊಕ್ಕು ಮುರಿಯಲೇಬೇಕು ಎಂಬ ಆವೇಶಭರಿತ ವಿಕೃತಿಗಳನ್ನು ವಿಜೃಂಭಿಸಿಕೊಳ್ಳಲು ಬೇಕಾಗುವ ಮಾಹಿತಿಯ ನಮೂನೆಗಳನ್ನು ನೆನಪಿಸಿಕೊಳ್ಳಲು ಪೂರಕವಾಗುವ ಬೀತಿಯ ಮೂಲ.

ಸದ್ಯದ ಕಾರ್ಗಿಲ್ ವಿಜಯೋತ್ಸವದೊಂದಿಗಿನ ರಹಸ್ಯ ಕಾರ್ಯಸೂಚಿ ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡ ಸಂಕುಚಿತ ರಾಜಕಾರಣ ಯುದ್ಧವನ್ನು ಹೀಗೆ ಮರುವ್ಯಾಖ್ಯಾನಿಸಿಕೊಳ್ಳುವ ಒತ್ತಡವನ್ನು ಸೃಷ್ಟಿಸಿದೆ.
ಆದರೆ, ನಮ್ಮ ಯುವಶಕ್ತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತುಕೊಂಡು ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುವ ಭಾವುಕತೆಯ ಲೇಪನೆಯೊಂದಿಗಿನ ವಿಕೃತ ಬಿಂಬಗಳನ್ನೇ ಆರಾಧಿಸುತ್ತಾ ಸೈನಿಕರನ್ನು ನೆನಪಿಸಿಕೊಳ್ಳುವುದಷ್ಟನ್ನೇ ದೇಶಪ್ರೇಮ ಎಂದುಕೊಂಡಿವೆ. ಯುದ್ಧ ಆಗಲೇಬೇಕು, ಯುದ್ಧದಿಂದಲೇ ಪರಿಹಾರ ಎಂಬ ಅಧಿಕಾರಕೇಂದ್ರದ ಮೂಲಭೂತವಾದಿ ದೃಷ್ಟಿಕೋನವನ್ನೇ ಆರಾಧಿಸುತ್ತಾ, ಆ ಆರಾಧನೆಯ ಭಾವಗಳನ್ನೇ ವಿಸ್ತರಿಸುವ ಪ್ರಚೋದಕ ಮಾಹಿತಿ, ಮಾತುಗಳನ್ನು ಶೇರ್ ಮಾಡುತ್ತಾ ತಮ್ಮೊಳಗಿನ ಯೋಚನೆಯ ಶಕ್ತಿಯನ್ನೇ ಕ್ರಮೇಣ ಕಳಚಿಕೊಳ್ಳುತ್ತಾ ಸಾಗಿದೆ.

ಗೇಲಿ ಮಾಡುವ ಪ್ರವೃತ್ತಿ

ಯೋಚಿಸುವವರನ್ನು ‘ಬುದ್ಧಿಜೀವಿಗಳು’ ಎಂಬ ಪಟ್ಟ ಕಟ್ಟಿ ಅದೊಂದು ಅಸ್ಪೃಶ್ಯ ವರ್ಗ ಎನ್ನುವಂತೆ ಗೇಲಿಮಾಡುತ್ತಿದೆ. ಬುದ್ಧಿ ಮತ್ತು ಜೀವ ಎರಡೂ ಮನುಷ್ಯ ಬದುಕನ್ನು ಚಲನಶೀಲಗೊಳಿಸುವಂಥವು. ಬುದ್ಧಿಯು ವಿವೇಕ ತಂದುಕೊಳ್ಳುವ ಮೂಲವಾದರೆ ಜೀವ ಅಂಥ ವಿವೇಕವನ್ನು ದಾಟಿಸುವ ಚಲನೆಯನ್ನೇ ಸಂಕೇತಿಸುತ್ತದೆ. ಆ ಮೂಲಕ ಸಾಮಾಜಿಕ ಚಲನಶೀಲತೆಯ ಜೀವಂತಿಕೆಯನ್ನು ಹೆಚ್ಚಿಸುವುದಕ್ಕೆ ಸಾಧ್ಯವಾಗುತ್ತದೆ. ಅದಕ್ಕೆ ಮೌಲಿಕ ಚಿಂತನೆಗಳನ್ನು ಕೊಡುಗೆಗಳನ್ನಾಗಿ ನೀಡುವವರು ಬುದ್ಧಿಜೀವಿಗಳೆನ್ನಿಸಿಕೊಳ್ಳುತ್ತಾರೆ. ತಾವು ಬುದ್ಧಿಜೀವಿಗಳೆಂದುಕೊಂಡು ಬೀಗುವವರು, ತಮ್ಮ ಬುದ್ಧಿಯನ್ನು ಅಧಿಕಾರದಲ್ಲಿರುವವರ ಕೈಗೊಪ್ಪಿಸುವವರು, ಸಮಾಜದ ಜೀವಂತಿಕೆಗೆ ತದ್ವಿರುದ್ಧದ ನಡವಳಿಕೆಯವರು ಬುದ್ಧಿ ಅಥವಾ ವಿವೇಕದೊಂದಿಗಿನ ಜೀವಗಳಲ್ಲ. ಆದರೆ, ಸಮಾಜಕ್ಕೆ ಈ ಕ್ಷಣಕ್ಕೆ ಬೇಕಾದದ್ದನ್ನು ಪ್ರಸ್ತಾಪಿಸಿ ಅಧಿಕಾರದಲ್ಲಿರುವವರನ್ನು ಎಚ್ಚರಿಸುವ ಮಾತುಗಳನ್ನಾಡಿ ಬೆಳವಣಿಗೆಗೆ ಅರ್ಥಪೂರ್ಣ ತೀವ್ರತೆ ತಂದುಕೊಡುವ ಚಿಂತನಶೀಲರು ಬುದ್ಧಿಜೀವಿಗಳು.

ನಮ್ಮ ರಾಜಕಾರಣ ಮತ್ತು ಮಾಧ್ಯಮದ ಆಕ್ರಾಮಕ ಭಾಷಿಕ ವಿಕೃತಿಗಳು ಬುದ್ಧಿಜೀವಿಗಳ ವೈವಿಧ್ಯಮಯ ಶಕ್ತಿಯನ್ನು ಹಿನ್ನೆಲೆಗೆ ಸರಿಸಿ ಅವರನ್ನು ದೇಶದ್ರೋಹಿಗಳು ಎಂದು ಬಿಂಬಿಸುವುದರ ಕಡೆಗೆ ಹೆಚ್ಚು ವಾಲಿಕೊಂಡಿವೆ. ನಾಯಕರೆನ್ನಿಸಿಕೊಂಡ ಅಪ್ರಬುದ್ಧರು ‘ನಾನು ಗೃಹಸಚಿವನಾಗಿದ್ದರೆ ಇಂಥವರನ್ನು ಒಟ್ಟಿಗೆ ನಿಲ್ಲಿಸಿ ಗುಂಡು ಹಾರಿಸುವಂತೆ ಹೇಳುತ್ತಿದ್ದೆ’ ಎಂಬ ಯುದ್ಧದ ಪರಿಭಾಷೆಯಲ್ಲಿಯೇ ಮಾತನಾಡಿಬಿಡುತ್ತಾರೆ. ಆ ಮಾತನ್ನು ಸುದ್ದಿಮಾಧ್ಯಮಗಳು ಬಹುದೊಡ್ಡ ದಾರ್ಶನಿಕ ನುಡಿ ಎಂಬಂತೆ ಚಿತ್ರಿಸಿಬಿಡುತ್ತವೆ. ಮತ್ತೊಂದು ರಾಷ್ಟ್ರದ ವಿರುದ್ಧದ ಯುದ್ಧಸನ್ನದ್ಧತೆಯ ವಿಕೃತಿಗಳು ಮತ್ತು ದೇಶದ ಒಳಗೇ ಇರುವ ಯೋಚಿಸುವ ಶಕ್ತಿಯುಳ್ಳವರ ವಿರುದ್ಧದ ಹಿಂಸಾತ್ಮಕ ದಾಳಿಗಳು ಸಂಕುಚಿತತೆಯನ್ನು ವಿಸ್ತಾರಗೊಳಿಸಲು ಬೇಕಾದ ಜನಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ಹಾಗಾಗುವಂತೆ ಮೂಲಭೂತವಾದಿ ಚಾಣಾಕ್ಷ ನಡೆಗಳು ಸಂವಹನ ತಂತ್ರಗಳನ್ನು ಹೆಣೆದು ಯಶಸ್ಸು ಕಾಣುತ್ತಿವೆ.

ಮೂಲಭೂತವಾದಿ ಕಾರ್ಯತಂತ್ರಗಳು ಗಾಂಧಿ ಚಿಂತನೆಯನ್ನು ಪರೋಕ್ಷವಾಗಿ ಮತ್ತು ನೇರವಾಗಿ ಅಪ್ರಸ್ತುತ ಎಂದು ನಂಬಿಸುತ್ತಿವೆ. ಉಪವಾಸದ ನಡೆಗಿಂತ ಹಿಂಸೆಯೊಂದಿಗಿನ ನಡೆಗಳಿಗೆ ಬ್ರಿಟಿಷರು ಹೆದರಿದರು ಎಂದು ಈಗಾಗಲೇ ಆಗಿಹೋದ ಇತಿಹಾಸವನ್ನು ಸಂಕುಚಿತ ದೃಷ್ಟಿಕೋನಗಳ ಮಟ್ಟಕ್ಕಿಳಿಸಿ ವಿವರಿಸುತ್ತಿವೆ. ಇಂಥವುಗಳನ್ನು ಅಲ್ಲಗಳೆಯಬೇಕಿದ್ದ ಸುದ್ದಿಮಾಧ್ಯಮಗಳು ವೈಭವೀಕರಣದ ತಂತ್ರಗಾರಿಕೆಯೊಂದಿಗೆ ಪ್ರಜೆಗಳನ್ನು ವೀಕ್ಷಕ ಗ್ರಾಹಕರನ್ನಾಗಿಸಿಕೊಂಡು ಹಣಗಳಿಕೆಯ ಲೆಕ್ಕಾಚಾರದ ಗುಂಗಿನೊಂದಿಗೇ ಸಂಭ್ರಮಿಸುತ್ತಿವೆ. ಈ ನಕಾರಾತ್ಮಕತೆಗೆ ಕಡಿವಾಣ ಹೇಗೆ? ಸಾಧ್ಯವೇ ಇಲ್ಲ ಎನ್ನುವಂತಿಲ್ಲ.

ಮತ್ತೆ ಬುದ್ಧಿ ಮತ್ತು ಜೀವಗಳೆರಡೂ ಸಂಯೋಜಿತಗೊಂಡು ಚಲನಶೀಲತೆಯೆಡಗಿನ ಪಯಣ ಹಿಂದೆಂದಿಗಿಂತಲೂ ತೀವ್ರಗೊಳ್ಳಬೇಕು. ಪ್ರಶ್ನೆಗಳು ಹುಟ್ಟಿಕೊಳ್ಳಬೇಕು. ಪ್ರಶ್ನಿಸುವವರ ಸ್ಥೈರ್ಯ ಹೆಚ್ಚಿಸುವ ಪ್ರಜಾಸತ್ತಾತ್ಮಕ ವಾತಾವರಣ ರೂಪುಗೊಳ್ಳಬೇಕು. ಬುದ್ಧಿ ಜೀವಗಳನ್ನು ಕೊಲ್ಲುವ ಪರಿಭಾಷೆಯನ್ನು ಎದುರುಗೊಳ್ಳುವ ಸೌಹಾರ್ದಯುತ ಸಂವಾದದ ಆರೋಗ್ಯಕರ ಆಂದೋಲನ ದೇಶವ್ಯಾಪಿಯಾಗಬೇಕು. ಯುದ್ಧೋನ್ಮೋದ ಮತ್ತು ಸಂಘರ್ಷದ ಭಾಷಿಕ ವಿಕೃತಿಗಳಿಗಿಂತ ಮಾನವೀಯತೆಯೇ ದೇಶದ ಶ್ರೇಷ್ಠ ಗುಣಲಕ್ಷಣವಾಗಬೇಕು ಎಂಬ ಕಾಳಜಿಗಳು ಮುನ್ನೆಲೆಗೆ ಬರಬೇಕು. ದೇಶದ ಕುರಿತಾದ ಹೆಮ್ಮೆಯ ಭಾವಗಳು ಮನುಷ್ಯತ್ವದ ಮೌಲಿಕತೆಯೊಂದಿಗೇ ಸಂಯೋಜಿತಗೊಳ್ಳಬೇಕು. ದೇಶದ ಬಗೆಗಿನ ಪ್ರೇಮವು ಅಂಧಾಭಿಮಾನದ ಮಿತಿಗಳನ್ನು ದಾಟಿಕೊಂಡು ಗಂಭೀರ ಚಿಂತನೆಗಳ ಬಲದಲ್ಲಿ ಗಟ್ಟಿಗೊಳ್ಳಬೇಕು.

(ಲೇಖಕರು: ಡಾ.ಎನ್.ಕೆ.ಪದ್ಮನಾಭ,
ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್‍ಡಿಎಂ ಸ್ನಾತಕೋತ್ತರ ಕೇಂದ್ರ, ಉಜಿರೆ)

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ7 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ7 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ8 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ8 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ9 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ12 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ1 day ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ1 day ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending