Connect with us

ರಾಜಕೀಯ

ಯುದ್ಧೋನ್ಮಾದ ಹೆಮ್ಮೆಯ ಅಮಲಿನ ವಿಲಕ್ಷಣ ಅಲೆ

Published

on

ಸುದ್ದಿದಿನ ವಿಶೇಷ : ಇಬ್ಬರ ನಡುವೆ ಜಗಳವಾಗುತ್ತದೆ. ಕೈ ಕೈ ಮಿಲಾಯಿಸಿ ಒಬ್ಬರನ್ನೊಬ್ಬರು ಹೊಡೆದುಕೊಂಡು ರಕ್ತಸಿಕ್ತಗೊಂಡು ಘಾಸಿಗೊಳ್ಳುವ ಸಂದರ್ಭವದು.

ದೈಹಿಕ ಶಕ್ತಿಯ ಬಲದಲ್ಲಿ ಒಬ್ಬರು ಮತ್ತೊಬ್ಬರನ್ನು ಮಣಿಸಿಬಿಡುತ್ತಾರೆ. ಗೆದ್ದು ಬೀಗುತ್ತಾರೆ. ಆ ಗೆಲುವು ಗೆದ್ದವನೊಳಗೆ ಅಹಂಕಾರವನ್ನು ಶಾಶ್ವತವಾಗಿ ಬೇರೂರಿಸಿಬಿಡುತ್ತದೆ. ಅದರ ಜೊತೆಗೆ ಪ್ರತಿಯೊಂದು ಸಲವೂ ಆ ಗೆಲುವನ್ನು ನೆನಪಿಸುವಂಥ ರೀತಿಯ ನಡವಳಿಕೆಗಳೊಂದಿಗೆ ಉಳಿದವರೊಳಗೆ ಭಯಭೀತಿ ಉಂಟುಮಾಡುತ್ತಲೇ ತನ್ನ ಪ್ರಾಬಲ್ಯದ ಪ್ರದರ್ಶನದೊಂದಿಗೆ ವಿಜೃಂಭಿಸುತ್ತಾನೆ. ಅಂಥ ಕ್ಷಣಗಳನ್ನೇ ಸಂಭ್ರಮಿಸುತ್ತಾ ದೈಹಿಕವಾಗಿ ಪ್ರಬಲವಾಗಿರುವುದೇ ಎಲ್ಲರನ್ನು ಹದ್ದುಬಸ್ತಿನಲ್ಲಿಡುವ ಬಹುಮುಖ್ಯ ತಂತ್ರ ಎಂಬುದನ್ನು ಸಾರುತ್ತಲೇ ಇರುತ್ತಾನೆ. ತನ್ನನ್ನು ತೊಡವಿಕೊಂಡರೆ ಪರಿಣಾಮ ನೆಟ್ಟಗಿರದು ಎಂಬ ಭಯಾನಕ ಸಂದೇಶ ರವಾನಿಸುತ್ತಾನೆ.

ಅವನ ಬೆಂಬಲಿಗರ ಭಾವುಕ ಅಜ್ಞಾನವು ಅವರಲ್ಲಿ ಒಂದು ಬಗೆಯ ಹುಸಿ ಹೆಮ್ಮೆಯನ್ನು ಮೂಡಿಸಿಬಿಡುತ್ತದೆ. ಅದರ ಕತ್ತಲ ಬಂಧದೊಳಗೆ ಬೆಂಬಲಿಗ ಅಭಿಮಾನಿಗಳ ವಿವೇಕ ಉಸಿರುಗಟ್ಟುತ್ತಿರುತ್ತದೆ. ಅಂಥವರ ಸಂಖ್ಯೆಯೇ ಹೆಚ್ಚಾಗುತ್ತಾ ಒಂದು ಬಗೆಯ ಸ್ಥಗಿತತೆಯ ವಾತಾವರಣ ನೆಲೆಸಿಬಿಡುತ್ತದೆ.

 

ನಕಾರಾತ್ಮಕತೆಗೆ ಸಾಕ್ಷ್ಯ ಒದಗಿಸುವ ಯುದ್ಧ

ಕಾರ್ಗಿಲ್ ವಿಜಯೋತ್ಸವವು ದೇಶದಾದ್ಯಂತ ಇಂಥದ್ದೊಂದು ನಕಾರಾತ್ಮಕತೆಗೆ ಸಾಕ್ಷ್ಯ ಒದಗಿಸುತ್ತಿದೆ. ಯುದ್ಧ ಗೆದ್ದ ಸಂಭ್ರಮದಲ್ಲಿ ದೇಶದ ಕುರಿತಾದ ಹೆಮ್ಮೆ ಅಪವ್ಯಾಖ್ಯಾನಕ್ಕೀಡಾಗುತ್ತಿದೆ. ನಿಜದ ಹೆಮ್ಮೆಯ ಬದಲು ವಿಲಕ್ಷಣ ಅಭಿಮಾನದ ವಿಕೃತಿ ವ್ಯಾಪಕವಾಗುತ್ತಲೇ ಇದೆ.

ಒಂದು ದೇಶ ಮತ್ತೊಂದು ದೇಶದ ವಿರುದ್ಧ ಜಯ ಸಾಧಿಸಿದ ಘಳಿಗೆಯನ್ನು ನೆನಪಿಸಿಕೊಂಡು ಜಗತ್ತಿಗೆ ನಮ್ಮ ಶಕ್ತಿಯನ್ನು ತೋರ್ಪಡಿಸುವ ವಿಜಯೋತ್ಸವವು ಪ್ರಜೆಗಳ ಪ್ರಜ್ಞೆಯನ್ನು ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಹುನ್ನಾರದ ಭಾಗವಾಗಿಯೇ ಕಾಣಿಸುತ್ತಿದೆ. ನಮ್ಮವರೇ ಆಗಿದ್ದವರು ಹಿಂದೊಮ್ಮೆ ವಿಭಜನೆಯ ಸಾಂದರ್ಭಿಕ ಅನಿವಾರ್ಯತೆಯಲ್ಲಿ ಅಧಾರ್ಮಿಕ ತಿಳಿಗೇಡಿತನದ ಪರಮಾವಧಿಯ ಅತಿರೇಕದ ಕಾರಣಕ್ಕಾಗಿ ಬೇರೊಂದು ದೇಶದವರಾದರು. ನಂತರ ಒಬ್ಬರಿಗೊಬ್ಬರು ಜಗಳವಾಡಿಕೊಳ್ಳುವ ಧಾವಂತ ಒಬ್ಬರನ್ನೊಬ್ಬರು ಜಯಿಸುವ ಹಠವನ್ನು ಪ್ರತಿಷ್ಠಾಪಿಸಿಬಿಟ್ಟಿತು. ಈ ಹಠದೊಂದಿಗಿನ ದ್ವೇಷದ ಭಾವಗಳನ್ನು ರಾಜಕೀಯ ಸಂಕುಚಿತತೆ ಮತ್ತು ಅಧಿಕಾರ ದಾಹದ ಮನುಷ್ಯ ಸಹಜ ದೌರ್ಬಲ್ಯಗಳು ಮತ್ತಷ್ಟು ಪ್ರಬಲಗೊಳಿಸಿದವು.

ಅವು ಎಷ್ಟು ಪ್ರಖರವಾಗಿ ಮುಂದುವರೆದವು ಎಂದರೆ ಬಗೆಹರಿಸಿಕೊಳ್ಳಬಹುದಾಗಿದ್ದ ಭಿನ್ನಾಭಿಪ್ರಾಯಗಳನ್ನು ಕ್ರೌರ್ಯದ ಮೂಲಸರಕುಗಳನ್ನಾಗಿಸಿದವು. ಇಷ್ಟಿಷ್ಟಕ್ಕೆ ಗೆರೆಗೀಚಿ ಜಗಳಕ್ಕೆ ನಿಲ್ಲುವುದನ್ನೇ ಸ್ಥಾಯಿಯಾಗಿಸಿದವು. ಒಡೆದು ಆಳುವ ನೀತಿಯನ್ನೇ ಬಂಡವಾಳವಾಗಿಸಿಕೊಂಡವರನ್ನು ಮುಂಚೂಣಿಗೆ ತಂದುನಿಲ್ಲಿಸಿದವು. ಅವರ ಮೂಗಿನ ನೇರಕ್ಕೆ ರಾಷ್ಟ್ರವಾದವನ್ನು ಮುನ್ನೆಲೆಗೆ ತಂದವು. ಅಷ್ಟೇ ಅಲ್ಲದೇ ದೇಶವನ್ನು ಪ್ರೇಮಿಸುವ ಭ್ರಮಾತ್ಮಕ ಭಾವನೆ ಕೆರಳಿಸುವಂಥ ವಿಕೃತಿಗಳನ್ನು ಸೃಷ್ಟಿಸಿದವು. ಯುದ್ಧ, ಸಂಘರ್ಷಗಳ ಜೊತೆಗೆ ನಿಲ್ಲುವ ವಿಲಕ್ಷಣ ವಿತಂಡವಾದವನ್ನು ದಾಟಿಸಿದವು.

ಉದಾತ್ತ ಪದಗಳ ವರ್ತುಲದೊಳಗೆ ಬಂಧಿ

ದೇಶಾಭಿಮಾನವು ಅಧಿಕಾರವನ್ನು ದಕ್ಕಿಸಿಕೊಳ್ಳುವ ಹುನ್ನಾರಗಳೊಂದಿಗೆ ಗುರುತಿಸಿಕೊಂಡವರ ರಾಕ್ಷಸ ಹಸಿವನ್ನು ನೀಗಿಸುವ ಪಾತ್ರವನ್ನು ನಿಭಾಯಿಸಲಾರಂಭಿಸಿತು. ಸಾವು-ನೋವುಗಳು ತ್ಯಾಗ-ಬಲಿದಾನಗಳ ಉದಾತ್ತ ಪದಗಳ ವರ್ತುಲದೊಳಗೆ ಬಂಧಿಯಾಗಿ ತಮ್ಮ ನಿಜ ಅರ್ಥವನ್ನು ಕಳೆದುಕೊಂಡವು. ಈ ಹಂತದಲ್ಲಿಯೇ ಇತಿಹಾಸದಲ್ಲಿ ಆಗಿಹೋದ ಗಾಯಗಳನ್ನು ಜನಪ್ರಿಯ ಶೈಲಿಯಲ್ಲಿ ನೆನಪಿಸಿಕೊಂಡು ಅತ್ಯದ್ಭುತ ಎನ್ನಿಸುವ ಹಾಗೆ ಭಾಷಾಪಾಂಡಿತ್ಯ ಪ್ರದರ್ಶಿಸಿ ಇನ್ನೊಂದು ದೇಶದ ವಿರುದ್ಧ ಮಾತನಾಡುತ್ತಾ ಬೆಂಬಲ ಗಳಿಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಪ್ರಯತ್ನಗಳು ಯಶಸ್ಸು ಕಂಡವು. ಆ ಯಶಸ್ಸೇ ಇಂದು ಹಿಂಸೆಯ ಪರವಾದ ಸೋಂಕಿನೊಂದಿಗಿನ ವರ್ತನೆಗಳನ್ನೇ ವ್ಯಾಪಕವಾಗಿಸಿಬಿಟ್ಟಿದೆ.

ಇಂಥವುಗಳನ್ನು ಪ್ರಶ್ನಿಸಿ ಚಿಗುರಿಕೊಳ್ಳಬೇಕಾಗಿದ್ದ ಪರ್ಯಾಯ ಪ್ರತಿರೋಧದ ರಾಜಕಾರಣ ಪಕ್ಷಗಳ ಸಂಕುಚಿತ ಸಾರ್ವಭೌಮತ್ವದ ಅಲೆಯ ಹೊಡೆತಕ್ಕೆ ಸಿಲುಕಿಬಿಟ್ಟಿದೆ. ಆ ಅಲೆಯು ನಟನೆಯನ್ನೇ ನಿಜವಾದ ನಾಯಕತ್ವ ಎಂದು ಬಿಂಬಿಸುತ್ತಿದೆ. ಹಿಂದಿನವರಿಗಿಂತ ಈಗಿನ ಭಾವುಕ ಕೃತಕತೆಯೇ ಯೋಗ್ಯ ಎನ್ನುವಂಥ ನಂಬಿಕೆಯನ್ನು ಬಿತ್ತುತ್ತಿದೆ. ಚಿಂತನೆಯ ಸಾರ್ವಜನಿಕ ಸಾಮಥ್ರ್ಯವನ್ನೇ ಮುಳುಗಿಸಿ ಅದರ ಜಾಗದಲ್ಲಿ ಆರಾಧನೆಯ ಮನೋಭಾವವನ್ನು ನೆಲೆಗೊಳಿಸಿಬಿಟ್ಟಿದೆ.

ಮಾತಿನ ಮೋಡಿಯೊಳಗೆ ಸಿಲುಕಿದ ಯುವಜನ

ಯಾರನ್ನು ನೆಚ್ಚಿಕೊಂಡಿದ್ದೇವೆ, ಯಾರನ್ನು ನೆಚ್ಚಿಕೊಳ್ಳಬೇಕಿತ್ತು ಎಂಬ ವಿವೇಚನೆಯನ್ನೇ ಮರೆಸಿ ಒಂದು ಬಗೆಯ ಅಸಹಾಯಕತೆಯನ್ನು ಸೃಷ್ಟಿಸಿಬಿಟ್ಟಿದೆ.
ಕಾರ್ಗಿಲ್ ಯುದ್ಧದ ವೇಳೆ ಭಾರತದ ಆಗಿನ ಪ್ರಧಾನಿ ಕಾವ್ಯಾತ್ಮಕ ಧಾಟಿಯ ಯುದ್ಧಪ್ರಚೋದಕ ಭಾವುಕ ಪರಿಭಾಷೆಯನ್ನು ನೆಚ್ಚಿಕೊಂಡಿದ್ದರು. ಈಗಿನ ಪ್ರಧಾನಿ ಭಾಷೆಗೆ ಇರುವ ಉದಾತ್ತ ದೃಷ್ಟಿಕೋನಗಳ ಬಹುಮುಖೀ ಪ್ರಭಾವೀ ಶಕ್ತಿಯನ್ನೇ ಆಧರಿಸಿಕೊಂಡ ಮಾತಿನ ಮೋಡಿಯೊಳಗೆ ಜನರನ್ನು ಸಿಲುಕಿಸುತ್ತಿದ್ದಾರೆ. ಮಾತನಾಡಲೇಬೇಕಾದ ಸಂಗತಿಗಳ ಬಗ್ಗೆ ಮೌನವಹಿಸುತ್ತಿದ್ದಾರೆ.

ಇದೇನು ಇಂದು ನಿನ್ನೆಯ ರಾಜಕೀಯ ಪ್ರವೃತ್ತಿಯಲ್ಲ. ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು ಈಗ ಮಾತಿನ ಆಕರ್ಷಕ ಆಯಾಮ ಪಡೆದಿದೆ ಅಷ್ಟೇ. ಅವರ ಮೌನದ ಸ್ಪೇಸ್‍ನ್ನು ಅವರನ್ನು ಆರಾಧಿಸುವ ಬೆಂಬಲಿಗ ಪಡೆಯು ಸಂಘರ್ಷವನ್ನು, ಯದ್ಧೋನ್ಮಾದದ ಗುಂಗುಗಳನ್ನು ಶಾಶ್ವತವಾಗಿ ಬೇರೂರಿಬಿಡಿಸುವ ಪ್ರಯತ್ನಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಜನರೂ ರಾಜಕೀಯ ಮನರಂಜನೆಯ ಗ್ರಾಹಕರಾಗಿ ಮೂಕಪ್ರೇಕ್ಷಕರಾಗಿದ್ದಾರೆ. ಅವರ ಅಸಹಾಯಕತೆಯು ಯುದ್ಧೋನ್ಮಾದದ ಅಮಲನ್ನು ಹೆಮ್ಮೆ ಮತ್ತು ಅಭಿಮಾನ ಎಂಬ ಪದಗಳೊಂದಿಗೆ ಜೋಡಿಸಿ ಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸಲಾಗುತ್ತಿದೆ. ರಂಜನೆಯ ರೂಪದ ನುಡಿಗಳು ಮತ್ತು ಮಾತನಾಡಲೇಬೇಕಾದ ಸಂದರ್ಭದಲ್ಲಿ ಮೌನಕ್ಕೆ ಶರಣುಹೋಗುವ ತಂತ್ರಗಳ ಮೂಲಕ ಹಿಂಸೆಯೇ ಎಲ್ಲದಕ್ಕೂ ಪರಿಹಾರ ಎಂಬ ತಪ್ಪುಕಲ್ಪನೆಯನ್ನು ಬಿತ್ತಲಾಗುತ್ತಿದೆ. ತಪ್ಪು ತಿಳುವಳಿಕೆಗಳನ್ನು ನೆಲೆಗೊಳಿಸಿ ಅದರ ಆಧಾರದ ಮೇಲೆ ಅಧಿಕಾರದ ಮೇಲಿನ ಹಿಡಿತವನ್ನು ಪ್ರಬಲಗೊಳಿಸಿಕೊಳ್ಳುವ ಹೆಜ್ಜೆಗಳು ಹಿಂದೆಂದಿಗಿಂತಲೂ ದಟ್ಟವಾಗುತ್ತಿವೆ.

ಮನಮೋಹನ ಮೌನಕ್ಕಿಂತಲೂ ಈಗಿಮ ಮಾತಿನ ಅಬ್ಬರವೇ ಮೇಲು

ಹಿಂದಿನ ಮನಮೋಹನ ಮೌನಕ್ಕಿಂತಲೂ ಈಗಿನ ಮಾತಿನ ಅಬ್ಬರವೇ ಮೇಲು ಎಂದು ನಂಬಿಸಲಾಗುತ್ತಿದೆ. ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷವು ಪ್ರಬಲ ಪ್ರತಿರೋಧವನ್ನೊಡ್ಡುವ ಬದಲು ತನ್ನ ಮುಂಚೂಣಿ ಯುವ ನೇತಾರನ ತೊಳಲಾಟದ ಚಡಪಡಿಕೆಗೆ ಸಾಕ್ಷಿಯಾಗುತ್ತಿದೆ. ಇದೆಲ್ಲದರ ನಡುವೆ ಹಿಂಸೆಯು ಅಧಿಕಾರದ ಅಧಿಪತ್ಯದ ಇಂಧನವಾಗಿ ರಾಜಕೀಯ ಬೃಹದಾಕೃತಿಯನ್ನು ತಳೆದುಬಿಟ್ಟಿದೆ. ಅದೇ ಕಾರ್ಗಿಲ್ ಜಯಭೇರಿಯ ಕ್ಷಣಗಳಿಗೆ ಉತ್ಸವದ ಬಣ್ಣವನ್ನು ಲೇಪಿಸಿ ಜನರ ಮನೋಧರ್ಮವನ್ನು ಯುದ್ಧದ ಪರವಾಗಿ ತಿರುಗಿಸಿಬಿಟ್ಟಿದೆ.

ಯುದ್ಧವೆಂದರೆ ಎರಡು ದೇಶಗಳ ಸಂಘರ್ಷದ ಹಿಂಸಾತ್ಮಕ ಕ್ರಿಯೆ. ಕಳೆದುಕೊಳ್ಳುವ ನೋವುಗಳನ್ನು ಮನುಷ್ಯ ವಲಯದೊಳಗೆ ಸೇರ್ಪಡೆಗೊಳಿಸುವ ರಾಕ್ಷಸದಾಹದ ಅಖಾಡ. ಸೈನಿಕರ ಜೀವಗಳನ್ನು ಬಲಿ ಪಡೆದು ತಂದೆ, ತಾಯಿ, ಅಜ್ಜ, ಅಜ್ಜಿ, ಪತ್ನಿ, ಅಕ್ಕ, ತಂಗಿ ಸೇರಿದಂತೆ ಸಂಬಂಧಿಗಳೊಳಗೆ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಭಯಾನಕ ಸ್ವರೂಪಿ. ಜೀವ ಕಳೆದುಕೊಂಡ ಸೈನಿಕರ ತ್ಯಾಗ ನೆನಪಿಸಿಕೊಂಡು ದೇಶದ ಆಡಳಿತಾತ್ಮಕ ಪ್ರತಿನಿಧಿಗಳು ಅಧಿಕಾರಕ್ಕೆ ಮತ್ತಷ್ಟು ಹತ್ತಿರಾಗುವ ಪ್ರಯತ್ನಗಳಿಗೆ ಕುಮ್ಮಕ್ಕು ನೀಡುವ ಸಂದರ್ಭ. ಜೊತೆಗೆ ಯುದ್ಧ ನಡೆಯಲೇಬೇಕು, ಎದುರಾಳಿಗಳ ಸೊಕ್ಕು ಮುರಿಯಲೇಬೇಕು ಎಂಬ ಆವೇಶಭರಿತ ವಿಕೃತಿಗಳನ್ನು ವಿಜೃಂಭಿಸಿಕೊಳ್ಳಲು ಬೇಕಾಗುವ ಮಾಹಿತಿಯ ನಮೂನೆಗಳನ್ನು ನೆನಪಿಸಿಕೊಳ್ಳಲು ಪೂರಕವಾಗುವ ಬೀತಿಯ ಮೂಲ.

ಸದ್ಯದ ಕಾರ್ಗಿಲ್ ವಿಜಯೋತ್ಸವದೊಂದಿಗಿನ ರಹಸ್ಯ ಕಾರ್ಯಸೂಚಿ ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡ ಸಂಕುಚಿತ ರಾಜಕಾರಣ ಯುದ್ಧವನ್ನು ಹೀಗೆ ಮರುವ್ಯಾಖ್ಯಾನಿಸಿಕೊಳ್ಳುವ ಒತ್ತಡವನ್ನು ಸೃಷ್ಟಿಸಿದೆ.
ಆದರೆ, ನಮ್ಮ ಯುವಶಕ್ತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತುಕೊಂಡು ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುವ ಭಾವುಕತೆಯ ಲೇಪನೆಯೊಂದಿಗಿನ ವಿಕೃತ ಬಿಂಬಗಳನ್ನೇ ಆರಾಧಿಸುತ್ತಾ ಸೈನಿಕರನ್ನು ನೆನಪಿಸಿಕೊಳ್ಳುವುದಷ್ಟನ್ನೇ ದೇಶಪ್ರೇಮ ಎಂದುಕೊಂಡಿವೆ. ಯುದ್ಧ ಆಗಲೇಬೇಕು, ಯುದ್ಧದಿಂದಲೇ ಪರಿಹಾರ ಎಂಬ ಅಧಿಕಾರಕೇಂದ್ರದ ಮೂಲಭೂತವಾದಿ ದೃಷ್ಟಿಕೋನವನ್ನೇ ಆರಾಧಿಸುತ್ತಾ, ಆ ಆರಾಧನೆಯ ಭಾವಗಳನ್ನೇ ವಿಸ್ತರಿಸುವ ಪ್ರಚೋದಕ ಮಾಹಿತಿ, ಮಾತುಗಳನ್ನು ಶೇರ್ ಮಾಡುತ್ತಾ ತಮ್ಮೊಳಗಿನ ಯೋಚನೆಯ ಶಕ್ತಿಯನ್ನೇ ಕ್ರಮೇಣ ಕಳಚಿಕೊಳ್ಳುತ್ತಾ ಸಾಗಿದೆ.

ಗೇಲಿ ಮಾಡುವ ಪ್ರವೃತ್ತಿ

ಯೋಚಿಸುವವರನ್ನು ‘ಬುದ್ಧಿಜೀವಿಗಳು’ ಎಂಬ ಪಟ್ಟ ಕಟ್ಟಿ ಅದೊಂದು ಅಸ್ಪೃಶ್ಯ ವರ್ಗ ಎನ್ನುವಂತೆ ಗೇಲಿಮಾಡುತ್ತಿದೆ. ಬುದ್ಧಿ ಮತ್ತು ಜೀವ ಎರಡೂ ಮನುಷ್ಯ ಬದುಕನ್ನು ಚಲನಶೀಲಗೊಳಿಸುವಂಥವು. ಬುದ್ಧಿಯು ವಿವೇಕ ತಂದುಕೊಳ್ಳುವ ಮೂಲವಾದರೆ ಜೀವ ಅಂಥ ವಿವೇಕವನ್ನು ದಾಟಿಸುವ ಚಲನೆಯನ್ನೇ ಸಂಕೇತಿಸುತ್ತದೆ. ಆ ಮೂಲಕ ಸಾಮಾಜಿಕ ಚಲನಶೀಲತೆಯ ಜೀವಂತಿಕೆಯನ್ನು ಹೆಚ್ಚಿಸುವುದಕ್ಕೆ ಸಾಧ್ಯವಾಗುತ್ತದೆ. ಅದಕ್ಕೆ ಮೌಲಿಕ ಚಿಂತನೆಗಳನ್ನು ಕೊಡುಗೆಗಳನ್ನಾಗಿ ನೀಡುವವರು ಬುದ್ಧಿಜೀವಿಗಳೆನ್ನಿಸಿಕೊಳ್ಳುತ್ತಾರೆ. ತಾವು ಬುದ್ಧಿಜೀವಿಗಳೆಂದುಕೊಂಡು ಬೀಗುವವರು, ತಮ್ಮ ಬುದ್ಧಿಯನ್ನು ಅಧಿಕಾರದಲ್ಲಿರುವವರ ಕೈಗೊಪ್ಪಿಸುವವರು, ಸಮಾಜದ ಜೀವಂತಿಕೆಗೆ ತದ್ವಿರುದ್ಧದ ನಡವಳಿಕೆಯವರು ಬುದ್ಧಿ ಅಥವಾ ವಿವೇಕದೊಂದಿಗಿನ ಜೀವಗಳಲ್ಲ. ಆದರೆ, ಸಮಾಜಕ್ಕೆ ಈ ಕ್ಷಣಕ್ಕೆ ಬೇಕಾದದ್ದನ್ನು ಪ್ರಸ್ತಾಪಿಸಿ ಅಧಿಕಾರದಲ್ಲಿರುವವರನ್ನು ಎಚ್ಚರಿಸುವ ಮಾತುಗಳನ್ನಾಡಿ ಬೆಳವಣಿಗೆಗೆ ಅರ್ಥಪೂರ್ಣ ತೀವ್ರತೆ ತಂದುಕೊಡುವ ಚಿಂತನಶೀಲರು ಬುದ್ಧಿಜೀವಿಗಳು.

ನಮ್ಮ ರಾಜಕಾರಣ ಮತ್ತು ಮಾಧ್ಯಮದ ಆಕ್ರಾಮಕ ಭಾಷಿಕ ವಿಕೃತಿಗಳು ಬುದ್ಧಿಜೀವಿಗಳ ವೈವಿಧ್ಯಮಯ ಶಕ್ತಿಯನ್ನು ಹಿನ್ನೆಲೆಗೆ ಸರಿಸಿ ಅವರನ್ನು ದೇಶದ್ರೋಹಿಗಳು ಎಂದು ಬಿಂಬಿಸುವುದರ ಕಡೆಗೆ ಹೆಚ್ಚು ವಾಲಿಕೊಂಡಿವೆ. ನಾಯಕರೆನ್ನಿಸಿಕೊಂಡ ಅಪ್ರಬುದ್ಧರು ‘ನಾನು ಗೃಹಸಚಿವನಾಗಿದ್ದರೆ ಇಂಥವರನ್ನು ಒಟ್ಟಿಗೆ ನಿಲ್ಲಿಸಿ ಗುಂಡು ಹಾರಿಸುವಂತೆ ಹೇಳುತ್ತಿದ್ದೆ’ ಎಂಬ ಯುದ್ಧದ ಪರಿಭಾಷೆಯಲ್ಲಿಯೇ ಮಾತನಾಡಿಬಿಡುತ್ತಾರೆ. ಆ ಮಾತನ್ನು ಸುದ್ದಿಮಾಧ್ಯಮಗಳು ಬಹುದೊಡ್ಡ ದಾರ್ಶನಿಕ ನುಡಿ ಎಂಬಂತೆ ಚಿತ್ರಿಸಿಬಿಡುತ್ತವೆ. ಮತ್ತೊಂದು ರಾಷ್ಟ್ರದ ವಿರುದ್ಧದ ಯುದ್ಧಸನ್ನದ್ಧತೆಯ ವಿಕೃತಿಗಳು ಮತ್ತು ದೇಶದ ಒಳಗೇ ಇರುವ ಯೋಚಿಸುವ ಶಕ್ತಿಯುಳ್ಳವರ ವಿರುದ್ಧದ ಹಿಂಸಾತ್ಮಕ ದಾಳಿಗಳು ಸಂಕುಚಿತತೆಯನ್ನು ವಿಸ್ತಾರಗೊಳಿಸಲು ಬೇಕಾದ ಜನಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ಹಾಗಾಗುವಂತೆ ಮೂಲಭೂತವಾದಿ ಚಾಣಾಕ್ಷ ನಡೆಗಳು ಸಂವಹನ ತಂತ್ರಗಳನ್ನು ಹೆಣೆದು ಯಶಸ್ಸು ಕಾಣುತ್ತಿವೆ.

ಮೂಲಭೂತವಾದಿ ಕಾರ್ಯತಂತ್ರಗಳು ಗಾಂಧಿ ಚಿಂತನೆಯನ್ನು ಪರೋಕ್ಷವಾಗಿ ಮತ್ತು ನೇರವಾಗಿ ಅಪ್ರಸ್ತುತ ಎಂದು ನಂಬಿಸುತ್ತಿವೆ. ಉಪವಾಸದ ನಡೆಗಿಂತ ಹಿಂಸೆಯೊಂದಿಗಿನ ನಡೆಗಳಿಗೆ ಬ್ರಿಟಿಷರು ಹೆದರಿದರು ಎಂದು ಈಗಾಗಲೇ ಆಗಿಹೋದ ಇತಿಹಾಸವನ್ನು ಸಂಕುಚಿತ ದೃಷ್ಟಿಕೋನಗಳ ಮಟ್ಟಕ್ಕಿಳಿಸಿ ವಿವರಿಸುತ್ತಿವೆ. ಇಂಥವುಗಳನ್ನು ಅಲ್ಲಗಳೆಯಬೇಕಿದ್ದ ಸುದ್ದಿಮಾಧ್ಯಮಗಳು ವೈಭವೀಕರಣದ ತಂತ್ರಗಾರಿಕೆಯೊಂದಿಗೆ ಪ್ರಜೆಗಳನ್ನು ವೀಕ್ಷಕ ಗ್ರಾಹಕರನ್ನಾಗಿಸಿಕೊಂಡು ಹಣಗಳಿಕೆಯ ಲೆಕ್ಕಾಚಾರದ ಗುಂಗಿನೊಂದಿಗೇ ಸಂಭ್ರಮಿಸುತ್ತಿವೆ. ಈ ನಕಾರಾತ್ಮಕತೆಗೆ ಕಡಿವಾಣ ಹೇಗೆ? ಸಾಧ್ಯವೇ ಇಲ್ಲ ಎನ್ನುವಂತಿಲ್ಲ.

ಮತ್ತೆ ಬುದ್ಧಿ ಮತ್ತು ಜೀವಗಳೆರಡೂ ಸಂಯೋಜಿತಗೊಂಡು ಚಲನಶೀಲತೆಯೆಡಗಿನ ಪಯಣ ಹಿಂದೆಂದಿಗಿಂತಲೂ ತೀವ್ರಗೊಳ್ಳಬೇಕು. ಪ್ರಶ್ನೆಗಳು ಹುಟ್ಟಿಕೊಳ್ಳಬೇಕು. ಪ್ರಶ್ನಿಸುವವರ ಸ್ಥೈರ್ಯ ಹೆಚ್ಚಿಸುವ ಪ್ರಜಾಸತ್ತಾತ್ಮಕ ವಾತಾವರಣ ರೂಪುಗೊಳ್ಳಬೇಕು. ಬುದ್ಧಿ ಜೀವಗಳನ್ನು ಕೊಲ್ಲುವ ಪರಿಭಾಷೆಯನ್ನು ಎದುರುಗೊಳ್ಳುವ ಸೌಹಾರ್ದಯುತ ಸಂವಾದದ ಆರೋಗ್ಯಕರ ಆಂದೋಲನ ದೇಶವ್ಯಾಪಿಯಾಗಬೇಕು. ಯುದ್ಧೋನ್ಮೋದ ಮತ್ತು ಸಂಘರ್ಷದ ಭಾಷಿಕ ವಿಕೃತಿಗಳಿಗಿಂತ ಮಾನವೀಯತೆಯೇ ದೇಶದ ಶ್ರೇಷ್ಠ ಗುಣಲಕ್ಷಣವಾಗಬೇಕು ಎಂಬ ಕಾಳಜಿಗಳು ಮುನ್ನೆಲೆಗೆ ಬರಬೇಕು. ದೇಶದ ಕುರಿತಾದ ಹೆಮ್ಮೆಯ ಭಾವಗಳು ಮನುಷ್ಯತ್ವದ ಮೌಲಿಕತೆಯೊಂದಿಗೇ ಸಂಯೋಜಿತಗೊಳ್ಳಬೇಕು. ದೇಶದ ಬಗೆಗಿನ ಪ್ರೇಮವು ಅಂಧಾಭಿಮಾನದ ಮಿತಿಗಳನ್ನು ದಾಟಿಕೊಂಡು ಗಂಭೀರ ಚಿಂತನೆಗಳ ಬಲದಲ್ಲಿ ಗಟ್ಟಿಗೊಳ್ಳಬೇಕು.

(ಲೇಖಕರು: ಡಾ.ಎನ್.ಕೆ.ಪದ್ಮನಾಭ,
ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್‍ಡಿಎಂ ಸ್ನಾತಕೋತ್ತರ ಕೇಂದ್ರ, ಉಜಿರೆ)

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading
Advertisement

Title

ದಿನದ ಸುದ್ದಿ4 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ4 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ4 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ4 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ4 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ5 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ5 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ5 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ5 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ5 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending