Connect with us

ದಿನದ ಸುದ್ದಿ

ಮಕ್ಕಳು ವಿದ್ಯಾರ್ಥಿ ದೆಸೆಯಿಂದಲೇ ಮಾನವತಾವಾದಿ ತತ್ವವನ್ನು ಬೆಳೆಸಿಕೊಳ್ಳಬೇಕು : ಶಾಸಕ ಎಂ.ಅಶ್ವಿನ್ ಕುಮಾರ್

Published

on

ಸುದ್ದಿದಿನ,ಟಿ.ನರಸೀಪುರ: ಮಕ್ಕಳು ವಿದ್ಯಾರ್ಥಿ ದೆಸೆಯಿಂದಲೇ ಮಾನವೀಯತೆ, ಮಾನವತಾವಾದಿ ತತ್ವವನ್ನು ಬೆಳೆಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಎಂ.ಅಶ್ವಿನ್ ಕುಮಾರ್ ತಿಳಿಸಿದರು.

ಪಟ್ಟಣದ ಗುರು ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಟಿ.ನರಸೀಪುರ ತಾಲ್ಲೂಕು ಹಾಗೂ ಸಮದೃಷ್ಟಿ ಚಾರಿಟೆಬಲ್ ಟ್ರಸ್ಟ್, ಬೆಂಗಳೂರು ಸಂಯುಕ್ತಾಶ್ರಯದಲ್ಲಿ ತಪಾಸಣೆ ಆಗಿರುವ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ ವಿತರಣ ಸಮಾರಂಭದ ಉದ್ಘಾಟನೆಯನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ನೆರವೇರಿಸಿ ಅವರು ಮಾತನಾಡಿದರು.

ಸಮದೃಷ್ಟಿ ಸೇವಾ ಸಂಸ್ಥೆ ನನ್ನ ಕ್ಷೇತ್ರದಲ್ಲಿ ಸರ್ಕಾರಿ ಶಾಲಾ ಮಕ್ಕಳಲ್ಲಿ ಕಣ್ಣಿನ ದೋಷ ಉಳ್ಳವರಿಗೆ ತಪಾಸಣೆ ನಡೆಸಿ ಉಚಿತವಾಗಿ ಕನ್ನಡಕ ನೀಡಲು ನನ್ನ ಬಳಿ ಸಮದೃಷ್ಟಿ ಸಂಸ್ಥಾಪಕರಾದ ಕೆ.ಉಲ್ಲಾಸ್ ಕಾಮತ್ ರವರು ಮಾತನಾಡಿದಾಗ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೊದಲ ಹಂತದಲ್ಲಿ 16,385 ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸಿದಾಗ 622 ಮಕ್ಕಳಿಗೆ ದೃಷ್ಟಿ ದೋಷವಿರುವುದು ಪತ್ತೆಯಾಗಿತ್ತು.

ಅದರಲ್ಲಿ 200 ಮಕ್ಕಳಿಗೆ ಸರ್ಜಿಕಲ್ ಅವಶ್ಯಕತೆ ಇರುವುದರಿಂದ ಆ ಮಕ್ಕಳಿಗೂ ಸಹ ಇದೇ ಸಂಸ್ಥೆಯವರು ಆಪರೇಷನ್ ಮಾಡುವ ಮುಖಾಂತರ ದೋಷ ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ದು ಅದಕ್ಕೆ ನನ್ನ ಸಂಪೂರ್ಣ ಸಹಕಾರವನ್ನು ಅವರಿಗೆ ನೀಡುವುದಾಗಿ ತಿಳಿಸುತ್ತ, ಈ ಒಂದು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಈ ಹಿಂದಿನ ಬಿಇಓ ಮತ್ತು ಅವರ ತಂಡ ಬಹಳಷ್ಟು ಶ್ರಮಿಸಿದೆ. ಅವರ ಸೇವೆ ಶ್ಲಾಘನೀಯ ಎಂದರು.

ಕೊರೊನ ಹಿನ್ನಲೆಯಲ್ಲಿ ಇಂದು ಕೆಲವೇ ಮಕ್ಕಳು ಕನ್ನಡಕವನ್ನು ಪಡೆಯಲು ಹಾಜರಿದ್ದು, ಉಳಿದ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನನ್ನ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿಗಳ ಮನೆ ಮನೆ ಬಾಗಿಲಿಗೆ ಕನ್ನಡಕ ತಲುಪಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಯಾರೂ ಆತಂಕ ಪಡುವುದು ಬೇಡವೆಂದರು.

ಈಗಾಗಲೇ ದೂರದರ್ಶನ ಮತ್ತು ಆನ್ಲೈನ್ ಮುಖಾಂತರ ಮಕ್ಕಳಿಗೆ ಮನೆಯಲ್ಲೇ ಶಿಕ್ಷಣ ನೀಡುತ್ತಿದ್ದು ಇಂತಹ ಸಂದರ್ಭದಲ್ಲಿ ಸಮದೃಷ್ಟಿ ಸಂಸ್ಥೆ ಮಕ್ಕಳಿಗೆ ಕನ್ನಡಕ ವಿತರಿಸಿರುವುದು ಅವರಲ್ಲಿರುವ ಮಕ್ಕಳ ಬಗೆಗಿನ ಕಾಳಜಿಯನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲೂ ಮುಂಬರುವ ಮಕ್ಕಳಿಗೆ ಈ ಸೇವೆಯನ್ನು ವಿಸ್ತರಿಸುವುದಾಗಿ ತಿಳಿಸಿದ್ದು, ಮಕ್ಕಳ ಕಣ್ಣಿನ ದೃಷ್ಟಿಯ ಬಗ್ಗೆ ಅವರಿಗಿರುವ ಕಾಳಜಿ ಅತ್ಯಂತ ಶ್ಲಾಘನೀಯ ಎಂದರು.

ಈ ಒಂದು ಕಾರ್ಯದಲ್ಲಿ ಸಂಸ್ಥೆಯ ಸಿಇಒ ಶಿವಕುಮಾರ್ ಜನಾರ್ಧನ್, ಸಿದ್ಧಾರ್ಥ ಪೈ, ಕೆ.ವಿ.ಮಹೇಶ್, ಸುನಿಲ್ ಕುಮಾರ್, ಕೃಷ್ಣಾನಂದ ಹೆಗಡೆ ಸೇವೆ ಅತ್ಯಂತ ಸ್ಮರಣೀಯ ಎಂದು ಸ್ಮರಿಸಿದರು.

ಸಮದೃಷ್ಟಿ ಸಂಸ್ಥಾಪಕ ಕೆ. ಉಲ್ಲಾಸ್ ಕಾಮತ್ ಮಾತನಾಡಿ, ನಮ್ಮ ಈ ಸೇವೆ ಟಿ.ನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಬರಲು ಈ ಕ್ಷೇತ್ರದ ಶಾಸಕರಾದ ಎಂ.ಅಶ್ವಿನ್ ಕುಮಾರ್ ರವರು ಪ್ರಮುಖ ಕಾರಣ. ಅವರು ಕಿರಿಯ ವಯಸ್ಸಿನಲ್ಲೇ ಶಾಸಕರಾಗಿದ್ದರೂ ಸಹ ಸಾಮಾನ್ಯ ಮನುಷ್ಯರಂತೆ ಸಾರ್ವಜನಿಕ ಸೇವೆಯಲ್ಲಿದ್ದು ಮಕ್ಕಳ ದೃಷ್ಟಿ ದೋಷದ ಬಗ್ಗೆ ನಮ್ಮ ಬಳಿ ಮಾತನಾಡಿ, ನನ್ನ ಸಂಪೂರ್ಣ ಸಹಕಾರವನ್ನು ನಿಮಗೆ ನೀಡುವುದಾಗಿ ಹಲವಾರು ಮಕ್ಕಳಿಗೆ ದೃಷ್ಟಿ ದೋಷವಿದ್ದರೆ ಅದನ್ನು ಪೋಷಕರು ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸುಷ್ಟರಲ್ಲಿ ಮಕ್ಕಳಿಗೆ ಬೇರೆ ಬೇರೆ ಹಂತದ ತೊಂದರೆಗಳು ಕಾಣಿಸಿಕೊಳ್ಳುವುದು ಬೇಡವೆಂಬ ಅವರ ಕಳಕಳಿಗೆ ನಮ್ಮ ತಂಡ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ 224 ಸರ್ಕಾರಿ ಶಾಲೆಗಳ 16,385 ಮಕ್ಕಳನ್ನು ತಪಾಸಣೆ ಮಾಡಲು ಸಾಧ್ಯವಾಯಿತು. ಶಾಸಕರ ಸಹಕಾರ ಇಲ್ಲದಿದ್ದರೆ ಅತ್ಯಂತ ಕಡಿಮೆ ಅವಧಿಯಲ್ಲಿ ಕನ್ನಡಕವನ್ನು ನೀಡಲು ಸಾಧ್ಯವಾಗುತ್ತಿರಲಿಲ್ಲ. ಕೊರೊನವಿಲ್ಲದಿದ್ದರೆ ಅತ್ಯಂತ ಕಡಿಮೆ ಅವಧಿಯಲ್ಲಿ ಕನ್ನಡಕ ಮಕ್ಕಳ ಕೈ ಸೇರುತ್ತಿತ್ತು.

ಮಕ್ಕಳಿಗೆ ಕಣ್ಣಿನ ದೃಷ್ಟಿ ತುಂಬಾನೆ ಮುಖ್ಯ‌ ಕಲಿಕಾ ಹಂತದಲ್ಲಿ ಮಕ್ಕಳಿಗೆ ಇದರ ಪರಿವೇ ಇರುವುದಿಲ್ಲ. ಹಾಗಾಗಿ ಪೋಷಕರು, ಶಿಕ್ಷಕರು ಪ್ರಾಥಮಿಕ ಹಂತದಲ್ಲಿ ಕಣ್ಣಿನ ದೋಷ ಉಳ್ಳ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ಕೊಡಿಸಬೇಕೆಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಕ್ಷೇತ್ರಾಧ್ಯಕ್ಷ ಚಿನ್ನಸ್ವಾಮಿ, ಸೋಸಲೆ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ,ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಶಿವಶಂಕರ ಮೂರ್ತಿ, ಸೋಸಲೆ ನಾಗೇಶ್, ಬಿ.ಆರ್.ಸಿ. ಮಂಜುಳಾ, ಹೆಚ್.ಡಿ.ಮಾದಪ್ಪ, ಸುಬ್ರಹ್ಮಣ್ಯ ಹಾಗೂ ಇತರರು ಇದ್ದರು.

ವರದಿ : ಎಂ. ನಾಗೇಂದ್ರ ಕುಮಾರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending