ರಾಜಕೀಯ
ಹೊನ್ನಾಳಿಯಲ್ಲಿ ಗರಿಗೆದರಿದ ಕಿಟ್ ರಾಜಕೀಯ; ದಾವಣಗೆರೆಯಲ್ಲಿಂದು ಸಿದ್ಧವಾಗಿದೆ ಅಖಾಡ..!
ಸುದ್ದಿದಿನ, ದಾವಣಗೆರೆ: ಇಡೀ ಜಗತ್ತು ಕೊರೋನಾ ಸಂಕಟದಿಂದ ನಲುಗುತ್ತಿದೆ. ಆದರೆ ಇತ್ತ ಹೊನ್ನಾಳಿಯಲ್ಲಿ ಮಾತ್ರ ಕಿಟ್ ರಾಜಕೀಯ ಗಾಳಿ ಮಾತ್ರ ಜೋರಾಗಿದೆ. ಬಡಜನರಿಗೆ ಆಹಾರದ ಕಿಟ್ ವಿತರಣೆ ಮಾಡುವ ವಿಚಾರದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಜಿ.ಶಾಂತನಗೌಡ ಅವರ ನಡುವೆ ಬಿಗ್ ಫೈಟ್ ಆರಂಭವಾಗಿದೆ.
ಹೌದು, ಆಹಾರದ ಕಿಟ್ ವಿಚಾರದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸುಳ್ಳು ಹೇಳಿಕೊಂಡು ಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಜಿ.ಶಾಂತನಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಷ್ಟದಲ್ಲಿರುವ ಜನರಿಗೆ 15 ಸಾವಿರಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಿದ್ದೇನೆ ಎಂದು ರೇಣುಕಾಚಾರ್ಯ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಶಾಂತಗೌಡ ಅವರು ಅದರ ರಿಯಾಲಿಟಿ ಚೆಕ್ ಕೂಡ ನಡೆಸಿದ್ದಾರೆ. ಈ ಕುರಿತು ಉಭಯ ನಾಯಕರ ನಡುವೆ ಮೊಬೈಲ್ ಮೂಲಕ ಸಣ್ಣ ಟಾಕ್ ವಾರ್ ಕೂಡ ನಡೆದಿದ್ದು, ಪ್ರಕರಣ ಇಂದು ಪತ್ರಿಕಾಗೋಷ್ಠಿಗೆ ಶಿಫ್ಟ್ ಆಗಿದೆ. ಸದ್ಯ ವಿಚಾರ ಸೋಮವಾರ ಟಿವಿ ಮಾಧ್ಯಗಳಿಗೆ ಆಹಾರವಾಗಿತ್ತು.
ರೇಣು ಪ್ರಚಾರದ ಗಿಮಿಕ್
ಕರೋನಾ ಸಂದರ್ಭದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಪ್ರಚಾರದ ಗಿಮಿಕ್ ಆರಂಭಿಸಿದ್ದಾರೆ ಎಂಬ ಆರೋಪಗಳು ಸಣ್ಣದಾಗಿ ಕೇಳಿ ಬರುತ್ತಿವೆ. ಆದರೆ ರೇಣುಕಾರ್ಯ ಅವರು ಇದನ್ನು ಖಡಖಂಡಿತವಾಗಿ ತಳ್ಳಿ ಹಾಕಿದ್ದಾರೆ. ನಾನು ಪ್ರತಿ ಹಳ್ಳಿಗಳಿಗೂ ತೆರಳಿ ಸಂಕಷ್ಟದಲ್ಲಿರುವ ಜನರಿಗೆ ಜಾಗೃತಿ ಮೂಡಿಸುವ ಕೆಲ ಮಾಡುತ್ತಿದ್ದೇನೆ ಎಂದು ವಿವಿಧ ಸಂದರ್ಭಗಳಲ್ಲಿ ಹೇಳಿಕೊಂಡು ಬಂದಿದ್ದಾರೆ. ಸದ್ಯ ಈ ಕುರಿತ ಪರ ವಿರೋಧ ಚರ್ಚೆಗಳು ಮಾತ್ರ ಹೊನ್ನಾಳಿ ಕ್ಷೇತ್ರದಲ್ಲಿ ಹಸಿಯಾಗಿವೆ.
ವಾರ್ ಆರಂಭವಾಗಿದ್ದು ಹೇಗೆ ?
ಶಾಸಕ ಎಂ.ಪಿ.ರೇಣುಚಾರ್ಯ ಅವರು 15 ಸಾವಿರ ಆಹಾರದ ಕಿಟ್ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಸ್ವತಃ ರೇಣುಕಾಚಾರ್ಯ ಅವರಿಗೆ ಕರೆ ಮಾಡಿದ ಮಾಜಿ ಶಾಸಕ ಜಿ.ಶಾಂತನಗೌಡ ಅವರು ಈ ಕುರಿತು ಪ್ರಶ್ನೆ ಮಾಡಿದ್ದರು. ಆಗ ಆಹಾರದ ಕಿಟ್ ವಿತರಣೆ ಮಾಡಿರುವ ಕುರಿತು ನಾನು ಲೆಕ್ಕ ಕೊಡುವ ಬಲ್ಲೆ ಎಂಬರ್ಥದಲ್ಲಿ ರೇಣುಕಾಚಾರ್ಯ ಹೇಳಿದ್ದರು. ನಂತರ ಶಾಸಕ ಜಿ.ಶಾಂತನಗೌಡ ಅವರು ತಾಲೂಕು ಕಚೇರಿಗೆ ತೆರಳಿ ರೇಣುಕಾಚಾರ್ಯ ಅವರಿಗೆ ಮೊಬೈಲ್ ಕರೆ ಮಾಡಿ ಆಕ್ಷೇಪ ವ್ಯಕ್ತಪಪಡಿಸಿದ್ದಾರೆ. ನಂತರ ರೇಣುಕಾಚಾರ್ಯ ಕೂಡ ಶಾಂತನಗೌಡ ಅವರಿಗೆ ತಿರುಗೇಟು ನೀಡಿದ್ದಾರೆ. ಸದ್ಯ ಇಡೀ ಪ್ರಕರಣ ಇಂದಿನ ಪತ್ರಿಕಾಗೋಷ್ಠಿವರೆಗೆ ಬಂದು ನಿಂತಿದೆ. ದಾವಣಗೆರೆಯಲ್ಲಿ ಮಂಗಳವಾರ ಉಭಯ ನಾಯಕರು ಈ ವಿಚಾರವಾಗಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243