ದಿನದ ಸುದ್ದಿ

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

Published

on

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ.

http://Visit : www.suddidina.com

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Trending

Exit mobile version