ದಿನದ ಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ

Published

on

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ ಭವನದಲ್ಲಿಂದು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಆರ್. ಅಶೋಕ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಸಿ.ಪಿ.ಯೋಗೇಶ್ವರ್ ಮಾತನಾಡಿದರು.

ಇನ್ನೊಂದೆಡೆ, ಚಿತ್ರದುರ್ಗದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ವಿಧಾನಪರಿಷತ್ ಸದಸ್ಯ ಪುಟಣ್ಣಯ್ಯ ಮತಯಾಚಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆ ಬದಲಾವಣೆಗೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version