Connect with us

ದಿನದ ಸುದ್ದಿ

ಶಿಕ್ಷಕರ, ಪದವೀಧರ ಕ್ಷೇತ್ರದ ಚುನಾವಣೆ ಫಲಿತಾಂಶ ; ಅಭ್ಯರ್ಥಿಗಳು ಪಡೆದ ಮತಗಳಿಷ್ಟು..

Published

on

ಸುದ್ದಿದಿನಡೆಸ್ಕ್: ಜೂನ್ 3 ರಂದು ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, 6 ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್ ಮತ್ತು ಮೂರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪಾಲಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ್ ಪಾಟೀಲ್ 43 ಸಾವಿರದ 484 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬೆಂಗಳೂರು ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ 36 ಸಾವಿರದ 729 ಮತಗಳನ್ನು ಪಡೆದು ಜಯಶಾಲಿಯಾಗಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನ ಡಿ.ಟಿ. ಶ್ರೀನಿವಾಸ್ 8 ಸಾವಿರದ 909 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ, 37 ಸಾವಿರದ 627 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13 ಸಾವಿರದ 516 ಹಾಗೂ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ 7 ಸಾವಿರದ 39 ಮತಗಳನ್ನು ಪಡೆದರು.

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ 9 ಸಾವಿರದ 829 ಮತಗಳನ್ನು ಪಡೆದು ಗೆದ್ದರೆ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕೆ. ವಿವೇಕಾನಂದ 10 ಸಾವಿರದ 823 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending