Connect with us

ದಿನದ ಸುದ್ದಿ

ಕೋವಿಡ್ ಸಂಕಷ್ಟದಲ್ಲಿ ಗ್ರಾಮೀಣರ ನೆರವಿಗೆ ಉದ್ಯೋಗಖಾತ್ರಿ ಯೋಜನೆ , ಜಿಲ್ಲೆಯಲ್ಲಿ 4.90 ಲಕ್ಷ ಮಾನವ ದಿನ ಸೃಜನೆ : 16.18 ಕೋಟಿ ರೂ. ಕೂಲಿ ಪಾವತಿ

Published

on

  • ವಿಶೇಷ ವರದಿ: ಪ್ರೀತಿ.ಟಿ.ಎಸ್ (ತರಬೇತಾರ್ಥಿ) ವಾರ್ತಾ ಇಲಾಖೆ ದಾವಣಗೆರೆ

ಸುದ್ದಿದಿನ,ದಾವಣಗೆರೆ : ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಉದ್ಯೋಗ ದೊರಕಿಸುವ ಮೂಲಕ ಕೂಲಿಕಾರರ ಕೈಹಿಡಿದಿದೆ. ಜಿಲ್ಲೆಯಲ್ಲಿ ಈ ವರ್ಷ ಒಟ್ಟು 4.90 ಲಕ್ಷ ಮಾನವ ದಿನಗಳ ಸೃಜನೆಯಾಗಿದ್ದು, 16.18 ಕೋಟಿ ರೂ. ಕೂಲಿ ಪಾವತಿಸಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯರಿಂದಲೇ ಅಧಿಕ ಮಾನವ ದಿನ ಸೃಜನೆಯಾಗಿರುವುದು ವಿಶೇಷ.

ನರೇಗಾ ಯೋಜನೆಯಲ್ಲಿ ಫಲಾನುಭವಿಗಳಿಗೆ ಪ್ಯಾಕೇಜ್ ಮಾದರಿಯಲ್ಲಿ ಸೌಲಭ್ಯಗಳನ್ನು ದೊರಕಿಸಿಕೊಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಈ ಯೋಜನೆಯಡಿ ಸಿಗುವ ಸೌಲಭ್ಯಗಳನ್ನು ಹೆಚ್ಚು ಸದುಪಯೋಗಪಡಿಸಿಕೊಳ್ಳಬೇಕು. ಆದರೆ ಕೋವಿಡ್-19 ಎರಡನೇ ಅಲೆಯಲ್ಲಿ ಹೆಚ್ಚು ಗ್ರಾಮಗಳಲ್ಲಿ ಸೋಂಕು ಹರಡುತ್ತಿರುವುದರಿಂದ ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಮುಂದೆ ಬಾರದಿರುವುದೂ ಸಹ ಕಂಡುಬಂದಿದೆ. ಈ ವರ್ಷ ಜಿಲ್ಲೆಯಲ್ಲಿ 48686 ಗ್ರಾಮೀಣರಿಗೆ ಉದ್ಯೋಗಖಾತ್ರಿಯಡಿ ಕೆಲಸ ನೀಡುವ ಮೂಲಕ 4.90 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ.

ನರೇಗಾ ಯೋಜನೆ ಅಡಿ ಹಳ್ಳಿಗಳಲ್ಲಿ ಕೆರೆ ಹೂಳೆತ್ತುವುದು, ಗೋಕಟ್ಟೆ ಹೂಳೆತ್ತುವುದು, ಕೊಳವೆ ಬಾವಿ ಮರುಪೂರಣ ಘಟಕ, ಮೈದಾನ, ಕಣ, ಚೆಕ್ ಡ್ಯಾಂ, ಹೊಲಗಳಿಗೆ ಹೋಗಲು ದಾರಿ, ಕೃಷಿ ಹೊಂಡ, ಅಂಗನವಾಡಿ ಕೇಂದ್ರ, ಗ್ರಾಮೀಣ ಗೋದಾಮು, ಸ್ಮಶಾನ ಅಭಿವೃದ್ಧಿ, ಉದ್ಯಾನ, ಕಾಂಕ್ರಿಟ್ ರಸ್ತೆ ನಿರ್ಮಾಣದಂತಹ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಬಹುದಾದ ಅನೇಕ ಉದ್ಯೋಗಗಳನ್ನು ನೀಡಲಾಗುತ್ತಿದ್ದು, ಗುಂಪುಗೂಡಿ ಮಾಡಬಹುದಾದ ಕಾಮಗಾರಿ ಸ್ಥಳಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಕೂಲಿ ಕಾರ್ಮಿಕರು

ಕೋವಿಡ್ ಲಾಕ್‍ಡೌನ್ ಪರಿಣಾಮವಾಗಿ ಪ್ರಸ್ತುತ ಉದ್ಯೋಗ ಖಾತ್ರಿಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರ ಸಂಖ್ಯೆ ಕಡಿಮೆಯಿದ್ದು, ಚನ್ನಗಿರಿ ತಾಲ್ಲೂಕಿನಲ್ಲಿ 1,495 ಜನರು, ಹೊನ್ನಾಳಿ 792, ದಾವಣಗೆರೆ 337, ಹರಿಹರ 210, ಜಗಳೂರು 151, ನ್ಯಾಮತಿ 166 ಸೇರಿದಂತೆ ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 3,151 ಜನರು ಮಾತ್ರ ಉದ್ಯೋಗಕ್ಕೆ ಬರುತ್ತಿದ್ದಾರೆ.

15 ದಿನಗಳ ಹಿಂದೆ ಒಟ್ಟು 19,321 ಜನರು ಕೆಲಸಕ್ಕೆ ಬರುತ್ತಿದ್ದು, ಕೋವಿಡ್ ಸೋಂಕಿನ ಭೀತಿಯ ಕಾರಣದಿಂದ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಸದ್ಯ ಕಡಿಮೆ ಇದೆ. ಬರುವ ದಿನಗಳಲ್ಲಿ ಕೆಲಸ ಬಯಸಿ ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದೆ.

ಕೊರೊನಾ ಲಾಕ್‍ಡೌನ್ ಪರಿಣಾಮವಾಗಿ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪುರುಷರು ಮತ್ತು ಮಹಿಳೆಯರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ನರೇಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೋವಿಡ್ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಉದ್ಯೋಗ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2,11,851 ಜಾಬ್‍ಕಾರ್ಡ್ ಗಳನ್ನು ನೀಡಲಾಗಿದ್ದು, 2,26,985 ಮಹಿಳೆಯರು, 2,57,952 ಪುರುಷರು ಸೇರಿದಂತೆ ಒಟ್ಟು 4,84,937 ಜನರು ಜಾಬ್‍ಕಾರ್ಡ್ ಪಡೆದುಕೊಂಡಿದ್ದಾರೆ. ಅಲ್ಲದೇ ಏಪ್ರಿಲ್, ಮೇ ತಿಂಗಳಲ್ಲಿ 2280 ಹೊಸ ಜಾಬ್‍ಕಾರ್ಡ್‍ಗಳನ್ನು ವಿತರಿಸಲಾಗಿದೆ.

ಮಹಿಳೆಯರಿಂದ ಹೆಚ್ಚು ಮಾನವ ದಿನ ಸೃಜನೆ: ಪ್ರಸ್ತುತ ಶೇ.46.87ರಷ್ಟು ಮಹಿಳೆಯರು ನರೇಗಾ ಯೋಜನೆಯಡಿಯಲ್ಲಿ ಉದ್ಯೋಗವಕಾಶವನ್ನು ಪಡೆದುಕೊಂಡಿದ್ದು, ಮಹಿಳೆಯರಿಂದಲೇ ಹೆಚ್ಚು ಮಾನವ ದಿನಗಳು ಸೃಜನೆಯಾಗಿರುವುದು ವಿಶೇಷ. ಜಿಲ್ಲೆಯಲ್ಲಿ ಒಟ್ಟು 48686 ಜನರಿಗೆ ನರೇಗದಡಿ ಕೆಲಸ ದೊರೆತಿದ್ದು ಒಟ್ಟು 490614 ಮಾನವದಿನಗಳ ಸೃಜನೆಯಾಗಿದ್ದು, 16.18 ಕೋಟಿ ರೂ. ಮೊತ್ತ ಪಾವತಿಸಲಾಗಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ ಒಟ್ಟು 12362 ಜನ ಕೆಲಸ ಮಾಡಿದ್ದು, 138511 ಮಾನವದಿನಗಳ ಸೃಜನೆಯಾಗಿದೆ. ಇಲ್ಲಿ 4.73 ಕೋಟಿ ರೂ. ಕೂಲಿ ಮೊತ್ತ ಪಾವತಿಸಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 4495 ಜನ ಕೆಲಸ ನಿರ್ವಹಿಸಿದ್ದು, 36020 ಮಾನವದಿನಗಳ ಸೃಜನೆಯಾಗಿ, 1.06 ಕೋಟಿ ರೂ. ಕೂಲಿ ಪಾವತಿಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 2032 ಕೂಲಿಕಾರರು ಕೆಲಸ ಮಾಡಿ 22015 ಮಾನವದಿನಗಳ ಸೃಜನೆಯಾಗಿದ್ದು 66.79 ಲಕ್ಷ ರೂ. ಕೂಲಿ ಮೊತ್ತ ಪಾವತಿಸಲಾಗಿದೆ.

ಹೊನ್ನಾಳಿ ತಾಲ್ಲೂಕಿನಲ್ಲಿ 8898 ಜನ ಕೆಲಸ ಮಾಡಿ 121933 ಮಾನವದಿನಗಳ ಸೃಜನೆ ಮಾಡಿದ್ದು, 3.78 ಕೋಟಿ ರೂ. ಮೊತ್ತ ಪಾವತಿಯಾಗಿದೆ. ಜಗಳೂರು ತಾಲ್ಲೂಕಿನಲ್ಲಿ 16605 ಜನ ಕೆಲಸ ಮಾಡಿ 126285 ಮಾನವದಿನಗಳನ್ನು ಸೃಜಿಸಿದ್ದು, 4.56 ಕೋಟಿ ರೂ. ಪಾವತಿಯಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 4294 ಜನ ಕೂಲಿಕಾರರು 45850 ಮಾನವ ದಿನಗಳನ್ನು ಸೃಜಿಸಿದ್ದು, 1.36 ಕೋಟಿ ರೂ. ಪಾವತಿಯಾಗಿದೆ.

ಮಾನವ ದಿನಗಳ ಗುರಿ

ಕೋವಿಡ್ ಲಾಕ್‍ಡೌನ್ ಕಾರಣದಿಂದ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಜನರಿಗೆ ನರೇಗ ಯೋಜನೆ ಆರ್ಥಿಕವಾಗಿ ಶಕ್ತಿ ತುಂಬಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ನರೇಗಾ ಅಡಿಯಲ್ಲಿ 31 ಲಕ್ಷ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ನೀಡಿದ್ದು, ಏಪ್ರಿಲ್ ತಿಂಗಳಿಂದ ಇಲ್ಲಿಯವರೆಗೆ 4,90,614 ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಕಳೆದ ವರ್ಷ 40 ಲಕ್ಷ ಗುರಿ ನೀಡಿದ್ದು, ಒಟ್ಟು 34,10,305 ಮಾನವ ದಿನಗಳನ್ನು ಸೃಜಿಸಲಾಗಿತ್ತು.

ದಿನಗೂಲಿ ಹಾಗೂ ಆಕಸ್ಮಿಕ ಮರಣ ಹೊಂದಿದವರಿಗೆ ಪರಿಹಾರ

ನರೇಗಾದಡಿ ಕೆಲಸ ಮಾಡುವವರಿಗೆ ದಿನಗೂಲಿ ರೂ.299 ನೀಡಲಾಗುತ್ತಿದ್ದು, ಲಾಕ್‍ಡೌನ್ ಅವಧಿಯಲ್ಲಿ ಬಹುತೇಕರಿಗೆ ಉದ್ಯೋಗ ಸೃಷ್ಟಿ ಮಾಡಿ ಬದುಕು ರೂಪಿಸಿಕೊಡುವಲ್ಲಿ ಮುನ್ನಡೆದಿದೆ. ನರೇಗಾ ಯೋಜನೆಯ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಯಾವುದೇ ಕಾರ್ಮಿಕರು ಕೆಲಸದ ಕಾರಣದಿಂದಾಗಿ ಮತ್ತು ಕೆಲಸದ ಸಮಯದಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ ಅಥವಾ ಶಾಶ್ವತವಾಗಿ ಅಂಗವಿಕಲರಾದಲ್ಲಿ ಅಂತಹ ಕಾರ್ಮಿಕರ ಅಧಿಕೃತ ವಾರಸುದಾರರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ ರೂ.2 ಲಕ್ಷ ಪರಿಹಾರ ನೀಡಲಾಗುತ್ತಿದೆ.

ಕೋವಿಡ್ ಲಾಕ್‍ಡೌನ್ ಸಂಕಷ್ಟದ ಸಮಯದಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರಕಿಸುವ ಮೂಲಕ ನರೇಗಾ ಯೋಜನೆ ಆರ್ಥಿಕವಾಗಿ ಆಸರೆ ನೀಡಿದ್ದು, ಉದ್ಯೋಗಕ್ಕಾಗಿ ಗ್ರಾಮೀಣರು ಸಂಬಂಧಪಟ್ಟ ಗ್ರಾಮ ಪಂಚಾಯತ್‍ಗಳನ್ನು ಸಂಪರ್ಕಿಸಿ, ಹೆಚ್ಚು ಹೆಚ್ಚು ಕೆಲಸ ಪಡೆಯಲು ಮುಂದಾಗಬೇಕಿದೆ ಎನ್ನುತ್ತಾರೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಅವರು.

ಕೃಪೆ : DPIR Davanagere

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending