ರಾಜಕೀಯ
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0
2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ ದುರ್ಭಾವನೆಯಿಂದ ಮಾಡುವುದಿಲ್ಲ ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತ ಪ್ರತಿಜ್ಞೆ ಕೈಗೊಂಡಿದ್ದಾರೆ. ಅವರು ಇನ್ನೂ ಎರಡು ಪ್ರತಿಜ್ಞೆಗಳನ್ನು ಮಾಡಿದ್ದಾರೆ. ಅವರ ಕೆಲಸವನ್ನು ವಿಮರ್ಶಿಸುವಾಗ ಇವನ್ನು ಗಮನದಲ್ಲಿಟ್ಟು ಕೊಳ್ಳಬೇಕಂತೆ.
ಏಳು ಸುತ್ತುಗಳ ಸಾರ್ವತ್ರಿಕ ಚುನಾವಣೆಗಳು ಮುಗಿಯುತ್ತಿದ್ದಂತೆ ಬಯಲಿಗೆ ಬಂದಿರುವ ಕೆಲವು ಸಂಗತಿಗಳ ಹಿನ್ನೆಲೆಯಲ್ಲಿ ಈ ಪ್ರತಿಜ್ಞೆಗಳನ್ನು ಪರೀಕ್ಷಿಸಬೇಕು ಎಂಬುದು ಅವರ ಆಶಯವಿರಲಿಕ್ಕಿಲ್ಲ. ಇದು ಬಹುಶಃ ಅಚ್ಚೇ ದಿನ್ ಇತ್ಯಾದಿ ಜುಮ್ಲಾಗಳೇ ಇರದ ಮುಂದಿನ ಐದು ವರ್ಷಗಳಿಗೆ ಮಾತ್ರ ಅನ್ವಯವಾಗುವಂತದ್ದು. ಅದೇನೇ ಇರಲಿ, ಆ ಸಂಗತಿಗಳನ್ನು ನೋಡೋಣ. ಒಬ್ಬ ಟ್ವಿಟರಿಗ ಈ ಪಟ್ಟಿಯನ್ನು ತಯಾರಿಸಿದ್ದಾರೆ :
- ಸಿಬಿಐಬೊಫೊರ್ಸ್ಬಗ್ಗೆಕೋರ್ಟಿನಲ್ಲಿಹಾಕಿರುವಅರ್ಜಿಯನ್ನುಹಿಂತೆಗೆದುಕೊಂಡಿದೆ.
- ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಕೇಸುಗಳಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ಹೇಳಿದೆ.
- ಚುನಾವಣಾ ಆಯೋಗದ ಒಬ್ಬ ಆಯುಕ್ತರು ಬಹಿರಂಗವಾಗಿ ಭಿನ್ನಮತ ವ್ಯಕ್ತಪಡಿಸಿದ್ದಾರೆ.
- ಪೆಟ್ರೋಲ್ ಬೆಲೆಗಳು ಕೊನೆಯ ಸುತ್ತಿನ ನಂತರ ಮತ್ತೆಏರುತ್ತಿವೆ.
- ನಮೋ ಟಿವಿ ಕಾಣೆಯಾಗಿದೆ.
- ಎಲ್ಲಕ್ಕೂ ಮಿಗಿಲಾಗಿ ಭಾರತೀಯ ವಾಯುಪಡೆ ತನ್ನದೇ ಹೆಲಿಕಾಪ್ಟರನ್ನು ಹೊಡೆದು ಉರುಳಿಸಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದೆ.
ಈ ಕೊನೆಯದ್ದು ಈ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದಂತೆ ಕಾಣುತ್ತಿರುವ ಫುಲ್ವಾಮ, ಬಾಲಾಕೋಟ್ ಮತ್ತು ರಾಷ್ಟ್ರೀಯ ಭದ್ರತೆಯ ಮಾತುಗಳ ಸಂದರ್ಭದಲ್ಲಿ ಗಮನಾರ್ಹ(ಸಬ್ರಂಗ್, ಮೇ 22).
ಫೆಬ್ರುವರಿ 27ರಂದು, ಅಂದರೆ ಫುಲ್ವಾಮ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ವಾಯುಪಡೆಯ ವಿಮಾನಗಳು ಬಾಲಾಕೋಟ್ ಮೇಲೆ ಪ್ರಹಾರ ನಡೆಸಿದ ಮರುದಿನ ಕಾಶ್ಮೀರದ ಬುಡ್ಗಾಮ್ನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಒಂದು ಕ್ಷಿಪಣಿ ದಾಳಿಗೆ ಗುರಿಯಾಗಿ. ಅದರಲ್ಲಿದ್ದ ಆರು ಸಿಬ್ಬಂದಿ ಮತ್ತು ಒಬ್ಬ ಭಾರತೀಯ ನಾಗರಿಕ ಮೃತಪಟ್ಟರು. ಆ ವೇಳೆಗೆ ಪಾಕಿಸ್ತಾನೀ ವಾಯುಪಡೆಯ ಎಫ್-೧೬ ವಿಮಾನವನ್ನು ಹೊಡೆದುರುಳಿಸಿದ್ದು ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವಾಪಸಾತಿಯ ಅಬ್ಬರದ ನಡುವೆ ಈ ಸುದ್ದಿ ಮುಚ್ಚಿ ಹೋಯಿತು. ಆದರೆ ಆಗಲೇ ಈ ದುರ್ಘಟವೆ ಫ್ರೆಂಡ್ಲಿ ಪ್ರಹಾರದಿಂದ ಆಗಿರಬಹುದು ಎಂದು ಮಾಜಿ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಹಾಗೂ ಕೆಲವು ಪತ್ರಿಕೆಗಳು ಗುಮಾನಿ ವ್ಯಕ್ತಪಡಿಸಿದ್ದರು. ಅದರೆ ವಾಯುಪಡೆ ಮತ್ತು ಸರಕಾರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.
ಈಗ, ಈ ಬಗ್ಗೆ ತನಿಖೆ ನಡೆದಿದ್ದು, ಈ ದುರ್ಘಟನೆ ನಮ್ಮ ವಾಯುಪಡೆಯ ಲೋಪದಿಂದಲೇ ನಡೆದಿದೆ ಎಂದು ದೃಢ ಪಟ್ಟಿದ್ದರೂ, ಈ ಬಗ್ಗೆ ಚುನಾವಣೆಗಳು ಮುಗಿಯುವ ವರೆಗೆ ನಿಧಾನವಾಗಿ ಮುಂದುವರೆಯಬೇಕು ಎಂದು ‘ಮೇಲಿನಿಂದ’ ಆದೇಶವಿದ್ದುದಾಗಿ ರಕ್ಷಣಾ ವಿಶ್ಲೇಷಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
ಭಾರತೀಯ ವಾಯುಪಡೆ ಈ ವಿಷಯದಲ್ಲಿ ತನ್ನ ಕೆಲವು ಅಧಿಕಾರಿಗಳ ಮೇಲೆ ‘ಕೊಲೆಯೆಂದಾಗದ ದಂಡನೀಯ ನರಹತ್ಯೆ’ಯ ಆರೋಪ ಹಾಕಲಿರುವುದಾಗಿ ಮೇ 21ರಂದು ಅಂದರೆ ಕೊನೆಯ ಸುತ್ತಿನ ಮತದಾನದ ಎರಡು ದಿನಗಳ ನಂತರ ವರದಿ ಮಾಡಿದವು. ಈಗಾಗಲೇ ಇಬ್ಬರು ಹಿರಿಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯಂತೆ. ಚುನಾವಣಾ ಸಮರದಲ್ಲಿ, ಆಚಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂಬ ಚುನಾವಣಾಆಯೋಗದಕ್ಲೀನ್ ಚಿಟ್ಗಳೊಂದಿಗೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಎಫ್-16 ವಿಮಾನ ಹೊಡೆದುರುಳಿಸಿದ ‘ಎದೆಗಾರಿಕೆ’ಯ ಪ್ರಚಾರ ಬಾಚಿಕೊಂಡವರಿಗೆ ಮುಜುಗರವಾಗದಿರಲಿ ಎಂದು ಈ ಸುದ್ದಿ ವಿಳಂಬವಾಗಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಾಗಲೇ, ಅಂದರೆ ಮಾದರಿ ಆಚಾರ ಸಂಹಿತೆ ಜಾರಿಯಲ್ಲಿದ್ದಾಗಲೇ ಪರಿಸರ ರಕ್ಷಣೆಯ ಉದ್ದೇಶದಿಂದ ಪ್ರಕಟಿಸಿದ್ದ ‘ಪರಿಸರ ಪರಿಣಾಮ ನಿರ್ಧಾರಣೆ ಅಧಿಸೂಚನೆ, 2016’ರಲ್ಲಿ ಕೈಯಾಡಿಸಿ ಅದನ್ನು ಉದ್ದಿಮೆದಾರರ ಪರವಾಗಿ ಬದಲಿಸುವ ಕಸರತ್ತು ನಡೆದಿದೆ ಎಂದು ವರದಿಯಾಗಿದೆ(ಸ್ಕ್ರಾಲ್.ಇನ್, ಮೇ 24).
ಅಚ್ಛೇ ದಿನ್ಗಳ ಅವಧಿಯಲ್ಲಿ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ಸತತವಾಗಿ ನಡೆದಿವೆ ಎಂದೂ ಹೇಳಲಾಗುತ್ತಿತ್ತು. ಇದು ಅರಣ್ಯವಾಸಿಗಳ, ಬುಡಕಟ್ಟು ಜನಗಳ ಮತ್ತು ಅಂಚಿನಲ್ಲಿರುವ ರೈತರ ಹಿತಗಳನ್ನು ಬಲಿಗೊಟ್ಟು ಉದ್ದಿಮೆದಾರರ ಲಾಭಗಳನ್ನು ಹೆಚ್ಚಿಸುವ ಪ್ರಯತ್ನಗಳು ಎಂದು ಬೇರೆ ಹೇಳಬೇಕಾಗಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪಟ್ಟಭದ್ರರ ಪರವಾಗಿ ಪ್ರಶ್ನಿಸುತ್ತಿದ್ದಾಗ ಸರಕಾರೀ ವಕೀಲರ ಗೈರುಹಾಜರಿಯಿಂದಾಗಿ ಲಕ್ಷಾಂತರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲಾರಂಭಿಸಿದ್ದು, ಅದಕ್ಕೆ ತೀವ್ರ ಪ್ರತಿಭಟನೆಯ ನಂತರ ಸರಕಾರ ಎಚ್ಚೆತ್ತುಕೊಂಡು ಸುಪ್ರಿಂ ಕೊರ್ಟಿಗೆ ಧಾವಿಸಿದ್ದು ತೀರಾ ಹಳೆಯ ಸುದ್ದಿಯೇನೂ ಅಲ್ಲ.
ಈ ವಿಷಯ ಮತ್ತೆ ವಿಚಾರಣೆಗೆ ಬರಲಿದೆ. ಜತೆಗೆ ರಫೇಲ್ ವ್ಯವಹಾರದ ಕುರಿತ ಮೊಕದ್ದಮೆಯಲ್ಲಿ ಸರಕಾರ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದೆ ಎಂಬುದೂ ವಿಚಾರಣೆಗೆ ಬರಲಿದೆ, ಜತೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳನ್ನು ಪಾರದರ್ಶಕಗೊಳಿಸುವ ಹೆಸರಿನಲ್ಲಿ ತಂದ ಅಪಾರದರ್ಶಕ ಚುನಾವಣಾ ಬಾಂಡು ಎಂಬ ಕ್ರಮದ ವಿಚಾರಣೆಯೂ ಬರಲಿದೆ. ಈ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿಗಳ ಮೇಲೆ ಹೇಳಿದ ಪ್ರತಿಜ್ಞೆ(ಗಳು) ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲಕಾರಿ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು