ರಾಜಕೀಯ
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0
2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ ದುರ್ಭಾವನೆಯಿಂದ ಮಾಡುವುದಿಲ್ಲ ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತ ಪ್ರತಿಜ್ಞೆ ಕೈಗೊಂಡಿದ್ದಾರೆ. ಅವರು ಇನ್ನೂ ಎರಡು ಪ್ರತಿಜ್ಞೆಗಳನ್ನು ಮಾಡಿದ್ದಾರೆ. ಅವರ ಕೆಲಸವನ್ನು ವಿಮರ್ಶಿಸುವಾಗ ಇವನ್ನು ಗಮನದಲ್ಲಿಟ್ಟು ಕೊಳ್ಳಬೇಕಂತೆ.
ಏಳು ಸುತ್ತುಗಳ ಸಾರ್ವತ್ರಿಕ ಚುನಾವಣೆಗಳು ಮುಗಿಯುತ್ತಿದ್ದಂತೆ ಬಯಲಿಗೆ ಬಂದಿರುವ ಕೆಲವು ಸಂಗತಿಗಳ ಹಿನ್ನೆಲೆಯಲ್ಲಿ ಈ ಪ್ರತಿಜ್ಞೆಗಳನ್ನು ಪರೀಕ್ಷಿಸಬೇಕು ಎಂಬುದು ಅವರ ಆಶಯವಿರಲಿಕ್ಕಿಲ್ಲ. ಇದು ಬಹುಶಃ ಅಚ್ಚೇ ದಿನ್ ಇತ್ಯಾದಿ ಜುಮ್ಲಾಗಳೇ ಇರದ ಮುಂದಿನ ಐದು ವರ್ಷಗಳಿಗೆ ಮಾತ್ರ ಅನ್ವಯವಾಗುವಂತದ್ದು. ಅದೇನೇ ಇರಲಿ, ಆ ಸಂಗತಿಗಳನ್ನು ನೋಡೋಣ. ಒಬ್ಬ ಟ್ವಿಟರಿಗ ಈ ಪಟ್ಟಿಯನ್ನು ತಯಾರಿಸಿದ್ದಾರೆ :
- ಸಿಬಿಐಬೊಫೊರ್ಸ್ಬಗ್ಗೆಕೋರ್ಟಿನಲ್ಲಿಹಾಕಿರುವಅರ್ಜಿಯನ್ನುಹಿಂತೆಗೆದುಕೊಂಡಿದೆ.
- ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಕೇಸುಗಳಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ಹೇಳಿದೆ.
- ಚುನಾವಣಾ ಆಯೋಗದ ಒಬ್ಬ ಆಯುಕ್ತರು ಬಹಿರಂಗವಾಗಿ ಭಿನ್ನಮತ ವ್ಯಕ್ತಪಡಿಸಿದ್ದಾರೆ.
- ಪೆಟ್ರೋಲ್ ಬೆಲೆಗಳು ಕೊನೆಯ ಸುತ್ತಿನ ನಂತರ ಮತ್ತೆಏರುತ್ತಿವೆ.
- ನಮೋ ಟಿವಿ ಕಾಣೆಯಾಗಿದೆ.
- ಎಲ್ಲಕ್ಕೂ ಮಿಗಿಲಾಗಿ ಭಾರತೀಯ ವಾಯುಪಡೆ ತನ್ನದೇ ಹೆಲಿಕಾಪ್ಟರನ್ನು ಹೊಡೆದು ಉರುಳಿಸಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದೆ.
ಈ ಕೊನೆಯದ್ದು ಈ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದಂತೆ ಕಾಣುತ್ತಿರುವ ಫುಲ್ವಾಮ, ಬಾಲಾಕೋಟ್ ಮತ್ತು ರಾಷ್ಟ್ರೀಯ ಭದ್ರತೆಯ ಮಾತುಗಳ ಸಂದರ್ಭದಲ್ಲಿ ಗಮನಾರ್ಹ(ಸಬ್ರಂಗ್, ಮೇ 22).
ಫೆಬ್ರುವರಿ 27ರಂದು, ಅಂದರೆ ಫುಲ್ವಾಮ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ವಾಯುಪಡೆಯ ವಿಮಾನಗಳು ಬಾಲಾಕೋಟ್ ಮೇಲೆ ಪ್ರಹಾರ ನಡೆಸಿದ ಮರುದಿನ ಕಾಶ್ಮೀರದ ಬುಡ್ಗಾಮ್ನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಒಂದು ಕ್ಷಿಪಣಿ ದಾಳಿಗೆ ಗುರಿಯಾಗಿ. ಅದರಲ್ಲಿದ್ದ ಆರು ಸಿಬ್ಬಂದಿ ಮತ್ತು ಒಬ್ಬ ಭಾರತೀಯ ನಾಗರಿಕ ಮೃತಪಟ್ಟರು. ಆ ವೇಳೆಗೆ ಪಾಕಿಸ್ತಾನೀ ವಾಯುಪಡೆಯ ಎಫ್-೧೬ ವಿಮಾನವನ್ನು ಹೊಡೆದುರುಳಿಸಿದ್ದು ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವಾಪಸಾತಿಯ ಅಬ್ಬರದ ನಡುವೆ ಈ ಸುದ್ದಿ ಮುಚ್ಚಿ ಹೋಯಿತು. ಆದರೆ ಆಗಲೇ ಈ ದುರ್ಘಟವೆ ಫ್ರೆಂಡ್ಲಿ ಪ್ರಹಾರದಿಂದ ಆಗಿರಬಹುದು ಎಂದು ಮಾಜಿ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಹಾಗೂ ಕೆಲವು ಪತ್ರಿಕೆಗಳು ಗುಮಾನಿ ವ್ಯಕ್ತಪಡಿಸಿದ್ದರು. ಅದರೆ ವಾಯುಪಡೆ ಮತ್ತು ಸರಕಾರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.
ಈಗ, ಈ ಬಗ್ಗೆ ತನಿಖೆ ನಡೆದಿದ್ದು, ಈ ದುರ್ಘಟನೆ ನಮ್ಮ ವಾಯುಪಡೆಯ ಲೋಪದಿಂದಲೇ ನಡೆದಿದೆ ಎಂದು ದೃಢ ಪಟ್ಟಿದ್ದರೂ, ಈ ಬಗ್ಗೆ ಚುನಾವಣೆಗಳು ಮುಗಿಯುವ ವರೆಗೆ ನಿಧಾನವಾಗಿ ಮುಂದುವರೆಯಬೇಕು ಎಂದು ‘ಮೇಲಿನಿಂದ’ ಆದೇಶವಿದ್ದುದಾಗಿ ರಕ್ಷಣಾ ವಿಶ್ಲೇಷಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
ಭಾರತೀಯ ವಾಯುಪಡೆ ಈ ವಿಷಯದಲ್ಲಿ ತನ್ನ ಕೆಲವು ಅಧಿಕಾರಿಗಳ ಮೇಲೆ ‘ಕೊಲೆಯೆಂದಾಗದ ದಂಡನೀಯ ನರಹತ್ಯೆ’ಯ ಆರೋಪ ಹಾಕಲಿರುವುದಾಗಿ ಮೇ 21ರಂದು ಅಂದರೆ ಕೊನೆಯ ಸುತ್ತಿನ ಮತದಾನದ ಎರಡು ದಿನಗಳ ನಂತರ ವರದಿ ಮಾಡಿದವು. ಈಗಾಗಲೇ ಇಬ್ಬರು ಹಿರಿಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯಂತೆ. ಚುನಾವಣಾ ಸಮರದಲ್ಲಿ, ಆಚಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂಬ ಚುನಾವಣಾಆಯೋಗದಕ್ಲೀನ್ ಚಿಟ್ಗಳೊಂದಿಗೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಎಫ್-16 ವಿಮಾನ ಹೊಡೆದುರುಳಿಸಿದ ‘ಎದೆಗಾರಿಕೆ’ಯ ಪ್ರಚಾರ ಬಾಚಿಕೊಂಡವರಿಗೆ ಮುಜುಗರವಾಗದಿರಲಿ ಎಂದು ಈ ಸುದ್ದಿ ವಿಳಂಬವಾಗಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಾಗಲೇ, ಅಂದರೆ ಮಾದರಿ ಆಚಾರ ಸಂಹಿತೆ ಜಾರಿಯಲ್ಲಿದ್ದಾಗಲೇ ಪರಿಸರ ರಕ್ಷಣೆಯ ಉದ್ದೇಶದಿಂದ ಪ್ರಕಟಿಸಿದ್ದ ‘ಪರಿಸರ ಪರಿಣಾಮ ನಿರ್ಧಾರಣೆ ಅಧಿಸೂಚನೆ, 2016’ರಲ್ಲಿ ಕೈಯಾಡಿಸಿ ಅದನ್ನು ಉದ್ದಿಮೆದಾರರ ಪರವಾಗಿ ಬದಲಿಸುವ ಕಸರತ್ತು ನಡೆದಿದೆ ಎಂದು ವರದಿಯಾಗಿದೆ(ಸ್ಕ್ರಾಲ್.ಇನ್, ಮೇ 24).
ಅಚ್ಛೇ ದಿನ್ಗಳ ಅವಧಿಯಲ್ಲಿ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ಸತತವಾಗಿ ನಡೆದಿವೆ ಎಂದೂ ಹೇಳಲಾಗುತ್ತಿತ್ತು. ಇದು ಅರಣ್ಯವಾಸಿಗಳ, ಬುಡಕಟ್ಟು ಜನಗಳ ಮತ್ತು ಅಂಚಿನಲ್ಲಿರುವ ರೈತರ ಹಿತಗಳನ್ನು ಬಲಿಗೊಟ್ಟು ಉದ್ದಿಮೆದಾರರ ಲಾಭಗಳನ್ನು ಹೆಚ್ಚಿಸುವ ಪ್ರಯತ್ನಗಳು ಎಂದು ಬೇರೆ ಹೇಳಬೇಕಾಗಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪಟ್ಟಭದ್ರರ ಪರವಾಗಿ ಪ್ರಶ್ನಿಸುತ್ತಿದ್ದಾಗ ಸರಕಾರೀ ವಕೀಲರ ಗೈರುಹಾಜರಿಯಿಂದಾಗಿ ಲಕ್ಷಾಂತರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲಾರಂಭಿಸಿದ್ದು, ಅದಕ್ಕೆ ತೀವ್ರ ಪ್ರತಿಭಟನೆಯ ನಂತರ ಸರಕಾರ ಎಚ್ಚೆತ್ತುಕೊಂಡು ಸುಪ್ರಿಂ ಕೊರ್ಟಿಗೆ ಧಾವಿಸಿದ್ದು ತೀರಾ ಹಳೆಯ ಸುದ್ದಿಯೇನೂ ಅಲ್ಲ.
ಈ ವಿಷಯ ಮತ್ತೆ ವಿಚಾರಣೆಗೆ ಬರಲಿದೆ. ಜತೆಗೆ ರಫೇಲ್ ವ್ಯವಹಾರದ ಕುರಿತ ಮೊಕದ್ದಮೆಯಲ್ಲಿ ಸರಕಾರ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದೆ ಎಂಬುದೂ ವಿಚಾರಣೆಗೆ ಬರಲಿದೆ, ಜತೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳನ್ನು ಪಾರದರ್ಶಕಗೊಳಿಸುವ ಹೆಸರಿನಲ್ಲಿ ತಂದ ಅಪಾರದರ್ಶಕ ಚುನಾವಣಾ ಬಾಂಡು ಎಂಬ ಕ್ರಮದ ವಿಚಾರಣೆಯೂ ಬರಲಿದೆ. ಈ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿಗಳ ಮೇಲೆ ಹೇಳಿದ ಪ್ರತಿಜ್ಞೆ(ಗಳು) ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲಕಾರಿ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್ಲೈನ್ ವಂಚನೆಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ‘ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್’ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿದ್ದ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಮಾಹಿತಿ ನೀಡಿ, ಈ ಯೋಜನೆಗಾಗಿ ಸುಮಾರು 20 ಕೋಟಿ ರೂಪಾಯಿಗಳ ಅನುದಾನವನ್ನು ಕೋರಲಾಗಿದ್ದು, ಪ್ರಾಥಮಿಕ ಹಂತವಾಗಿ ಕನಿಷ್ಠ 10 ಕೋಟಿ ರೂಪಾಯಿ ಬಿಡುಗಡೆಯಾದರೂ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು ಎಂದರು. ಈ ಯೋಜನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಐಟಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿವರಿಸಿದರು.
ಪ್ರಸ್ತುತ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೂ, ಮುಂಬರುವ ಹೊಸ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನುಮುಂದೆ ಪ್ರತಿ ತಿಂಗಳು ವಸತಿ ನಿಲಯಗಳಲ್ಲಿ ಸಂಜೆ ವೇಳೆ ಅರ್ಧ ಗಂಟೆಗಳ ಕಾಲ ವಚನ ಸಾಹಿತ್ಯ, ದಲಿತ ಸಾಹಿತ್ಯ ಹಾಗೂ ಮಹಿಳಾ ಸಾಹಿತ್ಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಮುಂದಿನ ತಿಂಗಳಿಂದ ಮಾನ್ಯ ಸಂಸದರ ನೇತೃತ್ವದಲ್ಲಿ ಇದಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದ ಸಮಾಜ ಕಲ್ಯಾಣ, ಬಿ.ಸಿ.ಎಂ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳಿಗೆ ಸ್ವಂತ ನಿವೇಶನಗಳನ್ನು ಮಂಜೂರು ಮಾಡಲಾಗಿದ್ದು, ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ವಸತಿ ನಿಲಯದ ಮಕ್ಕಳಿಗೆ ‘ಹೆಲ್ತ್ ಕಾರ್ಡ್’ ವಿತರಿಸಲಾಗುತ್ತಿದ್ದು, ಪ್ರತಿ ತಿಂಗಳು ಕಡ್ಡಾಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆ ವಿಶೇಷ ಶ್ರಮವಹಿಸುತ್ತಿದ್ದು, ಫಲಿತಾಂಶದಲ್ಲಿ ಹಿಂದುಳಿದಿರುವ ಶಾಲೆಗಳನ್ನು ಅಧಿಕಾರಿಗಳು ದತ್ತು ಪಡೆದುಕೊಂಡು ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಸಿಇಒ ಸ್ವತಃ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸುತ್ತಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ಮುಂಜಾನೆ ಮತ್ತು ಸಂಜೆ ವಿಶೇಷ ತರಗತಿಗಳನ್ನು ಆಯೋಜಿಸುತ್ತಿದ್ದಾರೆ ಎಂದರು.
ಕಳೆದ ವರ್ಷ ಜಿಲ್ಲೆಯಲ್ಲಿ ಯಾವುದೇ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ, ಕಳೆದ ತಿಂಗಳು ಶಾದಿಮಹಲ್ನಲ್ಲಿ ನಡೆಯುತ್ತಿದ್ದ ವಿವಾಹವೊಂದರ ಮೇಲೆ ದಾಳಿ ನಡೆಸಿ, ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹವನ್ನು ಯಶಸ್ವಿಯಾಗಿ ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಇನ್ನು ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಿ.ಇ.ಒ ಅವರು ಜಿಲ್ಲೆಯ ಆಸ್ಪತ್ರೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ನರ್ಸಿಂಗ್ ಹೋಂಗಳಲ್ಲಿ ಶೇಕಡಾ 100 ರಷ್ಟು ಸಿಸೇರಿಯನ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ, ವೈದ್ಯರ ಸಭೆ ಕರೆದು ಕಡ್ಡಾಯವಾಗಿ ನೈಸರ್ಗಿಕ ಹೆರಿಗೆಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದ್ದು, ಪ್ರಸ್ತುತ ಇದು ರಾಜ್ಯದ ಸರಾಸರಿಗಿಂತ ಕಡಿಮೆ ಇರುವುದು ಜಿಲ್ಲೆಯ ದೊಡ್ಡ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗಳು ಖಾಲಿ ಇದ್ದು, ಲಭ್ಯವಿರುವ ಸಂಪನ್ಮೂಲಗಳಲ್ಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕೃಷಿ, ನೀರಾವರಿ ಹಾಗೂ ನಾಗರಿಕ ಸೌಲಭ್ಯಗಳು
ಮುಂಬರುವ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಅಡಿಕೆ-ತೆಂಗಿನ ಜೊತೆಗೆ ಹಣ್ಣು ಮತ್ತು ತರಕಾರಿ ಬೆಳೆಗಳಿಗೂ ಉತ್ತೇಜನ ನೀಡಲಾಗುತ್ತಿದ್ದು, ಹನಿ ನೀರಾವರಿ ಯೋಜನೆ ಸಬ್ಸಿಡಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ.
ಗ್ರಾಮೀಣ ಭಾಗದ ‘ಜಲಜೀವನ್ ಮಿಷನ್’ ಯೋಜನೆಯಡಿ ಪೈಪ್ಲೈನ್ ಮತ್ತು ನಲ್ಲಿ ಸಂಪರ್ಕ ಕಾರ್ಯಗಳು ಕೊನೆಯ ಹಂತದಲ್ಲಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಇಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನಗರದ ಪ್ರಮುಖ ರಸ್ತೆಗಳ ನವೀಕರಣ, ಸ್ಮಾರ್ಟ್ ರಸ್ತೆಗಳ ನಿರ್ಮಾಣ ಹಾಗೂ ಒಳಚರಂಡಿ ಆಧುನೀಕರಣ ಪ್ರಗತಿಯಲ್ಲಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಸೂಚಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಾವಣಗೆರೆಯಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನೇಷನ್ ಮತ್ತು ಸ್ಟೆರಿಲೈಸೇಶನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ಈಗಾಗಲೇ ಶೇಕಡಾ 80 ರಷ್ಟು ಯಶಸ್ಸು ಸಾಧಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೇಖರ್ ಹೆಚ್.ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ4 days agoತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
-
ದಿನದ ಸುದ್ದಿ3 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
-
ದಿನದ ಸುದ್ದಿ2 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

