ರಾಜಕೀಯ
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0
2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ ದುರ್ಭಾವನೆಯಿಂದ ಮಾಡುವುದಿಲ್ಲ ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತ ಪ್ರತಿಜ್ಞೆ ಕೈಗೊಂಡಿದ್ದಾರೆ. ಅವರು ಇನ್ನೂ ಎರಡು ಪ್ರತಿಜ್ಞೆಗಳನ್ನು ಮಾಡಿದ್ದಾರೆ. ಅವರ ಕೆಲಸವನ್ನು ವಿಮರ್ಶಿಸುವಾಗ ಇವನ್ನು ಗಮನದಲ್ಲಿಟ್ಟು ಕೊಳ್ಳಬೇಕಂತೆ.
ಏಳು ಸುತ್ತುಗಳ ಸಾರ್ವತ್ರಿಕ ಚುನಾವಣೆಗಳು ಮುಗಿಯುತ್ತಿದ್ದಂತೆ ಬಯಲಿಗೆ ಬಂದಿರುವ ಕೆಲವು ಸಂಗತಿಗಳ ಹಿನ್ನೆಲೆಯಲ್ಲಿ ಈ ಪ್ರತಿಜ್ಞೆಗಳನ್ನು ಪರೀಕ್ಷಿಸಬೇಕು ಎಂಬುದು ಅವರ ಆಶಯವಿರಲಿಕ್ಕಿಲ್ಲ. ಇದು ಬಹುಶಃ ಅಚ್ಚೇ ದಿನ್ ಇತ್ಯಾದಿ ಜುಮ್ಲಾಗಳೇ ಇರದ ಮುಂದಿನ ಐದು ವರ್ಷಗಳಿಗೆ ಮಾತ್ರ ಅನ್ವಯವಾಗುವಂತದ್ದು. ಅದೇನೇ ಇರಲಿ, ಆ ಸಂಗತಿಗಳನ್ನು ನೋಡೋಣ. ಒಬ್ಬ ಟ್ವಿಟರಿಗ ಈ ಪಟ್ಟಿಯನ್ನು ತಯಾರಿಸಿದ್ದಾರೆ :
- ಸಿಬಿಐಬೊಫೊರ್ಸ್ಬಗ್ಗೆಕೋರ್ಟಿನಲ್ಲಿಹಾಕಿರುವಅರ್ಜಿಯನ್ನುಹಿಂತೆಗೆದುಕೊಂಡಿದೆ.
- ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಕೇಸುಗಳಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ಹೇಳಿದೆ.
- ಚುನಾವಣಾ ಆಯೋಗದ ಒಬ್ಬ ಆಯುಕ್ತರು ಬಹಿರಂಗವಾಗಿ ಭಿನ್ನಮತ ವ್ಯಕ್ತಪಡಿಸಿದ್ದಾರೆ.
- ಪೆಟ್ರೋಲ್ ಬೆಲೆಗಳು ಕೊನೆಯ ಸುತ್ತಿನ ನಂತರ ಮತ್ತೆಏರುತ್ತಿವೆ.
- ನಮೋ ಟಿವಿ ಕಾಣೆಯಾಗಿದೆ.
- ಎಲ್ಲಕ್ಕೂ ಮಿಗಿಲಾಗಿ ಭಾರತೀಯ ವಾಯುಪಡೆ ತನ್ನದೇ ಹೆಲಿಕಾಪ್ಟರನ್ನು ಹೊಡೆದು ಉರುಳಿಸಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದೆ.
ಈ ಕೊನೆಯದ್ದು ಈ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದಂತೆ ಕಾಣುತ್ತಿರುವ ಫುಲ್ವಾಮ, ಬಾಲಾಕೋಟ್ ಮತ್ತು ರಾಷ್ಟ್ರೀಯ ಭದ್ರತೆಯ ಮಾತುಗಳ ಸಂದರ್ಭದಲ್ಲಿ ಗಮನಾರ್ಹ(ಸಬ್ರಂಗ್, ಮೇ 22).
ಫೆಬ್ರುವರಿ 27ರಂದು, ಅಂದರೆ ಫುಲ್ವಾಮ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ವಾಯುಪಡೆಯ ವಿಮಾನಗಳು ಬಾಲಾಕೋಟ್ ಮೇಲೆ ಪ್ರಹಾರ ನಡೆಸಿದ ಮರುದಿನ ಕಾಶ್ಮೀರದ ಬುಡ್ಗಾಮ್ನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಒಂದು ಕ್ಷಿಪಣಿ ದಾಳಿಗೆ ಗುರಿಯಾಗಿ. ಅದರಲ್ಲಿದ್ದ ಆರು ಸಿಬ್ಬಂದಿ ಮತ್ತು ಒಬ್ಬ ಭಾರತೀಯ ನಾಗರಿಕ ಮೃತಪಟ್ಟರು. ಆ ವೇಳೆಗೆ ಪಾಕಿಸ್ತಾನೀ ವಾಯುಪಡೆಯ ಎಫ್-೧೬ ವಿಮಾನವನ್ನು ಹೊಡೆದುರುಳಿಸಿದ್ದು ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವಾಪಸಾತಿಯ ಅಬ್ಬರದ ನಡುವೆ ಈ ಸುದ್ದಿ ಮುಚ್ಚಿ ಹೋಯಿತು. ಆದರೆ ಆಗಲೇ ಈ ದುರ್ಘಟವೆ ಫ್ರೆಂಡ್ಲಿ ಪ್ರಹಾರದಿಂದ ಆಗಿರಬಹುದು ಎಂದು ಮಾಜಿ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಹಾಗೂ ಕೆಲವು ಪತ್ರಿಕೆಗಳು ಗುಮಾನಿ ವ್ಯಕ್ತಪಡಿಸಿದ್ದರು. ಅದರೆ ವಾಯುಪಡೆ ಮತ್ತು ಸರಕಾರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.
ಈಗ, ಈ ಬಗ್ಗೆ ತನಿಖೆ ನಡೆದಿದ್ದು, ಈ ದುರ್ಘಟನೆ ನಮ್ಮ ವಾಯುಪಡೆಯ ಲೋಪದಿಂದಲೇ ನಡೆದಿದೆ ಎಂದು ದೃಢ ಪಟ್ಟಿದ್ದರೂ, ಈ ಬಗ್ಗೆ ಚುನಾವಣೆಗಳು ಮುಗಿಯುವ ವರೆಗೆ ನಿಧಾನವಾಗಿ ಮುಂದುವರೆಯಬೇಕು ಎಂದು ‘ಮೇಲಿನಿಂದ’ ಆದೇಶವಿದ್ದುದಾಗಿ ರಕ್ಷಣಾ ವಿಶ್ಲೇಷಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
ಭಾರತೀಯ ವಾಯುಪಡೆ ಈ ವಿಷಯದಲ್ಲಿ ತನ್ನ ಕೆಲವು ಅಧಿಕಾರಿಗಳ ಮೇಲೆ ‘ಕೊಲೆಯೆಂದಾಗದ ದಂಡನೀಯ ನರಹತ್ಯೆ’ಯ ಆರೋಪ ಹಾಕಲಿರುವುದಾಗಿ ಮೇ 21ರಂದು ಅಂದರೆ ಕೊನೆಯ ಸುತ್ತಿನ ಮತದಾನದ ಎರಡು ದಿನಗಳ ನಂತರ ವರದಿ ಮಾಡಿದವು. ಈಗಾಗಲೇ ಇಬ್ಬರು ಹಿರಿಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯಂತೆ. ಚುನಾವಣಾ ಸಮರದಲ್ಲಿ, ಆಚಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂಬ ಚುನಾವಣಾಆಯೋಗದಕ್ಲೀನ್ ಚಿಟ್ಗಳೊಂದಿಗೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಎಫ್-16 ವಿಮಾನ ಹೊಡೆದುರುಳಿಸಿದ ‘ಎದೆಗಾರಿಕೆ’ಯ ಪ್ರಚಾರ ಬಾಚಿಕೊಂಡವರಿಗೆ ಮುಜುಗರವಾಗದಿರಲಿ ಎಂದು ಈ ಸುದ್ದಿ ವಿಳಂಬವಾಗಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಾಗಲೇ, ಅಂದರೆ ಮಾದರಿ ಆಚಾರ ಸಂಹಿತೆ ಜಾರಿಯಲ್ಲಿದ್ದಾಗಲೇ ಪರಿಸರ ರಕ್ಷಣೆಯ ಉದ್ದೇಶದಿಂದ ಪ್ರಕಟಿಸಿದ್ದ ‘ಪರಿಸರ ಪರಿಣಾಮ ನಿರ್ಧಾರಣೆ ಅಧಿಸೂಚನೆ, 2016’ರಲ್ಲಿ ಕೈಯಾಡಿಸಿ ಅದನ್ನು ಉದ್ದಿಮೆದಾರರ ಪರವಾಗಿ ಬದಲಿಸುವ ಕಸರತ್ತು ನಡೆದಿದೆ ಎಂದು ವರದಿಯಾಗಿದೆ(ಸ್ಕ್ರಾಲ್.ಇನ್, ಮೇ 24).
ಅಚ್ಛೇ ದಿನ್ಗಳ ಅವಧಿಯಲ್ಲಿ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ಸತತವಾಗಿ ನಡೆದಿವೆ ಎಂದೂ ಹೇಳಲಾಗುತ್ತಿತ್ತು. ಇದು ಅರಣ್ಯವಾಸಿಗಳ, ಬುಡಕಟ್ಟು ಜನಗಳ ಮತ್ತು ಅಂಚಿನಲ್ಲಿರುವ ರೈತರ ಹಿತಗಳನ್ನು ಬಲಿಗೊಟ್ಟು ಉದ್ದಿಮೆದಾರರ ಲಾಭಗಳನ್ನು ಹೆಚ್ಚಿಸುವ ಪ್ರಯತ್ನಗಳು ಎಂದು ಬೇರೆ ಹೇಳಬೇಕಾಗಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪಟ್ಟಭದ್ರರ ಪರವಾಗಿ ಪ್ರಶ್ನಿಸುತ್ತಿದ್ದಾಗ ಸರಕಾರೀ ವಕೀಲರ ಗೈರುಹಾಜರಿಯಿಂದಾಗಿ ಲಕ್ಷಾಂತರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲಾರಂಭಿಸಿದ್ದು, ಅದಕ್ಕೆ ತೀವ್ರ ಪ್ರತಿಭಟನೆಯ ನಂತರ ಸರಕಾರ ಎಚ್ಚೆತ್ತುಕೊಂಡು ಸುಪ್ರಿಂ ಕೊರ್ಟಿಗೆ ಧಾವಿಸಿದ್ದು ತೀರಾ ಹಳೆಯ ಸುದ್ದಿಯೇನೂ ಅಲ್ಲ.
ಈ ವಿಷಯ ಮತ್ತೆ ವಿಚಾರಣೆಗೆ ಬರಲಿದೆ. ಜತೆಗೆ ರಫೇಲ್ ವ್ಯವಹಾರದ ಕುರಿತ ಮೊಕದ್ದಮೆಯಲ್ಲಿ ಸರಕಾರ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದೆ ಎಂಬುದೂ ವಿಚಾರಣೆಗೆ ಬರಲಿದೆ, ಜತೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳನ್ನು ಪಾರದರ್ಶಕಗೊಳಿಸುವ ಹೆಸರಿನಲ್ಲಿ ತಂದ ಅಪಾರದರ್ಶಕ ಚುನಾವಣಾ ಬಾಂಡು ಎಂಬ ಕ್ರಮದ ವಿಚಾರಣೆಯೂ ಬರಲಿದೆ. ಈ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿಗಳ ಮೇಲೆ ಹೇಳಿದ ಪ್ರತಿಜ್ಞೆ(ಗಳು) ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲಕಾರಿ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ6 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ5 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

