ರಾಜಕೀಯ
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0

2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ ದುರ್ಭಾವನೆಯಿಂದ ಮಾಡುವುದಿಲ್ಲ ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತ ಪ್ರತಿಜ್ಞೆ ಕೈಗೊಂಡಿದ್ದಾರೆ. ಅವರು ಇನ್ನೂ ಎರಡು ಪ್ರತಿಜ್ಞೆಗಳನ್ನು ಮಾಡಿದ್ದಾರೆ. ಅವರ ಕೆಲಸವನ್ನು ವಿಮರ್ಶಿಸುವಾಗ ಇವನ್ನು ಗಮನದಲ್ಲಿಟ್ಟು ಕೊಳ್ಳಬೇಕಂತೆ.
ಏಳು ಸುತ್ತುಗಳ ಸಾರ್ವತ್ರಿಕ ಚುನಾವಣೆಗಳು ಮುಗಿಯುತ್ತಿದ್ದಂತೆ ಬಯಲಿಗೆ ಬಂದಿರುವ ಕೆಲವು ಸಂಗತಿಗಳ ಹಿನ್ನೆಲೆಯಲ್ಲಿ ಈ ಪ್ರತಿಜ್ಞೆಗಳನ್ನು ಪರೀಕ್ಷಿಸಬೇಕು ಎಂಬುದು ಅವರ ಆಶಯವಿರಲಿಕ್ಕಿಲ್ಲ. ಇದು ಬಹುಶಃ ಅಚ್ಚೇ ದಿನ್ ಇತ್ಯಾದಿ ಜುಮ್ಲಾಗಳೇ ಇರದ ಮುಂದಿನ ಐದು ವರ್ಷಗಳಿಗೆ ಮಾತ್ರ ಅನ್ವಯವಾಗುವಂತದ್ದು. ಅದೇನೇ ಇರಲಿ, ಆ ಸಂಗತಿಗಳನ್ನು ನೋಡೋಣ. ಒಬ್ಬ ಟ್ವಿಟರಿಗ ಈ ಪಟ್ಟಿಯನ್ನು ತಯಾರಿಸಿದ್ದಾರೆ :
- ಸಿಬಿಐಬೊಫೊರ್ಸ್ಬಗ್ಗೆಕೋರ್ಟಿನಲ್ಲಿಹಾಕಿರುವಅರ್ಜಿಯನ್ನುಹಿಂತೆಗೆದುಕೊಂಡಿದೆ.
- ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಕೇಸುಗಳಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ಹೇಳಿದೆ.
- ಚುನಾವಣಾ ಆಯೋಗದ ಒಬ್ಬ ಆಯುಕ್ತರು ಬಹಿರಂಗವಾಗಿ ಭಿನ್ನಮತ ವ್ಯಕ್ತಪಡಿಸಿದ್ದಾರೆ.
- ಪೆಟ್ರೋಲ್ ಬೆಲೆಗಳು ಕೊನೆಯ ಸುತ್ತಿನ ನಂತರ ಮತ್ತೆಏರುತ್ತಿವೆ.
- ನಮೋ ಟಿವಿ ಕಾಣೆಯಾಗಿದೆ.
- ಎಲ್ಲಕ್ಕೂ ಮಿಗಿಲಾಗಿ ಭಾರತೀಯ ವಾಯುಪಡೆ ತನ್ನದೇ ಹೆಲಿಕಾಪ್ಟರನ್ನು ಹೊಡೆದು ಉರುಳಿಸಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದೆ.
ಈ ಕೊನೆಯದ್ದು ಈ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದಂತೆ ಕಾಣುತ್ತಿರುವ ಫುಲ್ವಾಮ, ಬಾಲಾಕೋಟ್ ಮತ್ತು ರಾಷ್ಟ್ರೀಯ ಭದ್ರತೆಯ ಮಾತುಗಳ ಸಂದರ್ಭದಲ್ಲಿ ಗಮನಾರ್ಹ(ಸಬ್ರಂಗ್, ಮೇ 22).
ಫೆಬ್ರುವರಿ 27ರಂದು, ಅಂದರೆ ಫುಲ್ವಾಮ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ವಾಯುಪಡೆಯ ವಿಮಾನಗಳು ಬಾಲಾಕೋಟ್ ಮೇಲೆ ಪ್ರಹಾರ ನಡೆಸಿದ ಮರುದಿನ ಕಾಶ್ಮೀರದ ಬುಡ್ಗಾಮ್ನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಒಂದು ಕ್ಷಿಪಣಿ ದಾಳಿಗೆ ಗುರಿಯಾಗಿ. ಅದರಲ್ಲಿದ್ದ ಆರು ಸಿಬ್ಬಂದಿ ಮತ್ತು ಒಬ್ಬ ಭಾರತೀಯ ನಾಗರಿಕ ಮೃತಪಟ್ಟರು. ಆ ವೇಳೆಗೆ ಪಾಕಿಸ್ತಾನೀ ವಾಯುಪಡೆಯ ಎಫ್-೧೬ ವಿಮಾನವನ್ನು ಹೊಡೆದುರುಳಿಸಿದ್ದು ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವಾಪಸಾತಿಯ ಅಬ್ಬರದ ನಡುವೆ ಈ ಸುದ್ದಿ ಮುಚ್ಚಿ ಹೋಯಿತು. ಆದರೆ ಆಗಲೇ ಈ ದುರ್ಘಟವೆ ಫ್ರೆಂಡ್ಲಿ ಪ್ರಹಾರದಿಂದ ಆಗಿರಬಹುದು ಎಂದು ಮಾಜಿ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಹಾಗೂ ಕೆಲವು ಪತ್ರಿಕೆಗಳು ಗುಮಾನಿ ವ್ಯಕ್ತಪಡಿಸಿದ್ದರು. ಅದರೆ ವಾಯುಪಡೆ ಮತ್ತು ಸರಕಾರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.
ಈಗ, ಈ ಬಗ್ಗೆ ತನಿಖೆ ನಡೆದಿದ್ದು, ಈ ದುರ್ಘಟನೆ ನಮ್ಮ ವಾಯುಪಡೆಯ ಲೋಪದಿಂದಲೇ ನಡೆದಿದೆ ಎಂದು ದೃಢ ಪಟ್ಟಿದ್ದರೂ, ಈ ಬಗ್ಗೆ ಚುನಾವಣೆಗಳು ಮುಗಿಯುವ ವರೆಗೆ ನಿಧಾನವಾಗಿ ಮುಂದುವರೆಯಬೇಕು ಎಂದು ‘ಮೇಲಿನಿಂದ’ ಆದೇಶವಿದ್ದುದಾಗಿ ರಕ್ಷಣಾ ವಿಶ್ಲೇಷಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
ಭಾರತೀಯ ವಾಯುಪಡೆ ಈ ವಿಷಯದಲ್ಲಿ ತನ್ನ ಕೆಲವು ಅಧಿಕಾರಿಗಳ ಮೇಲೆ ‘ಕೊಲೆಯೆಂದಾಗದ ದಂಡನೀಯ ನರಹತ್ಯೆ’ಯ ಆರೋಪ ಹಾಕಲಿರುವುದಾಗಿ ಮೇ 21ರಂದು ಅಂದರೆ ಕೊನೆಯ ಸುತ್ತಿನ ಮತದಾನದ ಎರಡು ದಿನಗಳ ನಂತರ ವರದಿ ಮಾಡಿದವು. ಈಗಾಗಲೇ ಇಬ್ಬರು ಹಿರಿಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯಂತೆ. ಚುನಾವಣಾ ಸಮರದಲ್ಲಿ, ಆಚಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂಬ ಚುನಾವಣಾಆಯೋಗದಕ್ಲೀನ್ ಚಿಟ್ಗಳೊಂದಿಗೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಎಫ್-16 ವಿಮಾನ ಹೊಡೆದುರುಳಿಸಿದ ‘ಎದೆಗಾರಿಕೆ’ಯ ಪ್ರಚಾರ ಬಾಚಿಕೊಂಡವರಿಗೆ ಮುಜುಗರವಾಗದಿರಲಿ ಎಂದು ಈ ಸುದ್ದಿ ವಿಳಂಬವಾಗಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಾಗಲೇ, ಅಂದರೆ ಮಾದರಿ ಆಚಾರ ಸಂಹಿತೆ ಜಾರಿಯಲ್ಲಿದ್ದಾಗಲೇ ಪರಿಸರ ರಕ್ಷಣೆಯ ಉದ್ದೇಶದಿಂದ ಪ್ರಕಟಿಸಿದ್ದ ‘ಪರಿಸರ ಪರಿಣಾಮ ನಿರ್ಧಾರಣೆ ಅಧಿಸೂಚನೆ, 2016’ರಲ್ಲಿ ಕೈಯಾಡಿಸಿ ಅದನ್ನು ಉದ್ದಿಮೆದಾರರ ಪರವಾಗಿ ಬದಲಿಸುವ ಕಸರತ್ತು ನಡೆದಿದೆ ಎಂದು ವರದಿಯಾಗಿದೆ(ಸ್ಕ್ರಾಲ್.ಇನ್, ಮೇ 24).
ಅಚ್ಛೇ ದಿನ್ಗಳ ಅವಧಿಯಲ್ಲಿ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ಸತತವಾಗಿ ನಡೆದಿವೆ ಎಂದೂ ಹೇಳಲಾಗುತ್ತಿತ್ತು. ಇದು ಅರಣ್ಯವಾಸಿಗಳ, ಬುಡಕಟ್ಟು ಜನಗಳ ಮತ್ತು ಅಂಚಿನಲ್ಲಿರುವ ರೈತರ ಹಿತಗಳನ್ನು ಬಲಿಗೊಟ್ಟು ಉದ್ದಿಮೆದಾರರ ಲಾಭಗಳನ್ನು ಹೆಚ್ಚಿಸುವ ಪ್ರಯತ್ನಗಳು ಎಂದು ಬೇರೆ ಹೇಳಬೇಕಾಗಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪಟ್ಟಭದ್ರರ ಪರವಾಗಿ ಪ್ರಶ್ನಿಸುತ್ತಿದ್ದಾಗ ಸರಕಾರೀ ವಕೀಲರ ಗೈರುಹಾಜರಿಯಿಂದಾಗಿ ಲಕ್ಷಾಂತರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲಾರಂಭಿಸಿದ್ದು, ಅದಕ್ಕೆ ತೀವ್ರ ಪ್ರತಿಭಟನೆಯ ನಂತರ ಸರಕಾರ ಎಚ್ಚೆತ್ತುಕೊಂಡು ಸುಪ್ರಿಂ ಕೊರ್ಟಿಗೆ ಧಾವಿಸಿದ್ದು ತೀರಾ ಹಳೆಯ ಸುದ್ದಿಯೇನೂ ಅಲ್ಲ.
ಈ ವಿಷಯ ಮತ್ತೆ ವಿಚಾರಣೆಗೆ ಬರಲಿದೆ. ಜತೆಗೆ ರಫೇಲ್ ವ್ಯವಹಾರದ ಕುರಿತ ಮೊಕದ್ದಮೆಯಲ್ಲಿ ಸರಕಾರ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದೆ ಎಂಬುದೂ ವಿಚಾರಣೆಗೆ ಬರಲಿದೆ, ಜತೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳನ್ನು ಪಾರದರ್ಶಕಗೊಳಿಸುವ ಹೆಸರಿನಲ್ಲಿ ತಂದ ಅಪಾರದರ್ಶಕ ಚುನಾವಣಾ ಬಾಂಡು ಎಂಬ ಕ್ರಮದ ವಿಚಾರಣೆಯೂ ಬರಲಿದೆ. ಈ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿಗಳ ಮೇಲೆ ಹೇಳಿದ ಪ್ರತಿಜ್ಞೆ(ಗಳು) ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲಕಾರಿ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದ 5 ಸೇರಿದಂತೆ ದೇಶದ 103 ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣಗಳ ಲೋಕಾರ್ಪಣೆ

ಸುದ್ದಿದಿನಡೆಸ್ಕ್:ದೇಶಾದ್ಯಂತ ರೈಲು ನಿಲ್ದಾಣಗಳ ಅಭಿವೃದ್ಧಿ ತ್ವರಿತವಾಗಿ ಪೂರ್ಣಗೊಳ್ಳುತ್ತಿದೆ. ಸದ್ಯ ಕಾಮಗಾರಿ ಪೂರ್ಣಗೊಂಡ ಕರ್ನಾಟಕದ 5 ರೈಲ್ವೆ ನಿಲ್ದಾಣಗಳು ಸೇರಿದಂತೆ ದೇಶದ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ.
18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿ ಈ ರೈಲ್ವೈ ನಿಲ್ದಾಣಗಳನ್ನು ಒಂದು ಸಾವಿರದ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ರಾಜಸ್ಥಾನದ ಬಿಕೇನರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರು ಅಭಿವೃದ್ಧಿಪಡಿಸಿದ ನೂತನ ರೈಲ್ವೈ ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಅವರು 26ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ನೈರುತ್ವ ರೈಲ್ವೆ ವಿಭಾಗದ ಧಾರವಾಡ, ಗದಗ, ಬಾಗಲಕೋಟೆ, ಗೋಕಾಕ ಮತ್ತು ಮುನಿರಾಬಾದ್ ಸೇರಿದಂತೆ ವಿವಿಧ ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಪುನಾರಾಭಿವೃದ್ಧಿಗೊಳಿಸಲಾಗಿದೆ.
ಸಮಯದ ಉಳಿತಾಯದ ಜೊತೆಗೆ ಪರಿಸರ ಸ್ನೇಹಿ ವಾತಾವರಣದ ಮೂಲಕ ಪ್ರಯಾಣಿಕರಿಗೆ ರೈಲು ನಿಲ್ದಾಣಗಳಲ್ಲಿ ಅತ್ಯಾಧುನಿಕ ಸೌಲಭ್ಯ ಲಭ್ಯವಾಗಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಈ ಅಮೃತ ಭಾರತ ರೈಲ್ವೆ ಯೋಜನೆಯಡಿ ದೇಶವ್ಯಾಪಿ ರೈಲು ನಿಲ್ದಾಣಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಅಮೃತ ಭಾರತ ರೈಲ್ವೆ ಯೋಜನೆಯಡಿ ಬಾಗಲಕೋಟೆ ರೈಲ್ವೆ ನಿಲ್ದಾಣವನ್ನು ಸುಮಾರು 16 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕವಾಗಿ ನವೀಕರಿಸಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ತಂಗುದಾಣ, ಶೌಚಾಲಯ ಹಾಗೂ ನೂತನ ಪ್ಲಾಟ್ ಫಾರ್ಮ್ ಮತ್ತು ಎಸ್ಕಲೇಟರ್ ನಿರ್ಮಾಣ ಸೇರಿದಂತೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಜೊತೆಗೆ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ.
ಬಾಗಲೋಕೋಟೆ ವಿದ್ಯಾರ್ಥಿ ಭೈರೇಗೌಡ ಮಾತನಾಡಿ, ಕೇಂದ್ರ ಸರ್ಕಾರ ರೈಲ್ವೆ ನಿಲ್ದಾಣಗಳನ್ನು ಪುನರಾಭಿವೃದ್ಧಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತಿದೆ, ನವೀಕರಣಗೊಂಡ ನಿಲ್ದಾಣ ಪ್ರಯಾಣಿಕ ಸ್ನೇಹಿಯಾಗಿರುವುದು ಸಂತಸದ ಸಂಗತಿ ಎಂದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎ.ಎ ದಂಡಿಯಾ ಮಾತನಾಡಿ, ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ನಿಲ್ದಾಣವನ್ನು ಕೇಂದ್ರ ಸರ್ಕಾರ ನವೀನ ಮಾದರಿಯಲ್ಲಿ ಅಭಿವೃದ್ಧಿಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.
ಮುಖ್ಯ ರೈಲ್ವೆ ವಾಣಿಜ್ಯ ನಿರೀಕ್ಷಕ ಚಂದ್ರಶೇಖರ್ ಮಾತನಾಡಿ, ಅಮೃತ ಭಾರತ ರೈಲ್ವೆ ಯೋಜನೆಯಡಿ ಹೈಟೆಕ್ ಮಾದರಿಯಲ್ಲಿ ನಿಲ್ದಾಣವನ್ನು ನವೀಕರಿಸಲಾಗಿದೆ, ಆಧುನಿಕ ಸೌಲಭ್ಯಗಳೊಂದಿಗೆ ಸೋಲಾರ್ ವಿದ್ಯುತ್ ಘಟಕಗಳನ್ನು ಸಹ ನಿರ್ಮಿಸಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಸ್ಥಳೀಯ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಸಹ ನಿರ್ಮಿಸಿರುವುದು ವಿಶೇಷವಾಗಿದೆ ಎಂದು ಹೇಳಿದರು.
ಹುಬ್ಬಳಿ-ಧಾರವಾಡ ರೈಲ್ವೆ ನಿಲ್ದಾಣವನ್ನು ಆಧುನಿಕ ಸೌಲಭ್ಯಗಳನ್ನು ಒಳಗೊಂಡಂತೆ ನವೀಕರಿಸಿ, ಸುಮಾರು ೧೭ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮೇಲ್ದರ್ಜೆರಿಸಲಾಗಿದೆ. ನೈರುತ್ಯ ರೈಲ್ವೆ ವಿಭಾಗದ ಐದು ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನಿಕ ಮಾದರಿಯಲ್ಲಿ ಪುನಾರಾಭಿವೃದ್ಧಿಗೊಳಿಸಲಾಗಿದೆ.
ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶ ಸಿಂಗ ಬ್ಯಾಳಿ ಮಾತನಾಡಿ, ಹೈಟೆಕ್ ರೂಪದಲ್ಲಿ ರೈಲ್ವೆ ನಿಲ್ದಾಣವನ್ನು ನವೀಕರಿಸಲಾಗಿರುವುದು ಸಂತಸದ ಸಂಗತಿಯಾಗಿದ್ದು, ಶುದ್ಧ ಕುಡಿಯುವ ನೀರು, ಸುಸಜ್ಜಿತ ತಂಗುದಾಣದೊಂದಿಗೆ, ಎಕ್ಸಲೇಟರ್ ವ್ಯವಸ್ಥೆಯನ್ನು ನಿರ್ಮಿಸಲಾಗಿದ್ದು ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ದಿನದ ಸುದ್ದಿ
ಬಾಕಿ ಕಾಮಗಾರಿ ಬೇಗ ಪೂರ್ಣಗೊಳಿಸಿ ; ಕಿರಿದಾದ ರಸ್ತೆ ವಿಸ್ತರಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ವಿವಿದೆಡೆ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹಲವೆಡೆ ಕಿರಿದಾದ ರಸ್ತೆ ಹಾಗೂ ಅಂಡರ್ ಪಾಸ್, ಸೇವಾ ರಸ್ತೆ ಸ್ಥಾಪಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಸದರಾದ ಡಾ;ಪ್ರಭಾ ಮಲ್ಲಿಕಾರ್ಜುನ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಎಸ್.ಎಸ್.ಹೈಟೆಕ್ ಮುಖ್ಯ ಆಸ್ಪತ್ರೆಯ ಮುಖ್ಯ ದ್ವಾರ ರಾಷ್ಟ್ರೀಯ ಹೆದ್ದಾರಿ-48ರ, ಚೈನೇಜ್ ಅಂಡರ್ ಪಾಸ್ ಬಳಿ ಭಾರಿ ವಾಹನ, ನಗರ ಸಾರಿಗೆ, ಲಾರಿ, ಬಸ್ ವಾಹನಗಳು ಸಂಚರಿಸುತ್ತಿವೆ. ಇಲ್ಲಿನ ಕೆಳ ಸೇತುವೆ ತುಂಬಾ ಕಿರಿದಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಕುರಿತು ಮಾಹಿತಿ ಪಡೆದ ಸಂಸದೆ ಶೀಘ್ರದಲ್ಲಿಯೇ ಇದನ್ನು ಪರಿಶೀಲಿಸಿ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಷ್ಟೇ ಅಲ್ಲದೇ ಕೆಲವು ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ಗಳಲ್ಲಿ ಸೂಕ್ತವಾದ ಬೆಳಕಿನ ವ್ಯವಸ್ಥೆ ಇಲ್ಲಾ. ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು ಸಂಚರಿಸುತ್ತಿರುತ್ತಾರೆ. ಅವರುಗಳಿಗೆ ತೊಂದರೆಯಾಗದಂತೆ ಅಗತ್ಯವಿರವ ಕಡೆ ಕ್ಯಾರೇಜ್-ವೇ ಹೆಚ್ಚಿಸುವುದರ ಜೊತೆಗೆ ಬೆಳಕಿನ ವಿದ್ಯುತ್ದೀಪದ ವ್ಯವಸ್ಥೆ ಮಾಡಬೇಕು. ಇದರಿಂದ ಕಳ್ಳತನ, ಅಪಘಾತ ಸೇರಿದಂತೆ ಇನ್ನಿತರೆ ಅಹಿತಕರ ಘಟನೆಗಳು ಜರುಗುವ ಸಂಭವ ಕಡಿಮೆಯಾಗುತ್ತದೆ ಎಂದ ಅವರು, ಮಳೆಗಾಲ ಆರಂಭವಾಗಿದೆ, ಹಲವೆಡೆ ನೀರು ನಿಲ್ಲುವ ಕುರಿತು ವರದಿ, ಆರೋಪ ಕೇಳಿ ಬರುತ್ತಿವೆ. ಆದ್ದರಿಂದ ಅಂತಹ ಸ್ಥಳಗಳನ್ನು ಗುರುತಿಸಿ ಸರಿಪಡಿಸಬೇಕು ಎಂದರು.
ಹರಿಹರ ತಾಲ್ಲೂಕಿನ ಹರಗನಹಳ್ಳಿ ಹಾಗೂ ಆನಗೋಡು, ಹೆಬ್ಬಾಳು ಬಳಿ ಏಕಾ-ಏಕಿ ತಿರುವು ಪಡೆದುಕೊಳ್ಳುವ ವಾಹನಗಳಿಗೆ ಡಾಬಾ ಹೋಟೆಲ್, ಪೆಟ್ರೋಲ್ ಬಂಕ್, ಇನ್ನಿತರೆ ಅಂಗಡಿ ಮುಂಗಟ್ಟುಗಳು ಅವೈಜ್ಞಾನಿಕ ಮತ್ತು ಅನಧಿಕೃತವಾಗಿ ನಿರ್ಮಿಸಿರುವುದರಿಂದ ಅಪಘಾತ ಹೆಚ್ಚಾಗುತ್ತಿವೆ. ಅಲ್ಲಿನ ಅನಧಿಕೃತ, ಮತ್ತು ನಿಯಮಬಾಹಿರವಾಗಿ ಇರುವವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಟೋಲ್ಗಳಲ್ಲಿ ಎನ್ಪಿಆರ್ ನಂಬರ್ ಪ್ಲೇಟ್ ನೊಂದಣಿ ಮಾಡಿಕೊಳ್ಳುವ ಉತ್ತಮ ಗುಣಮಟ್ಟದ ಸಿಸಿಟಿವಿ ಮತ್ತು ಬೆಳಕಿನ ವಿದ್ಯುದೀಪಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶಿಸಿದರು. ಇದಕ್ಕೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿ 70 ಕಿ.ಮೀ ವ್ಯಾಪ್ತಿಗೆ 2 ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ರೀತಿಯ ಅಪಘಾತಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಸ್ಪಂದಿಸಬೇಕು. ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1033 ಸಂಖ್ಯೆ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ. ಆದ್ದರಿಂದ ಸಹಾಯವಾಣಿ ಸಂಖ್ಯೆಯನ್ನು ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಸಹಾಯವಾಗುವಂತೆ ಕ್ರಮವಹಿಸಬೇಕು. ಕೆಲವು ಸಂದರ್ಭಗಳಲ್ಲಿ ಒಬ್ಬ ವ್ಯಕ್ತಿ ಇದ್ದಾಗ ಅಪಘಾತಗಳು ಸಂಭವಿಸಿದಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತುರ್ತು ಗಮನಹರಿಸಿ ಸರಿಯಾದ ಸಂದರ್ಭದಲ್ಲಿ ಅಂಬುಲೆನ್ಸ್, ರಕ್ಷಣೆ ಮಾಡುವ ಮೂಲಕ ಸ್ಪಂದಿಸಲು ತಿಳಿಸಿದರು.
ಅದೇ ರೀತಿ ಜಿಲ್ಲೆಯಲ್ಲಿ ಹಾದು ಹೋಗಿರುವ ಕುಂದವಾಡ ರಸ್ತೆಯಲ್ಲಿ ಸೇವಾ ರಸ್ತೆ ನಿರ್ಮಿಸಿಲ್ಲ. ಸೂಕ್ತ ಚರಂಡಿ ವ್ಯವಸ್ತೆ ಕಲ್ಪಿಸದ ಕಾರಣ ಮಳೆ ನೀರು ಸಂಪೂರ್ಣ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ಇಂತಹ ಅವೈಜ್ಞಾನಿಕವಾದ ಕಾಮಗಾರಿ ನಿರ್ಮಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು.
ರಸ್ತೆಯ ಇಕ್ಕೆಲಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿದ್ದು, ಸಾರ್ವಜನಿಕರಿಗೆ, ಸವಾರರಿಗೆ ತೊಡಕುಂಟಾಗಿರುವ ಕುರಿತು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ತ್ವರಿತವಾಗಿ ತೆರವು ಮಾಡಿಸಿಸುವ ಮೂಲಕ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ತಿಳಿಸಿದರು.
ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸೂಚನೆ: ನಗರದ ಪಿ.ಬಿ ರಸ್ತೆಯ ದೇವರಾಜ ಅರಸು ವೃತ್ತದ ಬಳಿ ಇರುವ ಬಿಎಸ್ಎನ್ಎಲ್ ಕಚೇರಿಯ ಮುಂಭಾಗ ಸುಮಾರು 15-15 ಹೂವಿನ ಗೂಡಂಗಿಡಿಗಳಿದ್ದು, ಅವರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಾಹನ ಸಂಚಾರಕ್ಕೆ ಅಡ್ಡಿಪಡಿಸದಂತೆ ತಾತ್ಕಾಲಿಕವಾಗಿ ಸೂಕ್ತ ಕ್ರಮವಹಿಸಬೇಕು. ತದನಂತರದ ದಿನಗಳಲ್ಲಿ ಒಂದೆಡೆ ಶಾಶ್ವತ ಸ್ಥಳ ಗುರುತಿಸಿ ಸ್ಥಳಾಂತರಿಸುವ ಕಾರ್ಯ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.
ಈ ವೇಳೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ನರೇಂದ್ರಬಾಬು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ ಸಂತೋಷ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ವಿಭಾಗೀಯ ನಿಯಂತ್ರಣಾಧಿಕಾರಿ ಫಕ್ರುದ್ದೀನ್, ಡಿಹೆಚ್ಓ ಡಾ.ಷಣ್ಮುಖಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂದಿನ 3 ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳ ಈಡೇರಿಕೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹೊಸಪೇಟೆ:ಚುನಾವಣೆ ವೇಳೆ ಜನರಿಗೆ ನೀಡಿದ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1 ಲಕ್ಷದ 11 ಸಾವಿರದ 111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ನೀಡಿದ್ದು, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸರ್ಕಾರ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಒಂದು ಲಕ್ಷದ 111 ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಯಿತು.
ನಂತರ ಸರ್ಕಾರದ ಎಲ್ಲ ಇಲಾಖೆಗಳ ಸಾಧನೆಯ ಕಿರು ಹೊತ್ತಿಗೆಗಳನ್ನು ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುತ್ತಳಿಯನ್ನು ಅನಾವರಣಗೊಳಿಸಿದರು.

-
ದಿನದ ಸುದ್ದಿ6 days ago
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
-
ಅಂಕಣ4 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ3 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ7 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ3 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ