ರಾಜಕೀಯ
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0

2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ ದುರ್ಭಾವನೆಯಿಂದ ಮಾಡುವುದಿಲ್ಲ ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತ ಪ್ರತಿಜ್ಞೆ ಕೈಗೊಂಡಿದ್ದಾರೆ. ಅವರು ಇನ್ನೂ ಎರಡು ಪ್ರತಿಜ್ಞೆಗಳನ್ನು ಮಾಡಿದ್ದಾರೆ. ಅವರ ಕೆಲಸವನ್ನು ವಿಮರ್ಶಿಸುವಾಗ ಇವನ್ನು ಗಮನದಲ್ಲಿಟ್ಟು ಕೊಳ್ಳಬೇಕಂತೆ.
ಏಳು ಸುತ್ತುಗಳ ಸಾರ್ವತ್ರಿಕ ಚುನಾವಣೆಗಳು ಮುಗಿಯುತ್ತಿದ್ದಂತೆ ಬಯಲಿಗೆ ಬಂದಿರುವ ಕೆಲವು ಸಂಗತಿಗಳ ಹಿನ್ನೆಲೆಯಲ್ಲಿ ಈ ಪ್ರತಿಜ್ಞೆಗಳನ್ನು ಪರೀಕ್ಷಿಸಬೇಕು ಎಂಬುದು ಅವರ ಆಶಯವಿರಲಿಕ್ಕಿಲ್ಲ. ಇದು ಬಹುಶಃ ಅಚ್ಚೇ ದಿನ್ ಇತ್ಯಾದಿ ಜುಮ್ಲಾಗಳೇ ಇರದ ಮುಂದಿನ ಐದು ವರ್ಷಗಳಿಗೆ ಮಾತ್ರ ಅನ್ವಯವಾಗುವಂತದ್ದು. ಅದೇನೇ ಇರಲಿ, ಆ ಸಂಗತಿಗಳನ್ನು ನೋಡೋಣ. ಒಬ್ಬ ಟ್ವಿಟರಿಗ ಈ ಪಟ್ಟಿಯನ್ನು ತಯಾರಿಸಿದ್ದಾರೆ :
- ಸಿಬಿಐಬೊಫೊರ್ಸ್ಬಗ್ಗೆಕೋರ್ಟಿನಲ್ಲಿಹಾಕಿರುವಅರ್ಜಿಯನ್ನುಹಿಂತೆಗೆದುಕೊಂಡಿದೆ.
- ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಕೇಸುಗಳಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ಹೇಳಿದೆ.
- ಚುನಾವಣಾ ಆಯೋಗದ ಒಬ್ಬ ಆಯುಕ್ತರು ಬಹಿರಂಗವಾಗಿ ಭಿನ್ನಮತ ವ್ಯಕ್ತಪಡಿಸಿದ್ದಾರೆ.
- ಪೆಟ್ರೋಲ್ ಬೆಲೆಗಳು ಕೊನೆಯ ಸುತ್ತಿನ ನಂತರ ಮತ್ತೆಏರುತ್ತಿವೆ.
- ನಮೋ ಟಿವಿ ಕಾಣೆಯಾಗಿದೆ.
- ಎಲ್ಲಕ್ಕೂ ಮಿಗಿಲಾಗಿ ಭಾರತೀಯ ವಾಯುಪಡೆ ತನ್ನದೇ ಹೆಲಿಕಾಪ್ಟರನ್ನು ಹೊಡೆದು ಉರುಳಿಸಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದೆ.
ಈ ಕೊನೆಯದ್ದು ಈ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದಂತೆ ಕಾಣುತ್ತಿರುವ ಫುಲ್ವಾಮ, ಬಾಲಾಕೋಟ್ ಮತ್ತು ರಾಷ್ಟ್ರೀಯ ಭದ್ರತೆಯ ಮಾತುಗಳ ಸಂದರ್ಭದಲ್ಲಿ ಗಮನಾರ್ಹ(ಸಬ್ರಂಗ್, ಮೇ 22).
ಫೆಬ್ರುವರಿ 27ರಂದು, ಅಂದರೆ ಫುಲ್ವಾಮ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ವಾಯುಪಡೆಯ ವಿಮಾನಗಳು ಬಾಲಾಕೋಟ್ ಮೇಲೆ ಪ್ರಹಾರ ನಡೆಸಿದ ಮರುದಿನ ಕಾಶ್ಮೀರದ ಬುಡ್ಗಾಮ್ನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಒಂದು ಕ್ಷಿಪಣಿ ದಾಳಿಗೆ ಗುರಿಯಾಗಿ. ಅದರಲ್ಲಿದ್ದ ಆರು ಸಿಬ್ಬಂದಿ ಮತ್ತು ಒಬ್ಬ ಭಾರತೀಯ ನಾಗರಿಕ ಮೃತಪಟ್ಟರು. ಆ ವೇಳೆಗೆ ಪಾಕಿಸ್ತಾನೀ ವಾಯುಪಡೆಯ ಎಫ್-೧೬ ವಿಮಾನವನ್ನು ಹೊಡೆದುರುಳಿಸಿದ್ದು ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವಾಪಸಾತಿಯ ಅಬ್ಬರದ ನಡುವೆ ಈ ಸುದ್ದಿ ಮುಚ್ಚಿ ಹೋಯಿತು. ಆದರೆ ಆಗಲೇ ಈ ದುರ್ಘಟವೆ ಫ್ರೆಂಡ್ಲಿ ಪ್ರಹಾರದಿಂದ ಆಗಿರಬಹುದು ಎಂದು ಮಾಜಿ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಹಾಗೂ ಕೆಲವು ಪತ್ರಿಕೆಗಳು ಗುಮಾನಿ ವ್ಯಕ್ತಪಡಿಸಿದ್ದರು. ಅದರೆ ವಾಯುಪಡೆ ಮತ್ತು ಸರಕಾರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.
ಈಗ, ಈ ಬಗ್ಗೆ ತನಿಖೆ ನಡೆದಿದ್ದು, ಈ ದುರ್ಘಟನೆ ನಮ್ಮ ವಾಯುಪಡೆಯ ಲೋಪದಿಂದಲೇ ನಡೆದಿದೆ ಎಂದು ದೃಢ ಪಟ್ಟಿದ್ದರೂ, ಈ ಬಗ್ಗೆ ಚುನಾವಣೆಗಳು ಮುಗಿಯುವ ವರೆಗೆ ನಿಧಾನವಾಗಿ ಮುಂದುವರೆಯಬೇಕು ಎಂದು ‘ಮೇಲಿನಿಂದ’ ಆದೇಶವಿದ್ದುದಾಗಿ ರಕ್ಷಣಾ ವಿಶ್ಲೇಷಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
ಭಾರತೀಯ ವಾಯುಪಡೆ ಈ ವಿಷಯದಲ್ಲಿ ತನ್ನ ಕೆಲವು ಅಧಿಕಾರಿಗಳ ಮೇಲೆ ‘ಕೊಲೆಯೆಂದಾಗದ ದಂಡನೀಯ ನರಹತ್ಯೆ’ಯ ಆರೋಪ ಹಾಕಲಿರುವುದಾಗಿ ಮೇ 21ರಂದು ಅಂದರೆ ಕೊನೆಯ ಸುತ್ತಿನ ಮತದಾನದ ಎರಡು ದಿನಗಳ ನಂತರ ವರದಿ ಮಾಡಿದವು. ಈಗಾಗಲೇ ಇಬ್ಬರು ಹಿರಿಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯಂತೆ. ಚುನಾವಣಾ ಸಮರದಲ್ಲಿ, ಆಚಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂಬ ಚುನಾವಣಾಆಯೋಗದಕ್ಲೀನ್ ಚಿಟ್ಗಳೊಂದಿಗೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಎಫ್-16 ವಿಮಾನ ಹೊಡೆದುರುಳಿಸಿದ ‘ಎದೆಗಾರಿಕೆ’ಯ ಪ್ರಚಾರ ಬಾಚಿಕೊಂಡವರಿಗೆ ಮುಜುಗರವಾಗದಿರಲಿ ಎಂದು ಈ ಸುದ್ದಿ ವಿಳಂಬವಾಗಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಾಗಲೇ, ಅಂದರೆ ಮಾದರಿ ಆಚಾರ ಸಂಹಿತೆ ಜಾರಿಯಲ್ಲಿದ್ದಾಗಲೇ ಪರಿಸರ ರಕ್ಷಣೆಯ ಉದ್ದೇಶದಿಂದ ಪ್ರಕಟಿಸಿದ್ದ ‘ಪರಿಸರ ಪರಿಣಾಮ ನಿರ್ಧಾರಣೆ ಅಧಿಸೂಚನೆ, 2016’ರಲ್ಲಿ ಕೈಯಾಡಿಸಿ ಅದನ್ನು ಉದ್ದಿಮೆದಾರರ ಪರವಾಗಿ ಬದಲಿಸುವ ಕಸರತ್ತು ನಡೆದಿದೆ ಎಂದು ವರದಿಯಾಗಿದೆ(ಸ್ಕ್ರಾಲ್.ಇನ್, ಮೇ 24).
ಅಚ್ಛೇ ದಿನ್ಗಳ ಅವಧಿಯಲ್ಲಿ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ಸತತವಾಗಿ ನಡೆದಿವೆ ಎಂದೂ ಹೇಳಲಾಗುತ್ತಿತ್ತು. ಇದು ಅರಣ್ಯವಾಸಿಗಳ, ಬುಡಕಟ್ಟು ಜನಗಳ ಮತ್ತು ಅಂಚಿನಲ್ಲಿರುವ ರೈತರ ಹಿತಗಳನ್ನು ಬಲಿಗೊಟ್ಟು ಉದ್ದಿಮೆದಾರರ ಲಾಭಗಳನ್ನು ಹೆಚ್ಚಿಸುವ ಪ್ರಯತ್ನಗಳು ಎಂದು ಬೇರೆ ಹೇಳಬೇಕಾಗಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪಟ್ಟಭದ್ರರ ಪರವಾಗಿ ಪ್ರಶ್ನಿಸುತ್ತಿದ್ದಾಗ ಸರಕಾರೀ ವಕೀಲರ ಗೈರುಹಾಜರಿಯಿಂದಾಗಿ ಲಕ್ಷಾಂತರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲಾರಂಭಿಸಿದ್ದು, ಅದಕ್ಕೆ ತೀವ್ರ ಪ್ರತಿಭಟನೆಯ ನಂತರ ಸರಕಾರ ಎಚ್ಚೆತ್ತುಕೊಂಡು ಸುಪ್ರಿಂ ಕೊರ್ಟಿಗೆ ಧಾವಿಸಿದ್ದು ತೀರಾ ಹಳೆಯ ಸುದ್ದಿಯೇನೂ ಅಲ್ಲ.
ಈ ವಿಷಯ ಮತ್ತೆ ವಿಚಾರಣೆಗೆ ಬರಲಿದೆ. ಜತೆಗೆ ರಫೇಲ್ ವ್ಯವಹಾರದ ಕುರಿತ ಮೊಕದ್ದಮೆಯಲ್ಲಿ ಸರಕಾರ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದೆ ಎಂಬುದೂ ವಿಚಾರಣೆಗೆ ಬರಲಿದೆ, ಜತೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳನ್ನು ಪಾರದರ್ಶಕಗೊಳಿಸುವ ಹೆಸರಿನಲ್ಲಿ ತಂದ ಅಪಾರದರ್ಶಕ ಚುನಾವಣಾ ಬಾಂಡು ಎಂಬ ಕ್ರಮದ ವಿಚಾರಣೆಯೂ ಬರಲಿದೆ. ಈ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿಗಳ ಮೇಲೆ ಹೇಳಿದ ಪ್ರತಿಜ್ಞೆ(ಗಳು) ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲಕಾರಿ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ14 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ