Connect with us

ರಾಜಕೀಯ

ಸ್ವಾತಂತ್ರ್ಯದ ಮೇಲೆ ಪ್ರಹಾರಗಳು- ಈ ಆಗಸ್ಟ್ 15 ರಂದುಮೋದಿ-ಷಾ ಜೋಡಿಯ ಕಾಶ್ಮೀರ ಅತ್ಯಾಚಾರದ ಸಂದೇಶ

Published

on

  • ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೋದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ. ಇಂತಹ ಒಂದು ಸನ್ನಿವೇಶದಲ್ಲಿ, ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳ್ಳುವ ದೃಢನಿರ್ಧಾರ ಮಾಡುವ ದಿನವಾಗಿದೆ.

ವರ್ಷ ಸ್ವಾತಂತ್ರ್ಯ ದಿನಾಚರಣೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಚಿಂದಿ ಮಾಡಿರುವ, ಬೃಹತ್ ಪ್ರಮಾಣದಲ್ಲಿ ಕಣಿವೆಯ ಜನಗಳಿಗೆ ಬೀಗ ಜಡಿದಿರುವ ಮಬ್ಬಿನಲ್ಲಿ ನಡೆಯುತ್ತಿದೆ. ಕೆಂಪುಕೋಟೆಯಲ್ಲಿ ಈ ಆಗಸ್ಟ್ 15ರಂದು ನರೇಂದ್ರ ಮೋದಿ ತ್ರಿವರ್ಣ ಧ್ವಜವನ್ನು ಆರೋಹಿಸುವಾಗ, ಅತ್ತ ಲಕ್ಷಾಂತರ ಕಾಶ್ಮೀರಿಗಳು ಸತತವಾಗಿ ಹನ್ನೊಂದನೇ ದಿನ ತಮ್ಮ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಸಂಚರಿಸುವ, ತಮಗೆ ಬೇಕಾದವರನ್ನು ಸಂಪರ್ಕಿಸುವ, ಬದುಕು ನಡೆಸಲು ಕೆಲಸ ಮಾಡುವ, ಶಾಲೆಗೆ ಹೋಗುವ, ಆರೋಗ್ಯಪಾಲನೆ ಮತ್ತು ಔಷಧಿಗಳನ್ನು ಪಡೆಯುವ ಅವರ ಹಕ್ಕನ್ನು ಕಳಚಿ ಹಾಕಲಾಗಿದೆ. ಇವೆಲ್ಲವೂ ಸ್ವತಂತ್ರ ಭಾರತದ ನಾಗರಿಕರಾಗಿ ಇರುವ ಮೂಲಭೂತ ಹಕ್ಕುಗಳು.

ನೂರಾರು ಕಾಶ್ಮೀರಿ ರಾಜಕಾರಣಿಗಳು ಮತ್ತು ಕಾರ್ಯಕರ್ತರುಗಳು ಜೈಲುಗಳಲ್ಲಿದ್ದಾರೆ ಅಥವ ಗುಪ್ತಸ್ಥಳಗಳಲ್ಲಿ ಸ್ಥಾನಬದ್ಧತೆಯಲ್ಲಿದ್ದಾರೆ. ಹಲವರನ್ನು ಹೊರಗೊಯ್ದು ಆಗ್ರಾ, ಬರೇಲಿ, ಲಕ್ನೌ ಮುಂತಾದೆಡೆಗಳಲ್ಲಿ ಜೈಲುಗಳಲ್ಲಿ ಇಡಲಾಗಿದೆ. ಅವರೆಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ, ಅವರ ಕುಟುಂಬದವರು, ಸಂಬಂಧಿಕರು ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವಾಗಿದೆ. ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ.

ಕಾಶ್ಮೀರಿಗಳಿಗೆ ಎಂತಹ ಅವಮಾನ ಮಾಡಲಾಗಿದೆ ಎಂಬುದು ಅವರನ್ನು ರಾಜಕೀಯ ಹಕ್ಕುಗಳನ್ನು ಕಸಿದುಕೊಂಡಿರುವ ರೀತಿಯಲ್ಲಿ ವ್ಯಕ್ತವಾಗುತ್ತದೆ. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶದ ಮಟ್ಟಕ್ಕೆ ಇಳಿಸಿದ ನಂತರ, ಹೊಸ ವಿಧಾನಸಭೆ ಪುದುಚೇರಿಯ ಮಾದರಿಯಲ್ಲಿ ಇರುತ್ತದೆ, ಉಪರಾಜ್ಯಪಾಲರೆಂಬವರು ಹೇಳಿದ್ದೇ ಆಳ್ವಿಕೆಯಾಗುತ್ತದೆ. ಈ ಮೊಟಕುಗೊಳಿಸಿದ ವಿಧಾನ ಸಭೆಯ ಸಂಯೋಜನೆ ಕೂಡ ಬದಲಾಗಲಿದೆ. ಜಮ್ಮ ಮತ್ತು ಕಾಶ್ಮೀರ ಮರುಸಂಘಟನೆಯ ಮಸೂದೆ ಮತಕ್ಷೇತ್ರಗಳ ಮರುವಿಂಗಡಣೆಗೆ ಅವಕಾಶ ಕಲ್ಪಿಸಿದೆ. ಇದನ್ನು ಚುನಾವಣಾ ಆಯೋಗ ಮಾಡುತ್ತದೆ.

ಹಿಂದಿನ ವಿಧಾನಸಭೆಯ ಬಲ ಜಮ್ಮು ಮತ್ತು ಕಾಶ್ಮೀರ ವಿಭಾಗಗಳಿಂದ 83ಆಗಿತ್ತು. ಅದನ್ನು90ಕ್ಕೆ ಏರಿಸಲಾಗುತ್ತದೆ. ಈ ಮರುವಿಂಗಡಣೆಯ ಕಸರತ್ತಿನಲ್ಲಿ ಜಮ್ಮು ಭಾಗದ ಸೀಟುಗಳ ಸಂಖ್ಯೆ ಏರಲಿದೆ. ಹಿಂದಿನ ವಿಧಾನಸಭೆಯಲ್ಲಿ ಅದು37 ಇತ್ತು. ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸೀಟುಗಳನ್ನು ಪತ್ರ್ಯೇಕಿಸಿದಾಗ, ಕಾಶ್ಮೀರ ಕಣಿವೆಗೆ ಉಳಿಯುವ ಸೀಟುಗಳ ಸಂಖ್ಯೆಯಲ್ಲಿ (ಇದುವರೆಗೆ 46) ಕಡಿತವಾಗುತ್ತದೆ. ಈ ಮೂಲಕ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತದ ಆಶ್ವಾಸನೆ ಸಿಗುವಂತಾಗುತ್ತದೆ. ಉಪರಾಜ್ಯಪಾಲರು ಇಬ್ಬರು ಮಹಿಳಾ ಸದಸ್ಯರನ್ನು ನೇಮಿಸಲು ಅವಕಾಶ ಇರುವುದು ಅದನ್ನು ಇನ್ನಷ್ಟು ಖಾತ್ರಿಗೊಳಿಸುತ್ತದೆ.

ಇನ್ನೊಂದು ಕುಟಿಲ ನಡೆಯೆಂದರೆ, ಕಾಶ್ಮೀರ ಕಣಿವೆಯಲ್ಲಿ ಜನಸಂಖ್ಯಾ ಸಂಯೋಜನೆಯಲ್ಲಿ ಒಂದು ಬದಲಾವಣೆ ತರುವುದು. ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಹೆಸರಲ್ಲಿ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಇರುವ ಜನಗಳು ಕಣಿವೆ ಪ್ರದೇಶಕ್ಕೆ ಬಂದು ಭೂಮಿ ಖರೀದಿಸಲು ಮತ್ತು ನೆಲೆಸಲು ಉತ್ತೇಜನೆ ನೀಡಲಾಗುವುದು. ಅದಾಗಲೇ 2016ರಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಯೋಧರನ್ನು ವಸತಿ ಕಾಲೊನಿಗಳಲ್ಲಿ ನೆಲೆಗೊಳಿಸುವ ಒಂದು ಪ್ರಸ್ತಾವ ಇತ್ತು. ಅದಕ್ಕೆ ಭೂಮಿ ನೀಡುವ ಮಾತೂ ಇತ್ತು. ಕಾಶ್ಮೀರದ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವುದು ಅಥವ ಕಾಶ್ಮೀರಿ ಜನಗಳ ಅಸ್ಮಿತೆಯನ್ನು ದುರ್ಬಲಗೊಳಿಸುವುದು ಇದರ ಗುರಿ.

ಬಹಳ ಕಾಲದಿಂದ ಕಾಶ್ಮೀರಿ ಜನಗಳ ನಾಗರಿಕ ಸ್ವಾತಂತ್ರ್ಯಗಳ ದಮನ ಮತ್ತು ಪ್ರಭುತ್ವದ ದಬ್ಬಾಳಿಕೆ ರೂಢಿಯಾಗಿ ಬಿಟ್ಟಿರುವ ದೇಶದ ಇತರ ಭಾಗಗಳ ಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸನ್ನಿವೇಶ ಹದಗೆಡುತ್ತಿರುವ ಸನ್ನಿವೇಶದ ಮತ್ತೊಂದು ಅಧ್ಯಾಯ ಮಾತ್ರ, ಅದನ್ನು ಕೇಂದ್ರ ಸರಕಾರ ದೃಢವಾಗಿ ನಿಭಾಯಿಸುತ್ತಿದೆ ಎಂದು ಕಾಣಬಹುದು.

ಆದರೆ ಹೀಗೆ ಭಾವಿಸುವುದು ಒಂದು ಪ್ರಮಾದವಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ-ಭಿನ್ನ ಅಭಿಪ್ರಾಯ ಇರುವವರನ್ನು, ಪ್ರತಿಪಕ್ಷಗಳಿಲ್ಲಿ ಇರುವವರನ್ನು, ಮತ್ತು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಯಾರನ್ನೂ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೊದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ.

ಸ್ವಾತಂತ್ರ್ಯ ದಿನದಂದು, ಕಳೆದ ಐದು ವರ್ಷಗಳ ಸರ್ವಾಧಿಕಾರಶಾಹಿ ಆಳ್ವಿಕೆ ಸಂವಿಧಾನದ ಅಡಿಯಲ್ಲಿರುವ ಎಲ್ಲ ಸಂಸ್ಥೆಗಳನ್ನು ಶಿಥಿಲಗೊಳಿಸುವ ದಾರಿಯಲ್ಲಿ ಸಾಗಿದೆ ಎಂಬುದನ್ನು ವೀಕ್ಷಿಸುವುದು ಕೂಡ ಉಚಿತವಾಗಿದೆ. ಇದರ ಒಂದು ಸಣ್ಣ ಉದಾಹರಣೆಯೆಂದರೆ, ಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಸ್ವಾತಂತ್ರ್ಯಗಳ ಮತ್ತು ಮೂಲಭೂತ ಹಕ್ಕುಗಳ ವ್ಯಾಪಕ ಪ್ರಮಾಣದ ಉಲ್ಲಂಘನೆಗಳನ್ನು ನಿಲ್ಲಿಸಲು ಮಧ್ಯಪ್ರವೇಶಿಸಲು ನಿರಾಕರಿಸಿರುವುದು.

ಇಂತಹ ಒಂದು ಸನ್ನಿವೇಶದಲ್ಲಿ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಜೀವನಾಧಾರದ ಹಕ್ಕೂ ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳುವ್ಳ ದೃಢನಿರ್ಧಾರ ಮಾಡುವ ದಿನವಾಗಿದೆ.

ಪ್ರಕಾಶ ಕಾರಟ್

  • ಕೃಪೆ : ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತರ ಉದ್ಘಾಟನೆಗಳು

ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

Published

on

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್‍ಗಾರ್ಡ್‍ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್‍ಗಳನ್ನು ಒದಗಿಸಲಾಗುವುದು.

ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending