ರಾಜಕೀಯ
ಸ್ವಾತಂತ್ರ್ಯದ ಮೇಲೆ ಪ್ರಹಾರಗಳು- ಈ ಆಗಸ್ಟ್ 15 ರಂದುಮೋದಿ-ಷಾ ಜೋಡಿಯ ಕಾಶ್ಮೀರ ಅತ್ಯಾಚಾರದ ಸಂದೇಶ

- ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೋದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ. ಇಂತಹ ಒಂದು ಸನ್ನಿವೇಶದಲ್ಲಿ, ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳ್ಳುವ ದೃಢನಿರ್ಧಾರ ಮಾಡುವ ದಿನವಾಗಿದೆ.
ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಚಿಂದಿ ಮಾಡಿರುವ, ಬೃಹತ್ ಪ್ರಮಾಣದಲ್ಲಿ ಕಣಿವೆಯ ಜನಗಳಿಗೆ ಬೀಗ ಜಡಿದಿರುವ ಮಬ್ಬಿನಲ್ಲಿ ನಡೆಯುತ್ತಿದೆ. ಕೆಂಪುಕೋಟೆಯಲ್ಲಿ ಈ ಆಗಸ್ಟ್ 15ರಂದು ನರೇಂದ್ರ ಮೋದಿ ತ್ರಿವರ್ಣ ಧ್ವಜವನ್ನು ಆರೋಹಿಸುವಾಗ, ಅತ್ತ ಲಕ್ಷಾಂತರ ಕಾಶ್ಮೀರಿಗಳು ಸತತವಾಗಿ ಹನ್ನೊಂದನೇ ದಿನ ತಮ್ಮ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಸಂಚರಿಸುವ, ತಮಗೆ ಬೇಕಾದವರನ್ನು ಸಂಪರ್ಕಿಸುವ, ಬದುಕು ನಡೆಸಲು ಕೆಲಸ ಮಾಡುವ, ಶಾಲೆಗೆ ಹೋಗುವ, ಆರೋಗ್ಯಪಾಲನೆ ಮತ್ತು ಔಷಧಿಗಳನ್ನು ಪಡೆಯುವ ಅವರ ಹಕ್ಕನ್ನು ಕಳಚಿ ಹಾಕಲಾಗಿದೆ. ಇವೆಲ್ಲವೂ ಸ್ವತಂತ್ರ ಭಾರತದ ನಾಗರಿಕರಾಗಿ ಇರುವ ಮೂಲಭೂತ ಹಕ್ಕುಗಳು.
ನೂರಾರು ಕಾಶ್ಮೀರಿ ರಾಜಕಾರಣಿಗಳು ಮತ್ತು ಕಾರ್ಯಕರ್ತರುಗಳು ಜೈಲುಗಳಲ್ಲಿದ್ದಾರೆ ಅಥವ ಗುಪ್ತಸ್ಥಳಗಳಲ್ಲಿ ಸ್ಥಾನಬದ್ಧತೆಯಲ್ಲಿದ್ದಾರೆ. ಹಲವರನ್ನು ಹೊರಗೊಯ್ದು ಆಗ್ರಾ, ಬರೇಲಿ, ಲಕ್ನೌ ಮುಂತಾದೆಡೆಗಳಲ್ಲಿ ಜೈಲುಗಳಲ್ಲಿ ಇಡಲಾಗಿದೆ. ಅವರೆಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ, ಅವರ ಕುಟುಂಬದವರು, ಸಂಬಂಧಿಕರು ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವಾಗಿದೆ. ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ.
ಕಾಶ್ಮೀರಿಗಳಿಗೆ ಎಂತಹ ಅವಮಾನ ಮಾಡಲಾಗಿದೆ ಎಂಬುದು ಅವರನ್ನು ರಾಜಕೀಯ ಹಕ್ಕುಗಳನ್ನು ಕಸಿದುಕೊಂಡಿರುವ ರೀತಿಯಲ್ಲಿ ವ್ಯಕ್ತವಾಗುತ್ತದೆ. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶದ ಮಟ್ಟಕ್ಕೆ ಇಳಿಸಿದ ನಂತರ, ಹೊಸ ವಿಧಾನಸಭೆ ಪುದುಚೇರಿಯ ಮಾದರಿಯಲ್ಲಿ ಇರುತ್ತದೆ, ಉಪರಾಜ್ಯಪಾಲರೆಂಬವರು ಹೇಳಿದ್ದೇ ಆಳ್ವಿಕೆಯಾಗುತ್ತದೆ. ಈ ಮೊಟಕುಗೊಳಿಸಿದ ವಿಧಾನ ಸಭೆಯ ಸಂಯೋಜನೆ ಕೂಡ ಬದಲಾಗಲಿದೆ. ಜಮ್ಮ ಮತ್ತು ಕಾಶ್ಮೀರ ಮರುಸಂಘಟನೆಯ ಮಸೂದೆ ಮತಕ್ಷೇತ್ರಗಳ ಮರುವಿಂಗಡಣೆಗೆ ಅವಕಾಶ ಕಲ್ಪಿಸಿದೆ. ಇದನ್ನು ಚುನಾವಣಾ ಆಯೋಗ ಮಾಡುತ್ತದೆ.
ಹಿಂದಿನ ವಿಧಾನಸಭೆಯ ಬಲ ಜಮ್ಮು ಮತ್ತು ಕಾಶ್ಮೀರ ವಿಭಾಗಗಳಿಂದ 83ಆಗಿತ್ತು. ಅದನ್ನು90ಕ್ಕೆ ಏರಿಸಲಾಗುತ್ತದೆ. ಈ ಮರುವಿಂಗಡಣೆಯ ಕಸರತ್ತಿನಲ್ಲಿ ಜಮ್ಮು ಭಾಗದ ಸೀಟುಗಳ ಸಂಖ್ಯೆ ಏರಲಿದೆ. ಹಿಂದಿನ ವಿಧಾನಸಭೆಯಲ್ಲಿ ಅದು37 ಇತ್ತು. ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸೀಟುಗಳನ್ನು ಪತ್ರ್ಯೇಕಿಸಿದಾಗ, ಕಾಶ್ಮೀರ ಕಣಿವೆಗೆ ಉಳಿಯುವ ಸೀಟುಗಳ ಸಂಖ್ಯೆಯಲ್ಲಿ (ಇದುವರೆಗೆ 46) ಕಡಿತವಾಗುತ್ತದೆ. ಈ ಮೂಲಕ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತದ ಆಶ್ವಾಸನೆ ಸಿಗುವಂತಾಗುತ್ತದೆ. ಉಪರಾಜ್ಯಪಾಲರು ಇಬ್ಬರು ಮಹಿಳಾ ಸದಸ್ಯರನ್ನು ನೇಮಿಸಲು ಅವಕಾಶ ಇರುವುದು ಅದನ್ನು ಇನ್ನಷ್ಟು ಖಾತ್ರಿಗೊಳಿಸುತ್ತದೆ.
ಇನ್ನೊಂದು ಕುಟಿಲ ನಡೆಯೆಂದರೆ, ಕಾಶ್ಮೀರ ಕಣಿವೆಯಲ್ಲಿ ಜನಸಂಖ್ಯಾ ಸಂಯೋಜನೆಯಲ್ಲಿ ಒಂದು ಬದಲಾವಣೆ ತರುವುದು. ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಹೆಸರಲ್ಲಿ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಇರುವ ಜನಗಳು ಕಣಿವೆ ಪ್ರದೇಶಕ್ಕೆ ಬಂದು ಭೂಮಿ ಖರೀದಿಸಲು ಮತ್ತು ನೆಲೆಸಲು ಉತ್ತೇಜನೆ ನೀಡಲಾಗುವುದು. ಅದಾಗಲೇ 2016ರಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಯೋಧರನ್ನು ವಸತಿ ಕಾಲೊನಿಗಳಲ್ಲಿ ನೆಲೆಗೊಳಿಸುವ ಒಂದು ಪ್ರಸ್ತಾವ ಇತ್ತು. ಅದಕ್ಕೆ ಭೂಮಿ ನೀಡುವ ಮಾತೂ ಇತ್ತು. ಕಾಶ್ಮೀರದ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವುದು ಅಥವ ಕಾಶ್ಮೀರಿ ಜನಗಳ ಅಸ್ಮಿತೆಯನ್ನು ದುರ್ಬಲಗೊಳಿಸುವುದು ಇದರ ಗುರಿ.
ಬಹಳ ಕಾಲದಿಂದ ಕಾಶ್ಮೀರಿ ಜನಗಳ ನಾಗರಿಕ ಸ್ವಾತಂತ್ರ್ಯಗಳ ದಮನ ಮತ್ತು ಪ್ರಭುತ್ವದ ದಬ್ಬಾಳಿಕೆ ರೂಢಿಯಾಗಿ ಬಿಟ್ಟಿರುವ ದೇಶದ ಇತರ ಭಾಗಗಳ ಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸನ್ನಿವೇಶ ಹದಗೆಡುತ್ತಿರುವ ಸನ್ನಿವೇಶದ ಮತ್ತೊಂದು ಅಧ್ಯಾಯ ಮಾತ್ರ, ಅದನ್ನು ಕೇಂದ್ರ ಸರಕಾರ ದೃಢವಾಗಿ ನಿಭಾಯಿಸುತ್ತಿದೆ ಎಂದು ಕಾಣಬಹುದು.
ಆದರೆ ಹೀಗೆ ಭಾವಿಸುವುದು ಒಂದು ಪ್ರಮಾದವಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ-ಭಿನ್ನ ಅಭಿಪ್ರಾಯ ಇರುವವರನ್ನು, ಪ್ರತಿಪಕ್ಷಗಳಿಲ್ಲಿ ಇರುವವರನ್ನು, ಮತ್ತು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಯಾರನ್ನೂ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೊದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ.
ಸ್ವಾತಂತ್ರ್ಯ ದಿನದಂದು, ಕಳೆದ ಐದು ವರ್ಷಗಳ ಸರ್ವಾಧಿಕಾರಶಾಹಿ ಆಳ್ವಿಕೆ ಸಂವಿಧಾನದ ಅಡಿಯಲ್ಲಿರುವ ಎಲ್ಲ ಸಂಸ್ಥೆಗಳನ್ನು ಶಿಥಿಲಗೊಳಿಸುವ ದಾರಿಯಲ್ಲಿ ಸಾಗಿದೆ ಎಂಬುದನ್ನು ವೀಕ್ಷಿಸುವುದು ಕೂಡ ಉಚಿತವಾಗಿದೆ. ಇದರ ಒಂದು ಸಣ್ಣ ಉದಾಹರಣೆಯೆಂದರೆ, ಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಸ್ವಾತಂತ್ರ್ಯಗಳ ಮತ್ತು ಮೂಲಭೂತ ಹಕ್ಕುಗಳ ವ್ಯಾಪಕ ಪ್ರಮಾಣದ ಉಲ್ಲಂಘನೆಗಳನ್ನು ನಿಲ್ಲಿಸಲು ಮಧ್ಯಪ್ರವೇಶಿಸಲು ನಿರಾಕರಿಸಿರುವುದು.
ಇಂತಹ ಒಂದು ಸನ್ನಿವೇಶದಲ್ಲಿ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಜೀವನಾಧಾರದ ಹಕ್ಕೂ ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳುವ್ಳ ದೃಢನಿರ್ಧಾರ ಮಾಡುವ ದಿನವಾಗಿದೆ.
–ಪ್ರಕಾಶ ಕಾರಟ್
- ಕೃಪೆ : ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ17 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ