ರಾಜಕೀಯ
ಸ್ವಾತಂತ್ರ್ಯದ ಮೇಲೆ ಪ್ರಹಾರಗಳು- ಈ ಆಗಸ್ಟ್ 15 ರಂದುಮೋದಿ-ಷಾ ಜೋಡಿಯ ಕಾಶ್ಮೀರ ಅತ್ಯಾಚಾರದ ಸಂದೇಶ
- ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೋದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ. ಇಂತಹ ಒಂದು ಸನ್ನಿವೇಶದಲ್ಲಿ, ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳ್ಳುವ ದೃಢನಿರ್ಧಾರ ಮಾಡುವ ದಿನವಾಗಿದೆ.
ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಚಿಂದಿ ಮಾಡಿರುವ, ಬೃಹತ್ ಪ್ರಮಾಣದಲ್ಲಿ ಕಣಿವೆಯ ಜನಗಳಿಗೆ ಬೀಗ ಜಡಿದಿರುವ ಮಬ್ಬಿನಲ್ಲಿ ನಡೆಯುತ್ತಿದೆ. ಕೆಂಪುಕೋಟೆಯಲ್ಲಿ ಈ ಆಗಸ್ಟ್ 15ರಂದು ನರೇಂದ್ರ ಮೋದಿ ತ್ರಿವರ್ಣ ಧ್ವಜವನ್ನು ಆರೋಹಿಸುವಾಗ, ಅತ್ತ ಲಕ್ಷಾಂತರ ಕಾಶ್ಮೀರಿಗಳು ಸತತವಾಗಿ ಹನ್ನೊಂದನೇ ದಿನ ತಮ್ಮ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಸಂಚರಿಸುವ, ತಮಗೆ ಬೇಕಾದವರನ್ನು ಸಂಪರ್ಕಿಸುವ, ಬದುಕು ನಡೆಸಲು ಕೆಲಸ ಮಾಡುವ, ಶಾಲೆಗೆ ಹೋಗುವ, ಆರೋಗ್ಯಪಾಲನೆ ಮತ್ತು ಔಷಧಿಗಳನ್ನು ಪಡೆಯುವ ಅವರ ಹಕ್ಕನ್ನು ಕಳಚಿ ಹಾಕಲಾಗಿದೆ. ಇವೆಲ್ಲವೂ ಸ್ವತಂತ್ರ ಭಾರತದ ನಾಗರಿಕರಾಗಿ ಇರುವ ಮೂಲಭೂತ ಹಕ್ಕುಗಳು.
ನೂರಾರು ಕಾಶ್ಮೀರಿ ರಾಜಕಾರಣಿಗಳು ಮತ್ತು ಕಾರ್ಯಕರ್ತರುಗಳು ಜೈಲುಗಳಲ್ಲಿದ್ದಾರೆ ಅಥವ ಗುಪ್ತಸ್ಥಳಗಳಲ್ಲಿ ಸ್ಥಾನಬದ್ಧತೆಯಲ್ಲಿದ್ದಾರೆ. ಹಲವರನ್ನು ಹೊರಗೊಯ್ದು ಆಗ್ರಾ, ಬರೇಲಿ, ಲಕ್ನೌ ಮುಂತಾದೆಡೆಗಳಲ್ಲಿ ಜೈಲುಗಳಲ್ಲಿ ಇಡಲಾಗಿದೆ. ಅವರೆಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ, ಅವರ ಕುಟುಂಬದವರು, ಸಂಬಂಧಿಕರು ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವಾಗಿದೆ. ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ.
ಕಾಶ್ಮೀರಿಗಳಿಗೆ ಎಂತಹ ಅವಮಾನ ಮಾಡಲಾಗಿದೆ ಎಂಬುದು ಅವರನ್ನು ರಾಜಕೀಯ ಹಕ್ಕುಗಳನ್ನು ಕಸಿದುಕೊಂಡಿರುವ ರೀತಿಯಲ್ಲಿ ವ್ಯಕ್ತವಾಗುತ್ತದೆ. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶದ ಮಟ್ಟಕ್ಕೆ ಇಳಿಸಿದ ನಂತರ, ಹೊಸ ವಿಧಾನಸಭೆ ಪುದುಚೇರಿಯ ಮಾದರಿಯಲ್ಲಿ ಇರುತ್ತದೆ, ಉಪರಾಜ್ಯಪಾಲರೆಂಬವರು ಹೇಳಿದ್ದೇ ಆಳ್ವಿಕೆಯಾಗುತ್ತದೆ. ಈ ಮೊಟಕುಗೊಳಿಸಿದ ವಿಧಾನ ಸಭೆಯ ಸಂಯೋಜನೆ ಕೂಡ ಬದಲಾಗಲಿದೆ. ಜಮ್ಮ ಮತ್ತು ಕಾಶ್ಮೀರ ಮರುಸಂಘಟನೆಯ ಮಸೂದೆ ಮತಕ್ಷೇತ್ರಗಳ ಮರುವಿಂಗಡಣೆಗೆ ಅವಕಾಶ ಕಲ್ಪಿಸಿದೆ. ಇದನ್ನು ಚುನಾವಣಾ ಆಯೋಗ ಮಾಡುತ್ತದೆ.
ಹಿಂದಿನ ವಿಧಾನಸಭೆಯ ಬಲ ಜಮ್ಮು ಮತ್ತು ಕಾಶ್ಮೀರ ವಿಭಾಗಗಳಿಂದ 83ಆಗಿತ್ತು. ಅದನ್ನು90ಕ್ಕೆ ಏರಿಸಲಾಗುತ್ತದೆ. ಈ ಮರುವಿಂಗಡಣೆಯ ಕಸರತ್ತಿನಲ್ಲಿ ಜಮ್ಮು ಭಾಗದ ಸೀಟುಗಳ ಸಂಖ್ಯೆ ಏರಲಿದೆ. ಹಿಂದಿನ ವಿಧಾನಸಭೆಯಲ್ಲಿ ಅದು37 ಇತ್ತು. ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸೀಟುಗಳನ್ನು ಪತ್ರ್ಯೇಕಿಸಿದಾಗ, ಕಾಶ್ಮೀರ ಕಣಿವೆಗೆ ಉಳಿಯುವ ಸೀಟುಗಳ ಸಂಖ್ಯೆಯಲ್ಲಿ (ಇದುವರೆಗೆ 46) ಕಡಿತವಾಗುತ್ತದೆ. ಈ ಮೂಲಕ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತದ ಆಶ್ವಾಸನೆ ಸಿಗುವಂತಾಗುತ್ತದೆ. ಉಪರಾಜ್ಯಪಾಲರು ಇಬ್ಬರು ಮಹಿಳಾ ಸದಸ್ಯರನ್ನು ನೇಮಿಸಲು ಅವಕಾಶ ಇರುವುದು ಅದನ್ನು ಇನ್ನಷ್ಟು ಖಾತ್ರಿಗೊಳಿಸುತ್ತದೆ.
ಇನ್ನೊಂದು ಕುಟಿಲ ನಡೆಯೆಂದರೆ, ಕಾಶ್ಮೀರ ಕಣಿವೆಯಲ್ಲಿ ಜನಸಂಖ್ಯಾ ಸಂಯೋಜನೆಯಲ್ಲಿ ಒಂದು ಬದಲಾವಣೆ ತರುವುದು. ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಹೆಸರಲ್ಲಿ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಇರುವ ಜನಗಳು ಕಣಿವೆ ಪ್ರದೇಶಕ್ಕೆ ಬಂದು ಭೂಮಿ ಖರೀದಿಸಲು ಮತ್ತು ನೆಲೆಸಲು ಉತ್ತೇಜನೆ ನೀಡಲಾಗುವುದು. ಅದಾಗಲೇ 2016ರಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಯೋಧರನ್ನು ವಸತಿ ಕಾಲೊನಿಗಳಲ್ಲಿ ನೆಲೆಗೊಳಿಸುವ ಒಂದು ಪ್ರಸ್ತಾವ ಇತ್ತು. ಅದಕ್ಕೆ ಭೂಮಿ ನೀಡುವ ಮಾತೂ ಇತ್ತು. ಕಾಶ್ಮೀರದ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವುದು ಅಥವ ಕಾಶ್ಮೀರಿ ಜನಗಳ ಅಸ್ಮಿತೆಯನ್ನು ದುರ್ಬಲಗೊಳಿಸುವುದು ಇದರ ಗುರಿ.
ಬಹಳ ಕಾಲದಿಂದ ಕಾಶ್ಮೀರಿ ಜನಗಳ ನಾಗರಿಕ ಸ್ವಾತಂತ್ರ್ಯಗಳ ದಮನ ಮತ್ತು ಪ್ರಭುತ್ವದ ದಬ್ಬಾಳಿಕೆ ರೂಢಿಯಾಗಿ ಬಿಟ್ಟಿರುವ ದೇಶದ ಇತರ ಭಾಗಗಳ ಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸನ್ನಿವೇಶ ಹದಗೆಡುತ್ತಿರುವ ಸನ್ನಿವೇಶದ ಮತ್ತೊಂದು ಅಧ್ಯಾಯ ಮಾತ್ರ, ಅದನ್ನು ಕೇಂದ್ರ ಸರಕಾರ ದೃಢವಾಗಿ ನಿಭಾಯಿಸುತ್ತಿದೆ ಎಂದು ಕಾಣಬಹುದು.
ಆದರೆ ಹೀಗೆ ಭಾವಿಸುವುದು ಒಂದು ಪ್ರಮಾದವಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ-ಭಿನ್ನ ಅಭಿಪ್ರಾಯ ಇರುವವರನ್ನು, ಪ್ರತಿಪಕ್ಷಗಳಿಲ್ಲಿ ಇರುವವರನ್ನು, ಮತ್ತು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಯಾರನ್ನೂ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೊದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ.
ಸ್ವಾತಂತ್ರ್ಯ ದಿನದಂದು, ಕಳೆದ ಐದು ವರ್ಷಗಳ ಸರ್ವಾಧಿಕಾರಶಾಹಿ ಆಳ್ವಿಕೆ ಸಂವಿಧಾನದ ಅಡಿಯಲ್ಲಿರುವ ಎಲ್ಲ ಸಂಸ್ಥೆಗಳನ್ನು ಶಿಥಿಲಗೊಳಿಸುವ ದಾರಿಯಲ್ಲಿ ಸಾಗಿದೆ ಎಂಬುದನ್ನು ವೀಕ್ಷಿಸುವುದು ಕೂಡ ಉಚಿತವಾಗಿದೆ. ಇದರ ಒಂದು ಸಣ್ಣ ಉದಾಹರಣೆಯೆಂದರೆ, ಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಸ್ವಾತಂತ್ರ್ಯಗಳ ಮತ್ತು ಮೂಲಭೂತ ಹಕ್ಕುಗಳ ವ್ಯಾಪಕ ಪ್ರಮಾಣದ ಉಲ್ಲಂಘನೆಗಳನ್ನು ನಿಲ್ಲಿಸಲು ಮಧ್ಯಪ್ರವೇಶಿಸಲು ನಿರಾಕರಿಸಿರುವುದು.
ಇಂತಹ ಒಂದು ಸನ್ನಿವೇಶದಲ್ಲಿ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಜೀವನಾಧಾರದ ಹಕ್ಕೂ ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳುವ್ಳ ದೃಢನಿರ್ಧಾರ ಮಾಡುವ ದಿನವಾಗಿದೆ.
–ಪ್ರಕಾಶ ಕಾರಟ್
- ಕೃಪೆ : ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ8 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

