ದಿನದ ಸುದ್ದಿ
ವಿಚಾರವಾದಿಗಳ ಬಂಧನ: ಆರೋಪ ಪಟ್ಟಿಯಲ್ಲಿ ಮೋದಿ ಹತ್ಯೆ ಸಂಚು ಉಲ್ಲೇಖವಿಲ್ಲ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/09/suddi-activists.jpg&description=ವಿಚಾರವಾದಿಗಳ ಬಂಧನ: ಆರೋಪ ಪಟ್ಟಿಯಲ್ಲಿ ಮೋದಿ ಹತ್ಯೆ ಸಂಚು ಉಲ್ಲೇಖವಿಲ್ಲ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/09/suddi-activists.jpg&description=ವಿಚಾರವಾದಿಗಳ ಬಂಧನ: ಆರೋಪ ಪಟ್ಟಿಯಲ್ಲಿ ಮೋದಿ ಹತ್ಯೆ ಸಂಚು ಉಲ್ಲೇಖವಿಲ್ಲ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಸಂಚಿನ ಸಂಬಂಧ ದೇಶಾದ್ಯಂತ ಬಂಧನಕ್ಕೊಳಗಾದ ಐವರು ಎಡ ಪಂಥೀಯ ವಿಚಾರವಾದಿಗಳ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಮೋದಿ ಹತ್ಯೆ ಸಂಚು ಅಂಶದ ಉಲ್ಲೇಖವೇ ಇಲ್ಲ.
ಬಂಧನಕ್ಕೆ ಹದಿನಾರು ಕಾರಣಗಳನ್ನು ಉಲ್ಲೇಖಿಸಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಆರೋಪ ಪಟ್ಟಿ ಸಲ್ಲಿಸಿದ್ದರು. ಆ ಪಟ್ಟಿಯು ಎನ್ ಡಿ ಟಿವಿ ಮೂಲಗಳಿಗೆ ಲಭ್ಯವಾಗಿದ್ದು. ಪೊಲೀಸರ ಕ್ರಮದ ಬಗ್ಗೆ ದೇಶಾದ್ಯಂತ ಇನ್ನಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.
ವರವರ ರಾವ್ ಸೇರಿದಂತೆ ಐವರು ಎಡಪಂಥೀಯರನ್ನು ಮೋದಿ ಹತ್ಯೆ ಸಂಚು ರೂಪಿಸಿರುವುದಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಬಿಜೆಪಿ ಪರ ದಿನ ಪತ್ರಿಕೆ, ಟಿವಿ ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಕಟಗೊಂಡಿತ್ತು. ಆದರೆ, ಇದೀಗ ಎನ್ ಡಿ ಟಿವಿ ವರದಿಯಂತೆ, ಎಡಪಂಥೀಯರನ್ನು ತಮ್ಮ ವಶಕ್ಕೆ ಏಕೆ ನೀಡಬೇಕು ಎಂದು ಪೊಲೀಸರು ಸುಪ್ರೀಂ ಕೋರ್ಟ್ ಗೆ ನೀಡಿದ ಕಾರಣಗಳಲ್ಲಿ ಮೋದಿ ಹತ್ಯೆ ಸಂಚಿನ ಉಲ್ಲೇಖವೇ ಇರಲಿಲ್ಲ ಎಂದು ವರದಿಯಾಗಿದೆ.
ಎಡಪಂಥೀಯರ ಬಂಧನಕ್ಕೆ ಸಂಬಂಧಿಸಿಸಂತೆ ವಿಐಪಿಗಳ ಹತ್ಯೆಗೆ ಸಂಚು, ಮಾವೋವಾದಿಗಳ ಜತೆಗೆ ನಂಟು ಹಾಗೂ ಭೀಮಾ- ಕೋರೆಗಾಂವ್ ಹಿಂಸೆಗೆ ಕುಮ್ಮಕ್ಕು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಮಾಜಿ ಪ್ರಧಾನಿ ರಾಜೀವ್ ಗಾಂಧಿ ರೀತಿ ಹತ್ಯೆ ಮಾಡಲು ಸಂಚು ರೂಪಿಸಲು ಯತ್ನಿಸಿದ್ದೂ ಕಾರಣ ಇವೇ ಮೊದಲಾದ ಆರೋಪಗಳನ್ನು ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳು ಮಾಡಿದ್ದವು. ಆದರೆ ಇದೀಗ ಎನ್ ಡಿ ಟಿವಿ ಪೊಲೀಸರು ನೀಡಿರುವ 16 ಕಾರಣಗಳಲ್ಲಿ ಮೋದಿ ಹತ್ಯೆಯ ಸಂಚಿನ ಬಗ್ಗೆ ಯಾವುದೇ ಉಲ್ಲೇಖ ಇಲ್ಲ ಈ ಬಗ್ಗೆ ನಮ್ಮಲ್ಲಿ ದಾಖಲೆ ಇದೆ ಎಂದು ಹೇಳಿಕೊಂಡಿದೆ.
ಲೋಕಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿ ಮತ್ತು ಬಿಜೆಪಿ ಪರ ಸಂಘಟನೆಗಳು ನಿರಂತರವಾಗಿ ವದಂತಿಗಳನ್ನು ಹಬ್ಬಿಸುತ್ತಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ. ಮೋದಿ ಹತ್ಯೆಯ ಸಂಚು ಎನ್ನುವುದೂ ಇದರ ಒಂದು ಭಾಗವಾಗಿದೆ ಎನ್ನುವುದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಚರ್ಚೆಗೀಡಾಗುತ್ತಲೇ ಇತ್ತು. ಇದೀಗ ಎನ್ ಡಿ ಟಿವಿ ಮಾಡಿರುವ ವರದಿಯು ಹೊಸ ಸಂಚಲನವನ್ನುಂಟು ಮಾಡಿದ್ದು, ಬಿಜೆಪಿಯ ಹೊಸ ಸುಳ್ಳುಗಳ ಸರಮಾಲೆಯಲ್ಲಿ ಮೋದಿ ಹತ್ಯೆಯ ಸಂಚು ಆರೋಪವೂ ಸೇರಿಕೊಂಡಿದೆ.

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ18 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

