Connect with us

ದಿನದ ಸುದ್ದಿ

ಕರ್ನಾಟಕದ 16 ಸಾವಿರ ಕಿಲೋಮೀಟರ್ ರೈಲ್ವೆ ಮಾರ್ಗ ವಿದ್ಯುದೀಕರಣ; ರಾಜ್ಯದ ಅಭಿವೃದ್ಧಿಗೆ ವಿಶೇಷ ಆದ್ಯತೆ : ಪ್ರಧಾನಿ ನರೇಂದ್ರ ಮೋದಿ

Published

on

ಸುದ್ದಿದಿನ ಡೆಸ್ಕ್ : ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು. 425ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಪ್ರಧಾನಿ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಉನ್ನತೀಕರಿಸಿದ ರಾಜ್ಯದ 150ಸರ್ಕಾರಿ ಐಟಿಐ ಸಂಸ್ಥೆಗಳನ್ನು ಲೋಕಾರ್ಪಣೆ ಮಾಡಿದರು.

ಬೆಂಗಳೂರು ನಗರದ ಕೊಮ್ಮಘಟ್ಟದಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಗಳ ಪ್ರದರ್ಶನ ವೀಕ್ಷಿಸಿ, ಬೆಂಗಳೂರಿನ ಸರ್. ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಯಲಹಂಕ-ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಶೇಕಡ 100ರಷ್ಟು ವಿದ್ಯುದೀಕರಣಗೊಂಡ ಕೊಂಕಣ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿ ನಗರವನ್ನು ಸಂಪರ್ಕಿಸುವ ಹೊಸ ರೈಲು ಸೇವೆಗೆ ಹಸಿರು ನಿಶಾನೆ ತೋರಿದರು.

ಬೆಂಗಳೂರು ಉಪನಗರ ರೈಲು ಯೋಜನೆ, ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ, ಬೆಂಗಳೂರಿನ ವರ್ತುಲ ರಸ್ತೆ-2 ಪ್ಯಾಕೇಜ್‌ಗಳು, ನೆಲಮಂಗಲ ತುಮಕೂರು ವಿಭಾಗದ 6-ಲೈನಿಂಗ್, ರಾಷ್ಟ್ರೀಯ ಹೆದ್ದಾರಿ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗಿನ ರಸ್ತೆ ಅಗಲೀಕರಣ, ರಾಷ್ಟ್ರೀಯ ಹೆದ್ದಾರಿ 69ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ವಿಭಾಗದ ಪುನರ್ವಸತಿ ಮತ್ತು ಉನ್ನತೀಕರಣ, ಬೆಂಗಳೂರಿನಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಬೆಂಗಳೂರು ಉಪ ನಗರ ರೈಲು ಯೋಜನೆಯ ಅಂಚೆ ಚೀಟಿ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಪ್ರಧಾನಮಂತ್ರಿ ಅವರು, ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಅಭಿವೃದ್ಧಿಗೆ ಕಳೆದ ೮ ವರ್ಷಗಳಿಂದಲೂ ಕೇಂದ್ರ ಸರ್ಕಾರ ಬೆಂಬಲ, ಸಹಕಾರ ನೀಡುತ್ತಿದೆ. ಉನ್ನತ ಶಿಕ್ಷಣ, ಸಂಶೋಧನೆ, ಸಾರಿಗೆ, ಮೂಲಸೌಲಭ್ಯದ ಈ ಮಹತ್ವದ ಯೋಜನೆಗಳು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಕ್ಷೆಯನ್ನು ಬದಲಾವಣೆ ಮಾಡಲಿದೆ ಎಂದು ಹೇಳಿದರು.
ಬೆಂಗಳೂರು ನಾಗರಿಕರು ಎದುರಿಸುತ್ತಿರುವ ಸಂಚಾರ ದಟ್ಟಣೆಯಿಂದ ಮುಕ್ತಿ ಪಡೆಯಲಿದ್ದಾರೆ. ಈ ಎಲ್ಲ ಯೋಜನೆಗಳು ಬೆಂಗಳೂರು ಜನತೆಯ ಜೀವನ ಮಟ್ಟವನ್ನು ಸುಧಾರಿಸುತ್ತವೆ. ಹಾಗೂ ಉದ್ಯಮಿಗಳು ಹೆಚ್ಚು ಬಂಡವಾಳ ತೊಡಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಬೆಂಗಳೂರು ಶ್ರೇಷ್ಟ ಭಾರತದ ಪ್ರತಿಬಿಂಬವಾಗಿದೆ. ರಾಜ್ಯದ ಜನತೆಯ ಕನಸನ್ನು ನನಸು ಮಾಡಲು ರಾಜ್ಯ ಬಿಜೆಪಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಕಳೆದ ೮ ವರ್ಷಗಳ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ತರಲಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ಎರಡು ವರ್ಷಗಳ ಕಾಲ ೮೦ ಕೋಟಿ ಜನರಿಗೆ ಉಚಿತ ಆಹಾರ ಪೂರೈಕೆ ಮಾಡಿರುವುದು ವಿಶ್ವದ ದೊಡ್ಡ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಐದು ಟ್ರಿಲಿಯನ್ ಆರ್ಥಿಕ ಗುರಿ ಸಾಧಿಸಬೇಕು ಎಂಬ ಪ್ರಧಾನಿಯವರ ಕನಸನ್ನು ನನಸು ಮಾಡಲು ಕರ್ನಾಟಕ ದೊಡ್ಡ ಮಟ್ಟದ ಕೊಡುಗೆ ನೀಡುವ ಸಂಕಲ್ಪ ಮಾಡಿದೆ. ಕಳೆದ 8ವರ್ಷಗಳ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕೊಡುಗೆಗಳನ್ನು ನೀಡಿದೆ ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ 53ಲಕ್ಷ, ಪ್ರಧಾನಮಂತ್ರಿ ಉಜ್ವಲ ಯೋಜನೆಯಿಂದ 34 ಲಕ್ಷ ಹಾಗೂ ಜಲಜೀವನ್ ಮಿಷನ್ ಯೋಜನೆ ಜಾರಿಯಿಂದ ೪೮ ಲಕ್ಷ ಜನರಿಗೆ ಉಪಯೋಗವಾಗಿದೆ. 2024ರ ವೇಳೆಗೆ ರಾಜ್ಯದ ಪ್ರತಿಯೊಂದು ಹಳ್ಳಿಗೂ ಕೊಳಾಯಿ ನೀರು ಪೂರೈಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಹೇಳಿದರು.

ಬಳಿಕ ಪ್ರಧಾನಮಂತ್ರಿ ಅವರು, ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರಿನ ವಾಕ್ ಶ್ರವಣ ಸಂಸ್ಥೆಯ ಉತ್ಕೃಷ್ಟತಾ ಕೇಂದ್ರವನ್ನು ಉದ್ಘಾಟಿಸಿದರು. ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.

ಬಳಿಕ ಮಾತನಾಡಿದ ಪ್ರಧಾನಮಂತ್ರಿ ಅವರು, ಕೇಂದ್ರ ಸರ್ಕಾರ ಆತ್ಮವಿಶ್ವಾಸದಿಂದ ಜನಪರ ಕೆಲಸ ಮಾಡುತಿದ್ದು, ಬಡವರ ಬದುಕಿನಲ್ಲಿ ಸುಧಾರಣೆ ತರುತ್ತಿದೆ. ಹಲವಾರು ಯೋಜನೆಗಳ ಮೂಲಕ ಬದಲಾವಣೆಗೆ ನಾಂದಿ ಹಾಡಿದೆ. ಮಹಿಳೆಯರ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದು, ಕರ್ನಾಟಕದ ರೈತರ ಖಾತೆಗಳಿಗೆ ಕೃಷಿ ಸಮ್ಮಾನ್ ನಿಧಿ ಮೂಲಕ 10 ಸಾವಿರ ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

ರಾಜ್ಯದ 2 ಲಕ್ಷಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ, ಮುದ್ರಾ ಯೋಜನೆಯಡಿ ಕರ್ನಾಟಕಕ್ಕೆ ಹೆಚ್ಚಿನ ನೆರವು ನೀಡಲಾಗಿದೆ. ಕರ್ನಾಟಕದ 4 ಲಕ್ಷ ಜನರಿಗೆ ವಸತಿ ಸೌಲಭ್ಯ ಕಲ್ಪಿಸುತ್ತಿದ್ದು, ಅಮೃತ ಕಾಲದಲ್ಲಿ ಅಭಿವೃದ್ಧಿಯ ಪರ್ವದಲ್ಲಿ ಪ್ರತಿಯೊಬ್ಬರನ್ನು ಪಾಲುದಾರರನ್ನಾಗಿ ಮಾಡಲಾಗುವುದು. ದಿವ್ಯಾಂಗ ಸಮುದಾಯದ ಅಭಿವೃದ್ಧಿ ಪಥದಲ್ಲಿ ಯುವಸಮೂಹ ಕೈಜೋಡಿಸಬೇಕು ಎಂದು ಕರೆ ನೀಡಿದರು.

ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದು, 16 ಸಾವಿರ ಕಿಲೋಮೀಟರ್ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿಗೆ ವೇಗ ನೀಡುತ್ತಿದ್ದು, ಇದರಲ್ಲಿ ಜನರ ಸಹಭಾಗಿತ್ವ ಮತ್ತಷ್ಟು ಹೆಚ್ಚಾಗಬೇಕೆಂದು ಪ್ರಧಾನಿ ಅವರು ಕರೆ ನೀಡಿದರು.

ಬಳಿಕ ಪ್ರಧಾನಮಂತ್ರಿ ಅವರು ಸುತ್ತೂರಿನ ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠದ ದೇಶಿ ಕೇಂದ್ರ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದರು. ನಂತರ ಸಂಸ್ಕೃತ ಪಾಠಶಾಲೆ ಮತ್ತು ವಸತಿ ಕಟ್ಟಡವನ್ನು ಉದ್ಘಾಟಿಸಿದರು. ನಂತರ ನರೇಂದ್ರ ಮೋದಿ ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending