ಲೈಫ್ ಸ್ಟೈಲ್
ಸೋಮವಾರದ ಭವಿಷ್ಯವಾಣಿ | ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ : ಕರೆಮಾಡಿ
ಶ್ರೀ ಮಲೈಮಹದೇಶ್ವರ ಸ್ವಾಮಿಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ:9945410150
ಮೇಷ ರಾಶಿ
ಒತ್ತಡಭರಿತ ಜೀವನಶೈಲಿಯಿಂದ ಮಾನಸಿಕ ಅಸಮತೋಲನ ಉಂಟಾಗಬಹುದು. ಕೆಲಸದಲ್ಲಿ ಪ್ರಾರಂಭಿಕ ಉತ್ಸಾಹವನ್ನು ಅಂತ್ಯದವರೆಗೂ ಸಹ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿಯಿಂದ ಉತ್ತಮ ಆರೈಕೆ ಸಿಗಲಿದೆ. ಮಕ್ಕಳು ನಿಮ್ಮ ಕೆಲಸಕ್ಕೆ ಸಹಕಾರ ನೀಡಲಿದ್ದಾರೆ. ಸಣ್ಣ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳುವ ನಿಮ್ಮ ಸ್ವಭಾವವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಅಂದುಕೊಂಡ ಕಾರ್ಯಗಳು ನಿರೀಕ್ಷಿಸಿದ ಹಾಗೆ ನಡೆಯದೇ ಇರಬಹುದು. ಕೆಲಸದ ವಿಚಾರವಾಗಿ ಹಿಂದೆ ಸರಿಯುವುದು ಬೇಡ. ಆತ್ಮೀಯರು ಸ್ನೇಹಿತರು ನಿಮ್ಮ ಸಂಕಷ್ಟಕ್ಕೆ ಬೆಂಗಾವಲಾಗಿ ನಿಲ್ಲುವರು. ನಿಮ್ಮ ಮಾತುಗಳ ಮೇಲೆ ಆದಷ್ಟು ಎಚ್ಚರಿಕೆ ಇರಲಿ ವಿನಾಕಾರಣ ವಿವಾದಕ್ಕೆ ಈಡಾಗಬಹುದು. ಹಣಕಾಸಿನ ವ್ಯವಹಾರವನ್ನು ವಿವೇಚನೆಯಿಂದ ಮಾಡುವುದು ಒಳಿತು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ತಪ್ಪಾಗದಂತೆ ಕೆಲಸದಲ್ಲಿ ಎಚ್ಚರಿಕೆವಹಿಸಿ. ನಿಮ್ಮ ಆತುರದ ನಿರ್ಧಾರಗಳು ಸಮಸ್ಯೆ ತಂದೊಡ್ಡಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ಮಾಡುವುದು ಬೇಡ. ಮಕ್ಕಳಿಗೆ ಶಿಕ್ಷಣಕ್ಕೆ ಸಂಬಂಧಪಟ್ಟ ಪೂರಕವಾದ ವ್ಯವಸ್ಥೆ ಮಾಡಿಕೊಡುವುದು ಒಳಿತು. ಬೃಹತ್ ಯೋಜನೆಯನ್ನು ಅನಾಯಾಸವಾಗಿ ನಿಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದೀರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಧನಾತ್ಮಕ ಚಿಂತನೆಯ ಫಲವಾಗಿ ಕಾರ್ಯಗಳು ಪ್ರಗತಿಯಾಗಲಿದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುವರು. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆ ಕಾಣಬಹುದು. ಆಕಸ್ಮಿಕವಾದ ಲಾಭ ಯೋಗಗಳ ಲಕ್ಷಣ ಕಂಡುಬರುತ್ತದೆ. ಸಂಗಾತಿಯೊಂದಿಗೆ ಶಾಂತ ರೀತಿಯ ವರ್ತನೆ ತೋರಿಸುವುದು ಒಳಿತು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಪ್ರಚಲಿತ ವಿಷಯದ ಬಗ್ಗೆ ನಿಮ್ಮ ಜ್ಞಾನ ಬೆಳೆಸಿಕೊಳ್ಳುವುದು ಸೂಕ್ತ, ಇದು ನಿಮ್ಮ ವೃತ್ತಿ ರಂಗಕ್ಕೆ ಬಹಳಷ್ಟು ಉಪಯೋಗವಾಗಲಿದೆ. ವ್ಯವಹಾರದ ವಿಷಯವಾಗಿ ಆದಷ್ಟು ಗಮನ ಕೇಂದ್ರೀಕರಿಸಿ. ಭೋಗದ ವಿಲಾಸಿತನಕ್ಕೆ ಮರುಳಾಗಿ ಉದ್ಯೋಗದಲ್ಲಿ ನಷ್ಟವಾಗಬಹುದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಈ ದಿನ ಪತ್ನಿಯ ಜೊತೆಗೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಬಹುದಾದ ಸಾಧ್ಯತೆಗಳುಂಟು. ಹೂಡಿಕೆಗಳ ಬಗ್ಗೆ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ಕಾರ್ಯವೈಕರಿ ಉತ್ತಮವಾಗಿರಲಿದೆ. ರಕ್ಷಣಾ ಯೋಜನೆಯನ್ನು ಬಲಿಷ್ಠವಾಗಿ ರೂಪಿಸುತ್ತೀರಿ. ನಿಮ್ಮ ವ್ಯವಹಾರವನ್ನು ಇನ್ನೂ ಹೆಚ್ಚಿನ ಮಟ್ಟದ ವಿಸ್ತರಣೆ ಮಾಡಲು ಸಾಧ್ಯವಾಗುವುದು. ಸ್ವತಂತ್ರ ಉದ್ಯಮದ ಕನಸಿಗೆ ರೆಕ್ಕೆ ಬರಲಿದೆ. ಸಾಲದ ವ್ಯಾಪಾರಗಳನ್ನು ಆದಷ್ಟು ನಿಷೇಧಿಸಿ. ಜಮೀನು ಖರೀದಿಯಲ್ಲಿ ಉತ್ತಮ ಸಫಲತೆ ಪಡೆಯುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ತೀರ್ಮಾನ ಉತ್ತಮವಾಗಿ ಮೂಡಿ ಬರುತ್ತದೆ. ಈ ದಿನ ಅಂದುಕೊಂಡಿರುವ ಕೆಲಸಗಳಲ್ಲಿ ಗೆಲುವು ನಿಮ್ಮ ಪರವಾಗಿದೆ. ಕುಟುಂಬದಿಂದ ಶುಭ ಸುದ್ದಿಯನ್ನು ಆಲಿಸುವಿರಿ, ಇದು ನಿಮ್ಮಲ್ಲಿ ಸಂತಸ ತರಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗುತ್ತಾ ಸಾಗಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಸಾಲಕೊಡುವ ವಿಚಾರಗಳಿಂದ ಆದಷ್ಟು ನೀವು ದೂರ ಇರುವುದು ಒಳ್ಳೆಯದು. ಮಕ್ಕಳೊಡನೆ ಕಾಲಕಳೆಯಲು ಪ್ರಯತ್ನಿಸಬೇಕಾಗಿದೆ. ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ. ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಕಾಣಬಹುದು. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವರು. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಕಂಡುಬರುತ್ತದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ:9945410150

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ16 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ16 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ



