Connect with us

ದಿನದ ಸುದ್ದಿ

ನಿಮ್ಮ ಭವ್ಯ ಭವಿಷ್ಯದ ಸುಖಕ್ಕಾಗಿ ಇಂದೇ ಕರೆಮಾಡಿ

Published

on

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು. ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಸ್ವಾದಿಷ್ಟಕರ ಭೋಜನ ವ್ಯವಸ್ಥೆ ಈ ದಿನ ನಿಮಗೆ ಸಂತೋಷ ತರಲಿದೆ. ಆರ್ಥಿಕ ವಿಷಯವಾಗಿ ಅಲೆದಾಟ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ಮೇಲಾಧಿಕಾರಿಗಳಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸಮಯದ ಪರಿಧಿಯಲ್ಲಿ ನಿಮಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ನಿಮ್ಮ ಮನಸ್ಸಿನಲ್ಲಿ ಹೊಳೆಯುವ ಆಲೋಚನೆ ದೊಡ್ಡಮಟ್ಟದ ಯೋಜನೆಗೆ ಸಹಕಾರಿಯಾಗಲಿದೆ. ಇಂದು ಹಳೆಯ ಮಿತ್ರರು ಆಕಸ್ಮಿಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಕಲ್ಪನೆ ಸಕಾರ ವಾಗಲಿದೆ. ದುಂದುವೆಚ್ಚ ಮಾಡುವುದನ್ನು ಆದಷ್ಟು ನಿಲ್ಲಿಸಿ. ಉಳಿತಾಯದತ್ತ ಗಮನ ನೀಡಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಪ್ರೀತಿಪಾತ್ರರನ್ನು ಉಡುಗೊರೆ ಮೂಲಕ ಅವರನ್ನು ಇನ್ನು ಹತ್ತಿರ ಆಗುವುದು ಈ ದಿನ ಕಾಣಬಹುದು. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು. ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending