ಕ್ರೀಡೆ
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು
- ದಾವೋಸ್ ನಲ್ಲಿ ಐದು ದಿನಗಳ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಡಾ||ಸಿ.ಎನ್.ಅಶ್ವತ್ಥನಾರಾಯಣ್ ಭಾಗಿಯಾಗಿ ವಿದೇಶಿ ಬಂಡವಾಳ ಹೂಡಿಕೆ ಸೆಳೆಯಲು ಪ್ರಯತ್ನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
- ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಅದೇ ರೀತಿ ಈ ಬಾರಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
- ಕಲಬುರಗಿ ಉಪವಿಭಾಗ ಕಾರ್ಮಿಕ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 600ಅಂಕಗಳಿಗಿಂತ ಹೆಚ್ಚು ಅಂಕ ಪಡೆದು ವಿಶೇಷ ಸಾಧನೆ ಮಾಡಿರುವ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳನ್ನು ಗುರುತಿಸಿ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಇದೇ 27 ಕೊನೆ ದಿನ.
- ಈ ವರ್ಷದಿಂದ ಗೆಜಿಟೆಡ್ಯೇತರ ಹುದ್ದೆಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆಗಳ ಖಾತೆ ಸಚಿವ ಡಾ||ಜಿತೇಂದ್ರ ಸಿಂಗ್ ಹೇಳಿದ್ದಾರೆ. ಒಂದೇ ಪರೀಕ್ಷೆ ನಡೆಯುವುದರಿಂದ ಅಭ್ಯರ್ಥಿಗಳು ಪರೀಕ್ಷೆಗಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಲೆಯುವುದು ತಪ್ಪುತ್ತದೆ. ಇದರಿಂದ ದುರ್ಗಮ ಪ್ರದೇಶಗಳಲ್ಲಿ ವಾಸಿಸುವವರಿಗೆ ಹೆಚ್ಚಿನ ಅನುಕೂಲವಾಗುವುದು ಎಂದು ಸಚಿವರು ತಿಳಿಸಿದ್ದಾರೆ.
- ಸ್ವಿಡಜರ್ಲೆಂಡ್ನ ದಾವೋಸ್ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆ ನಿನ್ನೆ ರಾತ್ರಿ ಆರಂಭವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ನಿಯೋಗದ ನೇತೃತ್ವ ವಹಿಸಿದ್ದಾರೆ. ಇದೇ 26 ರವರೆಗೆ ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಹರ್ದೀಪ್ ಸಿಂಗ್ ಪುರಿ, ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹಿರಿಯ ಸಚಿವರು, ಉದ್ಯಮ ನಾಯಕರು ಭಾಗವಹಿಸಲಿದ್ದಾರೆ.
- ಎರಡು ದಿನಗಳ ಕ್ವಾಡ್ ದೇಶಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಟೋಕಿಯೋ ತಲುಪಿದ್ದಾರೆ. ಭಾರತ, ಜಪಾನ್, ಆಸ್ಟ್ರೇಲಿಯಾ ಮತ್ತು ಅಮೆರಿಕ ಕ್ವಾಡ್ ರಾಷ್ಟ್ರಗಳಾಗಿದ್ದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ವಿನಿಮಯಕ್ಕೆ ಇದು ಉತ್ತಮ ಅವಕಾಶವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಲಂಡನ್ ನ ಲ್ಯಾಂಬೆತ್ ನಲ್ಲಿ ಥೇಮ್ಸ್ ನದಿಯ ತಟದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಉನ್ನತ ಶಿಕ್ಷಣ ಸಚಿವ ಡಾ||ಸಿ.ಎನ್.ಅಶ್ವತ್ಥನಾರಾಯಣ ನಿನ್ನೆ ಗೌರವ ನಮನ ಸಲ್ಲಿಸಿದರು. ಬಸವಣ್ಣನವರ ತತ್ವ, ಚಿಂತನೆಗಳಿಂದ ಪ್ರೇರಣೆ ಪಡೆದು ರಾಜ್ಯ ಮುಂದಿನ 25 ವರ್ಷಗಳಲ್ಲಿ ಶೈಕ್ಷಣಿಕ ಮತ್ತು ಆರ್ಥಿಕ ವಲಯಗಳಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
- ಮಳೆ ಅನಾಹುತ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ.
- ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವೊರಿದ್ಧ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್ಗಳ ಜಯಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 20ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ157 ರನ್ ಗಳಿಸಿದರೆ, ಪಂಜಾಬ್ ಕಿಂಗ್ಸ್ .೧ 15.1ಓವರ್ಗಳಲ್ಲಿ 5 ವಿಕಟ್ ನಷ್ಟಕ್ಕೆ 160ರನ್ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243