ದಿನದ ಸುದ್ದಿ
ದಾವಣಗೆರೆ | ಮರದ ಮೇಲಿನ ಮಂಗಗಳ ಹಿಂಡು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ಸುದ್ದಿದಿನ,ದಾವಣಗೆರೆ: ಸುತ್ತಲೂ ಪ್ರವಾಹವಿದ್ದು, ಮರಗಳ ಮೇಲೆಯೇ ಮಂಗಗಳು ಸಿಲುಕಿವೆ. ಇನ್ನೇನು ಮಾಡುವುದಪ್ಪ ಎಂದು ಮುಷ್ಯಗಳು ಯೋಚಿಸುತ್ತಿರುವಾಗಲೇ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.
ಜಿಲ್ಲೆಯ ಹರಿಹರದ ಬಳಿ ಇರುವ ತುಂಗಾಭದ್ರಾ ನದಿ ತಟದಲ್ಲಿ ಮಂಗಗಳು ಸಿಲುಕಿದ್ದು, ಇವುಗಳನ್ನು ಹೊರ ತರಲು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ನದಿ ನೀರು ಏಕಾಏಕಿ ಬಂದ ಕಾರಣ ಮಂಗಗಳು ಮರದಲ್ಲೇ ಸಿಲುಕಿವೆ. ಬೆಳಗ್ಗೆಯಿಂದಲೇ ಮಂಗಗಳನ್ನು ರಕ್ಷಿಸುವ ಕಾರ್ಯ ನಡೆಸುತ್ತಿದ್ದು, ಜನರು ಜಾಸ್ತಿ ಇರುವ ಕಾರಣ ಭಯಪಟ್ಟು ಮುಷ್ಯಗಳು ಮರದಿಂದ ಕೆಳಗೆ ಬಂದಿಲ್ಲ. ಹೀಗಾಗಿ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಮಂಗಗಳು ಮರಗಳಿಂದ ಕೆಳಗಿಳಿಯದ ಕಾರಣ ಅಗ್ನಿಶಾಮಕ ಸಿಬ್ಬಂದಿ ಮರದಿಂದ ದಡದ ವರೆಗೂ ಹಗ್ಗ ಕಟ್ಟಿದ್ದಾರೆ. ನಂತರ ಮಂಗಗಳನ್ನು ಬೆದರಿಸಿ ದಡಕ್ಕೆ ಓಡಿಸಿದ್ದಾರೆ. ಒಟ್ಟಿನಲ್ಲಿ ಹೆರಸಾಹಸಪಟ್ಟು ಪೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243