Connect with us

ದಿನದ ಸುದ್ದಿ

ಭಾರತದ ಇತಿಹಾಸ, ಸಂಸ್ಕೃತಿಯ ಬಗ್ಗೆ ಇನ್ನಷ್ಟು ಸಂಶೋಧನೆಯಾಗಲಿ‌ : ಪ್ರೊ. ಎಂ ಬಿ ಪುರಾಣಿಕ್

Published

on

ಸುದ್ದಿದಿನ,ಮಂಗಳೂರು: ಒಂದು ದೇಶದ ಇತಿಹಾಸವನ್ನು ತಿಳಿಯಲಾಗಲಿಲ್ಲ ಎಂದರೆ ಇತಿಹಾಸವನ್ನು ಪ್ರಾಮಾಣಿಕವಾಗಿ ದಾಖಲಿಸಲಾಗಿಲ್ಲ ಎಂದರ್ಥ. ಭಾರತದ ನಾಗರಿಕತೆ, ಸಂಸ್ಕೃತಿ, ಚರಿತ್ರೆ ಶ್ರೀಮಂತವಾಗಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆಯ ಅಗತ್ಯವಿದೆ, ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರೊ. ಎಂ ಬಿ ಪುರಾಣಿಕ್ ಅಭಿಪ್ರಾಯಪಟ್ಟಿದ್ದಾರೆ.

‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದ “ಕರಾವಳಿ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ” ಎಂಬ ವಿಚಾರ ಸಂಕಿರಣದ ಸಮಾರೋಪ ಭಾಷಣ ಮಾಡಿದ ಅವರು, ಸಮಾಜದಿಂದ ನಾವು ಏನು ಪಡೆದಿದ್ದೇವೆ ಎಂಬುದಕ್ಕಿಂದ ಏನು ಕೊಟ್ಟಿದ್ದೇವೆ ಎಂಬುದು ಮುಖ್ಯ, ಎಂದರು.

ಮುಖ್ಯ ಅತಿಥಿಯಾಗಿದ್ದ, ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಕಛೇರಿಯ ಉಪ ಪ್ರಧಾನ ವ್ಯವಸ್ಥಾಪಕ ವಿನಯ್ ಗುಪ್ತಾ, ಈ ಮಹೋತ್ಸವವನ್ನು ಶಾಲಾ ಕಾಲೇಜುಗಳು ಮಾತ್ರವಲ್ಲದೆ ಬ್ಯಾಂಕುಗಳು ಹಾಗೂ ಇತರ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತಿದೆ. ಏಕೆಂದರೆ ಸ್ವಾತಂತ್ರ್ಯ ವೀರರ ಬಗ್ಗೆ ತಿಳಿದುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ, ಎಂದರು.

ಕಾರ್ಯಕ್ರಮದ ಸಂಚಾಲಕಿ, ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಸಮಿತಿ ಕಾರ್ಯದರ್ಶಿ ವೆಂಕಟೇಶ್ ನಾಯಕ್ ಧನ್ಯವಾದ ಸಮರ್ಪಿಸಿದರು. ವಿಚಾರ ಸಂಕಿರಣದ ಸಲಹಾ ಸಮಿತಿ, ಸಂಘಟನಾ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

*ಗುಂಪು ಚರ್ಚೆ, ಪ್ರಬಂಧ ಮಂಡನೆ*
ವಿಚಾರ ಸಂಕಿರಣದ ಎರಡನೇ ದಿನ ಸಂಶೋಧಕರು ಪ್ರಬಂಧಗಳನ್ನು ಮಂಡಿಸಿದರು. ‘ಪಠ್ಯಕ್ರಮದಲ್ಲಿ ಸ್ವಾತಂತ್ರ್ಯ ಚಳವಳಿಯ ಪ್ರತಿಬಿಂಬಗಳು’ ಎಂಬ ವಿಷಯದ ಮೇಲೆ ನಡೆದ ಗುಂಪು ಚರ್ಚೆಯನ್ನು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಿಕೆ ಡಾ. ಮೀನಾಕ್ಷಿ ರಾಮಚಂದ್ರ ಹಾಗೂ ಮೂಡಬಿದಿರೆಯ ಜೈನ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಪ್ರಭಾತ್ ಬಲ್ನಾಡ್ ಮುನ್ನಡೆಸಿದರು. ಭಾರತ್ ಫೌಂಡೇಶನ್ನ ಟ್ರಸ್ಟಿ ಹಾಗೂ ಲಿಟ್ ಫೆಸ್ಟ್ನ ಸಂಯೋಜಕ ಸುನೀಲ್ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.

*ವರ್ಣರಂಜಿತ ಉದ್ಘಾಟನೆ (For only those who could not cover Inaugural function)*
ರಾಣಿ ಅಬ್ಬಕ್ಕನ ಸಾಹಸ ಸಾರುವ ನೃತ್ಯ ರೂಪಕದಲ್ಲಿ ಆರಂಭಗೊಂಡ ಉದ್ಘಾಟನಾ ಕಾರ್ಯಕ್ರಮ ಗಮನ ಸೆಳೆಯಿತು. ಉದ್ಘಾಟಿನೆ ನೆರವೇರಿಸಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್, ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರು ನೀಡಿರುವ ಕೊಡುಗೆ ಎಲ್ಲರಿಗೂ ತಿಳಿಯಬೇಕು, ಎಂದರು.

ಪ್ರಧಾನ ಭಾಷಣಕಾರ ಮೈಸೂರಿನ ಮಹಾರಾಜ ಸರ್ಕಾರಿ ಪಿಯು ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಶಿವಾನಂದ ಸಿಂಧನಕೇರ, ಭಾರತ ಸಾಕಷ್ಟು ಆಕ್ರಮಣಗಳನ್ನು ಎದುರಿಸಿಯೂ ಯಾರ ಮೇಲೂ ಆಕ್ರಮಣ ಮಾಡದೆ ಶಾಂತಿ, ಜ್ಞಾನದಿಂದಲೇ ಜಗತ್ತನ್ನು ಗೆದ್ದ ದೇಶ. ಗಣಿತಶಾಸ್ತ್ರ ಸೇರಿದಂತೆ ವಿಜ್ಞಾನಕ್ಕೆ ಭಾರತದ ಕೊಡುಗೆ ಅಮೂಲ್ಯ, ಎಂದು ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಇತಿಹಾಸ ಓದದವನು ಇತಿಹಾಸ ನಿರ್ಮಿಸಲಾರ. ನಾವು ನಮ್ಮ ಇತಿಹಾಸದ ಬಗ್ಗೆ ಎಚ್ಚೆತ್ತುಕೊಂಡು ಅದನ್ನು ಉಳಿಸಲು, ತಿಳಿಸಲು ‘ಆಜಾದಿ ಕಾ ಅಮೃತ ಮಹೋತ್ಸವ’ ಒಂದು ಉತ್ತಮ ಅವಕಾಶ, ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ಲೋಕೇಶ್ ಕೆ.ಎಂ ಮೊದಲಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending