Connect with us

ದಿನದ ಸುದ್ದಿ

ಭಾರತದ ಇತಿಹಾಸ, ಸಂಸ್ಕೃತಿಯ ಬಗ್ಗೆ ಇನ್ನಷ್ಟು ಸಂಶೋಧನೆಯಾಗಲಿ‌ : ಪ್ರೊ. ಎಂ ಬಿ ಪುರಾಣಿಕ್

Published

on

ಸುದ್ದಿದಿನ,ಮಂಗಳೂರು: ಒಂದು ದೇಶದ ಇತಿಹಾಸವನ್ನು ತಿಳಿಯಲಾಗಲಿಲ್ಲ ಎಂದರೆ ಇತಿಹಾಸವನ್ನು ಪ್ರಾಮಾಣಿಕವಾಗಿ ದಾಖಲಿಸಲಾಗಿಲ್ಲ ಎಂದರ್ಥ. ಭಾರತದ ನಾಗರಿಕತೆ, ಸಂಸ್ಕೃತಿ, ಚರಿತ್ರೆ ಶ್ರೀಮಂತವಾಗಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆಯ ಅಗತ್ಯವಿದೆ, ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರೊ. ಎಂ ಬಿ ಪುರಾಣಿಕ್ ಅಭಿಪ್ರಾಯಪಟ್ಟಿದ್ದಾರೆ.

‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದ “ಕರಾವಳಿ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ” ಎಂಬ ವಿಚಾರ ಸಂಕಿರಣದ ಸಮಾರೋಪ ಭಾಷಣ ಮಾಡಿದ ಅವರು, ಸಮಾಜದಿಂದ ನಾವು ಏನು ಪಡೆದಿದ್ದೇವೆ ಎಂಬುದಕ್ಕಿಂದ ಏನು ಕೊಟ್ಟಿದ್ದೇವೆ ಎಂಬುದು ಮುಖ್ಯ, ಎಂದರು.

ಮುಖ್ಯ ಅತಿಥಿಯಾಗಿದ್ದ, ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಕಛೇರಿಯ ಉಪ ಪ್ರಧಾನ ವ್ಯವಸ್ಥಾಪಕ ವಿನಯ್ ಗುಪ್ತಾ, ಈ ಮಹೋತ್ಸವವನ್ನು ಶಾಲಾ ಕಾಲೇಜುಗಳು ಮಾತ್ರವಲ್ಲದೆ ಬ್ಯಾಂಕುಗಳು ಹಾಗೂ ಇತರ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತಿದೆ. ಏಕೆಂದರೆ ಸ್ವಾತಂತ್ರ್ಯ ವೀರರ ಬಗ್ಗೆ ತಿಳಿದುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ, ಎಂದರು.

ಕಾರ್ಯಕ್ರಮದ ಸಂಚಾಲಕಿ, ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಸಮಿತಿ ಕಾರ್ಯದರ್ಶಿ ವೆಂಕಟೇಶ್ ನಾಯಕ್ ಧನ್ಯವಾದ ಸಮರ್ಪಿಸಿದರು. ವಿಚಾರ ಸಂಕಿರಣದ ಸಲಹಾ ಸಮಿತಿ, ಸಂಘಟನಾ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

*ಗುಂಪು ಚರ್ಚೆ, ಪ್ರಬಂಧ ಮಂಡನೆ*
ವಿಚಾರ ಸಂಕಿರಣದ ಎರಡನೇ ದಿನ ಸಂಶೋಧಕರು ಪ್ರಬಂಧಗಳನ್ನು ಮಂಡಿಸಿದರು. ‘ಪಠ್ಯಕ್ರಮದಲ್ಲಿ ಸ್ವಾತಂತ್ರ್ಯ ಚಳವಳಿಯ ಪ್ರತಿಬಿಂಬಗಳು’ ಎಂಬ ವಿಷಯದ ಮೇಲೆ ನಡೆದ ಗುಂಪು ಚರ್ಚೆಯನ್ನು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಿಕೆ ಡಾ. ಮೀನಾಕ್ಷಿ ರಾಮಚಂದ್ರ ಹಾಗೂ ಮೂಡಬಿದಿರೆಯ ಜೈನ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಪ್ರಭಾತ್ ಬಲ್ನಾಡ್ ಮುನ್ನಡೆಸಿದರು. ಭಾರತ್ ಫೌಂಡೇಶನ್ನ ಟ್ರಸ್ಟಿ ಹಾಗೂ ಲಿಟ್ ಫೆಸ್ಟ್ನ ಸಂಯೋಜಕ ಸುನೀಲ್ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.

*ವರ್ಣರಂಜಿತ ಉದ್ಘಾಟನೆ (For only those who could not cover Inaugural function)*
ರಾಣಿ ಅಬ್ಬಕ್ಕನ ಸಾಹಸ ಸಾರುವ ನೃತ್ಯ ರೂಪಕದಲ್ಲಿ ಆರಂಭಗೊಂಡ ಉದ್ಘಾಟನಾ ಕಾರ್ಯಕ್ರಮ ಗಮನ ಸೆಳೆಯಿತು. ಉದ್ಘಾಟಿನೆ ನೆರವೇರಿಸಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್, ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರು ನೀಡಿರುವ ಕೊಡುಗೆ ಎಲ್ಲರಿಗೂ ತಿಳಿಯಬೇಕು, ಎಂದರು.

ಪ್ರಧಾನ ಭಾಷಣಕಾರ ಮೈಸೂರಿನ ಮಹಾರಾಜ ಸರ್ಕಾರಿ ಪಿಯು ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಶಿವಾನಂದ ಸಿಂಧನಕೇರ, ಭಾರತ ಸಾಕಷ್ಟು ಆಕ್ರಮಣಗಳನ್ನು ಎದುರಿಸಿಯೂ ಯಾರ ಮೇಲೂ ಆಕ್ರಮಣ ಮಾಡದೆ ಶಾಂತಿ, ಜ್ಞಾನದಿಂದಲೇ ಜಗತ್ತನ್ನು ಗೆದ್ದ ದೇಶ. ಗಣಿತಶಾಸ್ತ್ರ ಸೇರಿದಂತೆ ವಿಜ್ಞಾನಕ್ಕೆ ಭಾರತದ ಕೊಡುಗೆ ಅಮೂಲ್ಯ, ಎಂದು ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಇತಿಹಾಸ ಓದದವನು ಇತಿಹಾಸ ನಿರ್ಮಿಸಲಾರ. ನಾವು ನಮ್ಮ ಇತಿಹಾಸದ ಬಗ್ಗೆ ಎಚ್ಚೆತ್ತುಕೊಂಡು ಅದನ್ನು ಉಳಿಸಲು, ತಿಳಿಸಲು ‘ಆಜಾದಿ ಕಾ ಅಮೃತ ಮಹೋತ್ಸವ’ ಒಂದು ಉತ್ತಮ ಅವಕಾಶ, ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ಲೋಕೇಶ್ ಕೆ.ಎಂ ಮೊದಲಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending