Connect with us

ನೆಲದನಿ

ನೆಲದ ನಾದಧ್ವನಿ ಮೋರ್‍ಝಿಂಗ್ ಕಲಾವಿದ ಶಂಕ್ರಪ್ಪ ಬಾದಿಗಿ

Published

on

ನ್ನಡ ನಾಡು ಹಲವು ಸಂಸ್ಕøತಿ, ಕಲೆಗಳ ತವರೂರು. ಇಲ್ಲಿ ಅನಾದಿಕಾಲದಿಂದಲೂ ಹಲವಾರು ವಿಧವಾದ ಸಾಂಸ್ಕøತಿಕ ವೈಶಿಷ್ಟ್ಯತೆಯನ್ನು ಕಾಪಾಡಿಕೊಂಡು ಬರಲಾಗಿದೆ. ಇಲ್ಲಿನ ಕಲೆಯು ಈ ನಾಡಿನ ಹಿರಿಮೆಯನ್ನು ಜಗತ್ತಿನೆದುರು ಮೆರೆದಿರುವುದು ಕಂಡುಬರುತ್ತದೆ. ಕನ್ನಡ ನಾಡಿನಲ್ಲಿ ಜಾಗತೀಕರಣದಂಥ ಸಂದರ್ಭದಲ್ಲಿಯೂ ಕಲೆಗಳು ಜೀವಂತವಾಗಿರುವುದಕ್ಕೆ ಪ್ರಮುಖ ಕಾರಣವೆಂದರೆ, ಕಲೆಯೊಂದಿಗೆ ಭಾವನಾತ್ಮಕ ಭಾಂದವ್ಯವನ್ನು ರೂಪಿಸಿಕೊಂಡಿರುವ ಕಲಾವಿದನ ಶ್ರಮವಾಗಿದೆ. ಕಲೆಯನ್ನು ಕೇವಲ ಒಂದು ವ್ಯವಹಾರಿಕ ದೃಷ್ಟಿಯಿಂದ ನೋಡದೆ ಅದನ್ನು ತನ್ನ ಅಂತರಾಳದ ಕುಡಿಯಂಬಂತೆ ಪೋಷಿಸಿಕೊಂಡು ಬಂದಿರುವವನು ಕಲಾವಿದನಾಗಿದ್ದಾನೆ. ತಮ್ಮ ಬದುಕಿನ ಒಂದು ಭಾಗವಾಗಿ ಕಲೆಯನ್ನು ಮೈಗೊಡಿಸಿಕೊಂಡು ಬಂದಿರುವ ಕಲಾವಿದನು ಒಂದು ಕಲೆಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಹಂಬಲ ಹೊಂದಿರುತ್ತಾನೆ. ಕಲೆಯನ್ನೆ ಉಸಿರೆಂದುಕೊಂಡು, ಈ ಕಲೆಯ ಸಿಹಿಯನ್ನು ನಾಡಿನ ಜನತೆಗೆ ಉಣಬಡಿಸಿ ತಾವು ಮಾತ್ರ ಹಸಿದ ಹೊಟ್ಟೆಯಲ್ಲಿ ತೃಪ್ತಿಪಡುವಂತಹ ಎಷ್ಟೋ ಕಲಾವಿದರು ನಮ್ಮ ನಾಡಿನಲ್ಲಿ ಕಂಡುಬರುತ್ತಾರೆ. ಹೀಗೆ ಕಲೆಯ ಉಳಿವಿಗಾಗಿ ತನ್ನ ಬದುಕನ್ನೆ ಸಮರ್ಪಿಸಿಕೊಂಡಿರುವವರಲ್ಲಿ ಮೋರ್‍ಝಿಂಗ್ ನುಡಿಸುವ ಗಾರುಡಿಗ ಶಂಕ್ರಪ್ಪ ಬಾದಿಗಿಯವರು ಒಬ್ಬರಾಗಿದ್ದಾರೆ.

ಶಂಕ್ರಪ್ಪ ಬಾದಿಗಿಯವರು ಮೂಲತ `ಸುಡುಗಾಡು ಸಿದ್ಧ’ ಎಂಬ ಅಲೆಮಾರಿ ಜನಾಂಗದವರಾಗಿದ್ದು, ಬಳ್ಳಾರಿ ಜಿಲ್ಲೆ ಹೊಸಪೇಟೆಯ ಜಂಬುನಾಥನಹಳ್ಳಿ ಆಶ್ರಯ ಕಾಲೋನಿಯ ಟೆಂಟ್‍ಹೌಸ್‍ನಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. 63 ವರ್ಷದ ಶಂಕ್ರಪ್ಪ ಬಾದಿಗಿಯವರು ಮೂರು ಜನ ಗಂಡು ಮಕ್ಕಳನ್ನು ಹೊಂದಿದ್ದು, ತಮ್ಮ ಮಕ್ಕಳಿಗೆ ಸೂಕ್ತವಾದ ಶಿಕ್ಷಣವನ್ನು ದೊರಕಿಸಿ ಕೊಡಲು ಸಾಧ್ಯವಾಗದ ಕಾರಣ ಅವರನ್ನು ಕೂಲಿ, ವ್ಯಾಪಾರದಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಶಂಕ್ರಪ್ಪ ಬಾದಿಗಿಯವರು ತಮ್ಮ ತಂದೆಯಾದ ದುರುಗಪ್ಪ ಬಾದಿಗಿಯವರಿಂದ ಬಳುವಳಿಯಾಗಿ ಬಂದ ಮೋರ್‍ಝಿಂಗ್ ವಾದ್ಯ ನುಡಿಸುವ ಕಲೆಯನ್ನು ತಮ್ಮ ಸತತವಾದ ಪ್ರಯತ್ನದಿಂದ ಕರಗತಮಾಡಿಕೊಂಡು, ಮುವತ್ತು ವರ್ಷಗಳಿಂದಲೂ ಈ ಕಲೆಯ ಉಳಿವಿಗಾಗಿ ಅವಿರತ ಪರಿಶ್ರಮವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಶಂಕ್ರಪ್ಪ ಬಾದಿಗಿಯವರ ತಂದೆಯಾದ ದುರುಗಪ್ಪ ಬಾದಿಗಿಯವರು ಮೈಸೂರು ಮಹಾರಾಜರ ಆಸ್ಥಾನದಲ್ಲಿ ಮೋರ್‍ಝಿಂಗ್ ವಾದ್ಯವನ್ನು ನುಡಿಸುತ್ತಿದ್ದು, ಮಹಾರಾಜರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಈ ವಿಶೇಷ ಕಲೆಯನ್ನು ತಮ್ಮ ಮಗನಿಗೆ ಕರಗತಗೊಳಿಸಿ ಈ ಕಲೆಯನ್ನು ಮುಂದಿನ ಪೀಳಿಗೆಗೂ ಕಾಪಾಡಿಕೊಂಡು ಹೋಗುವಂತೆ ತರಬೇತಿ ನೀಡಿದ್ದಾರೆ. ತಂದೆಯಿಂದ ಭಕ್ತಿ-ಭಾವದಿಂದ ಕರಗತ ಮಾಡಿಕೊಂಡಿರುವ ಈ ಸಂಗೀತ ಕಲೆಯನ್ನು ಉಳಿಸುವ ಹಂಬಲ ಹೊತ್ತ ಶಂಕ್ರಪ್ಪ ಬಾದಿಗಿಯವರು ತಮ್ಮ ಬಡತನದ ಬದುಕನ್ನು ಲೆಕ್ಕಿಸದೆ ಒಂದು ತಂಡವನ್ನು ರಚಿಸಿಕೊಂಡು, ಅವರಿಗೆ ಈ ಕಲೆಯ ತರಬೇತಿ ನೀಡುವ ಮೂಲಕ ತಮ್ಮದೆ ಆದ ಸಾಂಸ್ಕøತಿಕ ವೇಶ ಭೂಷಣ ತಯಾರಿಸಿಕೊಂಡು ಹಲವಾರು ಸಭೆ-ಸಮಾರಂಭಗಳಲ್ಲಿ ಈ ಕಲೆಯ ಪ್ರದರ್ಶನ ನೀಡುತ್ತ ಬಂದಿದ್ದು, ಜನರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಕೆಲವು ನಿಮಿಷಗಳ ಕಾಲ ತಮ್ಮ ಉಸಿರನ್ನು ಬಿಗಿ ಹಿಡಿದು ಈ ವಾದ್ಯವನ್ನು ನುಡಿಸುವ ಪರಿಗೆ ಕೇಳುಗರು ಆಶ್ಚರ್ಯ ಚಕಿತರಾಗುವುದರ ಜೊತೆಗೆ, ಇದರಿಂದ ಹೊರ ಹೊಮ್ಮುವ ನಾದದ ಸ್ವರಕ್ಕೆ ರೋಮಾಂಚನಗೊಳ್ಳುತ್ತಾರೆ ಪುರಂದರದಾಸರ ಕೀರ್ತನೆಗಳು, ತತ್ವಪದಗಳು ಹಾಗೂ ದೇವರ ಶ್ಲೋಕಗಳನ್ನು ಹಾಡುವ ಮೂಲಕ ಈ ವಾದ್ಯವನ್ನು ನುಡಿಸುವ ಕ್ರಮವು ಎಂಥವರನ್ನು ಕ್ಷಣಕಾಲದವರೆಗೆ ಮಂತ್ರಮುಗ್ದರನ್ನಾಗಿಸುತ್ತದೆ.

ತಮ್ಮ ಜೀವದ ಹಂಗನ್ನು ತೊರೆದು ಉಸಿರು ಬಿಗಿ ಹಿಡಿದು ವಾದ್ಯ ನುಡಿಸುವ ಈ ಕ್ರಮವು ಅವರು ಈ ಕಲೆಯಲ್ಲಿ ಹೊಂದಿರುವ ನೈಪುಣ್ಯತೆಯ ಜೊತೆಗೆ, ಕಲೆಯೊಂದಿಗಿನ ಇವರ ಭಾಂವ್ಯವನ್ನು ಸೂಚಿಸುತ್ತದೆ. ಸಂಗೀತಾ ಪರಿಕರಗಳಲ್ಲಿ ಒಂದು ವಿಶಿಷ್ಟ ಪ್ರಕಾರವಾಗಿರುವುದು ಮೋರ್‍ಝಿಂಗ್. ಭಾರತದಲ್ಲಿ ಇದರ ಮೂಲವು ದಕ್ಷಿಣ ಭಾರತ, ರಾಜಸ್ಥಾನ, ಪಾಕಿಸ್ಥಾನದ ಸಿಂಧ್‍ಪ್ರಾಂತ್ಯ ಹಾಗೂ ನೇಪಾಳದಲ್ಲಿ ಇರುವುದಾಗಿ ತಿಳಿದು ಬರುತ್ತದೆ. ಈ ಸಾಧನವನ್ನು ಇಂಗ್ಲಿಷ್ ಭಾಷೆಯಲ್ಲಿ `ಜಾಹಾರ್ಪ್’ ಎಂದು, ರಾಜಸ್ಥಾನ ಭಾಷೆಯಲ್ಲಿ `ಮೋರ್‍ಝಿಂಗ್’ ಎಂದು ಕರ್ನಾಟಕದಲ್ಲಿ `ಬಾಯಿಬಿಲ್ಲು ನೀದಸ್ವರ’ ಎಂಬುದಾಗಿಯೂ ಕರೆಯಲಾಗುತ್ತದೆ. ಇದು ತ್ರಿಶೂಲಾಕಾರದ ಚಮಟಿಗೆಯಂತೆ ಇದ್ದು, ಉಕ್ಕಿನ ಲೋಹದಿಂದ ತಯಾರಿಸಲಾಗಿದೆ. ಇದರ ಗಾತ್ರವು 10 ರಿಂದ 20 ಸೆಂ.ಮೀ ಇರುತ್ತದೆ. ಅಂಗೈ ಮುಷ್ಟಿಯಲ್ಲಿ ಹಿಡಿಯಬಹುದಾದ ಈ ಸಾಧನದಿಂದ ಒಬ್ಬನೇ ಕಲಾವಿದನು ಲಯಬದ್ಧವಾದ ಸಪ್ತಸ್ವರಗಳನ್ನು ನುಡಿಸುತ್ತಾನೆ. ಈ ಸಾಧನವು ಉಕ್ಕಿನಿಂದ ತಯಾರಿಸಲ್ಪಟ್ಟ ಕಾರಣ ಇದನ್ನು ಪ್ರತಿದಿನ ಸ್ವಚ್ಚಗೊಳಿಸಬೇಕಾಗುತ್ತದೆ. ಇಲ್ಲದೆ ಹೋದರೆ ಇದು ತುಕ್ಕು ಹಿಡಿದು ಸ್ವರ ಹೊರ ಹೊಮ್ಮುವುದಿಲ್ಲ. ತಮಿಳುನಾಡಿನ ಚೆನೈನಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಬ್ರಿಟಿಷರು ಸಂಗ್ರಹಿಸುವ ಸಂಗೀತದ ಎಲ್ಲ ಪರಿಕರಗಳಲ್ಲಿ ಎರಡು ಮೋರ್‍ಝಿಂಗ್ ಸಾಧನೆಗಳು ಇವೆ. ಈ ವಸ್ತು ಸಂಗ್ರಹಾಲಯದಲ್ಲಿರುವ ಸಾಧನಗಳನ್ನು ಉಪಯೋಗಿಸದ ಕಾರಣ ತುಕ್ಕು ಹಿಡಿದು ಮೂಲೆಯಲ್ಲಿ ನಿರ್ಜಿವ ವಸ್ತುಗಳಂತೆ ಕುಳಿತಿವೆ. ಆದರೆ ಕರ್ನಾಟಕದಲ್ಲಿ ತನ್ನ ಜೀವಂತಿಕೆಯನ್ನು ಕಾಪಾಡಿಕೊಂಡಿರುವ ಮೋರ್‍ಝಿಂಗ್ ವಾದ್ಯವು ಶಂಕ್ರಪ್ಪ ಬಾದಿಗಿಯವರ ಪರಿಶ್ರಮದಿಂದ ತನ್ನ ಅಸ್ಮಿತೆಯನ್ನು ಕಾಪಾಡಿಕೊಂಡಿದೆ.

ಮೋರ್‍ಝಿಂಗ್ (ಬಾಯಿಬಿಲ್ಲು ನಾದಸ್ವರ) ಕಲೆಯನ್ನು ತನ್ನ ತಂದೆಯಿಂದ ಕಾಪಾಡಿಕೊಂಡು ಬಂದು, ಇದರಲ್ಲಿ ಪಾಂಡಿತ್ಯವನ್ನು ಗಳಿಸಿಕೊಂಡಿರುವ ಶಂಕ್ರಪ್ಪ ಬಾದಿಗಿಯವರು ಈ ಕಲೆಯು ಅವನತಿಯ ಹಂಚಿನಲ್ಲಿರುವ ಕಾರಣ ಇದರ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ. ಒಂದು ಕಡೆ ದಟ್ಟದಾರಿದ್ರ್ಯದ ಬಡತನದ ನೋವು ಇವರನ್ನು ಕಾಡಿದರೆ, ಮತ್ತೊಂದೆಡೆ ಈ ಕಲೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಇದನ್ನು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕೆಂಬ ಹಂಬಲ ಇವರದಾಗಿದೆ. ಕರ್ನಾಟಕದ ಬಹುತೇಕ ಕಲಾವಿದರ ಬದುಕು ಬಡತನದ ಬವಣೆಯಲ್ಲಿ ಕಮರಿ ಹೋಗುತ್ತಿವೆ. ಇತ್ತೀಚಿಗೆ ಸರ್ಕಾರವು ಇಂತಹ ಕಲೆಯನ್ನು ಜೀವಂತಗೊಳಿಸಬೇಕೆಂಬ ದೃಷ್ಟಿಯಿಂದ ಅಪರೂಪದ ಕಲೆಗಳು ಹಾಗೂ ಕಲಾವಿದರನ್ನು ಗುರುತಿಸಿ ಸಹಾಯ ಧನ ನೀಡುವ ಮೂಲಕ ಕಲಾವಿದರಿಗೆ ಪ್ರೋತ್ಸಹ ನೀಡುವ ಕಾರ್ಯ ಮೈಗೊಡಿಸಿಕೊಂಡಿದೆ. ಆದರೆ ಶಂಕ್ರಪ್ಪನವರಿಗೆ ಕರ್ನಾಟಕದ ಸರ್ಕಾರದಿಂದ ಯಾವುದೇ ಸಹಾಯ ಧನವಾಗಲೀ ಲಭ್ಯವಾಗಿಲ್ಲ. ಇವರು ಅನಕ್ಷರತೆಯ ನಡುವೆಯೂ ಕೆಲವು ಅಧಿಕಾರಿಗಳನ್ನು ಕಾಡಿಬೇಡಿ `ಮಾಶಾಸನಕ್ಕೆ’ ಅರ್ಜಿಸಲ್ಲಿಸಿದರು ಕೂಡ ಇವರಿಗೆ ಸರ್ಕಾರದಿಂದ ಯಾವುದೇ ಅನುದಾನ ಬಂದಿರುವುದಿಲ್ಲ.ಕರ್ನಾಟಕದಲ್ಲಿ ಎಷ್ಟೋ ಕಲಾವಿದರು ಎಲೆಮರೆಯ ಕಾಯಿಯಂತೆ ಇದ್ದು ತಮ್ಮ ಕಲೆಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಇಂತಹ ಅಪರೂಪದ ಕಲೆಯ ಉಳಿವಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಬಡತನದ ಬೇಗೆಯಲ್ಲಿಯೂ ತಮ್ಮಲ್ಲಿರುವ ಕಲೆಯ ಪಾಂಡಿತ್ಯಕ್ಕೆ ಚ್ಯುತಿಯಾಗದ ರೀತಿಯಲ್ಲಿ ಅದನ್ನು ಪೋಷಿಸಿಕೊಂಡು ಬಂದಿದ್ದಾರೆ. ಅಂತಹವರ ಸಾಲಿನಲ್ಲಿ ಶಂಕ್ರಪ್ಪ ಬಾದಿಗಿಯವರು ಒಬ್ಬರಾಗಿದ್ದಾರೆ. ಇವರ ಸ್ಥಿತಿಯು ಇಬ್ಬಾಯಿಯ ಖಡ್ಗದ ನಡುವೆ ಸಿಕ್ಕಿಹಾಕಿಕೊಂಡಂತಿದೆ. ಒಂದು ಕಡೆ ಭಾವನಾತ್ಮಕ ಸಂಬಂಧವನ್ನು ಹೊಂದಿ ಉಳಿಸಿಕೊಂಡು ಬಂದಿರುವ ಕಲೆಯಾದರೆ, ಮತ್ತೊಂದೆಡೆ ಸಮಾಜದಲ್ಲಿ ಸ್ವಾತಂತ್ರವಾಗಿ ತನ್ನ ಕುಟುಂಬವನ್ನು ರೂಪಿಸಿಕೊಳ್ಳಬೇಕೆಂಬ ಹಂಬಲ. ಒಂದರ ಉಳಿಗಾಗಿ ಬೆನ್ನತ್ತಿ ಹೊರಟರೆ ಮತ್ತೊಂದು ಬೀದಿಪಾಲಾಗುವಂತಿದೆ. ಆದ್ದರಿಂದ ಶಂಕ್ರಪ್ಪನವರಿಗೆ ಕರ್ನಾಟಕದ ಭವ್ಯ ಸಾಂಸ್ಕಂತಿಕ ಪರಂಪರೆಗೆ ಸಾಕ್ಷಿಯಾಗಿರುವ ಕಲೆಯ ಉಳಿವಿಗಾಗಿ ಶ್ರಮಿಸಬೇಕೋ? ಕಲೆಯ ತೊರೆದು ತನ್ನ ಕೌಟುಂಬಿಕ ಜೀವನವನ್ನು ಸುಧಾರಿಸಿಕೊಳ್ಳಬೇಕೋ? ಎಂಬ ಪ್ರಶ್ನೆಯು ಅವರನ್ನು ಕಾಡುತ್ತಿದೆ. ಪ್ರಸ್ತುತದಲ್ಲಿ ಸರ್ಕಾರವು ಸಂಗೀತ ಕಲೆಗಳನ್ನು ಕಾಪಾಡುವ ಮತ್ತು ಅವುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಪ್ರತ್ಯೇಕವಾಗಿ ಸಂಗೀತ ವಿಶ್ವವಿದ್ಯಾಲಯಗಳನ್ನು ಪ್ರಾರಂಬಿಸಿದೆ. ಇಂತಹ ವಿಶ್ವವಿದ್ಯಾಲಯಗಳು ಕೇವಲ ಅಕಡೆಮಿಕ್ ಆದ ಪಠ್ಯಕ್ರಮ ಆಧಾರಿತ ಸಂಗೀತ ಶಿಕ್ಷಣವನ್ನು ನೀಡುತ್ತಿವೆ. ಇಲ್ಲಿ ಈ ಅಕಡೆಮಿಕ್ ಪಠ್ಯಕ್ರಮದ ಜೊತೆಜೊತೆಯಲ್ಲಿಯೇ ವ್ಯಕ್ತಿಯ ಬದುಕಿನ ಜೊತೆಯಲ್ಲಿಯೆ ಬೆಳೆದು ಬಂದಿರುವ ಇಂತಹ ಜನಪದ ಸಂಗೀತ ಕಲೆಗಳನ್ನು ವಿಶ್ವವಿದ್ಯಾಲಯಗಳಲ್ಲಿ ಪರಿಚಯಿಸುವುದು ಅತ್ಯಂತ ಸೂಕ್ತವಾಗಿದೆ. ಈ ವಿಶ್ವವಿದ್ಯಾಲಯಗಳು ಅಳಿವಿನ ಅಂಚಿಗೆ ತಳಲ್ಪಟ್ಟಿರುವ ಕಲೆಗಳನ್ನು ಗುರುತಿಸಿ, ಇಂತಹ ಕಲಾವಿದರಿಂದ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಕಾರ್ಯಗಾರದಂತಹ ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳುವುದರಿಂದ ಕಲೆಗೂ ಮತ್ತು ಕಲಾವಿದರಿಗೂ ಸೂಕ್ತ ನ್ಯಾಯ ಒದಗಿಸಿದಂತಾಗುತ್ತದೆ. ಅಕಡೆಮಿಕ್ ಜ್ಞಾನ ಶಿಸ್ತಿಗಿಂತಲೂ ಜೀವನದ ಅನುಭವದ ಮೂಲಕ ಪಡೆದ ಶಿಕ್ಷಣ ಹೆಚ್ಚು ಸಂವೇದನಾಶೀಲವಾಗಿರುತ್ತದೆ. ಇದರಿಂದ ಸಮಾಜದಲ್ಲಿ ಉತ್ತಮ ಪರಿಸರವನ್ನು ರೂಪಿಸಬಹುದಾಗಿದೆ. ಜಾಗತೀಕರಣದ ಭರಾಟೆಯಲ್ಲಿ ತಿರಸ್ಕøತಗೊಂಡಿರುವ ದೇಶಿ ಕಲೆಗಳಿಗೂ ಮತ್ತೆ ಜೀವ ನೀಡಿದಂತಾಗುತ್ತದೆ. ಇದರಿಂದ ಕರ್ನಾಟಕದ ಅದರಲ್ಲೂ ಭಾರತದ ಸಾಂಸ್ಕøತಿಕ ವೈಭವದ ಹಿರಿಮೆಯನ್ನು ಹೆಚ್ಚಿಸಿದ ಕೀರ್ತಿಯು ಲಭಿಸುತ್ತದೆ.ಶಂಕ್ರಪ್ಪ ಬಾದಗಿಯವರು ಅತ್ಯಂತ ಕಡುಬಡತನದಲ್ಲಿಯೂ ತಮ್ಮ ಕಲೆಯ ಉಳಿವಿಗಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಇವರಿಗೆ ನಾಡಿನ ಜನತೆ ಹಾಗೂ ವಿವಿಧ ವರ್ಗದ ಸಹಕಾರ ಅತ್ಯಂತ ಅಗತ್ಯವಾಗಿದೆ. ಸರ್ಕಾರ ಇಂತಹ ಪ್ರತಿಭೆಗಳಿಗೆ ಸೂಕ್ತ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದೆ ಆದರೆ ಈ ಕಲೆಯು ಜೀವಂತಿಕೆಯನ್ನು ಪಡೆಯುತ್ತದೆ. ಈ ಅಪರೂಪದ ದೇಶಿ ಕಲೆಯನ್ನು ನಾಡಿನ ಜನತೆಗೆ ಪರಿಚಯಿಸುವ ಆಸಕ್ತಿ ಉಳ್ಳವರು ಶಂಕ್ರಪ್ಪ ಬಾದಿಗಿಯವರನ್ನು ಸಂಪರ್ಕಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಟ್ಟಿದ್ದೆ ಆದರೆ ಮುಕ್ತ ಮನಸ್ಸಿನಿಂದ ತಮ್ಮ ಕಲೆಯ ಪ್ರದರ್ಶನ ನೀಡುತ್ತಾರೆ. ಆಸಕ್ತಿ ಉಳ್ಳವರು ಶಂಕ್ರಪ್ಪ ಬಾದಿಗಿಯವರ ಮೊಬೈಲ್ ನಂಬರ್: 9741618957 ಗೆ ಸಂಪರ್ಕಿಸಬಹುದು. ಇದರಿಂದ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಕೀರ್ತಿಯು ಲಭಿಸುತ್ತದೆ. ಜೊತೆಗೆ ಅಳಿವಿನ ಅಂಚಿನಲ್ಲಿರುವ ಕಲೆಯನ್ನು ನಾಡಿನ ಜನತೆಗೆ ಪರಿಚಯಿಸಿದಂತಾಗುತ್ತದೆ. ಕಲೆಯನ್ನೆ ಉಸಿರಾಗಿಸಿಕೊಂಡು ನಿಸ್ವಾರ್ಥ ಸೇವೆಸಲ್ಲಿಸುತ್ತಿರುವ ಇವರ ಬದುಕು ಕಲೆಯ ಕಳೆಗೆ ಕಮರಿ ಹೋಗುತ್ತಿದೆ. ಇಂತಹ ಕಲಾವಿದನ ಬದುಕಿಗೆ ಕಲಾಸಕ್ತರು ಪ್ರೋತ್ಸಾಹ ನೀಡಿ ಇವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ. ಸರ್ಕಾರವು ಇಂತಹ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ. ಇಂದು ಪ್ರಶಸ್ತಿಗಳು ರಾಜಕೀಯ ಒತ್ತಡದಿಂದ ಅನರ್ಹರ ಪಾಲಾಗುತ್ತಿವೆ. ಇದರಿಂದ ಪ್ರಶಸ್ತಿಗಳು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿವೆ. ಇದರ ಬದಲು ಸೂಕ್ತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಗೌರವಿಸುವುದರಿಂದ ನಮ್ಮ ನಾಡಿನ ಕಲೆಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಇದರಿಂದ ಪ್ರಶಸ್ತಿಗಳಿಗೂ ಗೌರವ ಉಳಿಯುತ್ತದೆ.

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

Published

on

  • ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.

ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.

ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.

ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.

ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಲೇಖಕರು : ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.

ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.

ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.

ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.

ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.

ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.

ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.

ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

Published

on

ಡಾ.ಎಂ.ಜಿ. ಈಶ್ವರಪ್ಪ
  • ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ

ರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.

ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.

ಬಾಲ್ಯ ಮತ್ತು ಶಿಕ್ಷಣ

ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.

ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.

ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ

ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ

ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್‌ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ರಂಗಭೂಮಿ ಮತ್ತುಈಶ್ವರಪ್ಪ

ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್‌ಆಫ್‌ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.

ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.

1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.

1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.

1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಾಹಿತ್ಯ ಸೇವೆ

ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.

ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸಂದ ಪ್ರಶಸ್ತಿಗಳು

ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

  • 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
  • 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
  • 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
  • 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
  • 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ

    2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ

  • 2014ಮಹಲಿಂಗರಂಗ ಪ್ರಶಸ್ತಿ
  • 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ

ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.

ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.

[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ2 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ4 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ4 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ6 days ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ1 week ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ1 week ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ1 week ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ1 week ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ1 week ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending