Connect with us

ದಿನದ ಸುದ್ದಿ

ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು : ಎಂಪಿ ಜಿ.ಎಂ. ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪಂಪ್‍ಹೌಸ್‍ಗಳು, ಡೆಲವರಿ ಚೇಂಬರ್‍ಗಳು, ಎಲೆಕ್ಟ್ರಿಕಲ್ ಸಬ್‍ಸ್ಟೇಷನ್‍ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್‍ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನ ಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿ ಪೂರ್ಣಗೊಳಿಸಬೇಕು,ಇದರಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಸ್ವೆಹಳ್ಳಿ ಸೇರಿದಂತೆ ವಿವಿಧ ಏತನೀರಾವರಿ ಯೋಜನೆಗಳ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯಡಿ ಜಾಕ್‍ವೆಲ್ ಕಮ್ ಪಂಪ್‍ಹೌಸ್, ಡೆಲಿವರಿ ಛೇಂಬರ್, ಎಲೆಕ್ಟ್ರಿಕಲ್ ಸಬ್‍ಸ್ಟೇಷನ್, ರೈಸಿಂಗ್ ಮೈನ್‍ಗಳ ನಿರ್ಮಾಣಕ್ಕಾಗಿ ಹೊನ್ನಾಳಿ ತಾಲ್ಲೂಕಿನಲ್ಲಿ 6 ಎಕರೆ 03 ಗುಂಟೆ ಹಾಗೂ ಚನ್ನಗಿರಿ ತಾಲ್ಲೂಕಿನಲ್ಲಿ 09 ಎಕರೆ 14 ಗುಂಟೆ ಸೇರಿದಂತೆ 15 ಎಕರೆ 17 ಗುಂಟೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತದೆ.

ಈಗಾಗಲೆ ಸಾಸ್ವೆಹಳ್ಳಿ ಗ್ರಾಮದಲ್ಲಿ 03 ಎಕರೆ 03 ಗುಂಟೆಗೆ ಸಂಬಂಧಿಸಿದಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50 ರಷ್ಟು ಪರಿಹಾರ ಹಣ ಪಾವತಿಸಲಾಗಿದೆ. ಅದೇ ರೀತಿ ಚನ್ನಗಿರಿ ತಾಲ್ಲೂಕು ಚಕ್ಕಲಿ ಗ್ರಾಮ ಬಳಿ ಪಂಪ್‍ಹೌಸ್, ಎಲೆಕ್ಟ್ರಿಕಲ್ ಸಬ್‍ಸ್ಟೇಷನ್, ಅಪ್ರೋಚ್ ರಸ್ತೆಗೆ ಅಗತ್ಯವಿರುವ ಒಟ್ಟು 07 ಎಕರೆ ಭೂಮಿಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50 ರಷ್ಟು ಪರಿಹಾರ ಹಣ ಪಾವತಿಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮುತ್ತಗದೂರು ಬಲಿ ಪಂಪ್‍ಹೌಸ್ ಹಾಗೂ ವಿದ್ಯುತ್ ಸಬ್‍ಸ್ಟೇಷನ್, ಚಿತ್ರದುರ್ಗ ತಾಲ್ಲೂಕು ಮದಕರಿಉರ ಮತ್ತು ದೊಡ್ಡಿಗನಾಳ್ ಗ್ರಾಮ ಬಳಿ ಡೆಲವರಿ ಚೇಂಬರ್, ಅಪ್ರೋಚ್ ರಸ್ತೆಗಾಗಿ ಸದ್ಯ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ನಿಗಮಕ್ಕೆ ಹಸ್ತಾಂತರ ಮಾಡುವ ಕಾರ್ಯ ಬಾಕಿ ಇದೆ. ಭೂಸ್ವಾಧೀನ ಕಾರ್ಯವನ್ನು ವಿಳಂಬಕ್ಕೆ ಅವಕಾಶವಿಲ್ಲದಂತೆ ಶೀಘ್ರ ಪೂರ್ಣಗೊಳಿಸಬೇಕು. ಯಾವುದೇ ಅಡೆತಡೆಗಳು ಇದ್ದಲ್ಲಿ ಕೂಡಲೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಂಸದರು ಸೂಚನೆ ನೀಡಿದರು.

ಇದನ್ನೂ ಓದಿಹರಿಹರ ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ 

ಹೊನ್ನಾಳಿ ತಾಲ್ಲೂಕಿನಲ್ಲಿ ಪಂಪ್‍ಹೌಸ್-1 ರ ಬಳಿ ನಿರ್ಮಿಸಲು ಉದ್ದೇಶಿಸಿರುವ ಎಲೆಕ್ಟ್ರಿಕಲ್ ಸಬ್‍ಸ್ಟೇಷನ್‍ಗೆ ವಿದ್ಯುತ್ ಸಂಪರ್ಕಕ್ಕಾಗಿ ದಿಡಗೂರು, ಬೀರಗೊಂಡನಹಳ್ಳಿ, ಚಿಕ್ಕಬಾಸೂರು, ಉಜ್ಜನೀಪುರ, ಹೊಟ್ಯಾಪುರ, ಸದಾಶಿವಪುರ, ಸಾಸ್ವೆಹಳ್ಳಿ, ಮಾವಿನಕೋಟೆ ಗ್ರಾಮ ವ್ಯಾಪ್ತಿಯಲ್ಲಿ ಒಟ್ಟು 49 ವಿದ್ಯುತ್ ಟವರ್‍ಗಳನ್ನು ನಿರ್ಮಿಸಬೇಕಿದ್ದು, 48 ಎಕರೆ ಭೂಮಿಯನ್ನು ಗುರುತಿಸಲಾಗಿದೆ.

ಇದಕ್ಕಾಗಿ ಅಗತ್ಯ ಜಾಗ ಮತ್ತು ಕಾರಿಡಾರ್ ಹಾದುಹೋಗುವ ಮಾರ್ಗದ ಸರ್ವೆ ನಕ್ಷೆ ಹಾಗೂ ಬಾಧಿತರಾಗುವ ರೈತರ ಭೂಮಿಯ ಸರ್ವೆ ನಂಬರ್‍ಗಳೊಂದಿಗೆ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಪರಿಹಾರಮೊತ್ತ ನಿಗದಿಪಡಿಸುವುದು ಬಾಕಿ ಇದೆ. ಹೊಳಲ್ಕೆರೆ ತಾಲ್ಲೂಕು ಸಾಸಲು ಗ್ರಾಮ ಬಳಿಯ ಸಬ್‍ಸ್ಟೇಷನ್‍ಗೆ 20 ಟವರ್‍ಗಳ ನಿರ್ಮಾಣಕ್ಕೆ ಸರ್ವೆ ಪೂರ್ಣಗೊಂಡಿದೆ.

ಅದೇ ರೀತಿ ಕೆರೆಬಿಳಚಿ ಗ್ರಾಮ ಬಳಿ ವಿದ್ಯುತ್ ಸಬ್‍ಸ್ಟೇಷನ್‍ಗೆ ವಿದ್ಯುತ್ ಸಂಪರ್ಕಿಸಲು 4.50 ಕಿ.ಮೀ. ಮಾರ್ಗದಲ್ಲಿ 20 ವಿದ್ಯುತ್ ಟವರ್ ನಿರ್ಮಾಣಕ್ಕೆ ಜಕ್ಕಲಿ, ಸೋಮಲಾಪುರ, ಕೆರೆಬಿಳಚಿ ಗ್ರಾಮಗಳ ಸರ್ವೆ ಕಾರ್ಯವನ್ನು ಚನ್ನಗಿರಿ ತಹಸಿಲ್ದಾರರು ತ್ವರಿತವಾಗಿ ಮಾಡಿಸಬೇಕು, ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಬಾಕಿ ಇರುವ ಸರ್ವೆ ಕಾರ್ಯವನ್ನು ಆಯಾ ತಹಸಿಲ್ದಾರರು ಪೂರ್ಣಗೊಳಿಸಬೇಕು. ಪರಿಹಾರ ಮೊತ್ತದ ದರವನ್ನು ಒಂದು ವಾರದೊಳಗೆ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಸಂಸದರು ಮಾತನಾಡಿ, ಅಧಿಕಾರಿಗಳು ಸರ್ವೆ ಕಾರ್ಯ, ಭೂಸ್ವಾಧೀನದಂತಹ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಫಾಲೋಅಪ್ ಮಾಡುವುದಿಲ್ಲ, ಹೀಗಾಗಿ ಯೋಜನೆಗಳಲ್ಲಿ ಪ್ರಗತಿಯಾಗುವುದಿಲ್ಲ. ಅಧಿಕಾರಿಗಳ ಇಂತಹ ಕಾರ್ಯವೈಖರಿಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜನಹಳ್ಳಿ ಏತನೀರಾವರಿ

ಜಿಲ್ಲೆಯ ಜಗಳೂರು ತಾಲ್ಲೂಕಿನ 03 ಮತ್ತು ದಾವಣಗೆರೆ ತಾಲ್ಲೂಕಿನ 19 ಸೇರಿದಂತೆ ಒಟ್ಟು 22 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಯೋಜನೆಯಲ್ಲಿ ಮೊದಲನೆ ಹಂತದಲ್ಲಿ ಹರಿಹರ ತಾಲ್ಲೂಕಿನ ಹಲಸಬಾಳು ಗ್ರಾಮ ಬಳಿ ತುಂಗಭದ್ರಾ ನದಿಯಿಂದ ನೀರೆತ್ತಿ 28 ಕಿ.ಮೀ. ದೂರದಲ್ಲಿರುವ ದಾವಣಗೆರೆ ತಾಲ್ಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಹತ್ತಿರದ ಎರಡನೆ ಹಂತಕ್ಕೆ ನೀರೊದಗಿಸುವುದು.

ಎರಡನೆ ಹಂತದಲ್ಲಿ ಉದ್ದೇಶಿತ 22 ಕೆರೆಗಳಿಗೆ 150 ಕಿ.ಮೀ. ಪೈಪ್‍ಲೈನ್ ಮುಖಾಂತರ ನೀರೊದಗಿಸುವ ಯೋಜನೆ ಇದಾಗಿದೆ. ಯೋಜನೆಯಡಿ ಸದ್ಯ 2022 ರ ಜುಲೈ 31 ರವರೆಗೆ ನಿರ್ವಹಣೆ ಗುತ್ತಿಗೆಯನ್ನು ನೀಡಲಾಗಿದೆ ಎಂದು ಯೋಜನೆಯ ಕಾರ್ಯಪಾಲಕ ಅಭಿಯಂತರ ಮಲ್ಲಪ್ಪ ಹೇಳಿದರು.

ಹಲಸಬಾಳು ಪಂಪ್‍ಹೌಸ್‍ಗೆ ಸಂಪರ್ಕಿಸುವ 225 ಮೀ. ಉದ್ದ ಹಾಗೂ ಮಲ್ಲಶೆಟ್ಟಿಹಳ್ಳಿ ಬಳಿಯ 50 ಮೀ. ಉದ್ದದ ಇಂಟೇಕ್ ಚಾನಲ್‍ನ ಹೂಳನ್ನು ತೆಗೆಸಲು ಸೂಚನೆ ನೀಡಲಾಗಿದ್ದು, ಸದ್ಯ ಇಂಟೇಕ್‍ಚಾನಲ್‍ನಲ್ಲಿ ನೀರು ಖಾಲಿಯಿದ್ದು, ಮಳೆಗಾಲ ಪ್ರಾರಂಭವಾಗುವುದರ ಒಳಗಾಗಿ ಹೂಳು ತೆಗೆಸಬೇಕು ಎಂದು ಸಂಸದರು ಸೂಚನೆ ನೀಡಿದರು.

ಏತನೀರಾವರಿ ಯೋಜನೆಯ ರಾಷ್ಟ್ರೀಯ ಹೆದ್ದಾರಿ 04 ರ ಪಕ್ಕದಲ್ಲಿರುವ ಪೈಪ್‍ಲೈನ್‍ಅನ್ನು ಸ್ಥಳಾಂತರಿಸುವ ಕಾಮಗಾರಿ ತ್ವರಿತವಾಗಿ ಕೈಗೊಳ್ಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಏತ ನೀರಾವರಿ ಯೋಜನೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಪೈಪ್‍ಲೈನ್ ಸ್ಥಳಾಂತರಿಸುವ ಕಾರ್ಯ ಶೀಘ್ರ ಪೂರ್ಣಗೊಳ್ಳಬೇಕು ಎಂದರು.

ಉತ್ತರಿಸಿದ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳು ಈಗಾಗಲೆ 12 ಕಿ.ಮೀ. ಪೈಕಿ 7.5 ಕಿ.ಮೀ. ಪೈಪ್‍ಲೈನ್ ಸ್ಥಳಾಂತರ ಪೂರ್ಣಗೊಂಡಿದ್ದು, ಇನ್ನೂ 4.5 ಕಿ.ಮೀ. ಕಾಮಗಾರಿ ಬಾಕಿ ಇದೆ. ಭೂಮಿ ಹಸ್ತಾಂತರ ಪ್ರಕ್ರಿಯೆಯಲ್ಲಿ ಸಮಸ್ಯೆಯಿದ್ದು, ವಿಳಂಬವಾಗುತ್ತಿದೆ ಎಂದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಭೂಮಿ ಸ್ವಾಧೀನಕ್ಕೆ ಪಡೆದು, ಪೊಲೀಸ್ ಬಂದೋಬಸ್ತ್ ತೆಗೆದುಕೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ರಾ.ಹೆ. ನಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ

ದಾವಣಗೆರೆಯಿಂದ ಹಾವೇರಿವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಫ್ಲೈಓವರ್‍ಗಳ ಬಳಿ ಹಾಗೂ ಕೆಳ ಸೇತುವೆ ಬಳಿ ಮಳೆ ನೀರು ರಸ್ತೆಯ ಮೇಲೆಯೇ ನಿಲ್ಲುತ್ತಿದ್ದು, ಇದರಿಂದ ವೇಗವಾಗಿ ಬರುವ ವಾಹನಗಳ ಗಾಜುಗಳಿಗೆ ನೀರು ಸಿಡಿದು ಮುಂದಿನ ರಸ್ತೆ ಕಾಣದಂತಾಗುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣವಾಗುವ ಎಲ್ಲ ಸಾಧ್ಯತೆಗಳಿವೆ.

ತಾವೇ ಖುದ್ದಾಗಿ ಇದರ ಅನುಭವ ಪಡೆದಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇಂತಹ ಪ್ರದೇಶಗಳನ್ನು ಗುರುತಿಸಿ, ಸೂಕ್ತ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಲ್ಲುವಂತಿರಬಾರದು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ. ಲಿಂಗಣ್ಣ, ಕರ್ನಾಟಕ ನೀರಾವರಿ ನಿಗಮ ತುಂಗಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಯತೀಶ್‍ಚಂದ್ರ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸೇರಿದಂತೆ ಬೆಸ್ಕಾಂ, ಕೆಪಿಟಿಸಿಎಲ್, ಲೋಕೋಪಯೋಗಿ ಇಲಾಖೆಗಳ ಇಂಜಿನಿಯರ್‍ಗಳು, ತಹಸಿಲ್ದಾರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending