Connect with us

ದಿನದ ಸುದ್ದಿ

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಸಂಸದರು ಹಾಗೂ ಪಾಲಿಕೆ ಸದಸ್ಯರು ಕಳಪೆ ಕಾಮಗಾರಿಗಳಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ : ಜಿ.ಎಂ.ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ಸೋಮವಾರ ಬೆಳ್ಳಂ ಬೆಳಿಗ್ಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು.

ಸೋಮವಾರ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಲು ನಗರಪಾಲಿಕೆ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳ ತಂಡದೊಂದಿಗೆ ನಗರದ ಜಿಎಂಐಟಿ ಕಾಲೇಜಿನಿಂದ ಹೊರಟ ತಂಡ ಶಿವಾಲಿ ಟಾಕೀಸ್, ಹಿಂದು ರುದ್ರಭೂಮಿ, ಗಾಂಧೀನಗರ ವೃತ್ತ, ಅಂಬೇಡ್ಕರ್ ವೃತ್ತ, ಭಾಷಾನಗರ, ಎಸ್‍ಪಿಎಸ್ ನಗರ, ಯಲ್ಲಮ್ಮ ನಗರ ಸೇರಿದಂತೆ ಕುಂದವಾಡ ಕೆರೆ ಹಾಗೂ ಸುತ್ತಮುತ್ತ ಇರುವ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು.

ಇದನ್ನೂ ಓದಿ | ಚನ್ನಗಿರಿ | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನ

ವೀಕ್ಷಣೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಸಮರ್ಪಕವಾಗಿ, ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಶಿವಾಲಿ ಟಾಕೀಸ್ ಸುತ್ತಮುತ್ತ ಇರುವ ಒಳಚರಂಡಿ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅಲ್ಲಿ ವಾಸಿಸುವ ಜನರು ಕಸ-ಕಡ್ಡಿಗಳನ್ನು ಎಲ್ಲೆಂದರಲ್ಲಿಯೇ ಎಸೆಯುತ್ತಿದ್ದಾರೆ. ಇದರಿಂದ ಮಾಲಿನ್ಯ ಉಂಟಾಗಿ ರೋಗ-ರುಜಿನಗಳು ಹೆಚ್ಚುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಸ್ವಚ್ಛತೆಯ ಕೆಲಸವಾಗಬೇಕಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಜನರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಬೇಕು. 2021 ರ ವೇಳೆಗೆ ಮುಗಿಯಬೇಕಿದ್ದ ಜಲಸಿರಿ ಯೋಜನೆಯ ಕಾಮಗಾರಿಯನ್ನು 2022 ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಪೂರೈಸಬೇಕು. ಒಂದು ವೇಳೆ ಈ ಕಾಮಗಾರಿಗಳು ತ್ವರಿತ ಗತಿಯಲ್ಲಿ ನಡೆಯದಿದ್ದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕುಂದುವಾಡ ಕೆರೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಹೆಚ್ಚು ನೀರು ಸಂಗ್ರಹದೊಂದಿಗೆ ಕೆರೆಯ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ನಗರದ ನಾಗರಿಕರಿಗೆ ಸಾಕಷ್ಟು ನೀರು ಒದಗಿಸಲಾಗುತ್ತಿದೆ. ಹಾಗೂ ಬೆಳಗಿನ ವಾಯುವಿಹಾರಕ್ಕೆ ಉತ್ತಮ ಪರಿಸರವಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕೊರೋನ ಸೋಂಕಿನಿಂದ ಉಂಟಾದ ಲಾಕ್‍ಡೌನ್ ಪರಿಣಾಮದಿಂದಾಗಿ ನಗರ ವೀಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಇದೀಗ ನಗರದ ಸ್ವಚ್ಚತೆಯತ್ತ ಗಮನಹರಿಸಿದ್ದು ಕಸಮುಕ್ತ ನಗರವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರಪಾಲಿಕೆ ಶ್ರಮಿಸಬೇಕು. ಹಾಗೂ ನಗರದ ಸುತ್ತಮುತ್ತ ಸ್ವಚ್ಚತೆಯನ್ನು ಕಾಯ್ದುಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಪೂರೈಸಬೇಕು ಎಂದರು.

ಕುಂದವಾಡ ಕೆರೆಯ ಪಶ್ಚಿಮ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದು ಅದನ್ನು ತಡೆಗಟ್ಟಲು ಹೆಚ್.ಡಿ.ಇ.ಪಿ ಪ್ಲಾಸ್ಟಿಕ್ ಅಳವಡಿಸಲಾಗಿದೆ. ಹಾಗೂ ಕೆರೆಯ ಸುತ್ತಮುತ್ತ ಇರುವ ಕಾರ್ಖಾನೆ, ಹೊಲ-ಗದ್ದೆ ಗಳಿಂದ ಬರುವ ಕಲುಷಿತ ನೀರನ್ನು ಕೆರೆಗೆ ಹರಿಸದಂತೆ ಎಚ್ಚರವಹಿಸಬೇಕು ಎಂದರು.

ಮುಂದಿನ ದಿನಗಳಲ್ಲಿ 10 ದಿನಗಳಿಗೊಮ್ಮೆ ಅಧಿಕಾರಿಗಳು ಮೂರು ನಾಲ್ಕು ತಂಡ ರಚಿಸಿಕೊಂಡು ನಗರದ ಸುತ್ತಮುತ್ತ ಸಂಚರಿಸಿ ಕಾಮಗಾರಿ ಹಾಗೂ ಸ್ವಚ್ಚತೆಯ ಕುರಿತು ಪರಿಶೀಲನೆ ನಡೆಸಿ, ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಉಪಮೇಯರ್ ಶಿಲ್ಪ ಜಯಪ್ರಕಾಶ್, ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಡಿ. ಮಲ್ಲಾಪುರ ಸೇರಿದಂತೆ ಮಹಾನಗರಪಾಲಿಕೆಯ ಸದಸ್ಯರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending