ದಿನದ ಸುದ್ದಿ
ಸಾಹಿತ್ಯ ವಿವೇಕವನ್ನು ಜಾಗೃತಗೊಳಿಸಬೇಕು : ಸಾಹಿತಿ ಡಾ. ನಿಂಗಪ್ಪ ಮುದೇನೂರು
ಸುದ್ದಿದಿನ,ದಾವಣಗೆರೆ : ವಿವೇಕವನ್ನು ಜಾಗೃತಿಗೊಳಿಸಿ ಪ್ರಜ್ಞಾಪೂರ್ವಕ ಬದುಕನ್ನು ಕಟ್ಟಿಕೊಡುವುದೇ ನಿಜವಾದ ಸಾಹಿತ್ಯ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ, ಸಾಹಿತಿ ಡಾ. ನಿಂಗಪ್ಪ ಮುದೇನೂರು ವ್ಯಾಖ್ಯಾನಿಸಿದರು.
ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗದ ವತಿಯಿಂದ ದಿನಾಂಕ : 16.07.2021 ರ ಶುಕ್ರವಾರ ಸಂಜೆ 6.30ಕ್ಕೆ ಆಯೋಜಿಸಲಾಗಿದ್ದ ಆನ್ ಲೈನ್ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ತಮ್ಮ ಸ್ವರಚಿತ ಕವನದ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮನಸ್ಸನ್ನು ಅರಳಿಸಿ ಬದುಕಿನ ವಿಕಸನಕ್ಕೆ ಪ್ರೇರಪಣೆ ನೀಡುವುದೇ ಸಾಹಿತ್ಯದ ಮೂಲ ಉದ್ದೇಶ ಎಂದು ಅಭಿಪ್ರಾಯಿಸಿದರು.
ನಮ್ಮ ಜಾನಪದ, ವಚನ, ದಾಸ ಸಾಹಿತ್ಯದಂತಹ ಪ್ರಮುಖ ಪ್ರಕಾರಗಳು ಇಂದಿಗೂ ಜೀವಂತವಾಗಿರುವುದಕ್ಕೆ ಕಾರಣ ಅದರೊಳಗಿನ ಮಾನವೀಯ ಸೆಲೆಯೇ ಆಗಿದೆ. ಅಂತಃಕರಣವನ್ನು ಮುಟ್ಟುವ ಸಾಹಿತ್ಯ ಮಾತ್ರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆಯುತ್ತದೆ. ಆ ಸಾಮಾಜಿಕ ಪ್ರಜ್ಞೆಯ ನೆಲೆಗಟ್ಟಲ್ಲಿ ಸಾಹಿತ್ಯ ಸೃಜಿಸುವ ಇಂಗಿತ ರಚನೆಕಾರರಿಗೆ ಅವಶ್ಯ ಎಂದು ನುಡಿದರು.
ಕಾವ್ಯದ ನೆಲೆಗಳು ವಿಷಯ ಕುರಿತು ಮಾತನಾಡಿದ ಸಾಹಿತಿ ಡಾ. ಆನಂದ್ ಋಗ್ವೇದಿ ಅವರು ಮಾನವೀಯ ಪ್ರೀತಿ ಮತ್ತು ಅದರ ಅವಕಾಶದ ಹುಡುಕಾಟದಲ್ಲಿ ಕಾವ್ಯದ ನೆಲೆ ಅಡಗಿದೆ. ಆ ಹುಡುಕಾಟದ ತವಕ ಇದ್ದವರಿಂದ ಮಾತ್ರ ಒಳನೋಟದ ಸಾಹಿತ್ಯ ರಚನೆಯನ್ನು ನಿರೀಕ್ಷಿಸಬಹುದು ಎಂದರು.
ಆನ್ ಲೈನ್ ಕಾರ್ಯಕ್ರಮವನ್ನು ನಿರ್ವಹಿಸಿ, ಸರ್ವರನ್ನು ಸ್ವಾಗತಿಸಿ, ವಂದನೆ ಸಲ್ಲಿಸಿದ ಬಳಗದ ಸಂಚಾಲಕ ಗಂಗಾಧರ ಬಿ ಎಲ್ ನಿಟ್ಟೂರ್ ಮನೆ – ಮನೆಯಂಗಳದಲ್ಲಿ ಹಬ್ಬದ ವಾತಾವರಣವನ್ನು ಕಟ್ಟಿಕೊಟ್ಟಿದ್ದ ತಿಂಗಳ ಅಂಗಳದ ಕಾವ್ಯ ಮಲ್ಲಿಗೆ ಆನ್ ಲೈನ್ ಮೂಲಕವೂ ಮನದಂಗಳ ತಲುಪಿ ಸುವಾಸನೆ ಬೀರಲು ಅಣಿಯಾಗಿದೆ. ಈ ನಿಟ್ಟಿನಲ್ಲಿ ದಾವಣಗೆರೆ ಸಾಹಿತ್ಯ ವಲಯ ನೀಡುತ್ತಿರುವ ಬೆಂಬಲ ಮತ್ತು ಹಿರಿಯ ಸಾಹಿತಿಗಳ ಮಾರ್ಗದರ್ಶನ ಅಪಾರ ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಲೇಖಕಿ ಶ್ರೀಮತಿ ಮಲ್ಲಮ್ಮ ನಾಗರಾಜ್ ಸಾಹಿತ್ಯ ಹರಿಯುವ ನೀರಿನಂತೆ. ಆ ನೀರು ಸದಾ ತಿಳಿಯಾಗಿ, ಸ್ವಚ್ಛ, ಶುದ್ಧವಾಗಿ ಹರಿಯುತ್ತಲೇ ಇರಬೇಕು. ಆಗ ಸಮಾಜ ಹಸಿರಾಗಿ, ಸುಂದರವಾಗಿರಲು ಸಾಧ್ಯ. ಆ ದಿಸೆಯಲ್ಲಿ ಹಿರಿಯರು ಬೆನ್ನು ತಟ್ಟಿದಾಗ ಯುವಪೀಳಿಗೆ ಮೂಲಕ ಆ ಪ್ರಕ್ರಿಯೆ ನಿತ್ಯ, ನಿರಂತರ ಮುಂದುವರಿಯುತ್ತದೆ. ತಿಂಗಳ ಅಂಗಳ ಬಳಗದ ಕಾರ್ಯ ಇದಕ್ಕೆ ಮಾದರಿ ಎಂದು ಶ್ಲಾಘಿಸಿದರು.
ಸಾಹಿತಿ ಮಹಾಂತೇಶ್ ಬಿ ನಿಟ್ಟೂರು ಆಶಯ ನುಡಿಯಾಡಿದರು. ಜೀವರಾಜ್ ಛತ್ರದ, ಬ್ಯಾಡಗಿ, ಸಂತೆಬೆನ್ನೂರು ಫೈಜ್ನಟ್ರಾಜ್, ರಾಜೇಂದ್ರ ಪ್ರಸಾದ್ ನೀಲಗುಂದ, ಶ್ರೀಮತಿ ಅನ್ನಪೂರ್ಣ ಪಾಟೀಲ್, ಮಂಜುನಾಥ ಚಿತ್ರದುರ್ಗ ಅವರು ಕವನ ವಾಚಿಸಿದರು.
ಹಿರಿಯ ಕವಯಿತ್ರಿಯರಾದ ಶ್ರೀಮತಿ ಅರುಂಧತಿ ರಮೇಶ್, ಶ್ರೀಮತಿ ಸುಭಾಷಿಣಿ ಮಂಜುನಾಥ್, ಶ್ರೀಮತಿ ಜಯಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
-
ಕ್ರೀಡೆ7 days ago
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ವಿಶ್ವ ಫ್ಲಂಬರ್ ದಿನಾಚರಣೆ
-
ದಿನದ ಸುದ್ದಿ7 days ago
ಪಿಎಚ್ ಡಿ ; ಅವಧಿ ವಿಸ್ತರಣೆ
-
ದಿನದ ಸುದ್ದಿ7 days ago
ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ
-
ದಿನದ ಸುದ್ದಿ7 days ago
ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್
-
ದಿನದ ಸುದ್ದಿ4 days ago
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
-
ದಿನದ ಸುದ್ದಿ4 hours ago
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ