ದಿನದ ಸುದ್ದಿ
ಹಾಡುಹಗಲೇ ನಗರಸಭೆ ಅಧ್ಯಕ್ಷೆಯ ಪತಿ ಕೊಲೆ
ಸುದ್ದಿದಿನ ಡೆಸ್ಕ್ : ಹಾಡು ಹಗಲೇ ಜನನಿಬಿಡ ಪ್ರದೇಶದಲ್ಲಿ ನಗರ ಸಭೆ ಅಧ್ಯಕ್ಷೆ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಗಿರೀಶ್ ಕಂಬನೂರ್ (42) ಕೊಲೆಯಾದ ವ್ಯಕ್ತಿ. ಕಾಂಗ್ರೆಸ್ ಪಕ್ಷದ ಮುಖಂಡನಾಗಿರುವ ಗೀರಿಶ್ ಕಂಬನೂರ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಆದ್ರೆ ಹಳೆ ವೈಷಮ್ಯದ ಹಿನ್ನಲೆ ದುಷ್ಕರ್ಮಿಗಳು ಕೊಲೆ ಮಾಡಿರುವ ಎಂಬ ಶಂಕೆ ವ್ಯಕ್ತವಾಗಿದೆ.
ಶಹಬಾದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಾಗ ಗೀರಿಶ್ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ದೇಹದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ನರಳಾಡಿದ ಗೀರಿಶ ಮೃತಪಟ್ಟಿದ್ದಾನೆ.ಕಳೆದ 2 ವರ್ಷದ ಹಿಂದೆ ಗಿರೀಶ್ ಸಹೋದರ ಸತೀಶ್ ಕಂಬನೂರ್ ಹತ್ಯೆ ಮಾಡಲಾಗಿತ್ತು.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ಸ್ಥಳಾಂತರಿಸಲಾಗಿದೆ. ಈ ಕುರಿತು ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಂತಕರ ಬಂಧನಕ್ಕೆ ಬಲೆ ಬಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243