Connect with us

ದಿನದ ಸುದ್ದಿ

ಮೈಸೂರು ದಸರಾ ಗಜಪಯಣ ಹಿನ್ನೆಲೆ; ಆನೆಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ..?

Published

on

ಸುದ್ದಿದಿನ,ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಗಜಪಯಣ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದು ಮಹಾರಾಜರ ಕಾಲದಿಂದಲೂ ಸಹ ಗಜಪಯಣ ಕಾರ್ಯಕ್ರಮವು ಜರುಗುತ್ತಿದ್ದು, ಇಂದಿನ ಕಾರ್ಯಕ್ರಮಗಳಿಗಿಂತ ವಿಭನ್ನವಾಗಿತ್ತು. ಮೈಸೂರು ಮಹಾರಾಜರು ದಸರಾ ಮಹೋತ್ಸವದ ಸಂದರ್ಭದಲ್ಲಿ ಅಂಬಾರಿಯನ್ನು ಹೊರುವುದಕ್ಕಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾಡಿನಲ್ಲಿ ಪಳಗಿಸಿರುವ ಆನೆಗಳನ್ನು ಆಯ್ಕೆ ಮಾಡಿ ನಿಗದಿತ ಶುಭದಿನದಂದು ಶ್ಲೋಕಗಳನ್ನು ಪಠಿಸುವ ಮೂಲಕ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತವನ್ನು ಮಾಡಿ ನಂತರ ಸದರಿ ಸ್ಥಳದಿಂದ ಕಾಲ್ನಡಿಗೆ ಮೂಲಕ ಮೈಸೂರು ಅರಮನೆ ಆವರಣಕ್ಕೆ ಕರೆತರುತ್ತಿದ್ದರು. ಆನೆಗಳಿಗೆ ಭಕ್ತಿ ಮತ್ತು ಶ್ರದ್ದೆಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ದಿನಗಳನ್ನು ಆಚರಣೆ ಮಾಡಲಾಗುತ್ತಿತ್ತು.

ಇಂದು ಮಾನವ ಜಗತ್ತನ್ನು ಆಧುನೀಕರಣಗೊಳಿಸುವ ತವಕದಲ್ಲಿ ಕಾಡುಗಳನ್ನು ನಾಶಮಾಡಿ ಕಾಂಕ್ರೀಟಿಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಜಾಗತಿಕ ವಲಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿ ವಾತವರಣ ಬದಲಾವಣೆ, ರಸ್ತೆಯ ಮೇಲೆ ವಾಹನಗಳ ದಟ್ಟಣೆ, ಶಬ್ದ ಮಾಲಿನ್ಯದಿಂದ ಆನೆಗಳನ್ನು ಕಾಡಿನಿಂದ ಮೈಸೂರಿಗೆ ಕಾಲ್ನಡಿಗೆ ಮೂಲಕ ಕರೆತರಲು ಕಷ್ಟವಾಗಿರುವುದನ್ನು ಅರಿತ ಅರಣ್ಯ ಇಲಾಖೆ, ಆನೆಗಳ ಸುರಕ್ಷತೆಗಾಗಿ ಲಾರಿಗಳ ಮೂಲಕ ಸಾಗಾಣಿಕೆ ಮಾಡಲು 2004ರಲ್ಲಿ ತೀರ್ಮಾನಿಸಲಾಯಿತು. 2004ನೇ ಸಾಲಿನಿಂದ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕ ಪೂಜೆಗಳೊಂದಿಗೆ ಚಾಲನೆ ನೀಡಲಾಗುತ್ತಿರುತ್ತದೆ.

ಸಾಂಪ್ರದಾಯಿಕ ಪೂಜೆಗಳು ನೆರವೇರಿದ ನಂತರ ಆನೆಗಳನ್ನು ಲಾರಿಯ ಮೂಲಕ ಸುರಕ್ಷಿತವಾಗಿ ಮೈಸೂರಿಗೆ ಸಾಗಾಣಿಕೆ ಮಾಡಲಾಗುವುದು.
ನಂತರದ ದಿನಗಳಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ನಡೆಯುತ್ತಿದ್ದ ಸಾಂಪ್ರದಾಯಿಕ ಪೂಜೆ ಕಾರ್ಯಕ್ರಮವನ್ನು ಹುಣಸೂರು ತಾಲ್ಲೂಕು, ನಾಗಪುರ ಗಿರಿಜನ ಹಾಡಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಯನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ನೆರವೇರಿಸಿಕೊಂಡು ಬರಲಾಗುತ್ತಿರುತ್ತದೆ.

ಸದರಿ ಸಂದರ್ಭದಲ್ಲಿ ಸಾಂಪ್ರದಾಯಿಕ ರಾಗಗಳನ್ನು ನುಡಿಸುವ ಸಂಗೀತಗಾರರು ಹಾಗೂ ಪೂರ್ಣಕುಂಬದೊಂದಿಗೆ ಶ್ಲೋಕಗಳನ್ನು ಪಠಿಸುವುದು ಹಾಗೂ ಆನೆಗಳ ಸುರಕ್ಷತೆ ಮತ್ತು ಸಮಾಜ ಸಾಮೂಹಿಕ ಕಲ್ಯಾಣಕ್ಕಾಗಿ ಗಣೇಶ ಅಷ್ಟೋತ್ತರ ಸೇರಿದಂತೆ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಆನೆಗಳಿಗೆ ತೆಂಗಿನಕಾಯಿ, ಬೆಲ್ಲ ಮತ್ತು ಕಬ್ಬನ್ನು ನೀಡಿ ಸ್ವಾಗತವನ್ನು ಕೋರಲಾಗುತ್ತದೆ. ಗಜಪಯಣ ಕಾರ್ಯಕ್ರಮದ ದಿನ ಆನೆಗಳನ್ನು ವಿವಿಧ ಬಣ್ಣಗಳಿಂದ ಅಲಂಕಾರ ಗೊಳಿಸಿ, ವಿಶೇಷ ವಿನ್ಯಾಸವುಳ್ಳ ಹಣೆಪಟ್ಟಿಯನ್ನು ಹಾಕಲಾಗುವುದು. ಅಲ್ಲದೆ ಆನೆಗಳ ಮಾವುತರು ಮತ್ತು ಕವಾಡಿಗಳು ಸಹಾ ಸಮವಸ್ತ್ರಗಳನ್ನು ಧರಿಸುತ್ತಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು ಹಾಗೂ ಗಣ್ಯವ್ಯಕ್ತಿಗಳು ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ ಬೆಲ್ಲ ಮತ್ತು ಕಬ್ಬನ್ನು ನೀಡುತ್ತಾರೆ. ಮಾವುತರು ಮತ್ತು ಕವಾಡಿಗಳವರಿಗೆ ತಾಂಬೂಲಗಳನ್ನು ನೀಡಿ ಸ್ವಾಗತವನ್ನು ಕೋರಲಾಗುವುದು. ನಂತರ ಅವರಿಗೆ ವಿಶೇಷ ಭೋಜನವನ್ನು ಏರ್ಪಡಿಸಲಾಗುತ್ತದೆ. ಆನೆಗಳನ್ನು ರ್ಯಾಂಪ್ಸ್‍ಗಳ ಮೂಲಕ ಲಾರಿಗಳಿಗೆ ಹತ್ತಿಸಿ, ಅರಣ್ಯ ಇಲಾಖೆಯ ಮತ್ತು ಪೋಲೀಸ್ ಸಿಬ್ಬಂದಿ ಬಂದೂಬಸ್ತಿನೊಂದಿಗೆ ಮೈಸೂರಿಗೆ ಸಾಗಾಣಿಕೆ ಮಾಡಲಾಗುತ್ತದೆ.

ಆನೆಗಳ ಆಯ್ಕೆಯ ಪ್ರಕ್ರಿಯೆ, ಆರೋಗ್ಯ ತಪಾಸಣೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳನ್ನು ಈ ಎಲ್ಲಾ ಕಾರ್ಯಕ್ರಮಗಳಿಗಿಂತ ಮುಂಚೆ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪಶುವೈದ್ಯಾಧಿಕಾರಿಗಳೊಂದಿಗೆ ವಿವಿಧ ಆನೆ ಶಿಬಿರಗಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕಾಗಿ ಆನೆಗಳನ್ನು ಆಯ್ಕೆ ಮಾಡಲು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ ಚಳಕಾಪುರೆ ಮತ್ತು ಪಶುವೈದ್ಯಾಧಿಕಾರಿ ಡಾ. ಡಿ.ಎನ್. ನಾಗರಾಜು ಅವರು ನಾಗರಹೊಳೆ, ಬಂಡೀಪುರ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಗೆ ಬರುವ ವಿವಿಧ ಆನೆಗಳ ಶಿಬಿರಗಳಲ್ಲಿ ಇರುವ ಸಾಕಾನೆಗಳ ಆರೋಗ್ಯ ತಪಾಸಣೆ ಮಾಡಿ ಒಟ್ಟು 16 ಆನೆಗಳನ್ನು ಆಯ್ಕೆ ಮಾಡಿರುತ್ತಾರೆ. ನಂತರ ದಿನಾಂಕ:19-7-2018 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಿ,
16 ಆನೆಗಳ ವಿವರಗಳನ್ನು ಪಡೆದು ಅದರಲ್ಲಿ 12 ಆನೆಗಳನ್ನು ಆಯ್ಕೆ ಮಾಡಿ ದಸರಾ ಮಹೋತ್ಸವಕ್ಕೆ ಕರೆತರಲು ತೀರ್ಮಾನಿಸಲಾಯಿತು.

ಗಜಪಯಣ-2018 (ವೀರನಹೊಸಹಳ್ಳಿ ಬಳಿ)
ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ 2018ರ ಮೈಸೂರು ದಸರಾ ಮಹೋತ್ಸವದ
ಅಂಗವಾಗಿ ಗಜಪಯಣ ಕಾರ್ಯಕ್ರಮವನ್ನು ಸೆಪ್ಟಂಬರ್ ಮಾಹೆಯ 2ನೇ ತಾರೀಖಿನಂದು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯದ ಹೆಬ್ಬಾಗಲಿನಲ್ಲಿ ಪೂಜಾ ಕಾರ್ಯಕ್ರಮವನ್ನು ಹಾಗೂ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಡಗೂರು ಹೆಚ್ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡ ರವರು ವಿದ್ಯುಕ್ತ ಚಾಲನೆಯನ್ನು ನೀಡಿರುತ್ತಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರವಾಸೋದ್ಯಮ, ರೇಷ್ಮೆ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಮತ್ತು ಮಾನ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಜಯಮಾಲ
ರವರು ಭಾಗವಹಿಸಿರುತ್ತಾರೆ. ಅಲ್ಲದೇ ಮೈಸೂರು ಪ್ರಾಂತ್ಯದ ಮಾನ್ಯ ಲೋಕಸಭಾ ಸದಸ್ಯರು, ಮಾನ್ಯ ಶಾಸಕರು, ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ
ಉಪಾಧ್ಯಕ್ಷರುಗಳು ಭಾಗವಹಿಸಿರುತ್ತಾರೆ.

ಗಜಪಯಣದ ಕಾರ್ಯಕ್ರಮದ ನಂತರ ಮೊದಲನೆ ತಂಡದಲ್ಲಿ ಅರ್ಜುನ, ವರಲಕ್ಷ್ಮಿ,
ಚೈತ್ರ, ಗೋಪಿ, ವಿಕ್ರಮ ಮತ್ತು ಧನಂಜಯ ಆನೆಗಳನ್ನು ಮೈಸೂರಿನ ಅರಣ್ಯ ಭವನಕ್ಕೆ
ಕರೆತರಲಾಯಿತು. ಸದರಿ ಆನೆಗಳನ್ನು ದಿನಾಂಕ:5-9-2018 ರಂದು ಮೈಸೂರು ಅರಮನೆ
ಆವರಣಕ್ಕೆ ಬರಮಾಡಿಕೊಳ್ಳಲು ಶುಭ ದಿನ ನಿಗಧಿಯಾದ್ದರಿಂದ, ಮೂರು ದಿನಗಳವರೆಗೆ
ಮೈಸೂರು ಅರಣ್ಯ ಭವನದಲ್ಲಿ ವಾಸ್ತವ್ಯ ಮಾಡಿದ್ದವು. ದಿನಾಂಕ: 5-9-2018 ರಂದು ಅರಣ್ಯ ಭವನದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು (ಹುಲಿ ಮತ್ತು ಆನೆ ಯೋಜನೆ) ಮೈಸೂರು ರವರಾದ ಶ್ರೀ ಜಗತ್ ರಾಮ್ ಭಾ.ಅ.ಸೇ. ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ಮೈಸೂರು ರವರಾದ ಶ್ರೀ ವೆಂಕಟೇಸನ್ ಎಸ್
ಬಾs .ಅ.ಸೇ. ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಪ್ರಾದಾಯಿಕ ಪೂಜೆಯನ್ನು ಸಲ್ಲಿಸಿದ ನಂತರ ಬಲ್ಲಾಳ್ ವೃತ್ತ–ರಾಮಸ್ವಾಮಿ ವೃತ್ತ ಮತ್ತು 100 ಅಡಿ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಅರಮನೆಯ ಜಯಮಾರ್ತಾಂಡ ಗೇಟ್‍ನ ಬಳಿ ಕರೆತರಲಾಗುತ್ತದೆ. ಅಲ್ಲಿ
ಗಣ್ಯರು ಹಾಗೂ ಅಧಿಕಾರಿಗಳು ಪೂಜೆಯನ್ನು ನೆರವೇರಿಸುವ ಮೂಲಕ ಅರಮನೆಯ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.

ಸೌಲಭ್ಯಗಳು : ಮಾವುತರು ಹಾಗೂ ಅವರ ಕುಟುಂಬ ವರ್ಗದವರಿಗೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳ ಮಾವುತರು ಮತ್ತು
ಕವಾಡಿಗಳವರೊಂದಿಗೆ ಅವುರುಗಳ ಕುಟುಂಬ ವರ್ಗದವರು ಸಹಾ ಜೊತೆಯಲ್ಲಿ ಬರುವುದರಿಂದ ಅವರ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ
ನೀರು ನಿರೋಧಕ ಶೆಡ್ಡಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ. ಅಲ್ಲದೇ ಅವರ ದಿನನಿತ್ಯದ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಸಹಾ ಪೂರೈಸಲಾಗುತ್ತದೆ. ಇವರೊಂದಿಗೆ ಆನೆಗಳಿಗೂ
ಸಹಾ ಶೆಡ್ಡುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಮಾವುತ ಮತ್ತು ಕವಾಡಿಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ತಾತ್ಕಾಲಿಕವಾಗಿ ಗ್ರಂಥಾಲಯನ್ನು ಹಾಗೂ ಪಾಠಶಾಲೆಯನ್ನು ಮತ್ತು ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸದರಿ ಸ್ಥಳದಲ್ಲಿ ಒಂದು ಆರ್ಯವೇದದ ಆಸ್ಪತ್ರೆಯನ್ನು ಸಹಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತೆರೆಯಲಾಗಿರುತ್ತದೆ. ಇವುಗಳಲ್ಲದೆ ರಕ್ಷಣೆಯ ದೃಷ್ಟಿಯಿಂದ ಆನೆಗಳ ಶಿಬಿರ
ಹಾಗೂ ಶೆಡ್ಡ ಆವರಣಗಳಲ್ಲಿ ಸಿಸಿಟಿವಿಯನ್ನು ಸಹಾ ಅಳವಡಿಸಲಾಗಿರುತ್ತದೆ.

ಎರಡನೇ ತಂಡದ ಆನೆಗಳ ಆಗಮನ

ದಿನಾಂಕ:14-9-2018 ರಂದು ಎರಡನೇ ತಂಡದಲ್ಲಿ ಅಭಿಮನ್ಯು, ಬಲರಾಮ, ಕಾವೇರಿ,
ವಿಜಯ, ಪ್ರಶಾಂತ ಮತ್ತು ದ್ರೋಣ ಆನೆಗಳನ್ನು ಮೈಸೂರು ಅರಮನೆಯ ಜಯಮಾರ್ತಾಂಡ
ಗೇಟ್‍ನ ಬಳಿ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜಾ
ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಬರಮಾಡಿಕೊಳ್ಳಲಾಯಿತು.

ವಿಶೇಷ ತರಬೇತಿ ಮತ್ತು ತಾಲೀಮು

ದಿನಾಂಕ: 6-9-2018 ರಿಂದ ಮೊದಲನೆ ತಂಡದ ಆನೆಗಳಿಗೆ ಯಾವುದೇ ಭಾರವಿಲ್ಲದೆ
ವಾಹನಗಳ ಶಬ್ದಕ್ಕೆ ಹಾಗೂ ಜನಸಂದಣಿಗೆ ಮತ್ತು ರಾತ್ರಿ ದೀಪದ ಬೆಳೆಕಿಗೆ ಹೊಂದಿಕೊಳ್ಳುವ
ಸಲುವಾಗಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಮೈಸೂರು ಅರಮನೆಯಿಂದ
ಬನ್ನಿಮಂಟಪದವರೆಗೆ ತಾಲೀಮು ನೀಡಲಾಗುತ್ತಿದ್ದು, ನಂತರ ದಿನಾಂಕ 14-9-2018 ರಿಂದ
ಹಂತಹಂತವಾಗಿ 350 ಕೆ.ಜಿ ಯಿಂದ 750 ಕೆಜಿಯರವರೆಗೆ ಭಾರವನ್ನು ಗಂಡು ಆನೆಗಳ ಬೆನ್ನಿಗೆ ಕಟ್ಟುವ ತೊಟ್ಟಿಲಿಗೆ ಮರಳು ಮೂಟೆಗಳನ್ನು ತುಂಬಿ ಪ್ರತಿ ದಿನ ತಾಲೀಮು ನೀಡಲಾಗುತ್ತಿದೆ. ಅಲ್ಲದೇ ವಿಜಯದಶಮಿಯಂದು ಹಾರಿಸುವ ಕುಶಲತೋಪುಗಳ ಶಬ್ದಕ್ಕೆ ಅಂಜದೆ ಇರುವುದಕ್ಕಾಗಿ ದಿನಾಂಕ: 27-9-2018 ರಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಂದರೆ ಸ್ವಲ್ಪ ದೂರದಲ್ಲಿ ಕುಶಲ ತೋಪುಗಳನ್ನು ಇಟ್ಟು ಸಿಡಿಮದ್ದನ್ನು ಸಿಡಿಸುತ್ತಾರೆ. ಈ ರೀತಿ 3-4 ಬಾರಿ ಆನೆಗಳಿಗೆ ಸಿಡಿಮದ್ದಿನ ತಾಲೀಮನ್ನು ಮಾಡಿಸಲಾಗುವುದು.

ವಿಶೇಷ ಆಹಾರಪದಾರ್ಥಗಳು ಮತ್ತುಮೇವು ಪೂರೈಕೆ

ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಇಲಾಖಾ ಆನೆಗಳು ಸುಮಾರು 50
ರಿಂದ 55 ದಿನಗಳವರಿಗೆ ಮೈಸೂರಿನಲ್ಲಿ ವಾಸ್ತವ್ಯ ಮಾಡಲಾಗುತ್ತದೆ. ಈ ಅವಧಿಯಲ್ಲಿ ಆನೆಗಳ ಬಗ್ಗೆ ವಹಿಸುವ ಎಚ್ಚರ ತುಂಬ ನಾಜೂಕಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಹೆಚ್ಚಿನ ಮುತುವರ್ಜಿಯಿಂದ ನೋಡಿಕೊಳ್ಳಲಾಗುತ್ತಿದೆ.ಆನೆಗಳಿಗೆ ಪ್ರತಿ ದಿನ ಮರದ ಸೊಪ್ಪು, ಹಸಿಹುಲ್ಲು, ಕಬ್ಬುಗಳನ್ನು ನೀಡಲಾಗುತ್ತಿದ್ದು ಅದರ ಜೊತೆಗೆ ಪ್ರತಿ ದಿನ ಎರಡು ಬಾರಿ ಭತ್ತ, ಹಿಂಡಿ, ಕಾಯಿ, ಬೆಲ್ಲ ಯುಕ್ತ ಪ್ರಮಾಣದಲ್ಲಿ ಉಪ್ಪನ್ನು ಸೇರಿಸಿ ಭತ್ತದ ಹುಲ್ಲಿನಲ್ಲಿ ಕುಸುರೆ ಕಟ್ಟಿ ತಿನ್ನಿಸಲಾಗುತ್ತದೆ. ಅಲ್ಲದೆ ದಿನಕ್ಕೆರಡು ಬಾರಿ ಬೆಳಗ್ಗೆ 6.30 ಗಂಟೆಗೆ ಮತ್ತು ಸಂಜೆ 7.30 ಗಂಟೆಗೆ ಬೇಯಿಸಿದ ಹೆಸರುಕಾಳು, ಉದ್ದಿನಕಾಳು, ಕುಸುಬಲಕ್ಕಿ, ಗೋದಿ, ಈರುಳ್ಳಿ ಜೊತೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಬೇಯಿಸಿ ಆದು ತಣ್ಣಗಾದ ಮೇಲೆ ಹಸಿ ತರಕಾರಿಗಳನ್ನು ಮತ್ತು ಬೆಣ್ಣೆಯನ್ನು ಸೇರಿಸಿ ಪ್ರತಿಯೊಂದು ಆನೆಗೂ ಯುಕ್ತ ಪ್ರಮಾಣದಲ್ಲಿ ತಿನ್ನಿಸಲಾಗುತ್ತದೆ.
ಅಲ್ಲದೇ ಪಶುವೈದ್ಯಾಧಿಕಾರಿಗಳು ಪ್ರತಿ ದಿನ ಆನೆ ಶಿಬಿರಗಳಿಗೆ ಬೇಟಿ ಅವುಗಳ ಆರೋಗ್ಯ ತಪಾಸಣೆ, ಆಹಾರ ಪರಿಶೀಲನೆ, ಆನೆಗಳಿಗೆ ತರಬೇತಿ ಮತ್ತು ಅವಶ್ಯವಿದ್ದಲ್ಲಿ ಚಿಕಿತ್ಸೆಯನ್ನು ನೀಡಿ ಔಷಧಿಗಳನ್ನು ನೀಡುತ್ತಾರೆ.

ಪೂಜಾ ಕಾರ್ಯಕ್ರಮಗಳು

ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳಿಗೆ ವಿಶೇಷ ದಿನಗಳಂದು
ಅಂದರೆ ಗಣೇಶ ಚತುರ್ಥಿ ಮತ್ತು ಇತರೆ ಹಬ್ಬದ ದಿನಗಳಂದು ಅರಣ್ಯ ಇಲಾಖೆಯ ಹಿರಿಯ
ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು
ನೆರವೇರಿಸಲಾಗುತ್ತದೆ.

ವನ್ಯಜೀವಿ ಸಪ್ತಾಹ-2018

ವನ್ಯಜೀವಿ ಸಪ್ತಾಹವನ್ನು ಪ್ರತಿ ವರ್ಷವು ಅಕ್ಟೋಬರ್ ಮಾಹೆಯ 2ನೇ ತಾರೀಖಿನಿಂದ
8ನೇ ತಾರೀಖಿನವರಗೆ ಆಚರಣೆ ಮಾಡಲಾಗುತ್ತದೆ. ವನ್ಯಜೀವಿ ಸಪ್ತಾಹವು ಸಾರ್ವಜನಿಕರಲ್ಲಿ ವನ್ಯಜೀವಿ ಸಂಪತನ್ನು ಉಳಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿರುತ್ತದೆ. 2018ನೇ ಸಾಲಿನಲ್ಲಿ ಅಕ್ಟೋಬರ್ 2 ರಿಂದ 8ನೇ ತಾರೀಖಿನವರಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ದಸರಾ ಮಹೋತ್ಸವದಲ್ಲಿ
ಭಾಗವಹಿಸಲಿರುವ ಇಲಾಖಾ ಆನೆಗಳಿಗೆ ಬಟ್ಟೆಯಿಂದ ತಯಾರಿಸಿದ ಗೌನಗಳ ಮೇಲೆ ವನ್ಯಜೀವಿಗಳ ವಿವಿಧ ಸ್ಲೋಗನ್‍ಗಳನ್ನು ಬರೆದು ಅವುಗಳನ್ನು ಆನೆಗಳು ಬೆಳಗ್ಗೆ ಮತ್ತು ಸಂಜೆ ತಾಲೀಮು ಮಾಡುವ ವೇಳೆ ಅಂದರೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುವ ತಾಲೀಮಿನ ವೇಳೆ ಆನೆಗಳ ಮೇಲೆ ಅವುಗಳನ್ನು ಹೊದಿಸಿ ತಾಲೀಮು ನಡೆಸಲಾಯಿತು. ಈ
ರೀತಿಯಾಗಿ ಸಾರ್ವಜನಿಕರಿಗೆ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲಾಯಿತು.

ಕಿಟ್ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು

ದಿನಾಂಕ: 5-10-2018 ರಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಸಚಿವರಾದ
ಶ್ರೀ ಶಂಕರ್ ಆರ್ ರವರ ಅಧ್ಯಕ್ಷತೆಯಲ್ಲಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ
ಉಪಸ್ಥಿತಿಯಲ್ಲಿ ಕಿಟ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸದರಿ ದಿನದಂದು ಮಾನ್ಯ ಅರಣ್ಯ ಸಚಿವರು ಆನೆಗಳಿಗೆ ಪೂಜೆಯನ್ನು ನೆರವೇರಿಸಿ, ಮಾವುತರು ಮತ್ತು ಕವಾಡಿಗಳಿಗೆ ದಿನನಿತ್ಯದ ನಿರ್ವಹಣೆಗೆ ಅವಶ್ಯವಿದ್ದ ಕೊಡೆ, ವಾಟರ್ ಬಾಟಲ್, ಜಿರ್ಕಿನ್, ಟೋಪಿ, ಟಿ-ಶರ್ಟ, ಶೂ ಮತ್ತು ಬ್ಯಾಗುಗಳನ್ನೊಳಗೊಂಡ ಕಿಟ್‍ನ್ನು ವಿತರಣೆ ಮಾಡಿದರು. ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳು ಆನೆಗಳ ಮಾವುತರು ಮತ್ತು ಕವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ದಿನಗಳಂದು ಉಚಿತವಾಗಿ ಆರೋಗ್ಯ ತಪಾಸಣೆ, ವಸ್ತ್ರಗಳನ್ನು ನೀಡುವುದು ಮತ್ತು ಭೋಜನಕೂಟವನ್ನು ಏರ್ಪಡಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ19 hours ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ19 hours ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ2 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ3 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ4 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ4 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending