Connect with us

ದಿನದ ಸುದ್ದಿ

ಮೈಸೂರು ದಸರಾ ಗಜಪಯಣ ಹಿನ್ನೆಲೆ; ಆನೆಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ..?

Published

on

ಸುದ್ದಿದಿನ,ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಗಜಪಯಣ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದು ಮಹಾರಾಜರ ಕಾಲದಿಂದಲೂ ಸಹ ಗಜಪಯಣ ಕಾರ್ಯಕ್ರಮವು ಜರುಗುತ್ತಿದ್ದು, ಇಂದಿನ ಕಾರ್ಯಕ್ರಮಗಳಿಗಿಂತ ವಿಭನ್ನವಾಗಿತ್ತು. ಮೈಸೂರು ಮಹಾರಾಜರು ದಸರಾ ಮಹೋತ್ಸವದ ಸಂದರ್ಭದಲ್ಲಿ ಅಂಬಾರಿಯನ್ನು ಹೊರುವುದಕ್ಕಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾಡಿನಲ್ಲಿ ಪಳಗಿಸಿರುವ ಆನೆಗಳನ್ನು ಆಯ್ಕೆ ಮಾಡಿ ನಿಗದಿತ ಶುಭದಿನದಂದು ಶ್ಲೋಕಗಳನ್ನು ಪಠಿಸುವ ಮೂಲಕ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತವನ್ನು ಮಾಡಿ ನಂತರ ಸದರಿ ಸ್ಥಳದಿಂದ ಕಾಲ್ನಡಿಗೆ ಮೂಲಕ ಮೈಸೂರು ಅರಮನೆ ಆವರಣಕ್ಕೆ ಕರೆತರುತ್ತಿದ್ದರು. ಆನೆಗಳಿಗೆ ಭಕ್ತಿ ಮತ್ತು ಶ್ರದ್ದೆಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ದಿನಗಳನ್ನು ಆಚರಣೆ ಮಾಡಲಾಗುತ್ತಿತ್ತು.

ಇಂದು ಮಾನವ ಜಗತ್ತನ್ನು ಆಧುನೀಕರಣಗೊಳಿಸುವ ತವಕದಲ್ಲಿ ಕಾಡುಗಳನ್ನು ನಾಶಮಾಡಿ ಕಾಂಕ್ರೀಟಿಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಜಾಗತಿಕ ವಲಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿ ವಾತವರಣ ಬದಲಾವಣೆ, ರಸ್ತೆಯ ಮೇಲೆ ವಾಹನಗಳ ದಟ್ಟಣೆ, ಶಬ್ದ ಮಾಲಿನ್ಯದಿಂದ ಆನೆಗಳನ್ನು ಕಾಡಿನಿಂದ ಮೈಸೂರಿಗೆ ಕಾಲ್ನಡಿಗೆ ಮೂಲಕ ಕರೆತರಲು ಕಷ್ಟವಾಗಿರುವುದನ್ನು ಅರಿತ ಅರಣ್ಯ ಇಲಾಖೆ, ಆನೆಗಳ ಸುರಕ್ಷತೆಗಾಗಿ ಲಾರಿಗಳ ಮೂಲಕ ಸಾಗಾಣಿಕೆ ಮಾಡಲು 2004ರಲ್ಲಿ ತೀರ್ಮಾನಿಸಲಾಯಿತು. 2004ನೇ ಸಾಲಿನಿಂದ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕ ಪೂಜೆಗಳೊಂದಿಗೆ ಚಾಲನೆ ನೀಡಲಾಗುತ್ತಿರುತ್ತದೆ.

ಸಾಂಪ್ರದಾಯಿಕ ಪೂಜೆಗಳು ನೆರವೇರಿದ ನಂತರ ಆನೆಗಳನ್ನು ಲಾರಿಯ ಮೂಲಕ ಸುರಕ್ಷಿತವಾಗಿ ಮೈಸೂರಿಗೆ ಸಾಗಾಣಿಕೆ ಮಾಡಲಾಗುವುದು.
ನಂತರದ ದಿನಗಳಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ನಡೆಯುತ್ತಿದ್ದ ಸಾಂಪ್ರದಾಯಿಕ ಪೂಜೆ ಕಾರ್ಯಕ್ರಮವನ್ನು ಹುಣಸೂರು ತಾಲ್ಲೂಕು, ನಾಗಪುರ ಗಿರಿಜನ ಹಾಡಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಯನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ನೆರವೇರಿಸಿಕೊಂಡು ಬರಲಾಗುತ್ತಿರುತ್ತದೆ.

ಸದರಿ ಸಂದರ್ಭದಲ್ಲಿ ಸಾಂಪ್ರದಾಯಿಕ ರಾಗಗಳನ್ನು ನುಡಿಸುವ ಸಂಗೀತಗಾರರು ಹಾಗೂ ಪೂರ್ಣಕುಂಬದೊಂದಿಗೆ ಶ್ಲೋಕಗಳನ್ನು ಪಠಿಸುವುದು ಹಾಗೂ ಆನೆಗಳ ಸುರಕ್ಷತೆ ಮತ್ತು ಸಮಾಜ ಸಾಮೂಹಿಕ ಕಲ್ಯಾಣಕ್ಕಾಗಿ ಗಣೇಶ ಅಷ್ಟೋತ್ತರ ಸೇರಿದಂತೆ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಆನೆಗಳಿಗೆ ತೆಂಗಿನಕಾಯಿ, ಬೆಲ್ಲ ಮತ್ತು ಕಬ್ಬನ್ನು ನೀಡಿ ಸ್ವಾಗತವನ್ನು ಕೋರಲಾಗುತ್ತದೆ. ಗಜಪಯಣ ಕಾರ್ಯಕ್ರಮದ ದಿನ ಆನೆಗಳನ್ನು ವಿವಿಧ ಬಣ್ಣಗಳಿಂದ ಅಲಂಕಾರ ಗೊಳಿಸಿ, ವಿಶೇಷ ವಿನ್ಯಾಸವುಳ್ಳ ಹಣೆಪಟ್ಟಿಯನ್ನು ಹಾಕಲಾಗುವುದು. ಅಲ್ಲದೆ ಆನೆಗಳ ಮಾವುತರು ಮತ್ತು ಕವಾಡಿಗಳು ಸಹಾ ಸಮವಸ್ತ್ರಗಳನ್ನು ಧರಿಸುತ್ತಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು ಹಾಗೂ ಗಣ್ಯವ್ಯಕ್ತಿಗಳು ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ ಬೆಲ್ಲ ಮತ್ತು ಕಬ್ಬನ್ನು ನೀಡುತ್ತಾರೆ. ಮಾವುತರು ಮತ್ತು ಕವಾಡಿಗಳವರಿಗೆ ತಾಂಬೂಲಗಳನ್ನು ನೀಡಿ ಸ್ವಾಗತವನ್ನು ಕೋರಲಾಗುವುದು. ನಂತರ ಅವರಿಗೆ ವಿಶೇಷ ಭೋಜನವನ್ನು ಏರ್ಪಡಿಸಲಾಗುತ್ತದೆ. ಆನೆಗಳನ್ನು ರ್ಯಾಂಪ್ಸ್‍ಗಳ ಮೂಲಕ ಲಾರಿಗಳಿಗೆ ಹತ್ತಿಸಿ, ಅರಣ್ಯ ಇಲಾಖೆಯ ಮತ್ತು ಪೋಲೀಸ್ ಸಿಬ್ಬಂದಿ ಬಂದೂಬಸ್ತಿನೊಂದಿಗೆ ಮೈಸೂರಿಗೆ ಸಾಗಾಣಿಕೆ ಮಾಡಲಾಗುತ್ತದೆ.

ಆನೆಗಳ ಆಯ್ಕೆಯ ಪ್ರಕ್ರಿಯೆ, ಆರೋಗ್ಯ ತಪಾಸಣೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳನ್ನು ಈ ಎಲ್ಲಾ ಕಾರ್ಯಕ್ರಮಗಳಿಗಿಂತ ಮುಂಚೆ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪಶುವೈದ್ಯಾಧಿಕಾರಿಗಳೊಂದಿಗೆ ವಿವಿಧ ಆನೆ ಶಿಬಿರಗಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕಾಗಿ ಆನೆಗಳನ್ನು ಆಯ್ಕೆ ಮಾಡಲು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ ಚಳಕಾಪುರೆ ಮತ್ತು ಪಶುವೈದ್ಯಾಧಿಕಾರಿ ಡಾ. ಡಿ.ಎನ್. ನಾಗರಾಜು ಅವರು ನಾಗರಹೊಳೆ, ಬಂಡೀಪುರ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಗೆ ಬರುವ ವಿವಿಧ ಆನೆಗಳ ಶಿಬಿರಗಳಲ್ಲಿ ಇರುವ ಸಾಕಾನೆಗಳ ಆರೋಗ್ಯ ತಪಾಸಣೆ ಮಾಡಿ ಒಟ್ಟು 16 ಆನೆಗಳನ್ನು ಆಯ್ಕೆ ಮಾಡಿರುತ್ತಾರೆ. ನಂತರ ದಿನಾಂಕ:19-7-2018 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಿ,
16 ಆನೆಗಳ ವಿವರಗಳನ್ನು ಪಡೆದು ಅದರಲ್ಲಿ 12 ಆನೆಗಳನ್ನು ಆಯ್ಕೆ ಮಾಡಿ ದಸರಾ ಮಹೋತ್ಸವಕ್ಕೆ ಕರೆತರಲು ತೀರ್ಮಾನಿಸಲಾಯಿತು.

ಗಜಪಯಣ-2018 (ವೀರನಹೊಸಹಳ್ಳಿ ಬಳಿ)
ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ 2018ರ ಮೈಸೂರು ದಸರಾ ಮಹೋತ್ಸವದ
ಅಂಗವಾಗಿ ಗಜಪಯಣ ಕಾರ್ಯಕ್ರಮವನ್ನು ಸೆಪ್ಟಂಬರ್ ಮಾಹೆಯ 2ನೇ ತಾರೀಖಿನಂದು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯದ ಹೆಬ್ಬಾಗಲಿನಲ್ಲಿ ಪೂಜಾ ಕಾರ್ಯಕ್ರಮವನ್ನು ಹಾಗೂ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಡಗೂರು ಹೆಚ್ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡ ರವರು ವಿದ್ಯುಕ್ತ ಚಾಲನೆಯನ್ನು ನೀಡಿರುತ್ತಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರವಾಸೋದ್ಯಮ, ರೇಷ್ಮೆ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಮತ್ತು ಮಾನ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಜಯಮಾಲ
ರವರು ಭಾಗವಹಿಸಿರುತ್ತಾರೆ. ಅಲ್ಲದೇ ಮೈಸೂರು ಪ್ರಾಂತ್ಯದ ಮಾನ್ಯ ಲೋಕಸಭಾ ಸದಸ್ಯರು, ಮಾನ್ಯ ಶಾಸಕರು, ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ
ಉಪಾಧ್ಯಕ್ಷರುಗಳು ಭಾಗವಹಿಸಿರುತ್ತಾರೆ.

ಗಜಪಯಣದ ಕಾರ್ಯಕ್ರಮದ ನಂತರ ಮೊದಲನೆ ತಂಡದಲ್ಲಿ ಅರ್ಜುನ, ವರಲಕ್ಷ್ಮಿ,
ಚೈತ್ರ, ಗೋಪಿ, ವಿಕ್ರಮ ಮತ್ತು ಧನಂಜಯ ಆನೆಗಳನ್ನು ಮೈಸೂರಿನ ಅರಣ್ಯ ಭವನಕ್ಕೆ
ಕರೆತರಲಾಯಿತು. ಸದರಿ ಆನೆಗಳನ್ನು ದಿನಾಂಕ:5-9-2018 ರಂದು ಮೈಸೂರು ಅರಮನೆ
ಆವರಣಕ್ಕೆ ಬರಮಾಡಿಕೊಳ್ಳಲು ಶುಭ ದಿನ ನಿಗಧಿಯಾದ್ದರಿಂದ, ಮೂರು ದಿನಗಳವರೆಗೆ
ಮೈಸೂರು ಅರಣ್ಯ ಭವನದಲ್ಲಿ ವಾಸ್ತವ್ಯ ಮಾಡಿದ್ದವು. ದಿನಾಂಕ: 5-9-2018 ರಂದು ಅರಣ್ಯ ಭವನದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು (ಹುಲಿ ಮತ್ತು ಆನೆ ಯೋಜನೆ) ಮೈಸೂರು ರವರಾದ ಶ್ರೀ ಜಗತ್ ರಾಮ್ ಭಾ.ಅ.ಸೇ. ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ಮೈಸೂರು ರವರಾದ ಶ್ರೀ ವೆಂಕಟೇಸನ್ ಎಸ್
ಬಾs .ಅ.ಸೇ. ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಪ್ರಾದಾಯಿಕ ಪೂಜೆಯನ್ನು ಸಲ್ಲಿಸಿದ ನಂತರ ಬಲ್ಲಾಳ್ ವೃತ್ತ–ರಾಮಸ್ವಾಮಿ ವೃತ್ತ ಮತ್ತು 100 ಅಡಿ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಅರಮನೆಯ ಜಯಮಾರ್ತಾಂಡ ಗೇಟ್‍ನ ಬಳಿ ಕರೆತರಲಾಗುತ್ತದೆ. ಅಲ್ಲಿ
ಗಣ್ಯರು ಹಾಗೂ ಅಧಿಕಾರಿಗಳು ಪೂಜೆಯನ್ನು ನೆರವೇರಿಸುವ ಮೂಲಕ ಅರಮನೆಯ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.

ಸೌಲಭ್ಯಗಳು : ಮಾವುತರು ಹಾಗೂ ಅವರ ಕುಟುಂಬ ವರ್ಗದವರಿಗೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳ ಮಾವುತರು ಮತ್ತು
ಕವಾಡಿಗಳವರೊಂದಿಗೆ ಅವುರುಗಳ ಕುಟುಂಬ ವರ್ಗದವರು ಸಹಾ ಜೊತೆಯಲ್ಲಿ ಬರುವುದರಿಂದ ಅವರ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ
ನೀರು ನಿರೋಧಕ ಶೆಡ್ಡಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ. ಅಲ್ಲದೇ ಅವರ ದಿನನಿತ್ಯದ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಸಹಾ ಪೂರೈಸಲಾಗುತ್ತದೆ. ಇವರೊಂದಿಗೆ ಆನೆಗಳಿಗೂ
ಸಹಾ ಶೆಡ್ಡುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಮಾವುತ ಮತ್ತು ಕವಾಡಿಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ತಾತ್ಕಾಲಿಕವಾಗಿ ಗ್ರಂಥಾಲಯನ್ನು ಹಾಗೂ ಪಾಠಶಾಲೆಯನ್ನು ಮತ್ತು ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸದರಿ ಸ್ಥಳದಲ್ಲಿ ಒಂದು ಆರ್ಯವೇದದ ಆಸ್ಪತ್ರೆಯನ್ನು ಸಹಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತೆರೆಯಲಾಗಿರುತ್ತದೆ. ಇವುಗಳಲ್ಲದೆ ರಕ್ಷಣೆಯ ದೃಷ್ಟಿಯಿಂದ ಆನೆಗಳ ಶಿಬಿರ
ಹಾಗೂ ಶೆಡ್ಡ ಆವರಣಗಳಲ್ಲಿ ಸಿಸಿಟಿವಿಯನ್ನು ಸಹಾ ಅಳವಡಿಸಲಾಗಿರುತ್ತದೆ.

ಎರಡನೇ ತಂಡದ ಆನೆಗಳ ಆಗಮನ

ದಿನಾಂಕ:14-9-2018 ರಂದು ಎರಡನೇ ತಂಡದಲ್ಲಿ ಅಭಿಮನ್ಯು, ಬಲರಾಮ, ಕಾವೇರಿ,
ವಿಜಯ, ಪ್ರಶಾಂತ ಮತ್ತು ದ್ರೋಣ ಆನೆಗಳನ್ನು ಮೈಸೂರು ಅರಮನೆಯ ಜಯಮಾರ್ತಾಂಡ
ಗೇಟ್‍ನ ಬಳಿ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜಾ
ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಬರಮಾಡಿಕೊಳ್ಳಲಾಯಿತು.

ವಿಶೇಷ ತರಬೇತಿ ಮತ್ತು ತಾಲೀಮು

ದಿನಾಂಕ: 6-9-2018 ರಿಂದ ಮೊದಲನೆ ತಂಡದ ಆನೆಗಳಿಗೆ ಯಾವುದೇ ಭಾರವಿಲ್ಲದೆ
ವಾಹನಗಳ ಶಬ್ದಕ್ಕೆ ಹಾಗೂ ಜನಸಂದಣಿಗೆ ಮತ್ತು ರಾತ್ರಿ ದೀಪದ ಬೆಳೆಕಿಗೆ ಹೊಂದಿಕೊಳ್ಳುವ
ಸಲುವಾಗಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಮೈಸೂರು ಅರಮನೆಯಿಂದ
ಬನ್ನಿಮಂಟಪದವರೆಗೆ ತಾಲೀಮು ನೀಡಲಾಗುತ್ತಿದ್ದು, ನಂತರ ದಿನಾಂಕ 14-9-2018 ರಿಂದ
ಹಂತಹಂತವಾಗಿ 350 ಕೆ.ಜಿ ಯಿಂದ 750 ಕೆಜಿಯರವರೆಗೆ ಭಾರವನ್ನು ಗಂಡು ಆನೆಗಳ ಬೆನ್ನಿಗೆ ಕಟ್ಟುವ ತೊಟ್ಟಿಲಿಗೆ ಮರಳು ಮೂಟೆಗಳನ್ನು ತುಂಬಿ ಪ್ರತಿ ದಿನ ತಾಲೀಮು ನೀಡಲಾಗುತ್ತಿದೆ. ಅಲ್ಲದೇ ವಿಜಯದಶಮಿಯಂದು ಹಾರಿಸುವ ಕುಶಲತೋಪುಗಳ ಶಬ್ದಕ್ಕೆ ಅಂಜದೆ ಇರುವುದಕ್ಕಾಗಿ ದಿನಾಂಕ: 27-9-2018 ರಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಂದರೆ ಸ್ವಲ್ಪ ದೂರದಲ್ಲಿ ಕುಶಲ ತೋಪುಗಳನ್ನು ಇಟ್ಟು ಸಿಡಿಮದ್ದನ್ನು ಸಿಡಿಸುತ್ತಾರೆ. ಈ ರೀತಿ 3-4 ಬಾರಿ ಆನೆಗಳಿಗೆ ಸಿಡಿಮದ್ದಿನ ತಾಲೀಮನ್ನು ಮಾಡಿಸಲಾಗುವುದು.

ವಿಶೇಷ ಆಹಾರಪದಾರ್ಥಗಳು ಮತ್ತುಮೇವು ಪೂರೈಕೆ

ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಇಲಾಖಾ ಆನೆಗಳು ಸುಮಾರು 50
ರಿಂದ 55 ದಿನಗಳವರಿಗೆ ಮೈಸೂರಿನಲ್ಲಿ ವಾಸ್ತವ್ಯ ಮಾಡಲಾಗುತ್ತದೆ. ಈ ಅವಧಿಯಲ್ಲಿ ಆನೆಗಳ ಬಗ್ಗೆ ವಹಿಸುವ ಎಚ್ಚರ ತುಂಬ ನಾಜೂಕಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಹೆಚ್ಚಿನ ಮುತುವರ್ಜಿಯಿಂದ ನೋಡಿಕೊಳ್ಳಲಾಗುತ್ತಿದೆ.ಆನೆಗಳಿಗೆ ಪ್ರತಿ ದಿನ ಮರದ ಸೊಪ್ಪು, ಹಸಿಹುಲ್ಲು, ಕಬ್ಬುಗಳನ್ನು ನೀಡಲಾಗುತ್ತಿದ್ದು ಅದರ ಜೊತೆಗೆ ಪ್ರತಿ ದಿನ ಎರಡು ಬಾರಿ ಭತ್ತ, ಹಿಂಡಿ, ಕಾಯಿ, ಬೆಲ್ಲ ಯುಕ್ತ ಪ್ರಮಾಣದಲ್ಲಿ ಉಪ್ಪನ್ನು ಸೇರಿಸಿ ಭತ್ತದ ಹುಲ್ಲಿನಲ್ಲಿ ಕುಸುರೆ ಕಟ್ಟಿ ತಿನ್ನಿಸಲಾಗುತ್ತದೆ. ಅಲ್ಲದೆ ದಿನಕ್ಕೆರಡು ಬಾರಿ ಬೆಳಗ್ಗೆ 6.30 ಗಂಟೆಗೆ ಮತ್ತು ಸಂಜೆ 7.30 ಗಂಟೆಗೆ ಬೇಯಿಸಿದ ಹೆಸರುಕಾಳು, ಉದ್ದಿನಕಾಳು, ಕುಸುಬಲಕ್ಕಿ, ಗೋದಿ, ಈರುಳ್ಳಿ ಜೊತೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಬೇಯಿಸಿ ಆದು ತಣ್ಣಗಾದ ಮೇಲೆ ಹಸಿ ತರಕಾರಿಗಳನ್ನು ಮತ್ತು ಬೆಣ್ಣೆಯನ್ನು ಸೇರಿಸಿ ಪ್ರತಿಯೊಂದು ಆನೆಗೂ ಯುಕ್ತ ಪ್ರಮಾಣದಲ್ಲಿ ತಿನ್ನಿಸಲಾಗುತ್ತದೆ.
ಅಲ್ಲದೇ ಪಶುವೈದ್ಯಾಧಿಕಾರಿಗಳು ಪ್ರತಿ ದಿನ ಆನೆ ಶಿಬಿರಗಳಿಗೆ ಬೇಟಿ ಅವುಗಳ ಆರೋಗ್ಯ ತಪಾಸಣೆ, ಆಹಾರ ಪರಿಶೀಲನೆ, ಆನೆಗಳಿಗೆ ತರಬೇತಿ ಮತ್ತು ಅವಶ್ಯವಿದ್ದಲ್ಲಿ ಚಿಕಿತ್ಸೆಯನ್ನು ನೀಡಿ ಔಷಧಿಗಳನ್ನು ನೀಡುತ್ತಾರೆ.

ಪೂಜಾ ಕಾರ್ಯಕ್ರಮಗಳು

ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳಿಗೆ ವಿಶೇಷ ದಿನಗಳಂದು
ಅಂದರೆ ಗಣೇಶ ಚತುರ್ಥಿ ಮತ್ತು ಇತರೆ ಹಬ್ಬದ ದಿನಗಳಂದು ಅರಣ್ಯ ಇಲಾಖೆಯ ಹಿರಿಯ
ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು
ನೆರವೇರಿಸಲಾಗುತ್ತದೆ.

ವನ್ಯಜೀವಿ ಸಪ್ತಾಹ-2018

ವನ್ಯಜೀವಿ ಸಪ್ತಾಹವನ್ನು ಪ್ರತಿ ವರ್ಷವು ಅಕ್ಟೋಬರ್ ಮಾಹೆಯ 2ನೇ ತಾರೀಖಿನಿಂದ
8ನೇ ತಾರೀಖಿನವರಗೆ ಆಚರಣೆ ಮಾಡಲಾಗುತ್ತದೆ. ವನ್ಯಜೀವಿ ಸಪ್ತಾಹವು ಸಾರ್ವಜನಿಕರಲ್ಲಿ ವನ್ಯಜೀವಿ ಸಂಪತನ್ನು ಉಳಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿರುತ್ತದೆ. 2018ನೇ ಸಾಲಿನಲ್ಲಿ ಅಕ್ಟೋಬರ್ 2 ರಿಂದ 8ನೇ ತಾರೀಖಿನವರಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ದಸರಾ ಮಹೋತ್ಸವದಲ್ಲಿ
ಭಾಗವಹಿಸಲಿರುವ ಇಲಾಖಾ ಆನೆಗಳಿಗೆ ಬಟ್ಟೆಯಿಂದ ತಯಾರಿಸಿದ ಗೌನಗಳ ಮೇಲೆ ವನ್ಯಜೀವಿಗಳ ವಿವಿಧ ಸ್ಲೋಗನ್‍ಗಳನ್ನು ಬರೆದು ಅವುಗಳನ್ನು ಆನೆಗಳು ಬೆಳಗ್ಗೆ ಮತ್ತು ಸಂಜೆ ತಾಲೀಮು ಮಾಡುವ ವೇಳೆ ಅಂದರೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುವ ತಾಲೀಮಿನ ವೇಳೆ ಆನೆಗಳ ಮೇಲೆ ಅವುಗಳನ್ನು ಹೊದಿಸಿ ತಾಲೀಮು ನಡೆಸಲಾಯಿತು. ಈ
ರೀತಿಯಾಗಿ ಸಾರ್ವಜನಿಕರಿಗೆ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲಾಯಿತು.

ಕಿಟ್ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು

ದಿನಾಂಕ: 5-10-2018 ರಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಸಚಿವರಾದ
ಶ್ರೀ ಶಂಕರ್ ಆರ್ ರವರ ಅಧ್ಯಕ್ಷತೆಯಲ್ಲಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ
ಉಪಸ್ಥಿತಿಯಲ್ಲಿ ಕಿಟ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸದರಿ ದಿನದಂದು ಮಾನ್ಯ ಅರಣ್ಯ ಸಚಿವರು ಆನೆಗಳಿಗೆ ಪೂಜೆಯನ್ನು ನೆರವೇರಿಸಿ, ಮಾವುತರು ಮತ್ತು ಕವಾಡಿಗಳಿಗೆ ದಿನನಿತ್ಯದ ನಿರ್ವಹಣೆಗೆ ಅವಶ್ಯವಿದ್ದ ಕೊಡೆ, ವಾಟರ್ ಬಾಟಲ್, ಜಿರ್ಕಿನ್, ಟೋಪಿ, ಟಿ-ಶರ್ಟ, ಶೂ ಮತ್ತು ಬ್ಯಾಗುಗಳನ್ನೊಳಗೊಂಡ ಕಿಟ್‍ನ್ನು ವಿತರಣೆ ಮಾಡಿದರು. ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳು ಆನೆಗಳ ಮಾವುತರು ಮತ್ತು ಕವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ದಿನಗಳಂದು ಉಚಿತವಾಗಿ ಆರೋಗ್ಯ ತಪಾಸಣೆ, ವಸ್ತ್ರಗಳನ್ನು ನೀಡುವುದು ಮತ್ತು ಭೋಜನಕೂಟವನ್ನು ಏರ್ಪಡಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading
Advertisement

Title

ದಿನದ ಸುದ್ದಿ4 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ4 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ4 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ4 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ4 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ4 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ4 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ4 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ4 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ4 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending