Connect with us

ದಿನದ ಸುದ್ದಿ

ಮೈಸೂರು ದಸರಾ | ಮೆರವಣಿಗೆಯಲ್ಲಿ ಸಾಗುವ ಸ್ತಬ್ಧ ಚಿತ್ರಗಳ‌ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ನೋಡಿ..!

Published

on

ಸುದ್ದಿದಿನ,ಮೈಸೂರು : ಚಾಮುಂಡಿಬೆಟ್ಟದ ಸನ್ನಿಧಿಯಿಂದ ಹೊರ ಬಂದ ಉತ್ಸವ ಮೂರ್ತಿ ತೆರೆದ ವಾಹನದಲ್ಲಿ ಅರಮನೆಯತ್ತ ಹೊರಟಿದೆ ಉತ್ಸವ ಮೂರ್ತಿ. ಭಕ್ತರಿಂದ ಜೈ ಚಾಮುಂಡಿ ಘೋಷಣೆಗಳು ಮೊಳಗುತ್ತಿವೆ.ಚಾಮುಂಡಿಬೆಟ್ಟದಲ್ಲಿ ಭಕ್ತರ ಸಾಗರೇ ಸೇರಿದೆ.

ಶುಕ್ರವಾರದಂದೇ ವಿಜಯ ದಶಮಿ ಆಚರಣೆ ಹಿನ್ನೆಲೆ ಭಕ್ತರಿಂದ ತುಂಬಿದೆ ಚಾಮುಂಡಿ ಸನ್ನಿಧಿ.
ನಾಡ ದೇವಿ ದರ್ಶನಕ್ಕಾಗಿ ಭಕ್ತರ ಸಾಲು,ಸಾಲು.
ಬೆಳಗ್ಗೆಯಿಂದಲೇ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ ಸಹಸ್ರಾರು ಭಕ್ತರು.

ಈ‌ ಹಿನ್ನೆಲೆಯಲ್ಲಿ ಇಂದು ಮೈಸೂರು ದಸರಾ‌ ಮೆರವಣಿಗೆಯಲ್ಲಿ ಸಾಗುವ ಸ್ತಬ್ಧ ಚಿತ್ರಗಳ ಪಟ್ಟಿ‌‌‌ ಇಲ್ಲಿದೆ ನೋಡಿ.

  • 1.ಬಾಗಲಕೋಟೆ ಸ್ತಬ್ದ ಚಿತ್ರ-ಪಟ್ಟದ ಕಲ್ಲು ಕಾಯಕವೇ ಕೈಲಾಸ-ಕೂಡಲಸಂಗಮ
  • 2 ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ತಬ್ಧ ಚಿತ್ರ-ಐತಿಹಾಸಿಕ ಘಾಟಿ ಸುಬ್ರಹ್ಮಣ್ಯ ದೇವಾಲಯ ಹಾಗೂ ದೇವನಹಳ್ಳಿ ಕೋಟೆ
  • 3.ಬೆಂಗಳೂರು ನಗರ ಜಿಲ್ಲೆಯ ಸ್ತಬ್ಧಚಿತ್ರ-ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕ
  • 4.ಎನ್.ಸಿ.ಸಿ. ಸ್ತಬ್ಧಚಿತ್ರ-ಪ್ರವಾಹ ಸಂತ್ರಸ್ತರಿಗೆ ನೆರವು ಹಾಗೂ ಕ್ರೀಡೆಗಳು
  • 5. ಉನ್ನತ ಶಿಕ್ಷಣ ಇಲಾಖೆ ಸ್ತಬ್ಧಚಿತ್ರ-ವಿದ್ಯಾ ನಿಲಯಗಳು ನಡೆದುಬಂದ ಹಾದಿ
  • 6 ಬೆಳಗಾವಿ ಜಿಲ್ಲೆಯ ಸ್ತಬ್ಧಚಿತ್ರ-ಕಿತ್ತೂರಿನ ವೈಭವ
  • 7.ಬಳ್ಳಾರಿ ಜಿಲ್ಲೆ ಸ್ತಬ್ಧಚಿತ್ರ-ತುಂಗಾಭದ್ರಾ ಜಿಲ್ಲೆ.
  • 8.ಬೀದರ್ ಜಿಲ್ಲೆಯ ಸ್ತಬ್ಧಚಿತ್ರ-ಅನುಭವ ಮಂಟಪ
  • 9.ಪ್ರವಾಸೋದ್ಯಮ ಇಲಾಖೆ ಸ್ತಬ್ಧ ಚಿತ್ರ-ಒಂದು ರಾಜ್ಯ ಹಲವು ಜಗತ್ತುಗಳು
  • 10.ವಿಜಯಪುರ ಸ್ತಬ್ಧ ಚಿತ್ರ-ಗೋಲಗುಮ್ಮಟ
  • 11.ಚಾಮರಾಜನಗರ ಜಿಲ್ಲೆ ಸ್ತಬ್ಧ ಚಿತ್ರ-ಅರಣ್ಯ ಸಂಪತ್ತಿನೊಳಗಿನ ಅಧ್ಯಾತ್ಮಿಕ ಕ್ಷೇತ್ರಗಳು
  • 12. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ತಬ್ಧ ಚಿತ್ರ-ಕರ್ನಾಟಕದ ನವರತ್ನಗಳು
  • 13. ಚಿತ್ರದುರ್ಗ ಜಿಲ್ಲೆ ಸ್ತಬ್ಧಚಿತ್ರ-ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಗಳು-ನಾಯಕಹಟ್ಟಿ ಪುಣ್ಯಕ್ಷೇತ್ರ
  • 14. ಚಿಕ್ಕಮಗಳೂರು ಜಿಲ್ಲೆ ಸ್ತಬ್ಧಚಿತ್ರ-ಭೂತಾಯಿ ಕಾಫಿ ಕನ್ಯೆ
  • 15.ವಿಧುರಾಶ್ವಥ್ಧ ಪುಣ್ಯಕ್ಷೇತ್ರ ಸ್ತಬ್ಧಚಿತ್ರ
  • 16. ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸ್ತಬ್ಧಚಿತ್ರ-ಕಾನೂನು ಸೇವೆಗಳು
  • 17. ದಾವಣಗೆರೆ ಜಿಲ್ಲೆಯ ಸ್ತಬ್ಧಚಿತ್ರ-ಸ್ಮಾರ್ಟ್ ಸಿಟಿಯತ್ತ
  • 18.ದಕ್ಷಿಣ ಕನ್ನಡ ಜಿಲ್ಲೆಯ ಸ್ತಬ್ಧ ಚಿತ್ರ-ಕೋಟಿ ಚೆನ್ನಯ್ಯ ತುಳು ನಾಡ ವೀರರು
  • 19. ಧಾರವಾಡ ಜಿಲ್ಲೆ ಸ್ತಬ್ಧ ಚಿತ್ರ-ದ.ರಾ. ಬೇಂದ್ರೆ ಕಂಡ ಸಾಂಸ್ಕೃತಿಕ ನಗರಿ
  • 20. ವಾರ್ತಾ ಇಲಾಖೆ ಸ್ತಬ್ಧ ಚಿತ್ರ-ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ
  • 21. ಗದಗ ಜಿಲ್ಲೆ ಸ್ತಬ್ಧ ಚಿತ್ರ-ಮರಗಳ ಮರು ನೆಡುವಿಕೆ
  • 22. ಕಲ್ಬುರ್ಗಿ ಜಿಲ್ಲೆ ಸ್ತಬ್ಧ ಚಿತ್ರ-ಕಲ್ದುರ್ಗಿಯ ವಿಮಾನ ನಿಲ್ದಾಣ
  • 23.ಹಾಸನ ಜಿಲ್ಲೆ ಸ್ತಬ್ಧ ಚಿತ್ರ-ಹೊಯ್ಸಳ ನಾಡಿನ ಬೇಲೂರು ಶಿಲ್ಪಗಳ 900ರ ಸಂಭ್ರಮ
  • 24. ಕಾವೇರಿ ನೀರಾವರಿ ನಿಗಮದ ಸ್ತಬ್ಧಚಿತ್ರ-ನಾವು ಜಲವನ್ನು ಉಳಿಸಿದರೆ ಜಲವು ನಮ್ಮನ್ನು ಉಳಿಸುವುದು
  • 25. ಹಾವೇರಿ ಜಿಲ್ಲೆ ಸ್ತಬ್ಧ ಚಿತ್ರ-ರಾಣಿಬೆನ್ನೂರು ಕೃಷ್ಣಮೃಗ ಅಭಯಾರಣ್ಯ-ಭಂಕಾಪುರ ನವಿಲುಧಾಮ
  • 26. ಕೋಲಾರ ಜಿಲ್ಲೆ ಸ್ತಬ್ಧ ಚಿತ್ರ-ಜಿಲ್ಲಾ ಪಂಚಾಯತ್ ನಡೆ ಗ್ರಾಮದ ಅಭಿವೃದ್ಧಿ ಕಡೆ
  • 27. ಕೊಪ್ಪಳ ಜಿಲ್ಲೆ ಸ್ತಬ್ಧಚಿತ್ರ-ಶ್ರೀ ಕನಕಾಂಚಲ ದೇವಸ್ಥಾನ ಮತ್ತು ಐತಿಹಾಸಿಕ ಬಾವಿ ಕನಕಗಿರಿ
  • 28. ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸ್ತಬ್ಧಚಿತ್ರ-ನಮ್ಮ ಮತ ನಮ್ಮ ಹಕ್ಕು
  • 29. ಮಂಡ್ಯ ಜಿಲ್ಲೆ ಸ್ತಬ್ಧಚಿತ್ರ-ಮಂಡ್ಯ ಜಿಲ್ಲೆಗೆ ನಾಲ್ವಡಿಯವರ ಪ್ರಮುಖ ಕೊಡುಗೆ (ಕೆ.ಆರ್.ಎಸ್. ಅಣೆಕಟ್ಟೆ)
  • 30. ಮೈಸೂರು ಜಿಲ್ಲೆ ಸ್ತಬ್ಧಚಿತ್ರ-ಗೋಲ್ಡನ್ ಟೆಂಪಲ್ ಬೈಲಕುಪ್ಪೆ
  • 31. ರಾಯಚೂರು ಜಿಲ್ಲೆ ಸ್ತಬ್ಧ ಚಿತ್ರ-ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ
  • 32. ರಾಮನಗರ ಜಿಲ್ಲೆ ಸ್ತಬ್ಧ ಚಿತ್ರ-ಭಕ್ತಿ, ನಂಬಿಕೆ, ಕರಕುಶಲ ಇತಿಹಾಸಗಳ ಸಂಗಮ
  • 33. ಶಿವಮೊಗ್ಗ ಜಿಲ್ಲೆ ಸ್ತಬ್ಧ ಚಿತ್ರ-ಬಿದನೂರು ಶಿವಪ್ಪ ನಾಯಕ ಸಾಧನೆ
  • 34. ತುಮಕೂರು ಜಿಲ್ಲೆ ಸ್ತಬ್ಧಚಿತ್ರ-ಶತಮಾನ ಕಂಡ ಮಹಾಸಂತ ಡಾ. ಶ್ರೀ ಶಿವಕುಮಾರಸ್ವಾಮಿಗಳು
  • 35 ಸ್ತಬ್ಧಚಿತ್ರ ಉಪಸಮಿತಿಯ ಸ್ತಬ್ಧಚಿತ್ರ-ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ವಿಕೇಂದ್ರೀಕರಣ
  • 36. ಉಡುಪಿ ಜಿಲ್ಲೆ ಸ್ತಬ್ಧ ಚಿತ್ರ-ಪರಶುರಾಮ ಸೃಷ್ಟಿಯ ತುಳುನಾಡು
  • 37.ಉತ್ತರ ಕನ್ನಡ ಜಿಲ್ಲೆ ಸ್ತಬ್ಧ ಚಿತ್ರ-ಸಿದ್ಧಿ ಜನಾಂಗ ಹಾಗೂ ಪ್ರವಾಸಿ ತಾಣ, ಯಾಣ
  • 38 ಯಾದಗಿರಿ ಜಿಲ್ಲೆ ಸ್ತಬ್ಧ ಚಿತ್ರ-ಬಂಜಾರ ಸಂಸ್ಕೃತಿ
  • 39. ಆರೋಗ್ಯ ಇಲಾಖೆ ಸ್ತಬ್ಧ ಚಿತ್ರ-ಆರೋಗ್ಯ ಇಲಾಖೆಯ ಸೇವೆಗಳು
  • 40.ಅಲ್ಪಸಂಖ್ಯಾತ ಇಲಾಖೆ ಸ್ತಬ್ಧ ಚಿತ್ರ-ಇಲಾಖಾ ಕಾರ್ಯಕ್ರಮಗಳು.
  • 41. ಶಿಕ್ಷಣ ಇಲಾಖೆ ಸ್ತಬ್ಧ ಚಿತ್ರ-ಇಲಾಖಾ ಕಾರ್ಯಕ್ರಮಗಳು
  • 42. ಕೊಡಗು ಜಿಲ್ಲೆ ಸ್ತಬ್ಧ ಚಿತ್ರ-ಪ್ರವಾಸೋದ್ಯಮ

ಇವಿಷ್ಟು ಸ್ತಬ್ದ ಚಿತ್ರ ಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

Published

on

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.

18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

Published

on

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

Published

on

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೋಲ್ಕತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.

ಮುಂಜಾನೆ ಹೊರಡಲಿರುವ ಇಂಡಿಗೊ ವಿಮಾನ ಬೆಂಗಳೂರಿಗೆ ಬರಲಿದೆ. ಕೋಲ್ಕತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೂ ಈ ರೈಲುಗಳಲ್ಲಿ ವಾಪಸಾಗುವ ವೇಳೆ ಈ ದುರಂತ ಸಂಭವಿಸಿದ್ದು, ತರಬೇತುದಾರರು ಸೇರಿ 32 ಜನರನ್ನು ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಘೋರ, ದುರದೃಷ್ಟಕರ ಘಟನೆ. ಅಪಘಾತ ಸುದ್ದಿಯಿಂದ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಅಪಘಾತದಲ್ಲಿ ಕನ್ನಡಿಗರ ಸಾವು – ನೋವಿನ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆದು ಕನ್ನಡಿಗರ ರಕ್ಷಣೆಗೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದುರಂತದಲ್ಲಿ ಸಿಲುಕಿದ್ದ ಕನ್ನಡಿಗರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಗತ್ಯ ನೆರವು ಒದಗಿಸಿ, ಸುರಕ್ಷಿತವಾಗಿ ವಾಪಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು. ರಾಜ್ಯ ಸರ್ಕಾರದ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1070ಅಥವಾ
080-22253707 ಅಥವಾ 080 – 22340676 ಅನ್ನು ಸಂಪರ್ಕಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ12 hours ago

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ...

ದಿನದ ಸುದ್ದಿ12 hours ago

ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್...

ಲೈಫ್ ಸ್ಟೈಲ್20 hours ago

ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!

ಸಂಜಯ್ ಹೊಯ್ಸಳ ಕೆನ್ನಾಯಿಗಳು ಕಾಡಿನ ಬೇಟೆಗಾರ ಪ್ರಾಣಿಗಳಲ್ಲಿ ಅತ್ಯಂತ ನಿಷ್ಣಾತ, ಅತ್ಯಂತ ಯಶಸ್ವಿ ಬೇಟೆಗಾರ ಪ್ರಾಣಿಗಳು. ಅತ್ಯಂತ ಬಲಶಾಲಿ ಪ್ರಾಣಿಯಾದ ಹುಲಿಗಳ ಬೇಟೆಯ ಯಶಸ್ಸಿನ ಸರಾಸರಿಯೆ ಕೇವಲ...

ದಿನದ ಸುದ್ದಿ21 hours ago

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಬೆಳಗ್ಗೆ ವಿಶೇಷ...

ದಿನದ ಸುದ್ದಿ23 hours ago

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು. ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ...

ದಿನದ ಸುದ್ದಿ24 hours ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 5 ಮತ್ತು 6 ರಂದು...

ದಿನದ ಸುದ್ದಿ24 hours ago

ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 8 ಮತ್ತು 9 ರಂದು 25...

ದಿನದ ಸುದ್ದಿ1 day ago

ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಜೂನ್ 5 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 5 ರಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ...

ದಿನದ ಸುದ್ದಿ2 days ago

ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನ 2 ವರ್ಷದ ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ...

ದಿನದ ಸುದ್ದಿ2 days ago

ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ

ಸುದ್ದಿದಿನ,ದಾವಣಗೆರೆ : ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು. ಈ ಶಾಲೆಯನ್ನು ನಿರ್ಮಿಸಿ...

Trending