Connect with us

ದಿನದ ಸುದ್ದಿ

ಎನ್.ಎಸ್.ಯು.ಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸದಿದ್ದರೆ ಉಗ್ರ ಹೋರಾಟ : ಸೈಯದ್ ಖಾಲಿದ್ ಅಹ್ಮದ್

Published

on

ಸುದ್ದಿದಿನ ಡೆಸ್ಕ್ : ಪಠ್ಯ ಪುಸ್ತಕ ಪರಿಶೀಲನಾ ಮುಖ್ಯಸ್ಥರಿಂದ ಹಾಗೂ ರಾಜ್ಯ ಸರ್ಕಾರದಿಂದ ಆಗಿರುವ ವಿವಾದವನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಬಂಧಿತರಾಗಿರುವ ಅಮಾಯಕ ಎನ್. ಎಸ್.ಯು.ಐ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರವಾಗಿ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರವು ವಿನಾ ಕಾರಣ ಗೊಂದಲಗಳನ್ನು ಸೃಷ್ಟಿಸುತ್ತಿದೆ ಪಠ್ಯ ಪುಸ್ತಕ ಸಮೀತಿಯನ್ನು ವಜಾಗೊಳಿಸಿ ಮುಖ್ಯಸ್ಥ ರೋಹಿತ್ ಚಕ್ರತೀರ್ಥ ಅವರ ವಿರುಧ್ದ ನಾಡದ್ರೋಹ ಕೇಸ್ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಅವರ ನೇತೃತ್ವದಲ್ಲಿ ಅನೇಕ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿ ಜಾಮೀನು ರಹಿತ ಕೇಸ್ ದಾಖಲಿಸಿದ್ದಾರೆ ಇದು ಅತ್ಯಂತ ಖಂಡನೀಯ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಸಂವಿಧಾನಾತ್ಮಕವಾಗಿ, ಕಾನೂನಾತ್ಮಕವಾಗಿ ಪ್ರತಿಭಟಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ ಆದರೆ ಸಂವಿಧಾನವನ್ನೇ ಒಪ್ಪದ ಈ ಬಿಜೆಪಿ ಸರ್ಕಾರ ನೀತಿ ನಿಯಮ ಎಲ್ಲಾ ಗಾಳಿಗೆ ತೂರಿ ಸುಳ್ಳು ಕೇಸು ದಾಖಲಿಸಿ ಹೋರಾಟಗಾರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುಧ್ದ ಯಾರೂ ಧ್ವನಿಯೆತ್ತದಂಥ ಪರಿಸ್ಥಿತಿ ಈ ಲಜ್ಜೆಗೆಟ್ಟ ಸರ್ಕಾರ ನಿರ್ಮಿಸುತ್ತಿದೆ. ಈ ಎರಡೂ ಸರ್ಕಾರಗಳ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ. ರೋಹಿತ್ ಚಕ್ರತೀರ್ಥ ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅವಮಾನಿಸಿದ ಒಬ್ಬ ನಾಡದ್ರೋಹಿ ಅಂಥವನನ್ನು ಸಮರ್ಥಿಸಿಕೊಳ್ಳುವ ಈ ಸರ್ಕಾರ ಕೂಡ ನಾಡದ್ರೋಹಿ ಸರ್ಕಾರವೇ ಆಗಿದೆ ಎಂದು ಕಿಡಿಕಾರಿದರು.

ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಕೀರ್ತಿ ಗಣೇಶ್ ರವರು ಈ ಹಿಂದೆ ಅನೇಕ ವಿದ್ಯಾರ್ಥಿ ಪರ ಧ್ವನಿಯೆತ್ತಿದ್ದಾರೆ ,ಅನೇಕ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಆದರೆ ಕೇವಲ ದ್ವೇಷ ರಾಜಕಾರಣ ಮಾಡುತ್ತಿರುವ ಈ ಕೋಮುವಾದಿ ಸರ್ಕಾರ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ ತಾನು ಪ್ರಕರಣದಿಂದ ನುಣಿಚಿಕೊಳ್ಳಲು ಪ್ರಯತ್ನಿಸುತ್ತಿದೆ ಆದರೆ ನಮ್ಮ ಯುವ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಇದನ್ನು ಸಹಿಸಿಕೊಳ್ಳುವುದಿಲ್ಲ ರೋಹಿತ್ ಚಕ್ರತೀರ್ಥ ವಿರುಧ್ದ ನಾಡದ್ರೋಹ ಕೇಸ್ ದಾಖಲಿಸಬೇಕು ಹಾಗೂ ಅವರು ಅನುಮೋದಿಸಿರುವ ಪಠ್ಯಗಳಿಗೆ ಈ ಕೂಡಲೇ ತಡೆಯಾಜ್ನೆ ತರಬೇಕು ಮತ್ತು ಈ ಪ್ರಕರಣ ಸಂಬಂಧ ಬಂಧಿಸಿರುವ ನಮ್ಮ ಎಲ್ಲಾ ಕಾರ್ಯಕರ್ತರನ್ನು ಕೂಡಲೇ ಬಂಧ ಮುಕ್ತಗೊಳಿಸಬೇಕು ಇಲ್ಲವಾದಲ್ಲಿ ಶೀಘ್ರದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಮ್ಮ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿದೆ ಎಂದು ಸೈಯದ್ ಖಾಲಿದ್ ಅಹ್ಮದ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending