Connect with us

ದಿನದ ಸುದ್ದಿ

ಮೊಳಕಾಲ್ಮೂರು ತಾಲ್ಲೂಕನ್ನು ಪ್ರಾಚೀನ ಬುಡಕಟ್ಟು ಕ್ಷೇತ್ರ ; ನೈಜ ವರದಿ ನೀಡುವಂತೆ ಮ್ಯಾಸಬೇಡ ಸಮಿತಿ ಮನವಿ

Published

on

ಸುದ್ದಿದಿನ ಡೆಸ್ಕ್ : ಮೊಳಕಾಲ್ಮೂರು ತಾಲ್ಲೂಕನ್ನು ಪ್ರಾಚೀನ ಬುಡಕಟ್ಟು ಕ್ಷೇತ್ರ (Primitive Tribes) ಎಂದು ವಿಶೇಷ ಸ್ಥಾನಮಾನ ನೀಡುವ ಸಂಬಂಧ ಅಧ್ಯಯನ ಕೈಗೊಳ್ಳಲು ಸರ್ಕಾರ ಆದೇಶ ಮಾಡಿದ್ದು, ಸದರಿ ಅಧ್ಯಯನವನ್ನು ಮಾನವಶಾಸ್ತ್ರಜ್ಞರು, ಬುಡಕಟ್ಟಿನ ಸಾಂಸ್ಕೃತಿಕ ಇತಿಹಾಸಕಾರರು, ಭಾಷಾಶಾಸ್ತ್ರಜ್ಞರು, ಮತ್ತು ಒಬ್ಬ ಮ್ಯಾಸ ನಾಯಕ ಬುಡಕಟ್ಟಿನ ಸದಸ್ಯರನ್ನೊಳಗೊಂಡ ಸಂಶೋದನಾ ಸಮಿತಿಯನ್ನು ನೆಮಕ ಮಾಡಿ ನೈಜ ವರದಿಯನ್ನು ನೀಡುವಂತೆ ಕ್ರಮಕೈಗೊಳ್ಳಲು ಕೋರಿ ಮ್ಯಾಸ ಬೇಡ ಸಮಿತಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನ ಸಂಸ್ಥೆಯ ನಿರ್ದೇಶಕರಿಗೆ ಮನವಿ ಮಾಡಲಾಯಿತು.

ಮೂಲ ಲಕ್ಷಣ ಹೊಂದಿದ ಬುಡಕಟ್ಟು (Primitive Tribes) ನಾಯ್ಕಡ ಪಂಗಡದ ಮ್ಯಾಸ ನಾಯಕ, ಮ್ಯಾಸ ಬೇಡರ ಬುಡಕಟ್ಟು ಜನಾಂಗವನ್ನು ಭಾರತ ಸಂವಿಧಾನ ಭಾಗ 10ರ ವಿಧಿ 244(2) ಮತ್ತು 275(1) ಅನುಸೂಚಿ-6 ರಡಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕುನ್ನು ಮೂಲ ಲಕ್ಷಣ ಹೊಂದಿದ ಬುಡಕಟ್ಟು ಕ್ಷೇತ್ರ ಅಥವಾ ಪ್ರಾಚೀನ ಬುಡಕಟ್ಟು ಕ್ಷೇತ್ರ (Primitive Tribes) ಎಂದು ವಿಶೇಷ ಸ್ಥಾನಮಾನ ನೀಡುವ ಸಂಬಂಧ ವಿವಿಧ ಹಟ್ಟಿ, ಅಡವಿ ಗ್ರಾಮಗಳಲ್ಲಿ ಅಧ್ಯಯನ ಕೈಗೊಳ್ಳಲು ಸರ್ಕಾರ ಆದೇಶ ಮಾಡಿರುತ್ತದೆ.

ಸದರಿ ಅಧ್ಯಯನವನ್ನು ಮಾನವಶಾಸ್ತ್ರಜ್ಞರು ಮತ್ತು ಬುಡಕಟ್ಟಿನ ಸಾಂಸ್ಕೃತಿಕ ಇತಿಹಾಸಕಾರರು, ಭಾಷಾಶಾಸ್ತ್ರಜ್ಞರು ಹಾಗೂ ಒಬ್ಬ ಮ್ಯಾಸ ನಾಯಕ ಬುಡಕಟ್ಟಿನ ಸದಸ್ಯರನ್ನೊಳಗೊಂಡ ಸಂಶೋದನ ಸಮಿತಿಯನ್ನು ನೆಮಕ ಮಾಡಿ ನೈಜ ವರದಿಯನ್ನು ನೀಡುವಂತೆ ಕ್ರಮಕೈಗೊಳ್ಳಲು ಕೋರಿ ಈ ಮನವಿ ಮೂಲಕ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಒತ್ತಾಯಿಸುತ್ತೇವೆ.

ಬೇಡಿಕೆಗಳು

1) ಪ್ರಾಚೀನ ಮ್ಯಾಸ ಬೇಡರ, ಮ್ಯಾಸ ನಾಯಕ, ಬುಡಕಟ್ಟು ಕ್ಷೇತ್ರ (Primitive Myasa Bedar, Myasa Nayaka Tribes Pocket) ಎಂಬ ಶೀರ್ಷಿಕೆ ಅಡಿಯಲ್ಲಿ ಅಧ್ಯಯನ ಕೈಗೊಳ್ಳಬೇಕು.

2) ಮಾನವಶಾಸ್ತ್ರಜ್ಙರು ಮತ್ತು ಬುಡಕಟ್ಟಿನ ಸಾಂಸ್ಕೃತಿಕ ಇತಿಹಾಸಕರರು, ಭಾಷಾಶಾಸ್ತ್ರಜ್ಞರು ಹಾಗೂ ಒಬ್ಬರು ಮ್ಯಾಸ ನಾಯಕ ಬುಡಕಟ್ಟಿನ ಸದಸ್ಯರನ್ನೊಳಗೊಂಡ ಸಂಶೋಧನ ಅಧ್ಯಯನ ಸಮಿತಿಯನ್ನು ರಚಿಸಿಬೇಕು.

3) ಚಿತ್ರದುರ್ಗ,ಬಳ್ಳಾರಿ ವಿಜಯನಗರ ದಾವಣಗೆರೆ ಜಿಲ್ಲೆಗಳಲ್ಲಿ ಮ್ಯಾಸ ನಾಯಕ ಬುಡಕಟ್ಟು ಜನರು ಬಹುಸಂಖ್ಯಾತರಿದ್ದು , ಸದರಿ ಜಿಲ್ಲೆಗಳಲ್ಲಿ ಮ್ಯಾಸ ನಾಯಕ-ಮ್ಯಾಸ ಬೇಡರ ಬುಡಕಟ್ಟಿನ ಗುಡಿಕಟ್ಟೆಗಳು, ಕಟ್ಟೆಮನೆಗಳು , ದೇವರ ಎತ್ತುಗಳು ಮತ್ತು “ಮ್ಯಾಸ ನಾಯಕರ ಸಾಂಸ್ಕೃತಿಕ ವೀರರು ನೆಲೆಸಿರುವ ಕ್ಷೇತ್ರಗಳಿರುತ್ತವೆ.

4) ಮ್ಯಾಸ ನಾಯಕ “ನಾಯಕ” ಸಮಾನಾರ್ಥಕ ಪದವಾದ “ಮ್ಯಾಸ ನಾಯಕ” ಪದವನ್ನು ಓಬಿಸಿಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಈ ಕೂಡಲೇ ತೆಗೆದುಹಾಕಬೇಕು.

5) ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ “ನಾಯಕ” ಸಮಾನಾರ್ಥಕ ಪದಗಳಾಗಿ “ಮ್ಯಾಸ ನಾಯ್ಕ”, “ಮ್ಯಾಸ ನಾಯಕ”, “ಮ್ಯಾಸ ಬೇಡ”, “ಮ್ಯಾಸ ಬ್ಯಾಡ್ರು”, “ಮ್ಯಾಸ ಬೇಡರ”, “ಮ್ಯಾಸರು” ಎಂಬ ಪದಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಈ ಕೂಡಲೇ ಕ್ರಮ ಕೈಗೊಳ್ಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending