ದಿನದ ಸುದ್ದಿ
ಯುವಜನತೆಗಾಗಿ ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನ ಆರಂಭಿಸಿದ ನಲಪಾಡ್; ವಿಜೇತರಿಗೆ ಐಫೋನ್ 12 ಸೇರಿದಂತೆ ಆಕರ್ಷಕ ಬಹುಮಾನಗಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/11/nalpad_suddidina.jpg&description=ಯುವಜನತೆಗಾಗಿ ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನ ಆರಂಭಿಸಿದ ನಲಪಾಡ್; ವಿಜೇತರಿಗೆ ಐಫೋನ್ 12 ಸೇರಿದಂತೆ ಆಕರ್ಷಕ ಬಹುಮಾನಗಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/11/nalpad_suddidina.jpg&description=ಯುವಜನತೆಗಾಗಿ ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನ ಆರಂಭಿಸಿದ ನಲಪಾಡ್; ವಿಜೇತರಿಗೆ ಐಫೋನ್ 12 ಸೇರಿದಂತೆ ಆಕರ್ಷಕ ಬಹುಮಾನಗಳು', 'pinterestShare', 'width=750,height=350'); return false;" title="Pin This Post">
ಕನ್ನಡ ರಾಜ್ಯೋತ್ಸವದ ದಿನದಂದು ಬೆಂಗಳೂರಿನ ಯುವ ಕಾಂಗ್ರೆಸ್ನ ಅಧ್ಯಕ್ಷರಾದ ಮೊಹ್ಮದ್ ಹ್ಯಾರೀಸ್ ನಲಪಾಡ್ ಅವರು ವಿವಿಧ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಕಂಡುಕೊಳ್ಳುವ ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನವನ್ನು ಆರಂಭಿಸಿದ್ದಾರೆ. ಕಾಲಕಾಲಕ್ಕೆ ಮೊಹ್ಮದ್ ಹ್ಯಾರೀಸ್ ನಲಪಾಡ್ ಅವರು ಜನರೆದುರಿಡುವ ಸಮಸ್ಯೆಗಳಿಗೆ ಯುವಕ-ಯುವತಿಯರು ತಮ್ಮ ಪರಿಹಾರೋಪಾಯವನ್ನು ಸೂಚಿಸುವ ವಿಭಿನ್ನ ಪ್ರಯತ್ನ ಇದಾಗಿದೆ.
ಅಭಿಯಾನದ ಪ್ರಾರಂಭದಲ್ಲಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಮೂಲಕಸೌಕರ್ಯದ ಕೊರತೆಯಿಂದ ಅಪಾರ ಆಸ್ತಿಪಾಸ್ತಿ ಹಾಗೂ ಜೀವಹಾನಿಯುಂಟಾಗುತ್ತಿರುವ ಸಮಸ್ಯೆಯನ್ನು ಕೈಗೆತ್ತುಕೊಳ್ಳಲಾಗಿದೆ.
“ನಿರಂತರವಾಗಿ ನಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಸೂಚಿಸುವ ಕರ್ನಾಟಕದ ಯುವಜನರ ಧ್ವನಿಗೆ ಈ ಅಭಿಯಾನದ ಮೂಲಕ ವೇದಿಕೆ ಒದಗಿಸಬೇಕೆನ್ನುವುದು ನನ್ನ ಆಶಯ. ಕರ್ನಾಟಕದ ಒಬ್ಬ ಜವಾಬ್ದಾರಿಯುತ ಯುವನಾಗರೀಕನಾಗಿ ‘ನಾವು ಇಂದು ಮಾಡುವ ಆಯ್ಕೆ, ನಾಳಿನ ನಮ್ಮ ಭವಿಷ್ಯ’ ಎನ್ನುವ ಅರಿವು ನನಗಿದೆ. ನಮ್ಮ ಆಯ್ಕೆಯು ಸಶಕ್ತವಾಗಿರಲು ‘ಲೆಟ್ಸ್ ಟೇಕ್ ಚಾರ್ಜ್’ ಎನ್ನುವ ಅಭಿಯಾನವನ್ನು ಪ್ರಾರಂಭಿಸುತ್ತಿದ್ದೇನೆ” ಎಂದು ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೊಹ್ಮದ್ ಹ್ಯಾರಿಸ್ ನಲಪಾಡ್ ತಿಳಿಸಿದರು.
“ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಭಾಗವಹಿಸುವಂತೆ ಮಾಡಲು ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ನೀಡಲಾಗುತ್ತಿದೆ. ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯುವಕರ ಪಾತ್ರ ಮಹತ್ವದ್ದು” ಎಂದು ಮೊಹ್ಮದ್ ಹ್ಯಾರಿಸ್ ನಲಪಾಡ್ ಹೇಳಿದರು.
ಅಭಿಯಾನದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪರಿಹಾರೋಪಾಯವನ್ನು ಸೂಚಿಸಿ ವಿಜೇತರಾದವರು ಐಫೋನ್ ೧೨ ಸೇರಿದಂತೆ ಸ್ಯಾಮ್ಸಂಗ್ ಗ್ಯಾಲಾಕ್ಸಿ ಎ೫೧, ಸ್ಯಾಮ್ಸಂಗ್ ಗ್ಯಾಲಾಕ್ಸಿ ಎ೨೧ ಮತ್ತು ಸ್ಯಾಮ್ಸಂಗ್ ಗ್ಯಾಲಾಕ್ಸಿ ಟ್ಯಾಬ್ ಎ ಅನ್ನು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಪಡೆಯಲಿದ್ದಾರೆ.
“ಸ್ಪರ್ಧೆಯು ಗಂಭೀರತೆಯನ್ನು ಕಳೆದುಕೊಳ್ಳಬಾರದೆಂದು ಮೊದಲ ಉತ್ತಮ ನಾಲ್ಕು ವಿಚಾರಗಳಿಗೆ ಐಫೋನ್ 12, ಸ್ಯಾಮ್ಸಂಗ್ ಗ್ಯಾಲಾಕ್ಸಿ ಎ51, ಸ್ಯಾಮ್ಸಂಗ್ ಗ್ಯಾಲಾಕ್ಸಿ ಎ21 ಮತ್ತು ಸ್ಯಾಮ್ಸಂಗ್ ಗ್ಯಾಲಾಕ್ಸಿ ಟ್ಯಾಬ್ ಎಗಳನ್ನು ಬಹುಮಾನವಾಗಿ ನೀಡಲಾಗುವುದು” ಎಂದು ತಿಳಿಸಿದ ಅವರು, ಜನರಿಂದ ಬಂದ ಸಲಹೆಗಳನ್ನು ತಜ್ಞರ ಸಮಿತಿಯ ಮುಂದಿರಿಸಿ ಅವುಗಳನ್ನು ಕಾರ್ಯಗತಗೊಳಿಸಲು ಇರುವ ಸಾಧ್ಯತೆಯನ್ನು ವಿಮರ್ಶಿಸಲಾಗುವುದು ಎಂದರು.
“28 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ, ರಾಜಕಾರಣದ ಕೇಂದ್ರಬಿಂದುವಾಗಿರುವ ಭಾರತದ ಐಟಿ ರಾಜಧಾನಿ ಮಳೆಗಾಲದ ದಿನಗಳಲ್ಲಿ ನೀರಲ್ಲಿ ಮುಳುಗುವುದು ಸಾಮಾನ್ಯವಾಗಿದ್ದು, ಇದೊಂದು ಪ್ರತಿವರ್ಷದ ಸಮಸ್ಯೆಯಾಗಿದೆ” ಎಂದು ಮೊಹ್ಮದ್ ಹ್ಯಾರಿಸ್ ನಲಪಾಡ್ ತಿಳಿಸಿದರು.
ಕರ್ನಾಟಕದಲ್ಲಿ ವಾಸಿಸುವ 18ರಿಂದ 35 ವರ್ಷದೊಳಗಿನವರು ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನದಲ್ಲಿ ಭಾಗವಹಿಸಬಹುದು ಎಂದು ಸ್ಪರ್ಧೆಯ ಕುರಿತು ವಿವರಿಸಿದರು. ಅಭಿಯಾನಕ್ಕೆ ಸಂಬಂಧಿಸಿದಂತೆ 9999845988 ವಾಟ್ಸ್ಆಪ್ ನಂಬರ್ ಅನ್ನು ಬಿಡುಗಡೆ ಮಾಡಲಾಗಿದ್ದು, ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನದ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಸ್ಪರ್ಧಾಳುಗಳು ಗೂಗಲ್ ಫಾರ್ಮ್ ಮೂಲಕ ತಮ್ಮ ಸಲಹೆ-ಸೂಚನೆಗಳನ್ನು ಸಲ್ಲಿಸಬಹುದಾಗಿದ್ದು, ಗೂಗಲ್ ಫಾರ್ಮ್ ಲಿಂಕ್ ಅನ್ನು ಮೊಹ್ಮದ್ ಹ್ಯಾರೀಸ್ ನಲಪಾಡ್ ಅವರ ಸಾಮಾಜಿಕ ಜಾಲತಾಣದ ಪುಟಗಳಲ್ಲಿ ಹಂಚಿಕೊಳ್ಳಲಾಗಿದೆ. ಒಬ್ಬ ಸ್ಪರ್ಧಾಳುವಿಗೆ ಒಂದು ಎಂಟ್ರಿಗೆ ಮಾತ್ರ ಅವಕಾಶ. ಕನ್ನಡ, ಇಂಗ್ಲೀಶ್ ಹಾಗೂ ಹಿಂದಿ ಭಾಷೆಯಲ್ಲಿ ಗೂಗಲ್ ಫಾರ್ಮ್ ಭರ್ತಿ ಮಾಡಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

