ದಿನದ ಸುದ್ದಿ
ರಾಜ್ಯ ಸಭೆಗೆ ಡಾ ವೀರೇಂದ್ರ ಹೆಗ್ಗಡೆ, ಇಳಯರಾಜ, ಪಿಟಿ ಉಷಾ, ವಿಜಯೇಂದ್ರ ಪ್ರಸಾದ್ ನಾಮನಿರ್ದೇಶನ
ಸುದ್ದಿದಿನ,ಬೆಂಗಳೂರು: ಅಚ್ಚರಿ ಬೆಳವಣಿಗೆಯಲ್ಲಿ ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ನಾಮನಿರ್ದೇಶನ ಮಾಡಲಾಗಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ , ಇವರ ಜೊತೆ ಇಳೆಯರಾಜ ಹಾಗೂ ಪಿಟಿ ಉಷಾ ಸಹ ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಯಾವುದೇ ಪಕ್ಷ, ಯಾವುದೇ ರಾಜಕೀಯದಲ್ಲಿ ಇರದ ವಿವಿಧ ಕ್ಷೇತ್ರದ ಗಣ್ಯರನ್ನು ನಾಮ ನಿರ್ದೇಶನ ಮಾಡಲಿದ್ದು ಧಾರ್ಮಿಕ ಕ್ಷೇತ್ರದಿಂದ ಡಾ. ವೀರೇಂದ್ರ ಹೆಗ್ಗಡೆ , ಸಂಗೀತದಿಂದ ಇಳಯರಾಜ, ಕ್ರೀಡೆಯಿಂದ ಪಿಟಿ ಉಷಾ ನೇಮಕ ಮಾಡಲಾಗಿದೆ.
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. pic.twitter.com/KwoNdZyW6Z
— Narendra Modi (@narendramodi) July 6, 2022
രാജ്യസഭയിലേക്ക് നാമനിർദേശം ചെയ്യപ്പെട്ടതിന് അഭിനന്ദനങ്ങൾ. @PTUshaOfficial
— Narendra Modi (@narendramodi) July 6, 2022
தலைமுறைகளைக் கடந்து @ilaiyaraaja அவர்களின் அற்புத படைப்பாற்றல் மக்களை மகிழ்வித்து வருகிறது. அவரது இசைப் படைப்புகள் பல்வேறு உணர்வுகளை அழகாக வெளிப்படுத்துவன. pic.twitter.com/qgV1ZlK9lP
— Narendra Modi (@narendramodi) July 6, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243