Connect with us

ದಿನದ ಸುದ್ದಿ

ನನ್ನ ಹೆಸರಿನ ಪಜೀತಿ..! ನನ್ನ ಹೆಸರು ಹೇಗೆ ಬಂತು..?

Published

on

  • ಪರಶುರಾಮ್. ಎ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಹೆಸರು ಇದ್ದೇ ಇರುತ್ತದೆ ಇರಲೇ ಬೇಕು ಸಹ. ಆ ವ್ಯಕ್ತಿ ಹೆಸರಿಗೂ ಇತಿಹಾಸದ ನಂಟು ಅಥವಾ ಒಂದು ಕತೆ ಇದ್ದೆ ಇರುತ್ತದೆ. ‌ಅವುಗಳನ್ನ ಕೆದಕಿ ನೋಡಿದಾಗ ಆ ಕತೆಗಳು ನೆನಪುಗಳಾಗಿ ಮೇಲೆದ್ದು ಕಾಣಿಸಿಕೊಳ್ಳುತ್ತದೆ.

ಈಗೀಗ ಜನ ಸಮಾಜದಲ್ಲಿ ಹೆಸರು ಮಾಡಲು ಏನೇನೂ ಸರ್ಕಸ್ ಮಾಡ್ತಾರಂತ ನಿಮಗೆ ಗೊತ್ತೇ ಇದೆ. ರಾಜಕೀಯ. ಸಿನಿಮಾ. ರೌಡಿಸಂ. ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌, ಡಬ್ ಸ್ಮಾಷ್. ಟಿಕ್ ಟಾಕ್ ನಲ್ಲಿ ಹುಚ್ಚರಾಗಿ ಹೆಸರು ಗಳಿಸಲು ನಾನಾ ತರದ ಸರ್ಕಸ್ ನಡಿತಾನೇ ಇದೆ. ಅವರ ಹೆಸರುಗಳು ಸಹ ವಿಚಿತ್ರ ವಿಚಿತ್ರವಾಗಿ ಇರ್ತವೆ!!! ಈ ವಿಚಿತ್ರ ಹೆಸರುಗಳ‌ ಖಯಾಲಿ ಸಿನೆಮಾ, ರೌಡಿಸಂ ಕ್ಷೇತ್ರದಲ್ಲಿ ಹೆಚ್ಚು.

ಹೆಸರಿನಲ್ಲಿ ಏನಿದೆ ಬಿಡ್ರೀ ಮಹತ್ವ?? ಅನ್ನುವವರಿಗೆ ಅವರ ಹೆಸರು ಒಮ್ಮೆ ಹಾಳಾದಗಲೇ ಅದರ ನೋವು ಗೊತ್ತಾಗುವುದು ಹೆಸರಿನ ಮಹತ್ವ!! ಅಂದಾಗೆ ನಾನು ನನ್ನ ಹೆಸರು ಹುಟ್ಟಿನ ಬಗ್ಗೆ ಹೇಳ್ತಿನಿ ಆಮೇಲೆ ಆ ಹೆಸರಿನಿಂದ ನನಗಾದ ಪಜೀತಿಗಳೆಷ್ಟು ಅಂತ ಹೇಳ್ತಿನಿ. ನಾನು ಹುಟ್ಟಿದಾಗ ನನಗೆ ನಾಮಕರಣ ಮಾಡಲು ಹೆಸರಿಡಲು ವಾಡಿಕೆಯಂತೆ ಜ್ಯೋತಿಷ್ಯ ಕೇಳಿದಾಗ ನನಗೆ ಡ,ಡು,ಡೆ ಎಂಬ ಪದಗಳು ಬಂದವಂತೆ.

ಹೋಗಿ ಹೋಗಿ ಎಂತ ಪದಗಳು ಬಂದಿವೇ ನೋಡ್ರೀ!! ಈ ಡ,ಡು,ಡೆ ಎಂಬ ಪದಗಳಿಂದ ಯಾವ ಹೆಸರು ತಾನೇ ಕನ್ನಡದಲ್ಲಿ ಆಗಲಿ ಯಾವ ಭಾಷೆಯಲ್ಲಿ ಆಗಲಿ ಬರೊದಕ್ಕೆ ಸಾಧ್ಯ?? (ಈಗಲೂ ಈ ಅಕ್ಷರದಿಂದ ನಿಮಗೆ ಏನಾದರೂ ಹೆಸರು ಗೊತ್ತಾದರೆ ಹೇಳಿ ನನ್ನ ಹೆಸರೇ ಬದಲಾಯಿಸಿಕೊಳ್ತಿನಿ.) ಹೆಸರಿ‌ನ ಮೊದಲ ಅಕ್ಷರ ಹೇಳಿದ ಜ್ಯೋತಿಷಿ ಬಳಿ ಯಾವುದೇ ಉತ್ತರ ಸಿಗದೆ ಕಂಗಾಲಾಗಿ ನಮ್ಮ ಅಜ್ಜಿ ತಾತ ಮತ್ತು ಅಪ್ಪ ಅಮ್ಮ ಅಪ್ಪ ಆಕಾಶ ತಲೆ ಮೇಲೆ ಬಿದ್ದಂಗಾಗಿ ಏನಿದು ಹುಟ್ಟಿರೊ ಮಗುವಿಗೆ ಈ ರೀತಿಯಲ್ಲಿ ಅಕ್ಷರಗಳು ಬಂದಿದಾವಲ್ಲಂತ ಯೋಚಿಸಿ ಕುಳಿತರಂತೆ.!

ಹೀಗೆ ಯೋಚಿಸಿದಾಗ ಅವರಿಗೆ ಒಂದು ಜ್ಞಾನೋದಯ ಅಗಿ ಹೇಗಿದ್ದರೂ ನಮ್ಮ ಮನೆಯ ದೇವರು ಸವದತ್ತಿ ಯಲ್ಲಮ್ಮ ಈಗ ಹುಟ್ಟಿದ ಗಂಡು ಮಗುವಿಗೆ ಆಕೆಯ ಮಗನಾದ ಪರಶುರಾಮ ಎಂಬ ಹೆಸರನ್ನೇ ಇಟ್ಟು ಇನ್ನೂ ಮಿಕ್ಕಿದ್ದ ಪಾಪ ಪುಣ್ಯ ಎಲ್ಲಾ ಯಲ್ಲಮ್ಮನ ಮೇಲೆ ಹಾಕಿ ಪರಶುರಾಮ ಎಂಬ ಹೆಸರಿನಲ್ಲಿ ನನಗೆ ನಾಮಕರಣ ಮಾಡಿದರು. ಇವತ್ತಿಗೂ ನಮ್ಮ ಹಳ್ಳಿಯಲ್ಲಿನ ನಮ್ಮ ಸಂಬಂಧಿ ಚಂದ್ರಣ್ಣ ಎಂಬುವವರು ನನಗೆ ಈ ಕತೆ ಹೇಳಿ ನನ್ನ ಹೀಗೆ ಡ,ಡು,ಡೆ ಎಂದೇ ಸಂಬೋಧಿಸಿ ಕರೆಯುತ್ತಾರೆ.

ಅವರಿಗೆ ನನ್ನ ಹೆಸರೇ ತಮಾಷೆಯ ವಸ್ತು. ನಾನು ಹುಟ್ಟಿದಾಗಲೇ ಬ್ರಾಹ್ಮಣರ ಬಳಿಯಿಂದ ಹೆಸರನ್ನು ಪಡೆಯದೆ ಹುಟ್ಟಿನಿಂದಲೇ ನಾನು ಬ್ರಾಹ್ಮಣತ್ವದ ವಿರೋಧಿಯಾಗಿದ್ದೆ, ಹೋರಾಡಿದ್ದೆ ಎಂದು ಈಗ ಒಮ್ಮೊಮ್ಮೆ ಹಲವು ಸಲ ಮನದಲ್ಲಿ ಯೋಚಿಸಿ ನಗು ಬರುತ್ತದೆ. ನನ್ನ ಅಮ್ಮ ಈ ಸಂಗತಿಯನ್ನು ಅದೆಷ್ಟೋ ಸಲ ಹೇಳಿ ನಗ್ತಾಳೆ. ನೀನು ನನಗೆ ಹುಟ್ಟಿದಾಗ ನಿನಗೆ ಒಂದು ಸರಿಯಾದ ಹೆಸರು ಬರಲಿಲ್ಲ ಗೊತ್ತ ನಿನಗೆ ಅಂತ ಕೇಳಿ.

ಹೇಗೋ ನನಗೂ ಒಂದು ಹೆಸರು ಬಂತು ಅಂದುಕೊಂಡಾಗ, ನಾನು ಚಿಕ್ಕವಯಸ್ಸಿನಲ್ಲಿದ್ದಾಗ ನಮ್ಮ ಸಂಬಂಧಿಕರು ನನ್ನ ಪರ್ಶಿ, ಪರ್ಸೀ ಅಂದು ನನ್ನ ಹೆಸರೇ ಹಾಳು ಮಾಡಿದ್ದರು. ಪರಶುರಾಮ ಎಂಬ ಸುಂದರ ಹೆಸರನ್ನು ಹೀಗೆ ಹಾಳು ಮಾಡಿದಾಗ ಯಾರಿಗೆ ತಾನೇ ಕೋಪ ಬರಲ್ಲ ಹೇಳಿ?? ಬೆಳೆದು ದೊಡ್ಡವನಾದರೂ ಇನ್ನೂ ಅದೆಷ್ಟು ಸಂಬಂಧಿಕರು ನನ್ನ ಪರ್ಸಿ ಪರ್ಸಿ ಅಂತಾನೆ ಕರೆತಾರೆ ಇದಂತು ನನಗೆ ಅಳುನೇ ತರ್ಸುತ್ತೆ.

ಇನ್ನೂ ನಾನು ಪ್ರಾಥಮಿಕ ಶಾಲೆಯಲ್ಲಿ ವಿದ್ಯೆ ತಲೆಗೆ ಹತ್ತದೆ ಇದ್ದಾಗ ನನಗೆ rr ಎಂಬ ಟೀಚರ್ ಒಬ್ಬರು ಪರಶುರಾಮ ಎಂಬ ನನ್ನ ಹೆಸರನ್ನ ಸಿದ್ದರಾಮ ಎಂದು ರೇಗಿಸುತ್ತಿದ್ದರು ಅದು ತರಗತಿಯ ನನ್ನ ಎಲ್ಲಾ ಸ್ನೇಹಿತರ ಮುಂದೆ. ನನಗೆ ಎಷ್ಟು ಕೋಪ ಮುಜುಗರ ಬರಬೇಡ?? ಆಗ ನನಗೆ ಕೇವಲ ಏಳು ಅಥವಾ ಎಂಟು ವರ್ಷ. ಇನ್ನೂ ನಾನು ಐದನೇ ತರಗತಿಯ ಓದುವಾಗ ನಮಗೆ ಇಂಗ್ಲೀಷ್ ಭಾಷೆ ಪರಿಚಯಿಸಿದರು, ನೇತ್ರಾವತಿ ಟೀಚರ್ ಸಹ ನನ್ನ ಹೆಸರನ್ನು ಇಂಗ್ಲಿಷ್ ಓದಲು ಬಾರದೆ ಇದ್ದದ್ದಕ್ಕೆ ಮತ್ತದೇ ಸಿದ್ದರಾಮ ಎಂದು ಒತ್ತಿ ಒತ್ತಿ ಕರೆಯುತ್ತಿದ್ದರು. ‌

ಆಗಲಂತು ನನ್ನ ಮನಸ್ಸು ನನ್ನ ಈ ಹೆಸರಿನ ಬಗೆಗೆ ತೀವ್ರ ಜಿಗುಪ್ಸೆ ತರಿಸಿತ್ತು.
ಇನ್ನೂ ಏಳನೇ ತರಗತಿಯಲ್ಲಿ ಪರಶುರಾಮ್ ಎಂಬ ನನ್ನೊಂದಿಗೆ ಪುರುಷೋತ್ತಮ ಎಂಬ ಎರಡು ಸ್ನೇಹಿತರು ಬೇರೆ ಒಂದೇ ತರಗತಿಯಲ್ಲಿ ಇದ್ದೆವು. ಆಗಲಂತು ತರಗತಿಗೆ ಬಂದ ಟೀಚರ್ ಗಳು ಅದೆಷ್ಟೋ ಬಾರಿ ಪುರುಷೋತ್ತಮನ ಪರಶುರಾಮ ಎಂದು ಪರಶುರಾಮನ ಪುರುಷೋತ್ತಮ ಎಂದು ಕರೆದು ಗೊಂದಲಕ್ಕೆ ಸಿಕ್ಕಿಸಿದರೊ ಗೊತ್ತಿಲ್ಲ. ಇದು ಒಂದು ವರ್ಷಗಳ ಕಾಲ ಹೀಗೆ ನಡೆಯಿತು.

ಇನ್ನೂ ಹೈಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಈ ಹೆಸರು ಮತ್ತದೆ ಯಥಾವತ್ ಜಿಗುಪ್ಸೆ ತರಿಸಿ ನನ್ನ ಹೆಸರೇ ನಾನು ಕಳಚುವಂತೆ ಯೋಚಿಸಲು ತಲೆನೋವು ತಂದಿತ್ತು. ಕಾರಣ ಸ್ನೇಹಿತರು ನನ್ನ ರೇಗಿಸಲು ನನ್ನ ಹೆಸರನ್ನೇ ಅಸ್ತ್ರವನ್ನಾಗಿ ಬಳಸಿ ಪರ್ಸು ಪರ್ಸು(purse) ಅನ್ನೊರು. ಆಗಲಂತು ನನಗೆ ಕೆಟ್ಟ ಕೋಪ ಬರೊದು ನಿಜವಾಗಿಯೂ ನನ್ನ ಹೆಸರಿಗೆ ತಕ್ಕಂತೆ ಪರಶುರಾಮನಾಗಿ ಹೊಡೆಯಲ ಎಂದು ಆದರೆ ಏನು ಮಾಡೊದು ಎಲ್ಲಾ ಸ್ನೇಹಿತರೆ ಅಂತ ನನಗೆ ನಾನೇ ಸಮಾದಾನವಾಗಿ ತಗೊಂಡು ನಾನು ಅವರೊಂದಿಗೆ ನಗ್ತ ಸುಮ್ಮನೆ ಆಗ್ತಿದ್ದೆ. ಹಿರಿಯರು ಮತ್ತು ಅನಕ್ಷರಸ್ಥರ ಬಾಯಲ್ಲಿ ನನ್ನ ಹೆಸರು ಹೀಗೆ ಹಾಳದದ್ದು ಉಂಟು ಆದರೆ ಅಕ್ಷರಸ್ಥರ ಬಾಯಲ್ಲಿ ಹೆಸರು ಹಾಳಾದಾಗ ಆಗುವ ನೋವು ಹೇಳಲಾಗದಷ್ಟು ಇತ್ತು.

ಇನ್ನೂ ನಾನು ಡಿ,ಎಡ್ ಓದುವಾಗಲಂತೂ ವಿಜ್ಞಾನದ ಸರ್ ಗುರುಮೂರ್ತಿಯವರಂತು ಪ್ರತಿ ಭಾರಿ ನನ್ನ ಪರಶಿವನಾಗಿ ಮಾಡಿದ್ದರು. ಪರಶಿವ ಎಂದರೆ ಶಿವನಾಗಿ ಅಲ್ಲ. ಪರಶುರಾಮನ ಹೆಸರನ್ನು ಅವರು ಗೊಂದಲದಲ್ಲಿ ಪರಶಿವ ಎಂದೇ ಕರೆಯುತ್ತಿದ್ದರು ಅದಕ್ಕೆ ಕಾರಣ ಎರಡು ವರ್ಷಗಳ ಹಿಂದಿನ ಡಿ,ಎಡ್ ಬ್ಯಾಚಿನಲ್ಲಿ ಪರಶಿವ ಎಂಬ ಹೆಸರಿನ ವಿದ್ಯಾರ್ಥಿ ಹುಡುಗನೊಬ್ಬ ಇದ್ದನಂತೆ ಅದರಿಂದಾಗಿ ನನ್ನ ಹೆಸರು ಹೀಗೆ ಬದಲಾಗಿತ್ತು.

ಡಿ.ಎಡ್ ಮಾಡಿದ ಎರಡು ವರ್ಷಗಳ ಕಾಲ ನನ್ನ ಅವರು ಕರೆದದ್ದು ಪರಶಿವನೆಂದೆ. ನನಗೂ ನನ್ನ ಹೆಸರು ಸರ್ ಗೆ ಹೇಳಿ ಹೇಳಿ ಸಾಕಾಗಿ ಸರಿ ಇನ್ನೂ ಮುಂದೆ ಸರ್ ಕೂಗುವ ಈ ಹೆಸರಿಗೆ ಪ್ರತಿಕ್ರಿಯಿಸಲು ನಾನೇ ಬದಲಾಗಿ ಅವರು ಪರಶಿವ ಎಂದಾಗಲೆಲ್ಲ ಓಗುಟ್ಟುತ್ತಿದ್ದೆ.

ಆದರೂ ಅವರು ಕೊನೆಯ ವರೆಗೆ ನನ್ನ ಹೆಸರು ಜ್ಞಾಪಕ ಶಕ್ತಿಯಲ್ಲಿ ಉಳಿಸಿಕೊಂಡಿದ್ದು ಪರಶಿವನಾಗಿಯೇ ಹೊರತು ಪರಶುರಾಮನಾಗಿ ಅಲ್ಲ!! ಇವತ್ತಿಗೂ ಆಗಾಗ ಕಾಲೇಜ್ ಕಡೆ ಹೋದಾಗ ಎದುರಾದರೆ ಏನಯ್ಯ ಪರಶಿವ ಅಂತಾರೆ. ಗುರುಗಳ ಆ ಮಾತಿಗೆ ಉತ್ತರಿಸಲೊ ಕೋಪಗೊಳ್ಳಲೊ ಅಥವಾ ಅವರ ಬಾಯಲ್ಲಿ ನನ್ನ ಬದಲಾದ ಹೆಸರಿಗೆ ಮುಜುಗರ ಪಡಲೊ ತಿಳಿಯದೆ ಕಂಗಲಾಗ್ತಿನಿ..

ಅಂದ ಹಾಗೆ ನಿಮಗೆ ನನ್ನ ಹೆಸರು ಸರಿಯಾಗಿ ಏನಂತ ಗೊತ್ತಾಯ್ತ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!

Published

on

ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಚುನಾಯಿತ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ನೂತನ ಅಭ್ಯರ್ಥಿಗಳ ಆಗಮನ ಪ್ರಕ್ರಿಯೆ ಆರಂಭವಾಗುತ್ತದೆ. ಅವರ ಪ್ರಯಾಣಕ್ಕೆ ಮುನ್ನವೇ ಲೋಕಸಭೆ ಕಾರ್ಯಾಲಯದ ನೋಡಲ್ ಅಧಿಕಾರಿಗಳು ಅವರನ್ನು ಸಂಪರ್ಕಿಸುತ್ತಾರೆ. ಐಜಿಐ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ವಿವಿಧ ಟರ್ಮಿನಲ್‌ಗಳಲ್ಲಿ ವಿಶೇಷ ಸ್ವಾಗತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸಂಸದರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗದಿತ ಕೇಂದ್ರಗಳಲ್ಲಿ ಬರ ಮಾಡಿಕೊಳ್ಳಲಾಗುತ್ತದೆ.

ಸಂಸತ್ತಿನ ಅನೆಕ್ಸೆ ವಿಸ್ತೃತ ಕಟ್ಟಡದ ಸ್ವಾಗತ ಕೇಂದ್ರಕ್ಕೆ ಆಗಮಿಸಿದ ನಂತರ ಅವರಿಗೆ ದೂರವಾಣಿ ಸಂಪರ್ಕ, ಹೊಸಬ್ಯಾಂಕ್ ಖಾತೆ, ಸಂಸತ್ ಕಟ್ಟಡಕ್ಕೆ ಪ್ರವೇಶ ಪಡೆಯಲು ಸ್ಮಾರ್ಟ್ ಆಕ್ಸೆಸ್ ಕಾರ್ಡ್, ಅವರ ವಾಹನಗಳಿಗಾಗಿ ಫಾಸ್ಟ್ ಟ್ಯಾಗ್ ಸ್ಟಿಕರ್ ಮತ್ತು ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಿ ಅತಿಥಿ ಭವನ ಹಾಗೂ ಪಶ್ಚಿಮ ನ್ಯಾಯಾಲಯ ಹಾಸ್ಟೇಲ್ ಸಂಕೀರ್ಣದಲ್ಲಿ ಅವರಿಗೆ ತಂಗಲು ಅವಕಾಶ ಕಲ್ಪಿಸಲಾಗುತ್ತದೆ. ಹೊಸ ಸದಸ್ಯರಿಗೆ ಸಂವಿಧಾನದ ಪ್ರತಿ ನೀತಿ ಮತ್ತು ಕಲಾಪ, ಪ್ರಕ್ರಿಯೆ, ನಿಯಮಾವಳಿ ಕೈಪಿಡಿಗಳನ್ನು ಅನುಸರಿಸಲು ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending