Connect with us

ದಿನದ ಸುದ್ದಿ

ನಂದಿ ಪಬ್ಲಿಕ್ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Published

on

ವರದಿ : ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ತಾಲೂಕ ಅಧ್ಯಕ್ಷರು

ಸುದ್ದಿದಿನ,ಮಸ್ಕಿ: ನಗರದ ನಂದಿ ಪಬ್ಲಿಕ್ ಶಾಲೆಯಲ್ಲಿ ವನಸಿರಿ ಫೌಂಡೇಶನ್ ತಾಲೂಕ ಘಟಕ ದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶರಣೇಗೌಡ ಪಾಟೀಲ ಸಸಿ ನೆಟ್ಟು ನೀರುಣಿ ಮಾತನಾಡಿ ನಗರೀಕರದಿಂದ ಮನುಷ್ಯ ಗಿಡಮರಗಳನ್ನು ಹೆಚ್ಚು ಹೆಚ್ಚು ಕಡಿಯುತ್ತಿದ್ದಾನೆ.ಗಿಡಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಜಾಗತಿಕ ತಾಪಮಾನದಲ್ಲಿ ಏರುಪೇರಗಳಾಗುತ್ತಿವೆ. ಜಾಗತಿಕ ತಾಪಮಾನದ ಪ್ರಕಾರ ನಾವುಗಳೆಲ್ಲರೂ 10ಲಕ್ಷಕ್ಕೂ ಹೆಚ್ಚು ಗಿಡಮರಗಳನ್ನು ಬೆಳಸಬೇಕಾಗಿದೆ ಎಂದರು.

ಈ ನಿಟ್ಟಿನಲ್ಲಿ ವನಸಿರಿ ಫೌಂಡೇಶನ್ ಪ್ರತಿನಿತ್ಯ ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ.ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು,ಪರಿಸರ ಪ್ರೇಮಿಗಳು ವನಸಿರಿ ಫೌಂಡೇಶನ್ ಜೊತೆಗೆ ಕೈಜೋಡಿಸಿ ಪರಿಸರವನ್ನು ಉಳಿಸಿ ಬೆಳಸಲು ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಸ್ಕಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ಅಧ್ಯಕ್ಷರಾದ ರಾಜು ಪತ್ತಾರ ಬಳಗಾನೂರ,ನಂದಿ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ರವಿಕುಮಾರ ಅಚ್ಚಪ್ಪನವರ್, ಅಮರೇಗೌಡ ಪಾಟೀಲ, ನಾಗರಾಜ ಸ್ಥಾವರಮಠ, ಅಂಬಿಕಾ ಪಾಟೀಲ, ಶರಣಮ್ಮ,ಆಸ್ಮಾ ಬೇಗಂ, ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ

Published

on

    • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ

ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ

ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ ಇರೋದು ಜೊತೆಗೆ ತುಂಗಭದ್ರಾ ಜಲಾಶಯದ ಹೂಳು ಎತ್ತದೆ ಇರೋದು ದೊಡ್ಡ ದುರಂತವಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಕ್ಕರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ವಿಜಯನಗರ ಜಿಲ್ಲೆಗೆ ಬಹಳ‌ ಅನಾಯ್ಯವಾಗಿದೆ ಅನುದಾನ ಬಿಡುಗಡೆಯಲ್ಲಿ ಮತ್ತು ಸ್ವಪಕ್ಷದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಗವಿಯಪ್ಪ
ಯಾವುದೇ ಅಭಿವೃದ್ಧಿ ಗಳನ್ನು ಕೈಗೊಳ್ಳದೇ, ಯೋಜನೆಗಳಿಗೆ ಶಿಲಾನ್ಯಾಸ ಮಾಡದೇ ವಿಜಯನಗರದ ಜಿಲ್ಲೆಯಲ್ಲಿ ಎರಡು ವರ್ಷದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸ್ವಪಕ್ಷದ ವಿರುದ್ಧವೇ ಮುನಿಸಿಕೊಂಡ ಶಾಸಕ ಗವಿಯಪ್ಪ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಭಾಗಿನ ಕಾರ್ಯಕ್ರಮದಲ್ಲಿ ಮುನಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಾಸು ಹೋಗಿದ್ದರು. ಅವರ ಕಛೇರಿಯವರೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕರೆಯಲು ಹೋದರೂ ಸಹ ಬರಲಿಲ್ಲ. ಇದರಿಂದ ಸಹ ಶಾಸಕರು ಸಿಎಂ ಮೇಲೆ ಮುನಿಸಿಕೊಂಡರು.

ಜಿಲ್ಲೆಯ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಪತ್ರಿಕಾಗೋಷ್ಟಿಯಲ್ಲಿ ಶಾಸಕ ಗವಿಯಪ್ಪ ವಿರುದ್ಧ ಇವರು ಕ್ಷೇತ್ರಕ್ಕೆ ‘ಶಾಪ’ ಎಂದು ಹೇಳಿ, ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಕಾರ್ಯಕರ್ತರ ನಡುವೆ ಅಸಮಾಧಾನಗಳ ನಡುವೆ ಸ್ವಪಕ್ಷಗಳಿಂದ ಶಿರಾಜ್ ಶೇಖ್ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಇವರಿಬ್ಬರ ನಡುವಿನ ಜಗಳ ಸಮಾಧಾನ ಮಾಡಲು ಕೆ.ಪಿ.ಸಿ.ಸಿ ಮಧ್ಯೆ ಪ್ರವೇಶ ಮಾಡಿ ಸಂಧಾನ ಮಾಡುವಲ್ಲಿ ವಿಫಲವಾಯಿತು.
ಸಾಧನೆ ಮತ್ತು ಸಮರ್ಪಣೆ ಇವುಗಳಲ್ಲಿ ಯಾವುದನ್ನು ಮಾಡುತ್ತಾರೋ ಅವರಲ್ಲಿಯೇ ಗೊಂದಲ ಇದೆ. ಯಾವುದು ಸಮರ್ಪಣೆ ?, ಯಾವುದು ಸಾಧನೆ‌ ? ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿ ಅವಳಿ ಜಿಲ್ಲೆಗೆ ಸಚಿವರನ್ನು ನೇಮಕ ಮಾಡದೇ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎನ್ನುವುದು ಸಾರ್ವಜನಿಕರಲ್ಲಿ, ರಾಜಕೀಯದಲ್ಲಿ ಗೊಂದಲ ನಿರ್ಮಾಣ ಮಾಡಿದೆ.

ಜಿಲ್ಲೆಯಲ್ಲಿ ಶಾಸಕಾಂಗ ಮತ್ತು ಆಡಳಿತದಲ್ಲಿ ಒಂದೇ ಸಮುದಾಯದವರು ಇರೋದರಿಂದ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎನ್ನುವ ಮಾಹಿತಿಯನ್ನು ಈ ಕ್ಷೇತ್ರದ ಜನರಿಗೆ ತಿಳಿಸಲು ಈ ಸಮರ್ಪಣೆ ಕಾರ್ಯಕ್ರಮ ಮಾಡುತ್ತಿದ್ದಾರೆ.

ದಿವಂಗತ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧೀ ಕಟ್ಟೆಯನ್ನು ನಾಲ್ಕು ದಿನಗಳಲ್ಲಿ ಅಭಿವೃದ್ಧಿ ಪಡಿಸಿರುವುದು ವಿಜಯನಗರ ಕ್ಷೇತ್ರದ ಜನರಿಗೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗವಿಯಪ್ಪ ನೀಡುತ್ತಿರುವುದು ಬಹು ದೊಡ್ಡ ಕೊಡುಗೆ ಆಗಿದೆ.
ಇನ್ನು ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಸಮರ್ಪಣೆ, ಸಾಧನ ಸಮಾವೇಶ ಮಾಡಿದರೆ ಶಾಸಕ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಹಿಂಬಾಲಕರ ನಿರೀಕ್ಷೆ ಸಹ ಇದೆ.

2025 ಮೇ 20 ರಂದು ನಡೆಯುವ ಜಿಲ್ಲೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ಸಾಧನ ಸಮಾವೇಶದಲ್ಲಿ ಎಷ್ಟೆಲ್ಲಾ ಗೊಂದಲದ ನಡುವೆ ಯಶಸ್ವಿಯಾಗುವುದೇ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆ ಆಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಟಾಕ್ ಮಾರ್ಕೇಟ್ 17.75 ಲಕ್ಷ ವಂಚನೆ, ಒಬ್ಬನ ಬಂಧನ ; 5 ಲಕ್ಷ ಜಪ್ತಿ !

Published

on

  • ಗಿರೀಶ್ ಕುಮಾರ್,‌ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ಸೈಬರ್, ಆರ್ಥಿಕ, ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ, ಬಳ್ಳಾರಿ ಕಾರ್ಯಚರಣೆ ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ವ್ಯಕ್ತಿಯಿಂದ ನಗದು ಹಣ ರೂಪಾಯಿ 5 ಲಕ್ಷ ಜಪ್ತಿ ಮಾಡಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.

ಕು. ಲಕ್ಷ್ಮೀ ವಿ.ಎಸ್ ತಂದೆ ವಿ. ಟಿ ಸತ್ಯನಾರಾಯಣ ವಾಸ: ಬಳ್ಳಾರಿ ರವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಸಿಯಾದ ರಂಜಿತ ಎಂಬುವವರು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ಹೇಳಿ ನಂಬಿಸಿ ಪಿರ್ಯಾದಿದಾರರಿಂದ ಹಣ ರೂ. 17,75,865 ಆನ್‌ಲೈನ್ ಮೂಲಕ ಹಾಕಿಸಿಕೊಂಡು ಮೋಸ ಮಾಡಿರುತ್ತಾನೆ. ಆದರೆ 5 ಲಕ್ಷ ಮಾತ್ರ ರಿಕವರಿ, ಉಳಿದ ಹಣ ಎಲ್ಲಿಗೆ ಹೋಗಿದೆ.

ಪೊಲೀಸ್ ಅಧೀಕ್ಷಕಿ ಡಾ: ಶೋಭಾರಾಣಿ ವಿ.ಜೆ ಅವರ ಬಳ್ಳಾರಿ ಮಾರ್ಗದರ್ಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ನೇತೃತ್ವದಲ್ಲಿ, ಬಳ್ಳಾರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್‌ಪಿ ಡಾ: ಸಂತೋಷ ಚೌವ್ಹಾಣ್ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಣೆ ಮಾಡಿಸಿ ತನಿಖೆ ಕೈಗೊಂಡು, ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ವಲಿಬಾಷ ಮತ್ತು ಸಿಬ್ಬಂದಿಯ ತಿಪ್ಪೇರುದ್ರ ಎಎಸ್‌ಐ, ಸುರೇಶ, ಉಮಾಮಹೇಶ್ವರ, ಕೆ. ಯಲ್ಲೇಶ್, ಎನ್ ಚಂದ್ರಶೇಖರ ಅವರೊಂದಿಗೆ ಸೇರಿ ಆರೋಪಿ ರಂಜಿತ್ ಹೊಸಪೇಟೆ, ವಿಜಯನಗರ ಜಿಲ್ಲೆ ಪತ್ತೆಮಾಡಿ ಈತನನ್ನು ವಿಚಾರಣೆಗೊಳಪಡಿಸಿ ಆರೋಪಿತ ಪಡೆದಿದ್ದ ನಗದು ಹಣ ರೂಪಾಯಿ 5 ಲಕ್ಷ ಜಪ್ತು ಮಾಡಿದ್ದಾರೆ.
ಪೊಲೀಸ್ ಅಧೀಕ್ಷಕರು ಬಳ್ಳಾರಿ, ಈ ಕಾರ್ಯಚರಣೆ ಮಾಡಿದ ಬಳ್ಳಾರಿ ಸಿ.ಇ.ಎನ್. ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಗೆ ಶ್ಲಾಘಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ www.schooleducation.karnataka.gov.in
ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ವಿವರ

ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು, ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರವಢ), ತಾಂತ್ರಿಕ ಸಹಾಯಕರು(ಪ್ರೌಢ) ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending