ದಿನದ ಸುದ್ದಿ
ಭಾರತದ ಸಾಂಸ್ಕೃತಿಕ ಪರಂಪರೆ, ಮೌಲ್ಯ ವ್ಯವಸ್ಥೆಗೆ ಶ್ರೀ ನಾರಾಯಣ ಗುರು ಅವರ ಕೊಡುಗೆ ಅಪಾರ : ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಕೇರಳ : ಭಾರತದ ಆಧ್ಯಾತ್ಮಿಕ ಜ್ಯೋತಿ ಬೆಳಗಿಸಿದ ಶ್ರೀ ನಾರಾಯಣ ಗುರು ಅವರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಮೌಲ್ಯ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇರಳದ ಶಿವಗಿರಿ ಯಾತ್ರೆಯ 90ನೇ ವರ್ಷಾಚರಣೆ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ಇಂದು ವರ್ಚುವಲ್ನಲ್ಲಿ ಮಾತನಾಡಿದ ಅವರು, ನಾರಾಯಣ ಗುರು ಅವರ ಜನ್ಮದಿಂದ ಕೇರಳ ಪವಿತ್ರ ಭೂಮಿಯಾಗಿ ಉತ್ತುಂಗಕ್ಕೇರಿದೆ. ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಸಾಮಾಜಿಕ ಸೇವೆಯಲ್ಲಿ ಶ್ರೀ ನಾರಾಯಣ ಗುರು ಅವರ ಜೀವನ ಮತ್ತು ಬೋಧನೆಗಳನ್ನು ಜನಪ್ರಿಯಗೊಳಿಸುವಲ್ಲಿ ಶಿವಗಿರಿ ಯಾತ್ರೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.
ನವತಿ ಆಚರಣೆಗಳಿಗಾಗಿ ಲಾಂಛನವನ್ನು ಪ್ರಧಾನಮಮಂತ್ರಿ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ನವತಿ ಆಚರಣೆಗಾಗಿ ಮುಂದಿನ ಒಂದು ವರ್ಷ ವಿವಿಧ ದೇಶಗಳು ಮತ್ತು ರಾಜ್ಯಗಳಲ್ಲಿ ವಿಚಾರ ಸಂಕಿರಣಗಳು ಮತ್ತು ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ. ಮುರಳೀಧರನ್, ಮತ್ತು ರಾಜೀವ್ ಚಂದ್ರಶೇಖರ್, ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್ ಅಧ್ಯಕ್ಷ ಸ್ವಾಮಿ ಸಚ್ಚಿದಾನಂದ ಉಪಸ್ಥಿತರಿದ್ದರು.
India is extremely proud of the monumental contribution of the Sivagiri Mutt in different fields. They have popularised the teachings of Sree Narayana Guru and done great work in healthcare, education and service. I fondly recall my visits to the Mutt in 2015 and 2013. pic.twitter.com/VbZHOONDLW
— Narendra Modi (@narendramodi) April 25, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243