ದಿನದ ಸುದ್ದಿ
ರೈತನ ಜೀವನ ಹಸನುಗೊಳಿಸಿದ ನರೇಗಾ
ರೈತರ ನೆರವಿಗೆ ನಿಂತ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಜಿಲ್ಲೆಯಲ್ಲಿ ಸಣ್ಣ ರೈತರೂ ತಮ್ಮ ಕನಸಿನ ವಾಣಿಜ್ಯ ಬೆಳೆಯಾದ ಅಡಿಕೆ ತೋಟ ನಿರ್ಮಾಣ ಮಾಡಿಕೊಂಡು ಸಂತಸ ನಗೆ ಬೀರಿದ್ದಾರೆ.
ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತೇವೆ. ಆದರೆ ರೈತ ಇಂದಿಗೂ ಬಡತನದಿಂದ ಮುಕ್ತನಾಗಿಲ್ಲ. ಬೆಳೆಗೆ ಸಮರ್ಪಕ ಬೆಲೆ ಸಿಗದೆ ಹೈರಾಣಾಗಿದ್ದಾನೆ. ಇಂತಹ ಸ್ಥಿತಿಯಲ್ಲಿ ಆಹಾರ ಬೆಳೆ, ಧಾನ್ಯಗಳ ಜೊತೆಗೆ ರೈತರು ವಾಣಿಜ್ಯ ಬೆಳೆ ಬೆಳೆಯುವ ಬಗ್ಗೆ ಚಿಂತಿಸಿದ್ದರೂ ಸ್ವಂತ ಖರ್ಚಿನಿಂದ ಅಡಿಕೆ ತೋಟ ನಿರ್ಮಾಣ ಕಷ್ಟಸಾಧ್ಯ.
ಇಂತಹ ಪರಿಸ್ಥಿತಿಯಲ್ಲಿ ಸಣ್ಣ ರೈತರ ನೆರವಿಗೆ ಬಂದ ಯೋಜನೆಯೇ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ. ಜಿಲ್ಲೆಯಲ್ಲಿ ಅನೇಕ ಸಣ್ಣ ರೈತರು ಈ ಯೋಜನೆಯ ಮೂಲಕ ತಮ್ಮ ಜಮೀನಿನಲ್ಲಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾ.ಪಂ ವ್ಯಾಪ್ತಿಯ ತೆವರತೆಪ್ಪ ಗ್ರಾಮದ ಹನುಮಂತಪ್ಪ ಬಿನ್ ಹನುಮಣ್ಣ ಇವರು ತಮ್ಮ ಸರ್ವೆ ನಂ 13 ರಲ್ಲಿ 1.30 ಗುಂಟೆ ಜಮೀನಿನಲ್ಲಿ ಎಂಜಿ ನರೇಗಾ ಯೋಜನೆಯ ಮುಖಾಂತರ ಅಡಿಕೆ ತೋಟ ನಿರ್ಮಿಸಿಕೊಂಡಿದ್ದು, ಉತ್ತಮ ಆದಾಯ ಪಡೆಯುತ್ತಿದ್ದಾರೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣರು ಮತ್ತು ರೈತರ ಪಾಲಿನ ಆಶಾಕಿರಣವಾಗಿದೆ. ಆರ್ಥಿಕವಾಗಿ ಹಿಂದುಳಿದ ಸಣ್ಣ ರೈತರಿಗೆ ಸ್ವಂತ ಖರ್ಚಿನಲ್ಲಿ ಅಡಿಕೆ ತೋಟ ನಿರ್ಮಾಣ ಕಷ್ಟ. ಇಂತಹ ಸಮಯದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಡಿಕೆ ತೋಟ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಪ್ರಸ್ತುತ ಅಡಿಕೆ ಬೆಳೆಗೆ ಹೆಚ್ಚಿನ ಬೆಲೆ ಇದ್ದು ಇದರಿಂದ ಹೆಚ್ಚಿನ ಆದಾಯ ಗಳಿಸಬಹುದು. ಕಡಿಮೆ ಖರ್ಚಿನಲ್ಲಿ ಅಡಿಕೆ ತೋಟವನ್ನು ನಿರ್ವಹಣೆ ಮಾಡಬಹುದು. ಹಾಗೂ ಹನಿ ನೀರಾವರಿಯನ್ನು ಅಳವಡಿಸಿಕೊಂಡರೆ ಇನ್ನೂ ಕಡಿಮೆ ಖರ್ಚಿನಲ್ಲಿ ಅಡಿಕೆ ತೋಟವನ್ನು ನಿರ್ವಹಣೆ ಮಾಡಬಹುದಾಗಿದೆ.
ಅಡಿಕೆ ಬೆಳೆಯುವದರ ಜೊತೆಗೆ ಅಡಿಕೆ ತೋಟದಲ್ಲಿ ಅಂತರ ಬೆಳೆಯಾಗಿ ಬಾಳೆ, ಕಾಳುಮೆಣಸು ಹಾಗೂ ಇತರೆ ತರಕಾರಿ ಬೆಳೆಗಳನ್ನು ಬೆಳೆಯಬಹುದಾಗಿದ್ದು ಇದರಿಂದ ಇನ್ನೂ ಹೆಚ್ಚಿನ ಆದಾಯವನ್ನು ಗಳಿಸಬಹುದು.
- ಹನುಮಂತಪ್ಪನವರು ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಅಡಿಕೆ ತೋಟ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವಂತೆ ಗ್ರಾ.ಪಂ ಗೆ ಅರ್ಜಿಯನ್ನು ಸಲ್ಲಿಸಿದ್ದು, ಗ್ರಾಮ ಸಭೆಯಲ್ಲಿ ಇವರ ಅರ್ಜಿಯನ್ನು ಅನುಮೋದಿಸಿ, ತೋಟಗಾರಿಕೆ ಇಲಾಖಾಧಿಕಾರಿಗಳ ತಾಂತ್ರಿಕ ಸಲಹೆಯೊಂದಿಗೆ ಯೋಜನೆಯ ಮಾರ್ಗಸೂಚಿಗಳನ್ವಯ2015-16 ನೇ ಸಾಲಿನಲ್ಲಿ ಅಂದಾಜು ವೆಚ್ಚ ರೂ.50 ಸಾವಿರದಲ್ಲಿ ರೂ.33 ಸಾವಿರ ಕೂಲಿ ಮೊತ್ತ ಮತ್ತು ರೂ.14 ಸಾವಿರ ಸಾಮಗ್ರಿ ಮೊತ್ತದಲ್ಲಿ ಅಡಿಕೆ ತೋಟ ಕಾಮಗಾರಿ ಅನುಷ್ಟಾನ ಮಾಡಲಾಯಿತು.
| ಎಂ.ಎಲ್.ವೈಶಾಲಿ, ಜಿ.ಪಂ. ಸಿಇಓ
ರೈತ ಹನುಮಂತಪ್ಪನವರ ನುಡಿ
ಅಡಿಕೆ ಬೆಳೆ ಬರಲು ಕನಿಷ್ಟ 5 ರಿಂದ 6 ವರ್ಷ ಬೇಕಾಗಿದ್ದು, 6 ವರ್ಷಗಳವರೆಗೆ ಅಡಿಕೆ ತೋಟದಲ್ಲಿ ಅಂತ ಬೆಳೆಯಾಗಿ 2 ವರ್ಷ ಬಾಳೆ, 1 ವರ್ಷ ಶುಂಠಿ ಹಾಗೂ ತರಕಾರಿಗಳನ್ನು ಬೆಳೆದು ಆದಾಯ ಪಡೆದಿದ್ದೇನೆ.
ಅಡಿಕೆ ಬೆಳೆ ಬರಲು ಪ್ರಾರಂಭವಾದ 6 ನೇ ವರ್ಷದಲ್ಲಿ ರೂ.1 ಲಕ್ಷ ಆದಾಯ ಪಡೆದಿದ್ದೇನೆ. ಪ್ರಸ್ತುತ 7 ನೇ ವರ್ಷದಲ್ಲಿ 2 ರಿಂದ 3 ಲಕ್ಷಗಳವರೆಗೆ ಆದಾಯ ಪಡೆಯುವ ನಿರೀಕ್ಷೆ ಹೊಂದಿದ್ದೇನೆ. ಅಡಿಕೆ ಬೆಳೆಯ ಆದಾಯವು ಜೀವನ ನಿರ್ವಹಣೆ ಹಾಗೂ ಮಕ್ಕಳ ವಿದ್ಯಾಭ್ಯಾಸ ಮತ್ತು ಇತರೆ ಖರ್ಚುಗಳ ನಿರ್ವಹಣೆಗೆ ಆಸರೆಯಾಗಿದೆ.
ಅಡಿಕೆ ತೋಟ ನಿರ್ಮಾಣಕ್ಕೂ ಮುನ್ನ ಭತ್ತವನ್ನು ಬೆಳೆಯಲಾಗುತ್ತಿದ್ದು, ಅದರಲ್ಲ ಬಂದ ಆದಾಯದಲ್ಲಿ ಶೇ.70 ರಷ್ಟು ನಿರ್ವಹಣೆಗಾಗಿ ವ್ಯಯ ಮಾಡಬೇಕಿತ್ತು. ಆದರೆ ಅಡಿಕೆ ತೋಟ ನಿರ್ಮಾಣದಿಂದ ನಿರ್ವಹಣೆ ವೆಚ್ಚವೂ ಕಡಿಮೆಯಾಗಿದೆ.
- ನರೇಗಾ ಯೋಜನೆ ಮೂಲಕ ನನಗೆ ಅಡಿಕೆ ತೋಟ ನಿರ್ಮಾಣ ಮಾಡಿಕೊಟಟಿರುವುದರಿಂದ ಉತ್ತಮ ಆದಾಯ ಬರುತ್ತಿದ್ದು ನಮ್ಮ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದೆ. ಅಡಿಕೆ ತೋಟ ನಿರ್ಮಿಸಲು ಸಹಕರಿಸಿದ ಯೋಜನೆ ಮತ್ತು ಎಲ್ಲ ಅಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇನೆ.
| ಹನುಮಂತಪ್ಪ, ಫಲಾನುಭವಿ ರೈತ
(ವರದಿ : ಭಾಗ್ಯ ಎಂ.ಟಿ, ವಾರ್ತಾ ಸಹಾಯಕರು
ವಾರ್ತಾ ಇಲಾಖೆ, ಶಿವಮೊಗ್ಗ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.
ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ7 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ4 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ3 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ11 hours agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

