ರಾಜಕೀಯ
ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/05/Modi-and-trump-suddidina-54.jpg&description=ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/05/Modi-and-trump-suddidina-54.jpg&description=ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ', 'pinterestShare', 'width=750,height=350'); return false;" title="Pin This Post">
- ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ.ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.
ಮೋದಿ ಸರಕಾರದ ಎರಡನೇ ಅವಧಿಯು ಅಮೆರಿಕದ ಕಿರಿಯ ಪಾಲುದಾರನಾಗಿ ಭಾರತದ ಪಾತ್ರವನ್ನು ಇನ್ನಷ್ಟು
ಗಟ್ಟಿಗೊಳಿಸುವಂತದ್ದಾಗುತ್ತದೆ ಎನ್ನುವುದಕ್ಕೆ ಆಗಲೇ ಎಲ್ಲ ಸುಳಿವುಗಳು ಸಿಕ್ಕಿವೆ. ಪರಿಣಾಮವಾಗಿ ಇದು ನವ-ಉದಾರವಾದಿ ಅಜೆಂಡಾದ ಅನುಷ್ಠಾನವನ್ನು ಇನ್ನಷ್ಟು ತ್ವರಿತಗೊಳಿಸುತ್ತದೆ, ಮತ್ತು ಅದರಿಂದಾಗಿ ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.
2014-2019ರ ಅವಧಿಯಲ್ಲಿ ಮೋದಿ ಸರಕಾರವು ಭಾರತವನ್ನು ಅಮೆರಿಕದೊಂದಿಗೆ ವ್ಯೂಹಾತ್ಮಕವಾಗಿಯೂ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಮತ್ತಷ್ಟು ಜೋಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಮಿಲಿಟರಿ ಸಾಗಾಣಿಕೆ ಬೆಂಬಲ ಮತ್ತು ಸೇನಾ ಸಂಪರ್ಕ ಸಾಧನಗಳನ್ನು ಸಮಗ್ರೀಕರಿಸುವ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಜಪಾನ್, ಆಸ್ಟ್ರೇಲಿಯಾ, ಭಾರತ ಮತ್ತು ಅಮೆರಿಕ ಒಳಗೊಂಡ ಚತುಷ್ಪಕ್ಷೀಯ ಮೈತ್ರಿಕೂಟ ಮಾಡಿಕೊಳ್ಳುವ ಬಗ್ಗೆ ಅಮೆರಿಕ ಮಾಡಿದ್ದ ಪ್ರಸ್ತಾವನೆಗೆ ಭಾರತವೂ ಕೈಜೋಡಿಸಿತ್ತು.
ಈ ವ್ಯೂಹಾತ್ಮಕ ಅಪ್ಪುಗೆಯು ಏಷ್ಯಾ-ಶಾಂತಸಾಗರ ವಲಯದಲ್ಲಿ ಅಮೆರಿಕದ ಭೌಗೋಳಿಕ-ರಾಜಕೀಯ ಹಿತಗಳಿಗೆ ಸಂಪೂರ್ಣವಾಗಿ ಅನುಕೂಲಕರವಾದ ಒಂದು ವಿದೇಶಾಂಗ ನೀತಿಯನ್ನು ಭಾರತವು ಅನುಸರಿಸುವಂತೆ ಮಾಡಿತು.
ಈ ಹಿಂದೆ ರಷ್ಯಾ ಭಾರತಕ್ಕೆ ಶಸ್ತ್ರಾಸ್ತ್ರಗಳ ಮತ್ತು ಸಾಧನಗಳ ಪ್ರಮುಖ ಪೂರೈಕೆದಾರನಾಗಿತ್ತು. ಈಗ ಅಮೆರಿಕದ ಒತ್ತಡಕ್ಕೆ ಮಣಿದು ರಷ್ಯಾವನ್ನು ಬಿಟ್ಟು ಅಮೆರಿಕದಿಂದ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಗೆ ಭಾರತ ವೇಗವನ್ನು ನೀಡಿತು. ಆಂತರಿಕ ನೀತಿಗಳ ಬಗ್ಗೆ ಹೇಳುವುದಾದರೆ, ಮೋದಿ ಸರಕಾರವು ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಟ್ಗಳು ಮತ್ತು ಹಣಕಾಸು ಹಿತಗಳಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿತು.
ಡೊನಾಲ್ಡ್ ಟ್ರಂಪ್ 2018ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಟ್ರಂಪ್ರ ಅಮೆರಿಕ ಮೊದಲು ಹಾಗೂ ಸ್ವರಕ್ಷಣಾತ್ಮಕ ನೀತಿಗಳಿಗೆ ಅನುಗುಣವಾಗಿ ಭಾರತದ ಮೇಲೆ ಅನೇಕ ಒತ್ತಡಗಳನ್ನು ಹೇರಲಾಯಿತು.
250 ಬಿಲಿಯ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಸುಂಕವನ್ನು ಹೆಚ್ಚಿಸುವ ಮೂಲಕ ಹಾಗೂ ಇನ್ನೂ 325 ಬಿಲಿಯ ಡಾಲರ್ ವಸ್ತುಗಳಿಗೆ ಹಾಗೇ ಮಾಡುವುದಾಗಿ ಬೆದರಿಸುವ ಮೂಲಕ ಚೀನಾದ ವಿರುದ್ಧ ಟ್ರಂಪ್ ವಾಣಿಜ್ಯ ಸಮರವನ್ನು ಸಾರಿದರು. ಚೀನಾದ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳನ್ನು ನೀಡಬೇಕು ಹಾಗೂ ಅಮೆರಿಕದ ತಂತ್ರಜ್ಞಾನ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ರಕ್ಷಣೆಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.
ಟ್ರಂಪ್ ಭಾರತವನ್ನು ಕೂಡ ಬಿಡಲಿಲ್ಲ. ಭಾರತದೊಂದಿಗಿನ ವಾಣಿಜ್ಯ ಕೊರತೆಯನ್ನು ತಿರುಗು-ಮುರುಗು ಮಾಡಬೇಕು ಹಾಗೂ ಭಾರತವು ಸುಂಕಗಳನ್ನು ಇಳಿಸಬೇಕು ಮತ್ತು ಅಮೆರಿಕದ ವಸ್ತುಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಮೊದಲ ಹೆಜ್ಜೆಯಾಗಿ ಅವರು ಅಮೆರಿಕ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ಅಲ್ಯುಮಿನಿಯಮ್ ಮತ್ತು ಉಕ್ಕಿನ ಮೇಲಿನ ಸುಂಕಗಳನ್ನು ಹೆಚ್ಚಿಸಿದರು. ಅದರ ಬೆನ್ನಲ್ಲೇ ಸುಂಕಗಳಿಲ್ಲದೆ ಭಾರತವು ಅನೇಕ ವಸ್ತುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಪ್ರಾಶಸ್ತ್ಯದ ವ್ಯಾಪಾರ ಎಂದು ಪರಿಗಣಿಸುವುದನ್ನು ಕೊನೆಗೊಳಿಸಲು ಅವರು ನಿರ್ಧರಿಸಿದರು. ಈ ವ್ಯವಸ್ಥೆಯನ್ನು ತೆಗೆದು ಹಾಕಿದ್ದರಿಂದ ಭಾರತದಿಂದ ರಫ್ತಾಗುವ 1900 ವಸ್ತುಗಳಿಗೆ ಈಗ ಕಸ್ಟಮ್ಸ್ ಸುಂಕ ತೆರಬೇಕಾಗಿದೆ.
ಮಾರ್ಚ್ ಆರಂಭದಲ್ಲಿ ಅಮೆರಿಕ ಈ ಪ್ರಕಟಣೆಯನ್ನು ಮಾಡಿತು ಹಾಗೂ 60 ದಿನಗಳ ನಂತರ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿತು ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದಾಗ್ಯೂ ಈ ಪ್ರತಿಕೂಲ ಕ್ರಮವನ್ನು ನಿಲ್ಲಿಸಲು ಮೋದಿ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಅಥವಾ ಪ್ರತಿ-ಕ್ರಮಗಳಿಗೂ ಮುಂದಾಗಲಿಲ್ಲ. ಸುಂಕ ಹೇರಿದ್ದನ್ನು ಚೀನಾ ಯಾವ ರೀತಿಯಲ್ಲಿ ನಿರ್ವಹಿಸಿತು ಎನ್ನುವುದಕ್ಕೆ ಪೂರ್ತಿ ವ್ಯತಿರಿಕ್ತವಾದ ನಡೆ ಭಾರತದ್ದಾಗಿದೆ. ಚೀನಾವನ್ನು ಪ್ರವೇಶಿಸುವ ಅಮೆರಿಕದ ವಸ್ತುಗಳ ಮೇಲೆ ಸುಂಕವನ್ನು ಹೇರುವ ಮೂಲಕ ಚೀನಾ ತಿರುಗೇಟು ನೀಡಿತು.
ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ವ್ಯೂಹಾತ್ಮಕ ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು.
ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳಿಗೆ ಮಂಡಿಯೂರುತ್ತಿದ್ದಾರೆ. ಇರಾನ್ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ಶಿರಸಾವಹಿಸಿ ಪಾಲಿಸಲಾಯಿತು. ಇದರಿಂದಾಗಿ ಭಾರತಕ್ಕೆ ತುಂಬಾ ನಷ್ಟವಾಗಲಿದೆ. ಯಾಕೆಂದರೆ ಅಂತಾರ್ರಾಷ್ಟ್ರೀಯ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಇರಾನ್ನಿಂದ ಎಣ್ಣೆಯನ್ನು ತರಿಸಿಕೊಳ್ಳಲಾಗುತ್ತಿತ್ತು. ಅದಾದ ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು.
ರಷ್ಯಾದ ಟ್ರೈಯಂಫ್ ಎಸ್-400 ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.
ಲಾಕ್ಹೀಡ್ ನಿರ್ಮಿತ ಎಫ್-21 ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಪಾರ ಒತ್ತಡ ಹೇರಲಾಗುತ್ತಿದೆ. 110 ಯುದ್ಧ ವಿಮಾನಗಳ ಖರೀದಿಗೆ (ರಫೇಲ್ ಯುದ್ಧ ವಿಮಾನ ಖರೀದಿಯನ್ನು 36ಕ್ಕೆ ಇಳಿಸಿದ ನಂತರ) ಭಾರತದ ಒಂದು ಟೆಂಡರ್ ಪ್ರಕಟಿಸಿದೆ. ಬಿಲಿಯಗಟ್ಟಲೆ ಡಾಲರ್ ಮೌಲ್ಯದ ಈ ಗುತ್ತಿಗೆಯನ್ನು ಪಡೆಯಲು ಅಮೆರಿಕ ಭಾರತವನ್ನು ಪೀಡಿಸುತ್ತಿದೆ.
ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೊ ಜೂನ್ ಮೂರನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಅಧಿಕಾರಕ್ಕೆ ಮರಳಿದ ನಂತರದ ಮೊದಲ ಭೇಟಿಯಿದು. ವಾಣಿಜ್ಯ ವಿಚಾರದಲ್ಲಿ ಕಠಿಣ ಮಾತು, ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ಪರಿಹಾರವಾಗಿ ಅಮೆರಿಕದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಚೀನಾದ ಬೃಹತ್ ಕಂಪೆನಿಯಾದ ಹುವೈ ಭಾರತದಲ್ಲಿ ನಡೆಯುವ 5ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧಿಸುವುದು- ಇವೆಲ್ಲ ಪಾಂಪಿಯೊ ಭೇಟಿ ವೇಳೆ ಇರಲಿರುವ ಕಾರ್ಯಸೂಚಿಯಾಗಿದೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಇದೀಗ ಮೋದಿ ಸರಕಾರದ ಹೊಸ ವಿದೇಶ ಸಚಿವರು. ಒಬ್ಬ ವೃತ್ತಿನಿರತ ರಾಜತಾಂತ್ರಿಕನನ್ನು ನೇರವಾಗಿ ಸಚಿವ ಸಂಪುಟಕ್ಕೆ ಬಡ್ತಿ ನೀಡಿದ್ದು ಇದೇ ಮೊದಲ ಸಲವಾಗಿದೆ. ಅಮೆರಿಕ-ಪರ ಚಟುವಟಿಕೆಗಳಿಗೆ ಜೈಶಂಕರ್ ಖ್ಯಾತರು. ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಹಾಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಅವರ ಕಾರ್ಯಗಳ ದಾಖಲೆಗಳು ಹೇಗೆ ಅವರು ಅಮೆರಿಕದೊಂದಿಗೆ ನಿಕಟ ವ್ಯೂಹಾತ್ಮಕ ಮೈತ್ರಿಗೆ ಒತ್ತು ನೀಡಿದ್ದರು ಎನ್ನುವುದನ್ನು ತೋರಿಸುತ್ತವೆ.
ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ. ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.
ಇರಾನ್ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ,ದೇಶಕ್ಕೆತುಂಬಾನಷ್ಟವಾಗುತ್ತಿದ್ದರೂಶಿರಸಾವಹಿಸಿ ಪಾಲಿಸಲಾಯಿತು. ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು. ರಷ್ಯಾದ ಟ್ರೈಯಂಫ್ ಎಸ್-೪೦೦ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.
–ಪ್ರಕಾಶ್ ಕಾರಟ್
ಅನು: ವಿಶ್ವ
(ಕೃಪೆ : ಜನಶಕ್ತಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

