Connect with us

ರಾಜಕೀಯ

ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ

Published

on

  • ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ.ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್‌ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.

ಮೋದಿ ಸರಕಾರದ ಎರಡನೇ ಅವಧಿಯು ಅಮೆರಿಕದ ಕಿರಿಯ ಪಾಲುದಾರನಾಗಿ ಭಾರತದ ಪಾತ್ರವನ್ನು ಇನ್ನಷ್ಟು
ಗಟ್ಟಿಗೊಳಿಸುವಂತದ್ದಾಗುತ್ತದೆ ಎನ್ನುವುದಕ್ಕೆ ಆಗಲೇ ಎಲ್ಲ ಸುಳಿವುಗಳು ಸಿಕ್ಕಿವೆ. ಪರಿಣಾಮವಾಗಿ ಇದು ನವ-ಉದಾರವಾದಿ ಅಜೆಂಡಾದ ಅನುಷ್ಠಾನವನ್ನು ಇನ್ನಷ್ಟು ತ್ವರಿತಗೊಳಿಸುತ್ತದೆ, ಮತ್ತು ಅದರಿಂದಾಗಿ ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

2014-2019ರ ಅವಧಿಯಲ್ಲಿ ಮೋದಿ ಸರಕಾರವು ಭಾರತವನ್ನು ಅಮೆರಿಕದೊಂದಿಗೆ ವ್ಯೂಹಾತ್ಮಕವಾಗಿಯೂ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಮತ್ತಷ್ಟು ಜೋಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಮಿಲಿಟರಿ ಸಾಗಾಣಿಕೆ ಬೆಂಬಲ ಮತ್ತು ಸೇನಾ ಸಂಪರ್ಕ ಸಾಧನಗಳನ್ನು ಸಮಗ್ರೀಕರಿಸುವ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಜಪಾನ್, ಆಸ್ಟ್ರೇಲಿಯಾ, ಭಾರತ ಮತ್ತು ಅಮೆರಿಕ ಒಳಗೊಂಡ ಚತುಷ್ಪಕ್ಷೀಯ ಮೈತ್ರಿಕೂಟ ಮಾಡಿಕೊಳ್ಳುವ ಬಗ್ಗೆ ಅಮೆರಿಕ ಮಾಡಿದ್ದ ಪ್ರಸ್ತಾವನೆಗೆ ಭಾರತವೂ ಕೈಜೋಡಿಸಿತ್ತು.

ಈ ವ್ಯೂಹಾತ್ಮಕ ಅಪ್ಪುಗೆಯು ಏಷ್ಯಾ-ಶಾಂತಸಾಗರ ವಲಯದಲ್ಲಿ ಅಮೆರಿಕದ ಭೌಗೋಳಿಕ-ರಾಜಕೀಯ ಹಿತಗಳಿಗೆ ಸಂಪೂರ್ಣವಾಗಿ ಅನುಕೂಲಕರವಾದ ಒಂದು ವಿದೇಶಾಂಗ ನೀತಿಯನ್ನು ಭಾರತವು ಅನುಸರಿಸುವಂತೆ ಮಾಡಿತು.

ಈ ಹಿಂದೆ ರಷ್ಯಾ ಭಾರತಕ್ಕೆ ಶಸ್ತ್ರಾಸ್ತ್ರಗಳ ಮತ್ತು ಸಾಧನಗಳ ಪ್ರಮುಖ ಪೂರೈಕೆದಾರನಾಗಿತ್ತು. ಈಗ ಅಮೆರಿಕದ ಒತ್ತಡಕ್ಕೆ ಮಣಿದು ರಷ್ಯಾವನ್ನು ಬಿಟ್ಟು ಅಮೆರಿಕದಿಂದ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಗೆ ಭಾರತ ವೇಗವನ್ನು ನೀಡಿತು. ಆಂತರಿಕ ನೀತಿಗಳ ಬಗ್ಗೆ ಹೇಳುವುದಾದರೆ, ಮೋದಿ ಸರಕಾರವು ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಟ್‌ಗಳು ಮತ್ತು ಹಣಕಾಸು ಹಿತಗಳಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿತು.

ಡೊನಾಲ್ಡ್ ಟ್ರಂಪ್ 2018ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಟ್ರಂಪ್‌ರ ಅಮೆರಿಕ ಮೊದಲು ಹಾಗೂ ಸ್ವರಕ್ಷಣಾತ್ಮಕ ನೀತಿಗಳಿಗೆ ಅನುಗುಣವಾಗಿ ಭಾರತದ ಮೇಲೆ ಅನೇಕ ಒತ್ತಡಗಳನ್ನು ಹೇರಲಾಯಿತು.

250 ಬಿಲಿಯ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಸುಂಕವನ್ನು ಹೆಚ್ಚಿಸುವ ಮೂಲಕ ಹಾಗೂ ಇನ್ನೂ 325 ಬಿಲಿಯ ಡಾಲರ್ ವಸ್ತುಗಳಿಗೆ ಹಾಗೇ ಮಾಡುವುದಾಗಿ ಬೆದರಿಸುವ ಮೂಲಕ ಚೀನಾದ ವಿರುದ್ಧ ಟ್ರಂಪ್ ವಾಣಿಜ್ಯ ಸಮರವನ್ನು ಸಾರಿದರು. ಚೀನಾದ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳನ್ನು ನೀಡಬೇಕು ಹಾಗೂ ಅಮೆರಿಕದ ತಂತ್ರಜ್ಞಾನ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ರಕ್ಷಣೆಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.

ಟ್ರಂಪ್ ಭಾರತವನ್ನು ಕೂಡ ಬಿಡಲಿಲ್ಲ. ಭಾರತದೊಂದಿಗಿನ ವಾಣಿಜ್ಯ ಕೊರತೆಯನ್ನು ತಿರುಗು-ಮುರುಗು ಮಾಡಬೇಕು ಹಾಗೂ ಭಾರತವು ಸುಂಕಗಳನ್ನು ಇಳಿಸಬೇಕು ಮತ್ತು ಅಮೆರಿಕದ ವಸ್ತುಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಮೊದಲ ಹೆಜ್ಜೆಯಾಗಿ ಅವರು ಅಮೆರಿಕ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ಅಲ್ಯುಮಿನಿಯಮ್ ಮತ್ತು ಉಕ್ಕಿನ ಮೇಲಿನ ಸುಂಕಗಳನ್ನು ಹೆಚ್ಚಿಸಿದರು. ಅದರ ಬೆನ್ನಲ್ಲೇ ಸುಂಕಗಳಿಲ್ಲದೆ ಭಾರತವು ಅನೇಕ ವಸ್ತುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಪ್ರಾಶಸ್ತ್ಯದ ವ್ಯಾಪಾರ ಎಂದು ಪರಿಗಣಿಸುವುದನ್ನು ಕೊನೆಗೊಳಿಸಲು ಅವರು ನಿರ್ಧರಿಸಿದರು. ಈ ವ್ಯವಸ್ಥೆಯನ್ನು ತೆಗೆದು ಹಾಕಿದ್ದರಿಂದ ಭಾರತದಿಂದ ರಫ್ತಾಗುವ 1900 ವಸ್ತುಗಳಿಗೆ ಈಗ ಕಸ್ಟಮ್ಸ್ ಸುಂಕ ತೆರಬೇಕಾಗಿದೆ.

ಮಾರ್ಚ್ ಆರಂಭದಲ್ಲಿ ಅಮೆರಿಕ ಈ ಪ್ರಕಟಣೆಯನ್ನು ಮಾಡಿತು ಹಾಗೂ 60 ದಿನಗಳ ನಂತರ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿತು ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದಾಗ್ಯೂ ಈ ಪ್ರತಿಕೂಲ ಕ್ರಮವನ್ನು ನಿಲ್ಲಿಸಲು ಮೋದಿ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಅಥವಾ ಪ್ರತಿ-ಕ್ರಮಗಳಿಗೂ ಮುಂದಾಗಲಿಲ್ಲ. ಸುಂಕ ಹೇರಿದ್ದನ್ನು ಚೀನಾ ಯಾವ ರೀತಿಯಲ್ಲಿ ನಿರ್ವಹಿಸಿತು ಎನ್ನುವುದಕ್ಕೆ ಪೂರ್ತಿ ವ್ಯತಿರಿಕ್ತವಾದ ನಡೆ ಭಾರತದ್ದಾಗಿದೆ. ಚೀನಾವನ್ನು ಪ್ರವೇಶಿಸುವ ಅಮೆರಿಕದ ವಸ್ತುಗಳ ಮೇಲೆ ಸುಂಕವನ್ನು ಹೇರುವ ಮೂಲಕ ಚೀನಾ ತಿರುಗೇಟು ನೀಡಿತು.

ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ವ್ಯೂಹಾತ್ಮಕ ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು.

ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳಿಗೆ ಮಂಡಿಯೂರುತ್ತಿದ್ದಾರೆ. ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ಶಿರಸಾವಹಿಸಿ ಪಾಲಿಸಲಾಯಿತು. ಇದರಿಂದಾಗಿ ಭಾರತಕ್ಕೆ ತುಂಬಾ ನಷ್ಟವಾಗಲಿದೆ. ಯಾಕೆಂದರೆ ಅಂತಾರ್ರಾಷ್ಟ್ರೀಯ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಇರಾನ್‌ನಿಂದ ಎಣ್ಣೆಯನ್ನು ತರಿಸಿಕೊಳ್ಳಲಾಗುತ್ತಿತ್ತು. ಅದಾದ ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು.

ರಷ್ಯಾದ ಟ್ರೈಯಂಫ್ ಎಸ್-400 ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಲಾಕ್‌ಹೀಡ್ ನಿರ್ಮಿತ ಎಫ್-21 ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಪಾರ ಒತ್ತಡ ಹೇರಲಾಗುತ್ತಿದೆ. 110 ಯುದ್ಧ ವಿಮಾನಗಳ ಖರೀದಿಗೆ (ರಫೇಲ್ ಯುದ್ಧ ವಿಮಾನ ಖರೀದಿಯನ್ನು 36ಕ್ಕೆ ಇಳಿಸಿದ ನಂತರ) ಭಾರತದ ಒಂದು ಟೆಂಡರ್ ಪ್ರಕಟಿಸಿದೆ. ಬಿಲಿಯಗಟ್ಟಲೆ ಡಾಲರ್ ಮೌಲ್ಯದ ಈ ಗುತ್ತಿಗೆಯನ್ನು ಪಡೆಯಲು ಅಮೆರಿಕ ಭಾರತವನ್ನು ಪೀಡಿಸುತ್ತಿದೆ.

ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೊ ಜೂನ್ ಮೂರನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಅಧಿಕಾರಕ್ಕೆ ಮರಳಿದ ನಂತರದ ಮೊದಲ ಭೇಟಿಯಿದು. ವಾಣಿಜ್ಯ ವಿಚಾರದಲ್ಲಿ ಕಠಿಣ ಮಾತು, ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ಪರಿಹಾರವಾಗಿ ಅಮೆರಿಕದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಚೀನಾದ ಬೃಹತ್ ಕಂಪೆನಿಯಾದ ಹುವೈ ಭಾರತದಲ್ಲಿ ನಡೆಯುವ 5ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧಿಸುವುದು- ಇವೆಲ್ಲ ಪಾಂಪಿಯೊ ಭೇಟಿ ವೇಳೆ ಇರಲಿರುವ ಕಾರ್ಯಸೂಚಿಯಾಗಿದೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಇದೀಗ ಮೋದಿ ಸರಕಾರದ ಹೊಸ ವಿದೇಶ ಸಚಿವರು. ಒಬ್ಬ ವೃತ್ತಿನಿರತ ರಾಜತಾಂತ್ರಿಕನನ್ನು ನೇರವಾಗಿ ಸಚಿವ ಸಂಪುಟಕ್ಕೆ ಬಡ್ತಿ ನೀಡಿದ್ದು ಇದೇ ಮೊದಲ ಸಲವಾಗಿದೆ. ಅಮೆರಿಕ-ಪರ ಚಟುವಟಿಕೆಗಳಿಗೆ ಜೈಶಂಕರ್ ಖ್ಯಾತರು. ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಹಾಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಅವರ ಕಾರ್ಯಗಳ ದಾಖಲೆಗಳು ಹೇಗೆ ಅವರು ಅಮೆರಿಕದೊಂದಿಗೆ ನಿಕಟ ವ್ಯೂಹಾತ್ಮಕ ಮೈತ್ರಿಗೆ ಒತ್ತು ನೀಡಿದ್ದರು ಎನ್ನುವುದನ್ನು ತೋರಿಸುತ್ತವೆ.

ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ. ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್‌ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.

ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ,ದೇಶಕ್ಕೆತುಂಬಾನಷ್ಟವಾಗುತ್ತಿದ್ದರೂಶಿರಸಾವಹಿಸಿ ಪಾಲಿಸಲಾಯಿತು. ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು. ರಷ್ಯಾದ ಟ್ರೈಯಂಫ್ ಎಸ್-೪೦೦ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಪ್ರಕಾಶ್ ಕಾರಟ್
ಅನು: ವಿಶ್ವ

(ಕೃಪೆ : ಜನಶಕ್ತಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ

Published

on

1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.

2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಕೆಆರ್‌ಡಿಬಿ ಗೆ 5 ಸಾವಿರ ಕೋಟಿ ರೂ

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.

1.03 ಲಕ್ಷ ಹಕ್ಕುಪತ್ರ ವಿತರಣೆ

ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ

Published

on

  • ಗಿರೀಶ್ ಕುಮಾರ್ ಗೌಡ

ಸುದ್ದಿದಿನ,ವಿಜಯನಗರ:ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು ಕಳೆದೆರಡು ವರ್ಷಗಳಿಂದ 90 ಸಾವಿರ ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ದಿಯಲ್ಲಿ ಗಣನೀಯ ಸಾಧನೆ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಅವರು ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ, ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮವನ್ನು ಮೇ.20 ರಂದು ಸರ್ಕಾರದಿಂದ ಏರ್ಪಡಿಸಲಾಗಿದ್ದು, ಇದರ ಪೂರ್ವಸಿದ್ದತೆ ಪರಿಶೀಲನೆಗೆ ಆಗಮಿಸಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, 2023 ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಿತು. ಮೊದಲ ಸಂಪುಟ ಸಭೆಯಲ್ಲಿಯೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತೀರ್ಮಾನಿಸಲಾಯಿತು. ಆದರೆ ವಿರೋಧ ಪಕ್ಷದವರು ಇದರಿಂದ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅನೇಕ ಟೀಕೆಯನ್ನು ಮಾಡಿದವು. ಅಂದು ಟೀಕೆ ಮಾಡಿದವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಇಂದು ನಕಲು ಮಾಡುವಂತಾಗಿದೆ. ಈಗ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ನಿದರ್ಶನ 2024-25 ರಲ್ಲಿ ಸರ್ಕಾರದ ಬಜೆಟ್ ಗಾತ್ರ ರೂ.3,71,000 ಕೋಟಿ, 2025-26 ರಲ್ಲಿ ಇದು ರೂ.4,09,000 ಕೋಟಿರೂಗಳಿಗೆ ಏರಿಕೆಯಾಗಿರುವುದು ಒಂದು ವರ್ಷದಲ್ಲಿ 38,000 ಸಾವಿರ ಕೋಟಿ ರೂಗಳು ಸರ್ಕಾರದ ಹೆಚ್ಚುವರಿ ಆದಾಯವಾಗಿದೆ. ಬಜೆಟ್ ಮಂಡನೆಯನ್ನು ಸಂಗ್ರಹವಾಗುವ ತೆರಿಗೆ ಮತ್ತು ಆದಾಯವನ್ನು ಆಧರಿಸಿ ಬಜೆಟ್ ಸಿದ್ದಪಡಿಸಲಾಗುತ್ತದೆ. ಆದಾಯ ಇಲ್ಲದೇ ಬಜೆಟ್ ಗಾತ್ರ ಹೆಚ್ಚುತ್ತಿರಲಿಲ್ಲ ಎಂದರು.

ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಅನುದಾನ ನೀಡಿದ್ದು ಅನೇಕ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇನ್ನೂರು, ಮುನ್ನೂರು ಮತ್ತು ಏಳುನೂರು ಕೋಟಿವರೆಗೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ ರೂ.90,000 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ. ವಿರೋಧ ಪಕ್ಷದವರು ಅಭಿವೃದ್ದಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, 2024-25 ರಲ್ಲಿ ಆಸ್ತಿ ಸೃಜನೆಗಾಗಿ ರೂ.51,000 ಕೋಟಿ ವೆಚ್ಚ ಮಾಡಲಾಗಿದೆ. 2025-26 ರಲ್ಲಿ ಆಸ್ತಿ ಸೃಜನೆಗಾಗಿ ರೂ.83,000 ಕೋಟಿ ವರೆಗೆ ವೆಚ್ಚ ಮಾಡುತ್ತಿದ್ದು ಗ್ಯಾರಂಟಿಗೆ ರೂ.50,018 ಕೋಟಿ ಮೀಸಲಿರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನವನ್ನೂ ಸಹ ಪೂರಕ ಬಜೆಟ್‌ಲ್ಲಿ ನೀಡಲಾಗುತ್ತದೆ. ಆದರೆ ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ ಎಂದರು.

ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಬದ್ದ

ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಕೆಕೆಆರ್‌ಡಿಬಿಗೆ ಕಳೆದ ಬಜೆಟ್‌ನಲ್ಲಿ ರೂ.5,000 ಕೋಟಿ ರೂಗಳು ನೀಡಿದ್ದು, ಈ ವರ್ಷವೂ ಅಷ್ಟೇ ಅನುದಾನ ನೀಡಲಾಗಿದೆ. ಆದರೆ ಹಿಂದಿನ ಸರ್ಕಾರ ಕೊನೆ ವರ್ಷ ರೂ.3,000 ಕೋಟಿ ರೂಗಳನ್ನು ಕೆಕೆಆರ್‌ಡಿಬಿಗೆ ನೀಡಿತ್ತು. 371ಜೆ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು ಇದರ ಅಭಿವೃದ್ದಿಗೆ ಕೇಂದ್ರ ಅನುದಾನ ನೀಡಬೇಕಿತ್ತು. ಆದರೆ ಒಂದು ಬಿಡಿಗಾಸು, ಒಂದೇ ಒಂದು ರೂಪಾಯಿಯನ್ನು ನೀಡಿಲ್ಲ ಎಂದರು. ಮೇ.20 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ 1,03,000 ಜನರಿಗೆ ಕಂದಾಯ ಇಲಾಖೆಯಿಂದ ಆಸ್ತಿಯ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಕಳೆದೆರಡು ವರ್ಷಗಳಲ್ಲಿ ಸರ್ಕಾರ ಜನರಿಗಾಗಿ ಮಾಡಿದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಬರಲಿದ್ದಾರೆ. ಅಂದಾಜು ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಭಾಗವಹಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು ವಿರೋಧ ಪಕ್ಷದ ನಾಯಕರನ್ನು ಸಹ ಅಹ್ವಾನಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಸಮನ್ವಯತೆಯಿಂದ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್, ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ಸಂಸದ ಈ.ತುಕಾರಾಂ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಕಂಪ್ಲಿ ಶಾಸಕ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಮೊಣಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.

www.suddidina.com | contact : watsapp 9980346243
Continue Reading

ದಿನದ ಸುದ್ದಿ

ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ

Published

on

    • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ

ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ

ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ ಇರೋದು ಜೊತೆಗೆ ತುಂಗಭದ್ರಾ ಜಲಾಶಯದ ಹೂಳು ಎತ್ತದೆ ಇರೋದು ದೊಡ್ಡ ದುರಂತವಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಕ್ಕರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ವಿಜಯನಗರ ಜಿಲ್ಲೆಗೆ ಬಹಳ‌ ಅನಾಯ್ಯವಾಗಿದೆ ಅನುದಾನ ಬಿಡುಗಡೆಯಲ್ಲಿ ಮತ್ತು ಸ್ವಪಕ್ಷದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಗವಿಯಪ್ಪ
ಯಾವುದೇ ಅಭಿವೃದ್ಧಿ ಗಳನ್ನು ಕೈಗೊಳ್ಳದೇ, ಯೋಜನೆಗಳಿಗೆ ಶಿಲಾನ್ಯಾಸ ಮಾಡದೇ ವಿಜಯನಗರದ ಜಿಲ್ಲೆಯಲ್ಲಿ ಎರಡು ವರ್ಷದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸ್ವಪಕ್ಷದ ವಿರುದ್ಧವೇ ಮುನಿಸಿಕೊಂಡ ಶಾಸಕ ಗವಿಯಪ್ಪ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಭಾಗಿನ ಕಾರ್ಯಕ್ರಮದಲ್ಲಿ ಮುನಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಾಸು ಹೋಗಿದ್ದರು. ಅವರ ಕಛೇರಿಯವರೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕರೆಯಲು ಹೋದರೂ ಸಹ ಬರಲಿಲ್ಲ. ಇದರಿಂದ ಸಹ ಶಾಸಕರು ಸಿಎಂ ಮೇಲೆ ಮುನಿಸಿಕೊಂಡರು.

ಜಿಲ್ಲೆಯ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಪತ್ರಿಕಾಗೋಷ್ಟಿಯಲ್ಲಿ ಶಾಸಕ ಗವಿಯಪ್ಪ ವಿರುದ್ಧ ಇವರು ಕ್ಷೇತ್ರಕ್ಕೆ ‘ಶಾಪ’ ಎಂದು ಹೇಳಿ, ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಕಾರ್ಯಕರ್ತರ ನಡುವೆ ಅಸಮಾಧಾನಗಳ ನಡುವೆ ಸ್ವಪಕ್ಷಗಳಿಂದ ಶಿರಾಜ್ ಶೇಖ್ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಇವರಿಬ್ಬರ ನಡುವಿನ ಜಗಳ ಸಮಾಧಾನ ಮಾಡಲು ಕೆ.ಪಿ.ಸಿ.ಸಿ ಮಧ್ಯೆ ಪ್ರವೇಶ ಮಾಡಿ ಸಂಧಾನ ಮಾಡುವಲ್ಲಿ ವಿಫಲವಾಯಿತು.
ಸಾಧನೆ ಮತ್ತು ಸಮರ್ಪಣೆ ಇವುಗಳಲ್ಲಿ ಯಾವುದನ್ನು ಮಾಡುತ್ತಾರೋ ಅವರಲ್ಲಿಯೇ ಗೊಂದಲ ಇದೆ. ಯಾವುದು ಸಮರ್ಪಣೆ ?, ಯಾವುದು ಸಾಧನೆ‌ ? ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿ ಅವಳಿ ಜಿಲ್ಲೆಗೆ ಸಚಿವರನ್ನು ನೇಮಕ ಮಾಡದೇ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎನ್ನುವುದು ಸಾರ್ವಜನಿಕರಲ್ಲಿ, ರಾಜಕೀಯದಲ್ಲಿ ಗೊಂದಲ ನಿರ್ಮಾಣ ಮಾಡಿದೆ.

ಜಿಲ್ಲೆಯಲ್ಲಿ ಶಾಸಕಾಂಗ ಮತ್ತು ಆಡಳಿತದಲ್ಲಿ ಒಂದೇ ಸಮುದಾಯದವರು ಇರೋದರಿಂದ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎನ್ನುವ ಮಾಹಿತಿಯನ್ನು ಈ ಕ್ಷೇತ್ರದ ಜನರಿಗೆ ತಿಳಿಸಲು ಈ ಸಮರ್ಪಣೆ ಕಾರ್ಯಕ್ರಮ ಮಾಡುತ್ತಿದ್ದಾರೆ.

ದಿವಂಗತ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧೀ ಕಟ್ಟೆಯನ್ನು ನಾಲ್ಕು ದಿನಗಳಲ್ಲಿ ಅಭಿವೃದ್ಧಿ ಪಡಿಸಿರುವುದು ವಿಜಯನಗರ ಕ್ಷೇತ್ರದ ಜನರಿಗೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗವಿಯಪ್ಪ ನೀಡುತ್ತಿರುವುದು ಬಹು ದೊಡ್ಡ ಕೊಡುಗೆ ಆಗಿದೆ.
ಇನ್ನು ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಸಮರ್ಪಣೆ, ಸಾಧನ ಸಮಾವೇಶ ಮಾಡಿದರೆ ಶಾಸಕ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಹಿಂಬಾಲಕರ ನಿರೀಕ್ಷೆ ಸಹ ಇದೆ.

2025 ಮೇ 20 ರಂದು ನಡೆಯುವ ಜಿಲ್ಲೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ಸಾಧನ ಸಮಾವೇಶದಲ್ಲಿ ಎಷ್ಟೆಲ್ಲಾ ಗೊಂದಲದ ನಡುವೆ ಯಶಸ್ವಿಯಾಗುವುದೇ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆ ಆಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending