ರಾಜಕೀಯ
ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ
- ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ.ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.
ಮೋದಿ ಸರಕಾರದ ಎರಡನೇ ಅವಧಿಯು ಅಮೆರಿಕದ ಕಿರಿಯ ಪಾಲುದಾರನಾಗಿ ಭಾರತದ ಪಾತ್ರವನ್ನು ಇನ್ನಷ್ಟು
ಗಟ್ಟಿಗೊಳಿಸುವಂತದ್ದಾಗುತ್ತದೆ ಎನ್ನುವುದಕ್ಕೆ ಆಗಲೇ ಎಲ್ಲ ಸುಳಿವುಗಳು ಸಿಕ್ಕಿವೆ. ಪರಿಣಾಮವಾಗಿ ಇದು ನವ-ಉದಾರವಾದಿ ಅಜೆಂಡಾದ ಅನುಷ್ಠಾನವನ್ನು ಇನ್ನಷ್ಟು ತ್ವರಿತಗೊಳಿಸುತ್ತದೆ, ಮತ್ತು ಅದರಿಂದಾಗಿ ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.
2014-2019ರ ಅವಧಿಯಲ್ಲಿ ಮೋದಿ ಸರಕಾರವು ಭಾರತವನ್ನು ಅಮೆರಿಕದೊಂದಿಗೆ ವ್ಯೂಹಾತ್ಮಕವಾಗಿಯೂ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಮತ್ತಷ್ಟು ಜೋಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಮಿಲಿಟರಿ ಸಾಗಾಣಿಕೆ ಬೆಂಬಲ ಮತ್ತು ಸೇನಾ ಸಂಪರ್ಕ ಸಾಧನಗಳನ್ನು ಸಮಗ್ರೀಕರಿಸುವ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಜಪಾನ್, ಆಸ್ಟ್ರೇಲಿಯಾ, ಭಾರತ ಮತ್ತು ಅಮೆರಿಕ ಒಳಗೊಂಡ ಚತುಷ್ಪಕ್ಷೀಯ ಮೈತ್ರಿಕೂಟ ಮಾಡಿಕೊಳ್ಳುವ ಬಗ್ಗೆ ಅಮೆರಿಕ ಮಾಡಿದ್ದ ಪ್ರಸ್ತಾವನೆಗೆ ಭಾರತವೂ ಕೈಜೋಡಿಸಿತ್ತು.
ಈ ವ್ಯೂಹಾತ್ಮಕ ಅಪ್ಪುಗೆಯು ಏಷ್ಯಾ-ಶಾಂತಸಾಗರ ವಲಯದಲ್ಲಿ ಅಮೆರಿಕದ ಭೌಗೋಳಿಕ-ರಾಜಕೀಯ ಹಿತಗಳಿಗೆ ಸಂಪೂರ್ಣವಾಗಿ ಅನುಕೂಲಕರವಾದ ಒಂದು ವಿದೇಶಾಂಗ ನೀತಿಯನ್ನು ಭಾರತವು ಅನುಸರಿಸುವಂತೆ ಮಾಡಿತು.
ಈ ಹಿಂದೆ ರಷ್ಯಾ ಭಾರತಕ್ಕೆ ಶಸ್ತ್ರಾಸ್ತ್ರಗಳ ಮತ್ತು ಸಾಧನಗಳ ಪ್ರಮುಖ ಪೂರೈಕೆದಾರನಾಗಿತ್ತು. ಈಗ ಅಮೆರಿಕದ ಒತ್ತಡಕ್ಕೆ ಮಣಿದು ರಷ್ಯಾವನ್ನು ಬಿಟ್ಟು ಅಮೆರಿಕದಿಂದ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಗೆ ಭಾರತ ವೇಗವನ್ನು ನೀಡಿತು. ಆಂತರಿಕ ನೀತಿಗಳ ಬಗ್ಗೆ ಹೇಳುವುದಾದರೆ, ಮೋದಿ ಸರಕಾರವು ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಟ್ಗಳು ಮತ್ತು ಹಣಕಾಸು ಹಿತಗಳಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿತು.
ಡೊನಾಲ್ಡ್ ಟ್ರಂಪ್ 2018ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಟ್ರಂಪ್ರ ಅಮೆರಿಕ ಮೊದಲು ಹಾಗೂ ಸ್ವರಕ್ಷಣಾತ್ಮಕ ನೀತಿಗಳಿಗೆ ಅನುಗುಣವಾಗಿ ಭಾರತದ ಮೇಲೆ ಅನೇಕ ಒತ್ತಡಗಳನ್ನು ಹೇರಲಾಯಿತು.
250 ಬಿಲಿಯ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಸುಂಕವನ್ನು ಹೆಚ್ಚಿಸುವ ಮೂಲಕ ಹಾಗೂ ಇನ್ನೂ 325 ಬಿಲಿಯ ಡಾಲರ್ ವಸ್ತುಗಳಿಗೆ ಹಾಗೇ ಮಾಡುವುದಾಗಿ ಬೆದರಿಸುವ ಮೂಲಕ ಚೀನಾದ ವಿರುದ್ಧ ಟ್ರಂಪ್ ವಾಣಿಜ್ಯ ಸಮರವನ್ನು ಸಾರಿದರು. ಚೀನಾದ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳನ್ನು ನೀಡಬೇಕು ಹಾಗೂ ಅಮೆರಿಕದ ತಂತ್ರಜ್ಞಾನ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ರಕ್ಷಣೆಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.
ಟ್ರಂಪ್ ಭಾರತವನ್ನು ಕೂಡ ಬಿಡಲಿಲ್ಲ. ಭಾರತದೊಂದಿಗಿನ ವಾಣಿಜ್ಯ ಕೊರತೆಯನ್ನು ತಿರುಗು-ಮುರುಗು ಮಾಡಬೇಕು ಹಾಗೂ ಭಾರತವು ಸುಂಕಗಳನ್ನು ಇಳಿಸಬೇಕು ಮತ್ತು ಅಮೆರಿಕದ ವಸ್ತುಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಮೊದಲ ಹೆಜ್ಜೆಯಾಗಿ ಅವರು ಅಮೆರಿಕ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ಅಲ್ಯುಮಿನಿಯಮ್ ಮತ್ತು ಉಕ್ಕಿನ ಮೇಲಿನ ಸುಂಕಗಳನ್ನು ಹೆಚ್ಚಿಸಿದರು. ಅದರ ಬೆನ್ನಲ್ಲೇ ಸುಂಕಗಳಿಲ್ಲದೆ ಭಾರತವು ಅನೇಕ ವಸ್ತುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಪ್ರಾಶಸ್ತ್ಯದ ವ್ಯಾಪಾರ ಎಂದು ಪರಿಗಣಿಸುವುದನ್ನು ಕೊನೆಗೊಳಿಸಲು ಅವರು ನಿರ್ಧರಿಸಿದರು. ಈ ವ್ಯವಸ್ಥೆಯನ್ನು ತೆಗೆದು ಹಾಕಿದ್ದರಿಂದ ಭಾರತದಿಂದ ರಫ್ತಾಗುವ 1900 ವಸ್ತುಗಳಿಗೆ ಈಗ ಕಸ್ಟಮ್ಸ್ ಸುಂಕ ತೆರಬೇಕಾಗಿದೆ.
ಮಾರ್ಚ್ ಆರಂಭದಲ್ಲಿ ಅಮೆರಿಕ ಈ ಪ್ರಕಟಣೆಯನ್ನು ಮಾಡಿತು ಹಾಗೂ 60 ದಿನಗಳ ನಂತರ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿತು ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದಾಗ್ಯೂ ಈ ಪ್ರತಿಕೂಲ ಕ್ರಮವನ್ನು ನಿಲ್ಲಿಸಲು ಮೋದಿ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಅಥವಾ ಪ್ರತಿ-ಕ್ರಮಗಳಿಗೂ ಮುಂದಾಗಲಿಲ್ಲ. ಸುಂಕ ಹೇರಿದ್ದನ್ನು ಚೀನಾ ಯಾವ ರೀತಿಯಲ್ಲಿ ನಿರ್ವಹಿಸಿತು ಎನ್ನುವುದಕ್ಕೆ ಪೂರ್ತಿ ವ್ಯತಿರಿಕ್ತವಾದ ನಡೆ ಭಾರತದ್ದಾಗಿದೆ. ಚೀನಾವನ್ನು ಪ್ರವೇಶಿಸುವ ಅಮೆರಿಕದ ವಸ್ತುಗಳ ಮೇಲೆ ಸುಂಕವನ್ನು ಹೇರುವ ಮೂಲಕ ಚೀನಾ ತಿರುಗೇಟು ನೀಡಿತು.
ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ವ್ಯೂಹಾತ್ಮಕ ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು.
ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳಿಗೆ ಮಂಡಿಯೂರುತ್ತಿದ್ದಾರೆ. ಇರಾನ್ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ಶಿರಸಾವಹಿಸಿ ಪಾಲಿಸಲಾಯಿತು. ಇದರಿಂದಾಗಿ ಭಾರತಕ್ಕೆ ತುಂಬಾ ನಷ್ಟವಾಗಲಿದೆ. ಯಾಕೆಂದರೆ ಅಂತಾರ್ರಾಷ್ಟ್ರೀಯ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಇರಾನ್ನಿಂದ ಎಣ್ಣೆಯನ್ನು ತರಿಸಿಕೊಳ್ಳಲಾಗುತ್ತಿತ್ತು. ಅದಾದ ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು.
ರಷ್ಯಾದ ಟ್ರೈಯಂಫ್ ಎಸ್-400 ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.
ಲಾಕ್ಹೀಡ್ ನಿರ್ಮಿತ ಎಫ್-21 ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಪಾರ ಒತ್ತಡ ಹೇರಲಾಗುತ್ತಿದೆ. 110 ಯುದ್ಧ ವಿಮಾನಗಳ ಖರೀದಿಗೆ (ರಫೇಲ್ ಯುದ್ಧ ವಿಮಾನ ಖರೀದಿಯನ್ನು 36ಕ್ಕೆ ಇಳಿಸಿದ ನಂತರ) ಭಾರತದ ಒಂದು ಟೆಂಡರ್ ಪ್ರಕಟಿಸಿದೆ. ಬಿಲಿಯಗಟ್ಟಲೆ ಡಾಲರ್ ಮೌಲ್ಯದ ಈ ಗುತ್ತಿಗೆಯನ್ನು ಪಡೆಯಲು ಅಮೆರಿಕ ಭಾರತವನ್ನು ಪೀಡಿಸುತ್ತಿದೆ.
ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೊ ಜೂನ್ ಮೂರನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಅಧಿಕಾರಕ್ಕೆ ಮರಳಿದ ನಂತರದ ಮೊದಲ ಭೇಟಿಯಿದು. ವಾಣಿಜ್ಯ ವಿಚಾರದಲ್ಲಿ ಕಠಿಣ ಮಾತು, ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ಪರಿಹಾರವಾಗಿ ಅಮೆರಿಕದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಚೀನಾದ ಬೃಹತ್ ಕಂಪೆನಿಯಾದ ಹುವೈ ಭಾರತದಲ್ಲಿ ನಡೆಯುವ 5ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧಿಸುವುದು- ಇವೆಲ್ಲ ಪಾಂಪಿಯೊ ಭೇಟಿ ವೇಳೆ ಇರಲಿರುವ ಕಾರ್ಯಸೂಚಿಯಾಗಿದೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಇದೀಗ ಮೋದಿ ಸರಕಾರದ ಹೊಸ ವಿದೇಶ ಸಚಿವರು. ಒಬ್ಬ ವೃತ್ತಿನಿರತ ರಾಜತಾಂತ್ರಿಕನನ್ನು ನೇರವಾಗಿ ಸಚಿವ ಸಂಪುಟಕ್ಕೆ ಬಡ್ತಿ ನೀಡಿದ್ದು ಇದೇ ಮೊದಲ ಸಲವಾಗಿದೆ. ಅಮೆರಿಕ-ಪರ ಚಟುವಟಿಕೆಗಳಿಗೆ ಜೈಶಂಕರ್ ಖ್ಯಾತರು. ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಹಾಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಅವರ ಕಾರ್ಯಗಳ ದಾಖಲೆಗಳು ಹೇಗೆ ಅವರು ಅಮೆರಿಕದೊಂದಿಗೆ ನಿಕಟ ವ್ಯೂಹಾತ್ಮಕ ಮೈತ್ರಿಗೆ ಒತ್ತು ನೀಡಿದ್ದರು ಎನ್ನುವುದನ್ನು ತೋರಿಸುತ್ತವೆ.
ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ. ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.
ಇರಾನ್ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ,ದೇಶಕ್ಕೆತುಂಬಾನಷ್ಟವಾಗುತ್ತಿದ್ದರೂಶಿರಸಾವಹಿಸಿ ಪಾಲಿಸಲಾಯಿತು. ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು. ರಷ್ಯಾದ ಟ್ರೈಯಂಫ್ ಎಸ್-೪೦೦ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.
–ಪ್ರಕಾಶ್ ಕಾರಟ್
ಅನು: ವಿಶ್ವ
(ಕೃಪೆ : ಜನಶಕ್ತಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

