ದಿನದ ಸುದ್ದಿ
ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/04/Narendra-modi-suddidina-431.jpg&description=ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/04/Narendra-modi-suddidina-431.jpg&description=ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!', 'pinterestShare', 'width=750,height=350'); return false;" title="Pin This Post">
ಸ್ನೇಹಿತರೆ,
ಕೇಂದ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದ್ದು ಆಯ್ತು ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ಆಯಿತು. ಆದರೆ ಈ ಸರ್ಕಾರದ ಮುಂದಿರುವ ಸವಾಲುಗಳು ಆದರೂ ಏನು ಅನುವ ಬಗ್ಗೆ ಒಂದು ಸರಿ ಗಮನ ಹರಿಸೋಣ. ಅಂದಹಾಗೆ ಈ ವಿಷಯವನ್ನು ಓದುವಾಗ ನಿಮ್ಮ ಮನಸ್ಸು ಒಳಗಿನ ರಾಗದ್ವೇಷ ಭಕ್ತಿಭಾವಗಳನ್ನು ಒಂದು ಸ್ವಲ್ಪ ಪಕ್ಕಕ್ಕಿಟ್ಟು ಪ್ರಾಕ್ಟಿಕಲ್ ಆಗಿ ಯೋಚನೆ ಮಾಡುತ್ತ ಓದಿರಿ ಹಾಗು ಮಾಡೋದಕ್ಕೆ ಸಾಧ್ಯ ಆಗದೇ ಇದ್ದರೆ ದಯವಿಟ್ಟು ಈ ವಿಷಯವನ್ನು ಓದುವುದಕ್ಕೆ ಹೋಗಬೇಡಿ.
ಮೋದಿ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೇರಿದ ನಂತರ ಜನರ ನಿರೀಕ್ಷೆಗಳು ಹೆಚ್ಚಾಗಿವೆ ಭಾರತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಮೋದಿ ನಿವಾರಿಸಿ ಬಿಡುತ್ತಾರೆ ಅನ್ನೋ ಆಸೆ ನಿರೀಕ್ಷೆ ಕೋಟಿ ಕೋಟಿ ಜನರ ಮನಸ್ಸಲ್ಲಿದೆ.
ರಾಮಮಂದಿರ ನಿರ್ಮಾಣ, ಆರ್ಟಿಕಲ್ ತ್ರೀ ಸೆವೆಂಟಿ, ಸಮಾನ ನಾಗರಿಕ ಸಂಹಿತೆ, ಹಿಂದೂ ರಾಷ್ಟ್ರದ ನಿರ್ಮಾಣ, ಇವತ್ತು ಭಾರತ ಸರ್ಕಾರದ ಮುಂದಿನ ಆದ್ಯತೆಗಳೇನು ಮೋದಿ ಸಚಿವ ಸಂಪುಟದ ಎದುರು ಸವಾಲುಗಳೇನು ಅನ್ನೋದಷ್ಟೇ ನಾವು ಗಮನಿಸಿದರೆ ಮೊಟ್ಟಮೊದಲನೆಯದಾಗಿ ಮತ್ತು ಭಯಾನಕವಾಗಿ ಈ ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ!
ಮುಂದಿನ 20 20 ರ ಹೊತ್ತಿಗೆ ಭಾರತದಲ್ಲಿನ ನಿರುದ್ಯೋಗಿಗಳ ಸಂಖ್ಯೆ 44% ಏರುತದ್ದೆ, ಇದು ವಿದ್ಯಾವಂತ ನಿರುದ್ಯೋಗಿಗಳ ಕಥೆ ಇನ್ನು ಗ್ರಾಮೀಣ ಭಾಗದಿಂದ ವಲಸೆ ಬರುತ್ತಿರುವ ಕೃಷಿ ನಿರಾಶ್ರಿತರನ್ನು ಸೇರಿಸಿಲ್ಲ ಅದು ಲೆಕ್ಕಕ್ಕೆ ಸಿಗುವುದಿಲ್ಲ. ಸರ್ಕಾರದ ಮುಂದಿರುವ ಚಾಲೆಂಜ್ ಗಳು ಅಂದರೆ ಗ್ರಾಮೀಣ ವಲಸೆಯನ್ನು ತಡೆದು ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕೆ ಗಳನ್ನು ಉತ್ತೇಜಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಜೊತೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಿ ಜಿಡಿಪಿಯನ್ನು ಹೆಚ್ಚಿಸಬೇಕು. ಜವಾಬ್ದಾರಿ ಸರ್ಕಾರದ ಮೇಲಿದೆ ಡಾಲರ್ ಎದುರು ರೂಪಾಯಿ ಬೆಲೆ ಕುಸಿದು ಹೋಗುತ್ತಿರುವುದು ನಮಗೂ ತಡೆಯಬೇಕಿದೆ .
ಇವತ್ತಿನವರೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಆದರೆ ಈ ಕೂಡಲೇ ಸರಿಪಡಿಸಬೇಕಿದೆ. ಭಾರತ ಕೃಷಿ ಪ್ರಧಾನ ದೇಶ ಆದರೆ ದುರಂತ ಅಂದ್ರೆ ಇಲ್ಲಿ ಅನ್ನ ಕೊಡುವ ರೈತನಿಗೆ ಹೊಟ್ಟೆ ತುಂಬಾ ಊಟ ಸಿಗದ ಪರಿಸ್ಥಿತಿ. ಇದು ಬಿಜೆಪಿ ಸರ್ಕಾರದ ವಿಷಯಕ್ಕೆ ಬರೋದಾದ್ರೆ, ಶ್ರೀಮಂತರು ಹಾಗೂ ಉದ್ಯಮಿಗಳ ಸರ್ಕಾರ ಅನ್ನೋ ಆರೋಪವೂ ಇದೆ.
ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಚೇತರಿಕೆಗೆ ಆದ್ಯತೆಯನ್ನು ಕೊಡಬೇಕು ಅದು ವರ್ಷಕ್ಕೆ rs.6000 ಕೊಡುವುದರಿಂದ ಅಥವಾ ಸಾಲಮನ್ನಾ ಮಾಡುವ ಘೋಷಣೆಗಳಿಂದ ಕೃಷಿಕ್ಷೇತ್ರ ಸುಧಾರಣೆ ಆಗೋದಿಲ್ಲ. ರೈತರಿಗೆ ಕರೆಂಟು ನೀರು ಸೂಕ್ತ ಬೆಳೆ ಕುರಿತಾದ ಮಾಹಿತಿ ತಂತ್ರಜ್ಞಾನ ಕೊಡಬೇಕಾಗಿದೆ .
ಕೃಷಿ ಕ್ಷೇತ್ರದಲ್ಲಿ ಹೊಸ ಹೂಡಿಕೆಗಳು ಬೆಲೆ ನಿಯಂತ್ರಣ ಕೃಷಿ-ಆಧಾರಿತ ಉದ್ದಿಮೆಗಳು ಹೀಗೆ ಇನ್ನೇನೋ ಆಗಬೇಕಿದೆ. ಇವತ್ತು ಸೇನೆಯನ್ನು ಬಲಪಡಿಸಲು ಬೇಕಾಗಿರುವುದು ,ಭಾರತದಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳು ಸ್ಥಾಪನೆಗೊಳ್ಳಬೇಕಿದೆ. ಆ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗುತ್ತೆ ಸಾಕಷ್ಟು ಚಿಕ್ಕ ಕೈಗಾರಿಕೆಗಳು ಹುಟ್ಟುವುದಕ್ಕೆ ಸಾಧ್ಯವಾಗುತ್ತೆ ನಿರುದ್ಯೋಗ ನಿವಾರಣೆಗೆ ಕೂಡ ಆಗುತ್ತೆ ಹಾಗೆ ಪೆಟ್ರೋಲಿಯಂ ಮೇಲಿನ ಅತಿಯಾದ ಆಮದು ಮಾಡುವುದನ್ನು ನಿಲ್ಲಿಸಿ
ಪರ್ಯಾಯ ಮಾರ್ಗ ಹುಡುಕ ಬೇಕಾದ ಅನಿವಾರ್ಯತೆ ಕೂಡ ಸರ್ಕಾರದ ಮೇಲಿದೆ.
ಆಂತರಿಕ ಭದ್ರತೆ ಹಾಗೂ ಬಾಹ್ಯ ಶಕ್ತಿಗಳ ನಿಯಂತ್ರಣ ಭಯೋತ್ಪಾದನೆ ನಿರ್ಮೂಲನೆ ಬಡತನದ ವಿರುದ್ಧ ಹೋರಾಟ ಕಡಿಮೆ ಏನು ?
ಅಮೇರಿಕಾ ಮೊನ್ನೆ ತಾನೇ ಭಾರತವನ್ನು ಅಭಿವೃದ್ಧಿ ರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಿದೆ.
ಆದರಿಂದ ಭಾರತ ಅಮೇರಿಕಾದಿಂದ ಆಮದು ಮಾಡುತಿದ್ದ ಸುಮಾರು ೨೦೦೦ ವಸ್ತುಗಳ ಮೇಲೆ ತೆರಿಗೆ ಬೀಳಲಿದೆ, ಇದರಿಂದ ಭಾರತಕ್ಕೆ ಆಗುವ ನಷ್ಟ ಕಡಿಮೆ ಏನಿಲ್ಲ .
ನಾವು ಗಮನಿಸಿದರೆ ಭಾರತ ವಿದೇಶಾಂಗ ನೀತಿಯನ್ನು ರೂಪಿಸುವಾಗ ಎಚ್ಚರಿಕೆವಹಿಸಬೇಕಾಗಿದೆ ಅನ್ನೋದು ಸ್ಪಷ್ಟ. ಚೀನಾ ಹಾಗೂ ಪಾಕಿಸ್ತಾನಗಳ ಕಂಟ್ರೋಲ್ ಮಾಡಿದ ಮೋದಿ ಸರ್ಕಾರ ಈ ಬಾರಿನೂ ಅಷ್ಟೇ ಪ್ರಭಾವಿಯಾಗಿ ಚೀನಾ ಅನ್ನೋ ಶತ್ರುವನ್ನು ನಿಯಂತ್ರಿಸುತ್ತಾ ಅದನ್ನು ಮಾಡೋದಕ್ಕೆ ಅಮೆರಿಕಾದ ಬೆಂಬಲ ಬೇಕೇ ಬೇಕು ಅಂತ ಸ್ನೇಹವನ್ನ ಕಳೆದುಕೊಳ್ಳುವುದಕ್ಕೆ ಆಗೋದಿಲ್ಲ.
ಈಗಾಗಲೇ ಒಂದು ಸಮಸ್ಯೆ ಶುರುವಾಗಿದೆ,
ದೊಡ್ಡಣ್ಣನ ಸ್ನೇಹ ವಹಿಸುವುದಕ್ಕೆ ಭಾರತ ತನ್ನ ಹಳೆಯ ಮಿತ್ರ ದೇಶ ಇರಾನ್ ಜೊತೆಗಿನ ಪೆಟ್ರೋಲಿಯಂ ವ್ಯವಹಾರವನ್ನು ನಿಲ್ಲಿಸಿದೆ.
ಇದೀಗ ಭಾರತ ತನ್ನ ವಿದೇಶ ವ್ಯವಹಾರವನ್ನು ಯೋಚಿಸಿ ಹೆಜ್ಜೆಯಿಡ ಬೇಕಾಗಿದೆ.
ಈಗ ನಾವು ಕಾದು ನೋಡಬೇಕಿದೆ ರಾಮಮಂದಿರ ಅದನ್ನ ನ್ಯಾಯಾಲಯ ನಿರ್ಧಾರ ಮಾಡುತ್ತೆ ,ಆರ್ಟಿಕಲ್ 370, ಸಮಾನ ನಾಗರಿಕ ಸಂಹಿತೆ ಇದೆಲ್ಲ ಬಿಜೆಪಿಗೆ ಮತ ತಂದುಕೊಟ್ಟ ಅಂಶಗಳಾಗಿವೆ. ನಿರುದ್ಯೋಗ ಹಣದುಬ್ಬರ ಆರ್ಥಿಕ ಅಭಿವೃದ್ಧಿ ಇವುಗಳಿಗೆ ಹೋಲಿಸಿದರೆ ಮೋದಿ ಸರ್ಕಾರದ ಆದ್ಯತೆ ಸಶಕ್ತ ಭಾರತದ ನಿರ್ಮಾಣಕ್ಕಾಗಿ ಒಂದಾಗಿದೆ.
ಇದು ಮೋದಿ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳು. ಇವೆಲ್ಲವನ್ನ ನರೇಂದ್ರ ಮೋದಿಯವರ ಸಚಿವ ಸಂಪುಟ ಹೇಗೆ ನಿಭಾಯಿಸುತ್ತದೆ ಎಂದು ಕಾದುನೋಡಬೇಕು.
ಜೈ ಹಿಂದ್ ಜೈ ಕರ್ನಾಟಕ
–ಮನನ್ ಜೈನ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ3 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ5 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ4 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ2 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ23 hours agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

