ದಿನದ ಸುದ್ದಿ
ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!
ಸ್ನೇಹಿತರೆ,
ಕೇಂದ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದ್ದು ಆಯ್ತು ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ಆಯಿತು. ಆದರೆ ಈ ಸರ್ಕಾರದ ಮುಂದಿರುವ ಸವಾಲುಗಳು ಆದರೂ ಏನು ಅನುವ ಬಗ್ಗೆ ಒಂದು ಸರಿ ಗಮನ ಹರಿಸೋಣ. ಅಂದಹಾಗೆ ಈ ವಿಷಯವನ್ನು ಓದುವಾಗ ನಿಮ್ಮ ಮನಸ್ಸು ಒಳಗಿನ ರಾಗದ್ವೇಷ ಭಕ್ತಿಭಾವಗಳನ್ನು ಒಂದು ಸ್ವಲ್ಪ ಪಕ್ಕಕ್ಕಿಟ್ಟು ಪ್ರಾಕ್ಟಿಕಲ್ ಆಗಿ ಯೋಚನೆ ಮಾಡುತ್ತ ಓದಿರಿ ಹಾಗು ಮಾಡೋದಕ್ಕೆ ಸಾಧ್ಯ ಆಗದೇ ಇದ್ದರೆ ದಯವಿಟ್ಟು ಈ ವಿಷಯವನ್ನು ಓದುವುದಕ್ಕೆ ಹೋಗಬೇಡಿ.
ಮೋದಿ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೇರಿದ ನಂತರ ಜನರ ನಿರೀಕ್ಷೆಗಳು ಹೆಚ್ಚಾಗಿವೆ ಭಾರತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಮೋದಿ ನಿವಾರಿಸಿ ಬಿಡುತ್ತಾರೆ ಅನ್ನೋ ಆಸೆ ನಿರೀಕ್ಷೆ ಕೋಟಿ ಕೋಟಿ ಜನರ ಮನಸ್ಸಲ್ಲಿದೆ.
ರಾಮಮಂದಿರ ನಿರ್ಮಾಣ, ಆರ್ಟಿಕಲ್ ತ್ರೀ ಸೆವೆಂಟಿ, ಸಮಾನ ನಾಗರಿಕ ಸಂಹಿತೆ, ಹಿಂದೂ ರಾಷ್ಟ್ರದ ನಿರ್ಮಾಣ, ಇವತ್ತು ಭಾರತ ಸರ್ಕಾರದ ಮುಂದಿನ ಆದ್ಯತೆಗಳೇನು ಮೋದಿ ಸಚಿವ ಸಂಪುಟದ ಎದುರು ಸವಾಲುಗಳೇನು ಅನ್ನೋದಷ್ಟೇ ನಾವು ಗಮನಿಸಿದರೆ ಮೊಟ್ಟಮೊದಲನೆಯದಾಗಿ ಮತ್ತು ಭಯಾನಕವಾಗಿ ಈ ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ!
ಮುಂದಿನ 20 20 ರ ಹೊತ್ತಿಗೆ ಭಾರತದಲ್ಲಿನ ನಿರುದ್ಯೋಗಿಗಳ ಸಂಖ್ಯೆ 44% ಏರುತದ್ದೆ, ಇದು ವಿದ್ಯಾವಂತ ನಿರುದ್ಯೋಗಿಗಳ ಕಥೆ ಇನ್ನು ಗ್ರಾಮೀಣ ಭಾಗದಿಂದ ವಲಸೆ ಬರುತ್ತಿರುವ ಕೃಷಿ ನಿರಾಶ್ರಿತರನ್ನು ಸೇರಿಸಿಲ್ಲ ಅದು ಲೆಕ್ಕಕ್ಕೆ ಸಿಗುವುದಿಲ್ಲ. ಸರ್ಕಾರದ ಮುಂದಿರುವ ಚಾಲೆಂಜ್ ಗಳು ಅಂದರೆ ಗ್ರಾಮೀಣ ವಲಸೆಯನ್ನು ತಡೆದು ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕೆ ಗಳನ್ನು ಉತ್ತೇಜಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಜೊತೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಿ ಜಿಡಿಪಿಯನ್ನು ಹೆಚ್ಚಿಸಬೇಕು. ಜವಾಬ್ದಾರಿ ಸರ್ಕಾರದ ಮೇಲಿದೆ ಡಾಲರ್ ಎದುರು ರೂಪಾಯಿ ಬೆಲೆ ಕುಸಿದು ಹೋಗುತ್ತಿರುವುದು ನಮಗೂ ತಡೆಯಬೇಕಿದೆ .
ಇವತ್ತಿನವರೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಆದರೆ ಈ ಕೂಡಲೇ ಸರಿಪಡಿಸಬೇಕಿದೆ. ಭಾರತ ಕೃಷಿ ಪ್ರಧಾನ ದೇಶ ಆದರೆ ದುರಂತ ಅಂದ್ರೆ ಇಲ್ಲಿ ಅನ್ನ ಕೊಡುವ ರೈತನಿಗೆ ಹೊಟ್ಟೆ ತುಂಬಾ ಊಟ ಸಿಗದ ಪರಿಸ್ಥಿತಿ. ಇದು ಬಿಜೆಪಿ ಸರ್ಕಾರದ ವಿಷಯಕ್ಕೆ ಬರೋದಾದ್ರೆ, ಶ್ರೀಮಂತರು ಹಾಗೂ ಉದ್ಯಮಿಗಳ ಸರ್ಕಾರ ಅನ್ನೋ ಆರೋಪವೂ ಇದೆ.
ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಚೇತರಿಕೆಗೆ ಆದ್ಯತೆಯನ್ನು ಕೊಡಬೇಕು ಅದು ವರ್ಷಕ್ಕೆ rs.6000 ಕೊಡುವುದರಿಂದ ಅಥವಾ ಸಾಲಮನ್ನಾ ಮಾಡುವ ಘೋಷಣೆಗಳಿಂದ ಕೃಷಿಕ್ಷೇತ್ರ ಸುಧಾರಣೆ ಆಗೋದಿಲ್ಲ. ರೈತರಿಗೆ ಕರೆಂಟು ನೀರು ಸೂಕ್ತ ಬೆಳೆ ಕುರಿತಾದ ಮಾಹಿತಿ ತಂತ್ರಜ್ಞಾನ ಕೊಡಬೇಕಾಗಿದೆ .
ಕೃಷಿ ಕ್ಷೇತ್ರದಲ್ಲಿ ಹೊಸ ಹೂಡಿಕೆಗಳು ಬೆಲೆ ನಿಯಂತ್ರಣ ಕೃಷಿ-ಆಧಾರಿತ ಉದ್ದಿಮೆಗಳು ಹೀಗೆ ಇನ್ನೇನೋ ಆಗಬೇಕಿದೆ. ಇವತ್ತು ಸೇನೆಯನ್ನು ಬಲಪಡಿಸಲು ಬೇಕಾಗಿರುವುದು ,ಭಾರತದಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳು ಸ್ಥಾಪನೆಗೊಳ್ಳಬೇಕಿದೆ. ಆ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗುತ್ತೆ ಸಾಕಷ್ಟು ಚಿಕ್ಕ ಕೈಗಾರಿಕೆಗಳು ಹುಟ್ಟುವುದಕ್ಕೆ ಸಾಧ್ಯವಾಗುತ್ತೆ ನಿರುದ್ಯೋಗ ನಿವಾರಣೆಗೆ ಕೂಡ ಆಗುತ್ತೆ ಹಾಗೆ ಪೆಟ್ರೋಲಿಯಂ ಮೇಲಿನ ಅತಿಯಾದ ಆಮದು ಮಾಡುವುದನ್ನು ನಿಲ್ಲಿಸಿ
ಪರ್ಯಾಯ ಮಾರ್ಗ ಹುಡುಕ ಬೇಕಾದ ಅನಿವಾರ್ಯತೆ ಕೂಡ ಸರ್ಕಾರದ ಮೇಲಿದೆ.
ಆಂತರಿಕ ಭದ್ರತೆ ಹಾಗೂ ಬಾಹ್ಯ ಶಕ್ತಿಗಳ ನಿಯಂತ್ರಣ ಭಯೋತ್ಪಾದನೆ ನಿರ್ಮೂಲನೆ ಬಡತನದ ವಿರುದ್ಧ ಹೋರಾಟ ಕಡಿಮೆ ಏನು ?
ಅಮೇರಿಕಾ ಮೊನ್ನೆ ತಾನೇ ಭಾರತವನ್ನು ಅಭಿವೃದ್ಧಿ ರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಿದೆ.
ಆದರಿಂದ ಭಾರತ ಅಮೇರಿಕಾದಿಂದ ಆಮದು ಮಾಡುತಿದ್ದ ಸುಮಾರು ೨೦೦೦ ವಸ್ತುಗಳ ಮೇಲೆ ತೆರಿಗೆ ಬೀಳಲಿದೆ, ಇದರಿಂದ ಭಾರತಕ್ಕೆ ಆಗುವ ನಷ್ಟ ಕಡಿಮೆ ಏನಿಲ್ಲ .
ನಾವು ಗಮನಿಸಿದರೆ ಭಾರತ ವಿದೇಶಾಂಗ ನೀತಿಯನ್ನು ರೂಪಿಸುವಾಗ ಎಚ್ಚರಿಕೆವಹಿಸಬೇಕಾಗಿದೆ ಅನ್ನೋದು ಸ್ಪಷ್ಟ. ಚೀನಾ ಹಾಗೂ ಪಾಕಿಸ್ತಾನಗಳ ಕಂಟ್ರೋಲ್ ಮಾಡಿದ ಮೋದಿ ಸರ್ಕಾರ ಈ ಬಾರಿನೂ ಅಷ್ಟೇ ಪ್ರಭಾವಿಯಾಗಿ ಚೀನಾ ಅನ್ನೋ ಶತ್ರುವನ್ನು ನಿಯಂತ್ರಿಸುತ್ತಾ ಅದನ್ನು ಮಾಡೋದಕ್ಕೆ ಅಮೆರಿಕಾದ ಬೆಂಬಲ ಬೇಕೇ ಬೇಕು ಅಂತ ಸ್ನೇಹವನ್ನ ಕಳೆದುಕೊಳ್ಳುವುದಕ್ಕೆ ಆಗೋದಿಲ್ಲ.
ಈಗಾಗಲೇ ಒಂದು ಸಮಸ್ಯೆ ಶುರುವಾಗಿದೆ,
ದೊಡ್ಡಣ್ಣನ ಸ್ನೇಹ ವಹಿಸುವುದಕ್ಕೆ ಭಾರತ ತನ್ನ ಹಳೆಯ ಮಿತ್ರ ದೇಶ ಇರಾನ್ ಜೊತೆಗಿನ ಪೆಟ್ರೋಲಿಯಂ ವ್ಯವಹಾರವನ್ನು ನಿಲ್ಲಿಸಿದೆ.
ಇದೀಗ ಭಾರತ ತನ್ನ ವಿದೇಶ ವ್ಯವಹಾರವನ್ನು ಯೋಚಿಸಿ ಹೆಜ್ಜೆಯಿಡ ಬೇಕಾಗಿದೆ.
ಈಗ ನಾವು ಕಾದು ನೋಡಬೇಕಿದೆ ರಾಮಮಂದಿರ ಅದನ್ನ ನ್ಯಾಯಾಲಯ ನಿರ್ಧಾರ ಮಾಡುತ್ತೆ ,ಆರ್ಟಿಕಲ್ 370, ಸಮಾನ ನಾಗರಿಕ ಸಂಹಿತೆ ಇದೆಲ್ಲ ಬಿಜೆಪಿಗೆ ಮತ ತಂದುಕೊಟ್ಟ ಅಂಶಗಳಾಗಿವೆ. ನಿರುದ್ಯೋಗ ಹಣದುಬ್ಬರ ಆರ್ಥಿಕ ಅಭಿವೃದ್ಧಿ ಇವುಗಳಿಗೆ ಹೋಲಿಸಿದರೆ ಮೋದಿ ಸರ್ಕಾರದ ಆದ್ಯತೆ ಸಶಕ್ತ ಭಾರತದ ನಿರ್ಮಾಣಕ್ಕಾಗಿ ಒಂದಾಗಿದೆ.
ಇದು ಮೋದಿ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳು. ಇವೆಲ್ಲವನ್ನ ನರೇಂದ್ರ ಮೋದಿಯವರ ಸಚಿವ ಸಂಪುಟ ಹೇಗೆ ನಿಭಾಯಿಸುತ್ತದೆ ಎಂದು ಕಾದುನೋಡಬೇಕು.
ಜೈ ಹಿಂದ್ ಜೈ ಕರ್ನಾಟಕ
–ಮನನ್ ಜೈನ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243