Connect with us

ಸಿನಿ ಸುದ್ದಿ

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸ್ತಾ ಇದೆ ಅಪ್ಪು ‘ನಟಸಾರ್ವಭೌಮ’ ಟೀಸರ್..!

Published

on

ಸುದ್ದಿದಿನ ಡೆಸ್ಕ್ : ಕನ್ನಡದ ಬಹುನಿರೀಕ್ಷಿತ ಸಿನೆಮಾಗಳಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಸಿನೆಮಾ ಕೂಡ ಒಂದು. ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನೆಮಾದ ಟೀಸರ್ ಇಂದು ಬಿಡುಗಡೆಯಾಗಿದ್ದು ಕೋಟಿ ವೀವ್ಸ್ ಗಳತ್ತ ಮುನ್ನುಗುತ್ತ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದೆ.

ಅಂದಹಾಗೆ ಈ ಸಿನೆಮಾದ ಪುನೀತ್ ರಾಜ್‍ಕುಮಾರ್ ಗೆ ನಾಯಕಿಯಾಗಿ ಡಿಂಪಲ್ ಕ್ವೀನ್ ಅಭಿನಯಿಸಿದ್ದು, ಕಾಮಿಡಿ ಪಾತ್ರದಲ್ಲಿ ಚಿಕ್ಕಣ್ಣ ಮಿಂಚಲಿದ್ದಾರೆ. ಡ್ಯಾನ್ಸ್ ಅನ್ನೇ ಕೇಂದ್ರವಾಗಿಟ್ಟುಕೊಂಡು ತಯಾರಾಗಿರುವ ಈ ಸಿನೆಮಾದಲ್ಲಿ ಪುನೀತ್ ರಾಜ್‍ಕುಮಾರ್ ಅವರು ಅದ್ಭುತವಾದ ನೃತ್ಯದ ರಸದೌತಣವನ್ನು ಅಭಿಮಾನಿಗಳಿಗೆ ಉಣ ಬಡಿಸಲಿದ್ದಾರೆ.

ಟೀಸರ್ ನೋಡಿ

ಟೀಸರ್ ನಲ್ಲಿ ಪುನೀತ್ ರಾಜ್‍ಕುಮಾರ್ ಅವರ ನೃತ್ಯದ ತುಣುಕನ್ನು ನೋಡಿದರೆ ಮೇಲಿನ ಮಾತು ಸತ್ಯ ಎಂದು ತಿಳಿಯುತ್ತದೆ. ಏಕೆಂದರೆ ಪುನೀತ್ ರಾಜ್‍ಕುಮಾರ್ ಅವರ ನೃತ್ಯ ದ ತುಣುಕಿಗಾಗಿ ಅಭಿಮಾನಿಗಳು ಮತ್ತೆ ಮತ್ತೆ ಟೀಸರ್ ಅನ್ನು ನೋಡುತ್ತಲೇ ಇದ್ದಾರೆ.
ಒಟ್ಟಾರೆ ಈ ಸಿನೆಮಾ ಕನ್ನಡ ಚಿತ್ರರಂಗದ ಒಂದು ಆಲ್ ಟೈಮ್ ಹಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲವೆನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್...

ಅಂತರಂಗ1 day ago

ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ...

ದಿನದ ಸುದ್ದಿ1 week ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ1 week ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ1 week ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ2 weeks ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ2 weeks ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ2 weeks ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ3 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

ದಿನದ ಸುದ್ದಿ3 weeks ago

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

Trending